Homeಚಳವಳಿರಕ್ತವನ್ನು ಚೆಲ್ಲುತ್ತೇವೆ, ಒಳಮೀಸಲಾತಿ ಪಡೆಯುತ್ತೇವೆ: ಬೆಂಗಳೂರಿನಲ್ಲಿ ಭೀಮಸೈನಿಕರ ಘರ್ಜನೆ

ರಕ್ತವನ್ನು ಚೆಲ್ಲುತ್ತೇವೆ, ಒಳಮೀಸಲಾತಿ ಪಡೆಯುತ್ತೇವೆ: ಬೆಂಗಳೂರಿನಲ್ಲಿ ಭೀಮಸೈನಿಕರ ಘರ್ಜನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂದು ನಮ್ಮ ಹಕ್ಕೊತ್ತಾಯ ಆಲಿಸುವವರೆಗೂ ನಾವು ಮನೆಗಳಿಗೆ ಹೋಗುವುದಿಲ್ಲ. ಡಿಸೆಂಬರ್ 28ರವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ...

- Advertisement -
- Advertisement -

ರಕ್ತವನ್ನು ಚೆಲ್ಲುತ್ತೇವೆ – ಒಳಮೀಸಲಾತಿ ಪಡೆಯುತ್ತೇವೆ, ಹಂಚಿ ತಿನ್ನುವುದು ಅಂಬೇಡ್ಕರ್ ವಾದ – ಕಿತ್ತು ತಿನ್ನುವುದು ಮನುವಾದ, ಸರ್ವರಿಗೂ ಸಮಪಾಲು -ಸರ್ವರಿಗೂ ಸಮಬಾಳು, ಮೀಸಲಾತಿ ವರ್ಗೀಕರಣ ಆಗಲೇಬೇಕು, ಸದಾಶಿವ ಆಯೋಗದ ವರದಿ ಚರ್ಚೆಯಾಗಲಿ ಮತ್ತು ಜಾರಿಯಾಗಲಿ.. ಜೈ ಮಾದಿಗ, ಜೈ ಜೈ ಮಾದಿಗ… ಇವು ಇಂದು ಬೆಂಗಳೂರಿನಲ್ಲಿ ಭೀಮಸಾಗರದಲ್ಲಿ ಮೊಳಗಿದ ಘೋಷಣೆಗಳು.

‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ’ ಹಮ್ಮಿಕೊಂಡಿದ್ದ ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಜಾರಿಯಾಗಲಿ ಹೋರಾಟಕ್ಕೆ ರಾಜ್ಯದ ಮೂಲೆ-ಮೂಲೆಗಳಿಂದ  ಶೋಷಿತ ಸಮುದಾಯಗಳ ಜನಸಾಗರವೇ ಹರಿದುಬಂದಿತ್ತು. ಸಹಸ್ರಾರು ಜನರ ಒಡಲಾಳದ ಕಿಚ್ಚು ಪ್ರವಾಹವಾಗಿ ಹರಿಯಿತು. ಮಳೆ-ಚಳಿ-ಗಾಳಿಯನ್ನು ಲೆಕ್ಕಿಸದೆ ಹಾಡುತ್ತ, ಕುಣಿಯುತ್ತ, ಘೋಷಣೆ ಕೂಗುತ್ತಾ ಒಳ ಮೀಸಲಾತಿ ಜಾರಿಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಕ್ರಾಂತಿವೀರ ಸಂಗೊಳ್ಳಿ ರೈಲು ನಿಲ್ದಾಣದಿಂದ ಮೆರವಣಿಗೆ ಹೊರಟು ಫ್ರೀಡಂ ಪಾರ್ಕ್ ಎದುರಿನ ರಸ್ತೆಯಲ್ಲಿ ಸಮಾವೇಶಗೊಳ್ಳಲಾಯಿತು. ಹಿರಿಯ ಹೋರಾಟಗಾರ ಅಂಬಣ್ಣ ಅರೋಲಿಕರ್‌ರವರ ನೇತೃತ್ವದಲ್ಲಿ ನವೆಂಬರ್ 28ರಿಂದ ಹರಿಹರದಲ್ಲಿರುವ ದಸಸಂ ಸಂಸ್ಥಾಪಕರಾದ ಬಿ.ಕೃಷ್ಣಪ್ಪನವರ ಚೈತ್ಯಭೂಮಿಯಿಂದ ಪಾದಯಾತ್ರೆ ಹೊರಟಿದ್ದ ನೂರಕ್ಕೂ ಹೆಚ್ಚು ಪಾದಯಾತ್ರಿಗಳು ಹೋರಾಟದ ಸಾಗರ ಸೇರಿಕೊಂಡರು.

ಅಂಬೇಡ್ಕರ್‌ರವರ ಹಾಡು ಹಾಡುವ ಮೂಲಕ ಹೋರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅಂಬಣ್ಣನವರು, “ನೊಂದ ಜನರು ಮೂರು ದಶಕದಿಂದ ಒಳಮೀಸಲಾತಿಗಾಗಿ ಹೋರಾಡುತ್ತಿದ್ದಾರೆ. ಆದರೆ ಮೂರು ಪಕ್ಷಗಳು ಆಶ್ವಾಸನೆ ನೀಡಿದವು ಹೊರತು, ಜಾರಿ ಮಾಡಲಿಲ್ಲ. ಜಸ್ಟೀಸ್ ಸದಾಶಿವ ಆಯೋಗವನ್ನು ಕಾಂಗ್ರೆಸ್ ಸರ್ಕಾರ ನೇಮಿಸಿತು. ಬಿಜೆಪಿ ಸರ್ಕಾರ ಅದಕ್ಕೆ ಅನುದಾನ ನೀಡಿತು. ಜೆಡಿಎಸ್ ತನ್ನ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಜಾರಿಗೊಳಿಸುವುದಾಗಿ ಹೇಳಿಕೊಂಡಿತು. ಆದರೆ ಯಾರೂ ಸಹ ವರದಿಯನ್ನು ಬಿಡುಗಡೆ ಮಾಡಲಿಲ್ಲ, ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಈಗ ಮತ್ತೊಂದು ಚುನಾವಣೆ ಬಂದಿದೆ. ನಿಮ್ಮ ಭರವಸೆಗಳು ಸಾಕು. ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿ ಹಾಗೂ ಕೇಂದ್ರ ಸರ್ಕಾರವು ಸಂವಿಧಾನದ ಅನುಚ್ಛೇದ 341(3)ಕ್ಕೆ ತಿದ್ದುಪಡಿ ತರಬೇಕು. ಆಗ ನಾವು ವೋಟು ಯಾರಿಗಾಗಬೇಕೆಂದು ತೀರ್ಮಾನ ಮಾಡ್ತೀವಿ. ಇಲ್ಲದಿದ್ದರೆ ನೋಟಾ ಒತ್ತಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂದು ನಮ್ಮ ಹಕ್ಕೊತ್ತಾಯ ಆಲಿಸುವವರೆಗೂ ನಾವು ಮನೆಗಳಿಗೆ ಹೋಗುವುದಿಲ್ಲ. ಡಿಸೆಂಬರ್ 28ರವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು.

ಹರಿಹರದಿಂದ ಪಾದಯಾತ್ರೆಯಲ್ಲಿ ಭಾಗವಹಿಸಿರುವ ಮಾದಿಗ ರಕ್ಷಣಾ ವೇದಿಕೆ ಮತ್ತು ಕರ್ನಾಟಕ ಜನಶಕ್ತಿಯ ಮುಖಂಡರಾದ ಕರಿಯಪ್ಪ ಗುಡಿಮನಿಯವರು ಮಾತನಾಡಿ, “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಲ್ಲಿ ಬಂದು ನಮ್ಮನ್ನು ಸಮಾಧಾನ ಮಾಡಿದರೆ ಪ್ರಯೋಜನವಾಗದು. ವಿಧಾನಸೌಧದಲ್ಲಿ ಕೊಳೆಯುತ್ತಿರುವ ಸದಾಶಿವ ಆಯೋಗದ ವರದಿಯ ಗಂಟು ಬಿಚ್ಚಬೇಕು. ಆ ಕುರಿತು ಚರ್ಚೆ ನಡೆದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ನೊಂದ ಜನರಿಗೆ ನ್ಯಾಯ ಸಿಗಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ” ಎಂದರು.

ಆರ್ ಮೋಹನ್‌ರಾಜ್‌ರವರು ಮಾತನಾಡಿ, “ಬಾಬಾಸಾಹೇಬರ ಆಶಯ ಸಾಮಾಜಿಕ ನ್ಯಾಯ. ಶೋಷಣೆಗೆ ಒಳಗಾದವರಿಗೆ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಸಿಗಬೇಕು ಎಂಬುದಾಗಿದೆ. ಆದರೆ ಮೂರು ಪರ್ಸೆಂಟ್ ಇರುವ ಜನರಿಗೆ 10% ಇಡಬ್ಲೂಎಸ್ ಮೀಸಲಾತಿಯನ್ನು ಏಕಾಏಕಿ ಜಾರಿಗೊಳಿಸಲಾಗಿದೆ. 25 % ಇರುವ ನಾವು ಹಂಚಿಕೊಳ್ಳುತ್ತೇವೆ, ಮೀಸಲಾತಿ ವರ್ಗೀಕರಣ ಮಾಡಿ ಎಂದರೆ ಮೀನಾಮೇಷ ಎಣಿಸಲಾಗುತ್ತಿದೆ” ಎಂದು ಕಿಡಿಕಾರಿದರು.

ಸರ್ಕಾರದ ಒಡೆದು ಆಳುವ ನೀತಿಗೆ ವಿರುದ್ಧವಾಗಿ ನಮ್ಮ ಹೋರಾಟ ನಡೆಯುತ್ತಿದೆ. ಮೀಸಲಾತಿ ವರ್ಗೀಕರಣದ ಮೂಲಕ ಅನ್ಯಾಯವಾದ ಸಮುದಾಯಕ್ಕೆ ಸಮಪಾಲು ದಕ್ಕಬೇಕು. ಒಳ ಮೀಸಲಾತಿಗಾಗಿ ರಾಜಕೀಯ ಪಕ್ಷಗಳು ಸಬ್‌ ಕಮಿಟಿ ರಚಿಸುವುದು ನಮಗೆ ಬೇಕಾಗಿಲ್ಲ. ಬದಲಾಗಿ ಮುಂಬರುವ ಅಧಿವೇಶನದಲ್ಲಿ ಘೋಷಣೆ ಮಾಡಬೇಕು, ಎಲ್ಲಾ ಪಕ್ಷಗಳು ಸರ್ವಾನುಮತದಿಂದ ಅಂಗೀಕರಿಸಬೇಕು. ಸುಳ್ಳು ಜಾತಿ ಪತ್ರ ಪಡೆದವರಿಗೆ ಕಠಿಣ ಶಿಕ್ಷೆಯಾಗಬೇಕು, ಪಿಟಿಸಿಎಲ್ ಕಾಯ್ದೆ ಬಲಪಡಿಸಬೇಕು ಎಂದು ಒತ್ತಾಯಿಸಿದರು.

ದಲಿತ ಶಾಸಕರು, ಸಂಸದರು, ರಾಜಕಾರಣಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಹರಿದಿರುವ ಚಡ್ಡಿ ಹೊತ್ತು ಓಡಾಡುವುದನ್ನು ನಿಲ್ಲಿಸಿ… ನಮ್ಮ ನ್ಯಾಯಯುತ ಪಾಲು ಪಡೆಯಲು ಹೋರಾಡಿ. ಇಲ್ಲದಿದ್ದರೆ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ಕಾರ್ಯದರ್ಶಿ ಎಸ್ ಮಾರಪ್ಪನವರು, ವೆಂಕಟಗಿರಿಯಯ್ಯನವರು, ಬಿ.ಆರ್ ಭಾಸ್ಕರ್ ಪ್ರಸಾದ್, ಬಸವರಾಜ್ ಕೌತಾಳ್, ದಾನಪ್ಪ ಸಿ ನೀಲೋಗಲ್, ಎಂ.ಆರ್ ಭೇರಿ ಸೇರಿದಂತೆ ಹಲವು ಮುಖಂಡರು ಮಾತನಾಡಿದರು.

ಗೋ ಬ್ಯಾಕ್ ಸೋಮಣ್ಣ ಎಂದ ಪ್ರತಿಭಟನಾಕಾರರು

ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ವಸತಿ ಸಚಿವ ವಿ.ಸೋಮಣ್ಣ ಭೇಟಿ ನೀಡಿದರು.  ವೇದಿಕೆಯ ಹಿಂಭಾಗಕ್ಕೆ ಆಗಮಿಸಿದ ಅವರನ್ನು ವೇದಿಕೆಯ ಬಳಿ ಹೋಗಲು ಬಿಡದೆ ಪ್ರತಿಭಟನಾಕಾರರು ತಡೆದರು. ನೀವೇಕೆ ಬಂದೀರಿ? ನೀವು ನಮಗಾಗಿ ಏನು ಮಾಡಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಬೊಮ್ಮಾಯಿಯವರನ್ನು ಕರೆದುಕೊಂಡು ಬನ್ನಿ ಎಂದು ತಾಕೀತು ಮಾಡಿದರು. ಸುಮಾರು 15 ನಿಮಿಷ ಕಾದ ನಂತರ ಸೋಮಣ್ಣ ಪೊಲೀಸರ ಸಹಾಯದೊಂದಿಗೆ ಜನರ ವಿರೋಧದ ನಡುವೆಯೂ ವೇದಿಕೆ ಏರಿದರು. ಆದರೆ ಜನರು ಗೋ ಬ್ಯಾಕ್ ಸೋಮಣ್ಣ, ಸಿಎಂ ಬೊಮ್ಮಾಯಿ ಬರಲೇಬೇಕು ಎಂದು ಜೋರಾಗಿ ಘೋಷಣೆ ಕೂಗಿದರು. ಸೋಮಣ್ಣನವರು ಮಾತನಾಡಲು ಬಿಡದೇ ಜನರು ಜೋರಾಗಿ ಘೋಷಣೆ ಕೂಗುತ್ತಲೇ ಇದ್ದರು. ಕಡೆಗೆ ಸಚಿವ ಸೋಮಣ್ಣ ದಾರಿಕಾಣದೆ ವೇದಿಕೆ ಇಳಿದು ವಾಪಸ್ ಹೋದರು.

ಇದನ್ನೂ ಓದಿ; ಒಳಮೀಸಲಾತಿಯೇ ಸಾಮಾಜಿಕ ನ್ಯಾಯವಾಗುವ ಜಾಯಮಾನದಲ್ಲಿದ್ದೇವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...