Homeಕರ್ನಾಟಕದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣರನ್ನು ಸಂಧಾನಕ್ಕೆ ಕಳಿಸ್ತೀರಾ? ಒಳಮೀಸಲಾತಿ ಹೋರಾಟಗಾರರ ಆಕ್ರೋಶ

ದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣರನ್ನು ಸಂಧಾನಕ್ಕೆ ಕಳಿಸ್ತೀರಾ? ಒಳಮೀಸಲಾತಿ ಹೋರಾಟಗಾರರ ಆಕ್ರೋಶ

- Advertisement -
- Advertisement -

ಒಳಮೀಸಲಾತಿ ಜಾರಿಗಾಗಿ ಹೋರಾಟ ತೀವ್ರವಾಗಿದ್ದು, ಬೆಂಗಳೂರಿನ ಫ್ರೀಡಂಪಾರ್ಕ್‌‌ಗೆ ಇಂದು ಹೋರಾಟಗಾರರು ಕಾಲಿಟ್ಟಿದ್ದಾರೆ. ಜಿಟಿಜಿಟಿ ಮಳೆಯನ್ನೂ ಲೆಕ್ಕಿಸದೆ ಸಾವಿರಾರು ಸಂಖ್ಯೆಯಲ್ಲಿ ಸೇರಿದ ದಲಿತರು ಒಳಮೀಸಲಾತಿ ಜಾರಿಗಾಗಿ ಘೋಷಣೆ ಮೊಳಗಿಸಿದ್ದಾರೆ.

ಮೂವತ್ತು ವರ್ಷಗಳ ಹೋರಾಟಕ್ಕೆ ಯಾವುದೇ ಪಕ್ಷಗಳು ಸ್ಪಂದಿಸಲಿಲ್ಲ. ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಪಕ್ಷಗಳೆಲ್ಲವೂ ಭರವಸೆಯನ್ನು ನೀಡಿ ವಂಚಿಸಿದ್ದು ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಒಳಮೀಸಲಾತಿ ಜಾರಿಗೊಳಿಸುವವರೆಗೂ ವಿರಮಿಸುವುದಿಲ್ಲ ಎಂದು ಹೋರಾಟಗಾರರು ಪಟ್ಟು ಹಿಡಿದಿದ್ದಾರೆ.

ಸುರಿವ ಮಳೆಯನ್ನೂ ಲೆಕ್ಕಿಸದೆ ಜೈಭೀಮ್‌, ಜೈ ದಲಿತ ಎಂಬ ಘೋಷಣೆಗಳನ್ನು ಕೂಗಿದ ಹೋರಾಟಗಾರರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ಥಳಕ್ಕೆ ಬರಬೇಕು ಎಂದು ಆಗ್ರಹಿಸಿದರು.

ಸರ್ಕಾರದ ಪ್ರತಿನಿಧಿಯಾಗಿ ವಸತಿ ಸಚಿವ ವಿ.ಸೋಮಣ್ಣ ಆಗಮಿಸುವಾಗಿ ಹೇಳಿದ ಕೂಡಲೇ ನೆರೆದಿದ್ದ ಯುವಕರು, ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು. ಸಾವಿರಾರು ಸಂಖ್ಯೆಯಲ್ಲಿ ದಲಿತ ಸಮುದಾಯ ಸೇರಿದ್ದರೂ ಮುಖ್ಯಮಂತ್ರಿಯವರು ಬರುತ್ತಿಲ್ಲ ಎಂದು ಧಿಕ್ಕಾರ ಕೂಗಿದರು.

ಜೋರು ಮಳೆ ಆರಂಭವಾಗುವ ಮುನ್ನ ಸಚಿವ ವಿ.ಸೋಮಣ್ಣ ಅವರು ಫ್ರೀಡಂ ಪಾರ್ಕಿಗೆ ಬಂದರು. ಸಂಚಾರಿ ವೇದಿಕೆಯನ್ನು ಏರಿ ಸೋಮಣ್ಣ ಮಾತನಾಡಲಾರಂಭಿಸಿದರು. ಆದರೆ ಸೋಮಣ್ಣ ಮಾತು ಶುರು ಮಾಡಿದ ಕೂಡಲೇ ಗದ್ದಲು ಉಂಟಾಯಿತು. ಸೋಮಣ್ಣ ವೇದಿಕೆಯಿಂದ ಕೆಳಗಿಳಿಯಬೇಕು, ಮುಖ್ಯಮಂತ್ರಿ ಬರಬೇಕು ಎಂದು ಧಿಕ್ಕಾರ ಕೂಗಿದರು. ನೀಲಿ ಪತಾಕೆಗಳು ಹಾರಾಡತೊಡಗಿದವು.

“ಚಾಮರಾಜನಗರದಲ್ಲಿ ದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣನವರನ್ನು ನಮ್ಮೊಂದಿಗೆ ಮಾತನಾಡಲು ಕಳಿಸಲಾಗಿದೆ. ಇದೆಂಥಾ ಅಸಡ್ಡೆ. ಚಳಿ, ಮಳೆಯೆನ್ನದೆ ಹೋರಾಟ ಮಾಡುತ್ತಿದ್ದೇವೆ, ಮೂವತ್ತು ವರ್ಷಗಳಿಂದಲೂ ನಾವು ಹೋರಾಟ ನಡೆಸುತ್ತಲೇ ಇದ್ದೇವೆ. ಮುಖ್ಯಮಂತ್ರಿಯವರು ಬರಬೇಕೆಂಬ ಸಾಮಾನ್ಯ ಪ್ರಜ್ಞೆ ಇಲ್ಲವೇ? ಸೋಮಣ್ಣ ಅವರು ವಾಪಸ್ ತೆರಳಿ ಮುಖ್ಯಮಂತ್ರಿಯವರನ್ನು ಸ್ಥಳಕ್ಕೆ ಕಳುಹಿಸಬೇಕು” ಎಂದು ಹೋರಾಟಗಾರರು ಆಗ್ರಹಿಸಿದರು. “ಡೌನ್‌ ಡೌನ್‌ ಸೋಮಣ್ಣ” ಎಂಬ ಘೋಷಣೆಗಳನ್ನು ಜನರು ಕೂಗಿದರು.

ಬಂದ ದಾರಿಗೆ ಸುಂಕವಿಲ್ಲವೆಂಬಂತೆ, ಧಿಕ್ಕಾರಗಳಿಂದ ಮುಜುಗರಗೊಂಡ ಸೋಮಣ್ಣ ಅವರು ಸಂಚಾರಿ ವೇದಿಕೆಯಿಂದ ಕೆಳಗಿಳಿದು ಕಾರು ಹತ್ತಿದರು. ಸೋಮಣ್ಣ ವಾಪಸ್ ಆದ ಬಳಿಕ ಮತ್ತೆ ಜೈ ಭೀಮ್‌ ಘೋಷಣೆಗಳು ಮೊಳಗಿದವು. “ಒಳಮೀಸಲಾತಿ ಜಾರಿಯಾಗಲೇಬೇಕು” ಎಂಬ ಆಗ್ರಹ ಮುಗಿಲುಮುಟ್ಟಿತು. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನರಾಮ್‌, ಬಿ.ಕೃಷ್ಣಪ್ಪ ಅವರ ಚಿತ್ರಗಳನ್ನೊಳಗೊಂಡ ನೀಲಿ ಬಾವುಟಗಳು ಹಾರಾಡತೊಡಗಿದವು. ಒಂದೇ ಸಮನೇ ಘೋಷಣೆಗಳು ಮೊಳಗಿದವು.

ಮೋಹನ್‌ ರಾಜ್ ಮಾತನಾಡಿ, “ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ ಎಲ್ಲರೂ ಒಳಮೀಸಲಾತಿ ವಿಚಾರದಲ್ಲಿ ವಂಚನೆ ಮಾಡಿದ್ದಾರೆ. ತುರ್ತಾಗಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಯಾಗಬೇಕು. ಪಿಟಿಸಿಎಲ್‌ ಕಾಯ್ದೆಗೆ ತಿದ್ದುಪಡಿ ತಂದು ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು” ಎಂದು ಒತ್ತಾಯಿಸಿದರು.

ಒಳಮೀಸಲಾತಿ ಜಾರಿಗಾಗಿ ನಡೆದ ಪಾದಯಾತ್ರೆಯ ಮುಂದಾಳತ್ವ ವಹಿಸಿದ್ದ ಅಂಬಣ್ಣ ಅರೋಲಿಕರ್‌ ಮಾತನಾಡಿ, “ಬಸವರಾಜ ಬೊಮ್ಮಾಯಿಯವರು ಬಂದು ನಮ್ಮ ಹಕ್ಕೋತ್ತಾಯಗಳನ್ನು ಆಲಿಸುವವರೆಗೂ ನಾವು ಮನೆಗಳಿಗೆ ಹೋಗಲ್ಲ” ಎಂದು ಗುಡುಗಿದರು.

ಹೋರಾಟಗಾರ ಕರಿಯಪ್ಪ ಗುಡಿಮನಿ ಮಾತನಾಡಿ, “ಮುಖ್ಯಮಂತ್ರಿ ಇಲ್ಲಿ ಬಂದು ಸಮಾಧಾನ ಮಾಡೋದಲ್ಲ. ವಿಧಾನಸೌಧದಲ್ಲಿ ಕೊಳೆಯುತ್ತಿರುವ ಸದಾಶಿವ ಆಯೋಗದ ವರದಿಯ ಗಂಟು ಬಿಚ್ಚಬೇಕು” ಎಂದು ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...