Homeಕರ್ನಾಟಕದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣರನ್ನು ಸಂಧಾನಕ್ಕೆ ಕಳಿಸ್ತೀರಾ? ಒಳಮೀಸಲಾತಿ ಹೋರಾಟಗಾರರ ಆಕ್ರೋಶ

ದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣರನ್ನು ಸಂಧಾನಕ್ಕೆ ಕಳಿಸ್ತೀರಾ? ಒಳಮೀಸಲಾತಿ ಹೋರಾಟಗಾರರ ಆಕ್ರೋಶ

- Advertisement -
- Advertisement -

ಒಳಮೀಸಲಾತಿ ಜಾರಿಗಾಗಿ ಹೋರಾಟ ತೀವ್ರವಾಗಿದ್ದು, ಬೆಂಗಳೂರಿನ ಫ್ರೀಡಂಪಾರ್ಕ್‌‌ಗೆ ಇಂದು ಹೋರಾಟಗಾರರು ಕಾಲಿಟ್ಟಿದ್ದಾರೆ. ಜಿಟಿಜಿಟಿ ಮಳೆಯನ್ನೂ ಲೆಕ್ಕಿಸದೆ ಸಾವಿರಾರು ಸಂಖ್ಯೆಯಲ್ಲಿ ಸೇರಿದ ದಲಿತರು ಒಳಮೀಸಲಾತಿ ಜಾರಿಗಾಗಿ ಘೋಷಣೆ ಮೊಳಗಿಸಿದ್ದಾರೆ.

ಮೂವತ್ತು ವರ್ಷಗಳ ಹೋರಾಟಕ್ಕೆ ಯಾವುದೇ ಪಕ್ಷಗಳು ಸ್ಪಂದಿಸಲಿಲ್ಲ. ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಪಕ್ಷಗಳೆಲ್ಲವೂ ಭರವಸೆಯನ್ನು ನೀಡಿ ವಂಚಿಸಿದ್ದು ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಒಳಮೀಸಲಾತಿ ಜಾರಿಗೊಳಿಸುವವರೆಗೂ ವಿರಮಿಸುವುದಿಲ್ಲ ಎಂದು ಹೋರಾಟಗಾರರು ಪಟ್ಟು ಹಿಡಿದಿದ್ದಾರೆ.

ಸುರಿವ ಮಳೆಯನ್ನೂ ಲೆಕ್ಕಿಸದೆ ಜೈಭೀಮ್‌, ಜೈ ದಲಿತ ಎಂಬ ಘೋಷಣೆಗಳನ್ನು ಕೂಗಿದ ಹೋರಾಟಗಾರರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ಥಳಕ್ಕೆ ಬರಬೇಕು ಎಂದು ಆಗ್ರಹಿಸಿದರು.

ಸರ್ಕಾರದ ಪ್ರತಿನಿಧಿಯಾಗಿ ವಸತಿ ಸಚಿವ ವಿ.ಸೋಮಣ್ಣ ಆಗಮಿಸುವಾಗಿ ಹೇಳಿದ ಕೂಡಲೇ ನೆರೆದಿದ್ದ ಯುವಕರು, ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು. ಸಾವಿರಾರು ಸಂಖ್ಯೆಯಲ್ಲಿ ದಲಿತ ಸಮುದಾಯ ಸೇರಿದ್ದರೂ ಮುಖ್ಯಮಂತ್ರಿಯವರು ಬರುತ್ತಿಲ್ಲ ಎಂದು ಧಿಕ್ಕಾರ ಕೂಗಿದರು.

ಜೋರು ಮಳೆ ಆರಂಭವಾಗುವ ಮುನ್ನ ಸಚಿವ ವಿ.ಸೋಮಣ್ಣ ಅವರು ಫ್ರೀಡಂ ಪಾರ್ಕಿಗೆ ಬಂದರು. ಸಂಚಾರಿ ವೇದಿಕೆಯನ್ನು ಏರಿ ಸೋಮಣ್ಣ ಮಾತನಾಡಲಾರಂಭಿಸಿದರು. ಆದರೆ ಸೋಮಣ್ಣ ಮಾತು ಶುರು ಮಾಡಿದ ಕೂಡಲೇ ಗದ್ದಲು ಉಂಟಾಯಿತು. ಸೋಮಣ್ಣ ವೇದಿಕೆಯಿಂದ ಕೆಳಗಿಳಿಯಬೇಕು, ಮುಖ್ಯಮಂತ್ರಿ ಬರಬೇಕು ಎಂದು ಧಿಕ್ಕಾರ ಕೂಗಿದರು. ನೀಲಿ ಪತಾಕೆಗಳು ಹಾರಾಡತೊಡಗಿದವು.

“ಚಾಮರಾಜನಗರದಲ್ಲಿ ದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣನವರನ್ನು ನಮ್ಮೊಂದಿಗೆ ಮಾತನಾಡಲು ಕಳಿಸಲಾಗಿದೆ. ಇದೆಂಥಾ ಅಸಡ್ಡೆ. ಚಳಿ, ಮಳೆಯೆನ್ನದೆ ಹೋರಾಟ ಮಾಡುತ್ತಿದ್ದೇವೆ, ಮೂವತ್ತು ವರ್ಷಗಳಿಂದಲೂ ನಾವು ಹೋರಾಟ ನಡೆಸುತ್ತಲೇ ಇದ್ದೇವೆ. ಮುಖ್ಯಮಂತ್ರಿಯವರು ಬರಬೇಕೆಂಬ ಸಾಮಾನ್ಯ ಪ್ರಜ್ಞೆ ಇಲ್ಲವೇ? ಸೋಮಣ್ಣ ಅವರು ವಾಪಸ್ ತೆರಳಿ ಮುಖ್ಯಮಂತ್ರಿಯವರನ್ನು ಸ್ಥಳಕ್ಕೆ ಕಳುಹಿಸಬೇಕು” ಎಂದು ಹೋರಾಟಗಾರರು ಆಗ್ರಹಿಸಿದರು. “ಡೌನ್‌ ಡೌನ್‌ ಸೋಮಣ್ಣ” ಎಂಬ ಘೋಷಣೆಗಳನ್ನು ಜನರು ಕೂಗಿದರು.

ಬಂದ ದಾರಿಗೆ ಸುಂಕವಿಲ್ಲವೆಂಬಂತೆ, ಧಿಕ್ಕಾರಗಳಿಂದ ಮುಜುಗರಗೊಂಡ ಸೋಮಣ್ಣ ಅವರು ಸಂಚಾರಿ ವೇದಿಕೆಯಿಂದ ಕೆಳಗಿಳಿದು ಕಾರು ಹತ್ತಿದರು. ಸೋಮಣ್ಣ ವಾಪಸ್ ಆದ ಬಳಿಕ ಮತ್ತೆ ಜೈ ಭೀಮ್‌ ಘೋಷಣೆಗಳು ಮೊಳಗಿದವು. “ಒಳಮೀಸಲಾತಿ ಜಾರಿಯಾಗಲೇಬೇಕು” ಎಂಬ ಆಗ್ರಹ ಮುಗಿಲುಮುಟ್ಟಿತು. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನರಾಮ್‌, ಬಿ.ಕೃಷ್ಣಪ್ಪ ಅವರ ಚಿತ್ರಗಳನ್ನೊಳಗೊಂಡ ನೀಲಿ ಬಾವುಟಗಳು ಹಾರಾಡತೊಡಗಿದವು. ಒಂದೇ ಸಮನೇ ಘೋಷಣೆಗಳು ಮೊಳಗಿದವು.

ಮೋಹನ್‌ ರಾಜ್ ಮಾತನಾಡಿ, “ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ ಎಲ್ಲರೂ ಒಳಮೀಸಲಾತಿ ವಿಚಾರದಲ್ಲಿ ವಂಚನೆ ಮಾಡಿದ್ದಾರೆ. ತುರ್ತಾಗಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಯಾಗಬೇಕು. ಪಿಟಿಸಿಎಲ್‌ ಕಾಯ್ದೆಗೆ ತಿದ್ದುಪಡಿ ತಂದು ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು” ಎಂದು ಒತ್ತಾಯಿಸಿದರು.

ಒಳಮೀಸಲಾತಿ ಜಾರಿಗಾಗಿ ನಡೆದ ಪಾದಯಾತ್ರೆಯ ಮುಂದಾಳತ್ವ ವಹಿಸಿದ್ದ ಅಂಬಣ್ಣ ಅರೋಲಿಕರ್‌ ಮಾತನಾಡಿ, “ಬಸವರಾಜ ಬೊಮ್ಮಾಯಿಯವರು ಬಂದು ನಮ್ಮ ಹಕ್ಕೋತ್ತಾಯಗಳನ್ನು ಆಲಿಸುವವರೆಗೂ ನಾವು ಮನೆಗಳಿಗೆ ಹೋಗಲ್ಲ” ಎಂದು ಗುಡುಗಿದರು.

ಹೋರಾಟಗಾರ ಕರಿಯಪ್ಪ ಗುಡಿಮನಿ ಮಾತನಾಡಿ, “ಮುಖ್ಯಮಂತ್ರಿ ಇಲ್ಲಿ ಬಂದು ಸಮಾಧಾನ ಮಾಡೋದಲ್ಲ. ವಿಧಾನಸೌಧದಲ್ಲಿ ಕೊಳೆಯುತ್ತಿರುವ ಸದಾಶಿವ ಆಯೋಗದ ವರದಿಯ ಗಂಟು ಬಿಚ್ಚಬೇಕು” ಎಂದು ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...