Homeಕರ್ನಾಟಕದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣರನ್ನು ಸಂಧಾನಕ್ಕೆ ಕಳಿಸ್ತೀರಾ? ಒಳಮೀಸಲಾತಿ ಹೋರಾಟಗಾರರ ಆಕ್ರೋಶ

ದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣರನ್ನು ಸಂಧಾನಕ್ಕೆ ಕಳಿಸ್ತೀರಾ? ಒಳಮೀಸಲಾತಿ ಹೋರಾಟಗಾರರ ಆಕ್ರೋಶ

- Advertisement -
- Advertisement -

ಒಳಮೀಸಲಾತಿ ಜಾರಿಗಾಗಿ ಹೋರಾಟ ತೀವ್ರವಾಗಿದ್ದು, ಬೆಂಗಳೂರಿನ ಫ್ರೀಡಂಪಾರ್ಕ್‌‌ಗೆ ಇಂದು ಹೋರಾಟಗಾರರು ಕಾಲಿಟ್ಟಿದ್ದಾರೆ. ಜಿಟಿಜಿಟಿ ಮಳೆಯನ್ನೂ ಲೆಕ್ಕಿಸದೆ ಸಾವಿರಾರು ಸಂಖ್ಯೆಯಲ್ಲಿ ಸೇರಿದ ದಲಿತರು ಒಳಮೀಸಲಾತಿ ಜಾರಿಗಾಗಿ ಘೋಷಣೆ ಮೊಳಗಿಸಿದ್ದಾರೆ.

ಮೂವತ್ತು ವರ್ಷಗಳ ಹೋರಾಟಕ್ಕೆ ಯಾವುದೇ ಪಕ್ಷಗಳು ಸ್ಪಂದಿಸಲಿಲ್ಲ. ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಪಕ್ಷಗಳೆಲ್ಲವೂ ಭರವಸೆಯನ್ನು ನೀಡಿ ವಂಚಿಸಿದ್ದು ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಒಳಮೀಸಲಾತಿ ಜಾರಿಗೊಳಿಸುವವರೆಗೂ ವಿರಮಿಸುವುದಿಲ್ಲ ಎಂದು ಹೋರಾಟಗಾರರು ಪಟ್ಟು ಹಿಡಿದಿದ್ದಾರೆ.

ಸುರಿವ ಮಳೆಯನ್ನೂ ಲೆಕ್ಕಿಸದೆ ಜೈಭೀಮ್‌, ಜೈ ದಲಿತ ಎಂಬ ಘೋಷಣೆಗಳನ್ನು ಕೂಗಿದ ಹೋರಾಟಗಾರರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ಥಳಕ್ಕೆ ಬರಬೇಕು ಎಂದು ಆಗ್ರಹಿಸಿದರು.

ಸರ್ಕಾರದ ಪ್ರತಿನಿಧಿಯಾಗಿ ವಸತಿ ಸಚಿವ ವಿ.ಸೋಮಣ್ಣ ಆಗಮಿಸುವಾಗಿ ಹೇಳಿದ ಕೂಡಲೇ ನೆರೆದಿದ್ದ ಯುವಕರು, ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು. ಸಾವಿರಾರು ಸಂಖ್ಯೆಯಲ್ಲಿ ದಲಿತ ಸಮುದಾಯ ಸೇರಿದ್ದರೂ ಮುಖ್ಯಮಂತ್ರಿಯವರು ಬರುತ್ತಿಲ್ಲ ಎಂದು ಧಿಕ್ಕಾರ ಕೂಗಿದರು.

ಜೋರು ಮಳೆ ಆರಂಭವಾಗುವ ಮುನ್ನ ಸಚಿವ ವಿ.ಸೋಮಣ್ಣ ಅವರು ಫ್ರೀಡಂ ಪಾರ್ಕಿಗೆ ಬಂದರು. ಸಂಚಾರಿ ವೇದಿಕೆಯನ್ನು ಏರಿ ಸೋಮಣ್ಣ ಮಾತನಾಡಲಾರಂಭಿಸಿದರು. ಆದರೆ ಸೋಮಣ್ಣ ಮಾತು ಶುರು ಮಾಡಿದ ಕೂಡಲೇ ಗದ್ದಲು ಉಂಟಾಯಿತು. ಸೋಮಣ್ಣ ವೇದಿಕೆಯಿಂದ ಕೆಳಗಿಳಿಯಬೇಕು, ಮುಖ್ಯಮಂತ್ರಿ ಬರಬೇಕು ಎಂದು ಧಿಕ್ಕಾರ ಕೂಗಿದರು. ನೀಲಿ ಪತಾಕೆಗಳು ಹಾರಾಡತೊಡಗಿದವು.

“ಚಾಮರಾಜನಗರದಲ್ಲಿ ದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣನವರನ್ನು ನಮ್ಮೊಂದಿಗೆ ಮಾತನಾಡಲು ಕಳಿಸಲಾಗಿದೆ. ಇದೆಂಥಾ ಅಸಡ್ಡೆ. ಚಳಿ, ಮಳೆಯೆನ್ನದೆ ಹೋರಾಟ ಮಾಡುತ್ತಿದ್ದೇವೆ, ಮೂವತ್ತು ವರ್ಷಗಳಿಂದಲೂ ನಾವು ಹೋರಾಟ ನಡೆಸುತ್ತಲೇ ಇದ್ದೇವೆ. ಮುಖ್ಯಮಂತ್ರಿಯವರು ಬರಬೇಕೆಂಬ ಸಾಮಾನ್ಯ ಪ್ರಜ್ಞೆ ಇಲ್ಲವೇ? ಸೋಮಣ್ಣ ಅವರು ವಾಪಸ್ ತೆರಳಿ ಮುಖ್ಯಮಂತ್ರಿಯವರನ್ನು ಸ್ಥಳಕ್ಕೆ ಕಳುಹಿಸಬೇಕು” ಎಂದು ಹೋರಾಟಗಾರರು ಆಗ್ರಹಿಸಿದರು. “ಡೌನ್‌ ಡೌನ್‌ ಸೋಮಣ್ಣ” ಎಂಬ ಘೋಷಣೆಗಳನ್ನು ಜನರು ಕೂಗಿದರು.

ಬಂದ ದಾರಿಗೆ ಸುಂಕವಿಲ್ಲವೆಂಬಂತೆ, ಧಿಕ್ಕಾರಗಳಿಂದ ಮುಜುಗರಗೊಂಡ ಸೋಮಣ್ಣ ಅವರು ಸಂಚಾರಿ ವೇದಿಕೆಯಿಂದ ಕೆಳಗಿಳಿದು ಕಾರು ಹತ್ತಿದರು. ಸೋಮಣ್ಣ ವಾಪಸ್ ಆದ ಬಳಿಕ ಮತ್ತೆ ಜೈ ಭೀಮ್‌ ಘೋಷಣೆಗಳು ಮೊಳಗಿದವು. “ಒಳಮೀಸಲಾತಿ ಜಾರಿಯಾಗಲೇಬೇಕು” ಎಂಬ ಆಗ್ರಹ ಮುಗಿಲುಮುಟ್ಟಿತು. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನರಾಮ್‌, ಬಿ.ಕೃಷ್ಣಪ್ಪ ಅವರ ಚಿತ್ರಗಳನ್ನೊಳಗೊಂಡ ನೀಲಿ ಬಾವುಟಗಳು ಹಾರಾಡತೊಡಗಿದವು. ಒಂದೇ ಸಮನೇ ಘೋಷಣೆಗಳು ಮೊಳಗಿದವು.

ಮೋಹನ್‌ ರಾಜ್ ಮಾತನಾಡಿ, “ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ ಎಲ್ಲರೂ ಒಳಮೀಸಲಾತಿ ವಿಚಾರದಲ್ಲಿ ವಂಚನೆ ಮಾಡಿದ್ದಾರೆ. ತುರ್ತಾಗಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಯಾಗಬೇಕು. ಪಿಟಿಸಿಎಲ್‌ ಕಾಯ್ದೆಗೆ ತಿದ್ದುಪಡಿ ತಂದು ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು” ಎಂದು ಒತ್ತಾಯಿಸಿದರು.

ಒಳಮೀಸಲಾತಿ ಜಾರಿಗಾಗಿ ನಡೆದ ಪಾದಯಾತ್ರೆಯ ಮುಂದಾಳತ್ವ ವಹಿಸಿದ್ದ ಅಂಬಣ್ಣ ಅರೋಲಿಕರ್‌ ಮಾತನಾಡಿ, “ಬಸವರಾಜ ಬೊಮ್ಮಾಯಿಯವರು ಬಂದು ನಮ್ಮ ಹಕ್ಕೋತ್ತಾಯಗಳನ್ನು ಆಲಿಸುವವರೆಗೂ ನಾವು ಮನೆಗಳಿಗೆ ಹೋಗಲ್ಲ” ಎಂದು ಗುಡುಗಿದರು.

ಹೋರಾಟಗಾರ ಕರಿಯಪ್ಪ ಗುಡಿಮನಿ ಮಾತನಾಡಿ, “ಮುಖ್ಯಮಂತ್ರಿ ಇಲ್ಲಿ ಬಂದು ಸಮಾಧಾನ ಮಾಡೋದಲ್ಲ. ವಿಧಾನಸೌಧದಲ್ಲಿ ಕೊಳೆಯುತ್ತಿರುವ ಸದಾಶಿವ ಆಯೋಗದ ವರದಿಯ ಗಂಟು ಬಿಚ್ಚಬೇಕು” ಎಂದು ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...