Homeಮುಖಪುಟಉತ್ತರ ಕಾಶಿ: ಮೂರು ತಿಂಗಳಲ್ಲಿ ಒಂದೂ ಹೆಣ್ಣು ಮಗು ಜನಿಸಿಲ್ಲ!

ಉತ್ತರ ಕಾಶಿ: ಮೂರು ತಿಂಗಳಲ್ಲಿ ಒಂದೂ ಹೆಣ್ಣು ಮಗು ಜನಿಸಿಲ್ಲ!

ಉತ್ತರ ಕಾಶಿಯಲ್ಲಿ ಹೆಣ್ಣು ಭ್ರೂಣ ಹತ್ಯೆ ಪಿಡುಗು ಪ್ರಚಲಿತದಲ್ಲಿ ಇರುವುದಕ್ಕೆ ಈ ಅಂಕಿಅಂಶ ಸಾಕ್ಷಿಯಾಗಿದೆ.

- Advertisement -
- Advertisement -

ಇದೊಂದು ಆಘಾತದ ಸುದ್ದಿ. ಜಿಲ್ಲೆಯೊಂದರ 132 ಗ್ರಾಮಗಳಲ್ಲಿ ಕಳೆದ ಮೂರು ತಿಂಗಳಲ್ಲಿ ಒಂದೇ ಒಂದು ಹೆಣ್ಣು ಕೂಸು ಜನಿಸಿಲ್ಲ!
ಉತ್ತರಪ್ರದೇಶದ ಉತ್ತರ ಕಾಶಿ ಜಿಲ್ಲೆಯಲ್ಲಿ ಇಂಥದ್ದೊಂದು ವಿದ್ಯಮಾನ ಬೆಳಕಿಗೆ ಬಂದಿದೆ. ಅಲ್ಲಿನ 132 ಹಳ್ಳಿಗಳಲ್ಲಿ ಕಳೆದ ಮೂರು ತಿಂಗಳಲ್ಲಿ 212 ಮಕ್ಕಳು ಜನಿಸಿದ್ದು ಎಲ್ಲವೂ ಗಂಡು ಶಿಶುಗಳೇ ಆಗಿದ್ದು, ಒಂದೇ ಒಂದು ಹೆಣ್ಣು ಶಿಶು ಇಲ್ಲದಿರುವುದು ಹೆಣ್ಣು ಭ್ರೂಣ ಹತ್ಯೆ ವ್ಯಾಪಕವಾಗಿ ಪ್ರಚಲಿತದಲ್ಲಿ ಇರುವುದಕ್ಕೆ ಸಾಕ್ಷಿಯಾಗಿದೆ.

ಈ ವರದಿ ಬಂದ ನಂತರ ಎಚ್ಚೆತ್ತುಕೊಂಡಿರುವ ಅಲ್ಲಿನ ಜಿಲ್ಲಾಡಳಿತವು ಆ 132 ಗ್ರಾಮಗಳನ್ನು ಕೆಂಪು ವಲಯ (ರೆಡ್ ಝೋನ್) ಪಟ್ಟಿಗೆ ಸೇರಿಸಿದ್ದು ಆಶಾ ಕಾರ್ಯಕರ್ತೆಯರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

2011ರ ಜನಗಣತಿಯ ಪ್ರಕಾರ ಉತ್ತರ ಕಾಶಿ ಜಿಲ್ಲೆಯಲ್ಲಿ 1,61,489 ಮಹಿಳೆಯರು ಮತ್ತು 1,68,597 ಪುರುಷರಿದ್ದರು. ಕಳವಳ ಮೂಡಿಸಿದ ಈ ಲಿಂಗಾನುಪಾತದ ಪರಿಣಾಮವಾಗಿ ಅಲ್ಲಿ ಲಿಂಗಾನುಪಾತ ಸುಧಾರಿಸಲು ವ್ಯಾಪಕ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ರಾಜ್ಯ ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ, ಕಳೆದ ಮೂರು ತಿಂಗಳಲ್ಲಿ ಉತ್ತರ ಕಾಶಿ ಜಿಲ್ಲೆಯ ದುಂಡಾ ಬ್ಲಾಕಿನ 27 ಹಳ್ಳಿಗಳಲ್ಲಿ 51 ಮಕ್ಕಳ ಜನನವಾಗಿದ್ದು ಒಂದೂ ಹೆಣ್ಣು ಶಿಶುವಿನ ಜನನವಾಗಿಲ್ಲ. ಭತ್ವಾರಿ ಬ್ಲಾಕ್ (27 ಗ್ರಾಮಗಳಲ್ಲಿ 49 ಜನನ), ನೌಗೌನ್ ಬ್ಲಾಕ್ (28 ಗ್ರಾಮಗಳಲ್ಲಿ 47 ಜನನ), ಮೋರಿ ಬ್ಲಾಕ್ (20 ಗ್ರಾಮಗಳಲ್ಲಿ 29 ಜನನ), ಚಿನ್ಯಾಲಿಪೌರ್ ಬ್ಲಾಕ್( 16 ಗ್ರಾಮಗಳಲ್ಲಿ 23 ಜನನ) ಮತ್ತು ಪುರೋಲಾ ಬ್ಲಾಕಿನಲ್ಲಿ 14 ಗ್ರಾಮಗಳಲ್ಲಿ 17 ಜನನಗಳಾಗಿದ್ದು ಒಂದೇ ಒಂದು ಹೆಣ್ಣು ಶಿಶು ಜನಿಸದಿರುವುದು ಆರೋಗ್ಯ ಇಲಾಖೆಯನ್ನು ಕಳವಳಕ್ಕೆ ದೂಡಿದೆ.

ಸದ್ಯ ಈ 132 ಗ್ರಾಮಗಳಲ್ಲಿನ ಚಟುವಟುಕೆಗಳ ಮೇಲೆ ನಿಗಾ ಇಡಲಾಗಿದ್ದು ಮುಂದಿನ ಆರು ತಿಂಗಳ ಬೆಳವಣಿಗೆಗಳ ಮೇಲೆ ಜಿಲ್ಲಾಡಳಿತ ಗಮನ ಹರಿಸಿದೆ. ಜನನ ಲಿಂಗಾನುಪಾತದಲ್ಲಿ ಸುಧಾರಣೆ ಆಗದಿದ್ದರೆ ಆಶಾ ಕಾರ್ಯಕರ್ತರನ್ನು ಹೊಣೆ ಮಾಡಲಾಗುವುದು ಎಂದು ಎಚ್ಚರಿಸಲಾಗಿದೆ.

ಇದು ಕಾಕತಾಳೀಯ ಇರಬಹುದು ಎಂದು ನಿರ್ಲಕ್ಷಿಸುವಂತಿಲ್ಲ ಎಂದಿರುವ ಜಿಲ್ಲಾಧಿಕಾರಿ ಅತೀಶ್ ಚೌಹಾಣ್, ಹೆಣ್ಣು ಭ್ರೂಣ ಹತ್ಯೆಗಳು ಜರುಗುತ್ತಿರವ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.

2015-17ರ ಅವಧಿಯಲ್ಲಿ ದೇಶದ ಜನನ ಲಿಂಗಾನುಪಾತ (ಪ್ರತಿ ಸಾವಿರ ಗಂಡು ಶಿಶುಗಳಿಗೆ ಹೆಣ್ಣು ಶಿಶುಗಳ ಸಂಖ್ಯೆ) ತೀವ್ರ ಕುಸಿತ ಕಂಡಿದ್ದು, ಈ ಅವಧಿಯಲ್ಲಿ ಅದು 897 ಇದೆ. ಇಷ್ಟು ಕಡಿಮೆ ಪ್ರಮಾಣದ ಜನನ ಲಿಂಗಾನುಪಾತ ಹಿಂದೆಂದೂ ಕಂಡುಬಂದಿರಲಿಲ್ಲ.

ಉತ್ತರಪ್ರದೇಶ, ರಾಜಸ್ಥಾನ್, ಬಿಹಾರ್, ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಲ್ಲಿ 2015-17ರಲ್ಲಿ ಜನನ ಲಿಂಗಾನುಪಾತದಲ್ಲಿ ತೀವ್ರ ಕುಸಿತ ಕಂಡು ಬಂದಿರುವುದನ್ನು ಇಲ್ಲಿ ಗಮನಿಸಬೇಕು.
(ಕೃಪೆ: ಟೈಮ್ಸ್ ಆಫ್ ಇಂಡಿಯಾ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...