Homeಕರ್ನಾಟಕಜಿಟಿಜಿಟಿ ಮಳೆಯ ನಡುವೆ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ: ಒಳಮೀಸಲಾತಿಗಾಗಿ ಹರಿದು ಬಂತು ಭೀಮಸಾಗರ

ಜಿಟಿಜಿಟಿ ಮಳೆಯ ನಡುವೆ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ: ಒಳಮೀಸಲಾತಿಗಾಗಿ ಹರಿದು ಬಂತು ಭೀಮಸಾಗರ

- Advertisement -
- Advertisement -

ಅದು ಮೂವತ್ತು ವರ್ಷಗಳ ಕೂಗು. ಸರ್ಕಾರಗಳು ಬಂದವು, ಸರ್ಕಾರಗಳು ಹೋದವು. ಪಕ್ಷಗಳು ಅಧಿಕಾರ ಪಡೆದವು, ಅಧಿಕಾರ ಕಳೆದುಕೊಂಡವು. ಕೊಟ್ಟ ಭರವಸೆಯನ್ನು ಯಾವ ಸರ್ಕಾರವೂ ಈಡೇರಿಸಲೇ ಇಲ್ಲ. ಜಸ್ಟೀಸ್‌ ಎ.ಜೆ.ಸದಾಶಿವ ಆಯೋಗದ ವರದಿ ಮಾತ್ರ ವಿಧಾನಸೌಧದಲ್ಲಿ ಧೂಳು ಹಿಡಿಯುತ್ತಿದೆ. ಅದನ್ನು ಕನಿಷ್ಠ ಸೌಜನ್ಯಕ್ಕಾದರೂ ತೆರೆದು ನೋಡಲಿಲ್ಲ. ಈಗ ಮತ್ತೆ ದಲಿತರು ಬೀದಿಗಿಳಿದಿದ್ದಾರೆ.

ಜನಸಂಖ್ಯೆಗನುಗುಣವಾಗಿ ಒಳಮೀಸಲಾತಿಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಮತ್ತೆ ಹೋರಾಟದ ಕಾವು ಪಡೆದಿದೆ. ಸಾರ್ವಜನಿಕವಾಗಿ ಸೋರಿಕೆಯಾಗಿರುವ ಮಾಹಿತಿಯ ಪ್ರಕಾರ- ಜಸ್ಟೀಸ್ ಎ.ಜೆ.ಸದಾಶಿವ ಆಯೋಗವು ಪರಿಶಿಷ್ಟ ಜಾತಿಯಲ್ಲಿನ 101 ಉಪಪಂಗಡಗಳನ್ನು 4 ಗುಂಪುಗಳಾಗಿ ವರ್ಗೀಕರಿಸಿ, ಶೇ.15ರ ಮೀಸಲಾತಿಯನ್ನು ಜನಸಂಖ್ಯೆ ಆಧಾರದ ಮೇಲೆ ಹಂಚಿಕೆ ಮಾಡಿದೆ. ಅದರಂತೆ ಶೇ. 33.4ರಷ್ಟಿರುವ ಎಡಗೈ(ಮಾದಿಗ) ಸಮುದಾಯಕ್ಕೆ ಶೇ. 6ರಷ್ಟು, ಶೇ. 32ರಷ್ಟಿರುವ ಬಲಗೈ (ಹೊಲೆಯ) ಸಮುದಾಯಕ್ಕೆ ಶೇ. 5ರಷ್ಟು, ಶೇ. 23.64ರಷ್ಟಿರುವ ಸ್ಪೃಶ್ಯ ಪರಿಶಿಷ್ಟರಿಗೆ ಶೇ. 3ರಷ್ಟು ಹಾಗೂ ಇತರೆ ಪರಿಶಿಷ್ಟರಿಗೆ ಶೇ. 1ರಷ್ಟು ಮೀಸಲಾತಿ ನೀಡಬೇಕೆಂದು ಶಿಫಾರಸ್ಸು ಮಾಡಲಾಗಿದೆ ಎನ್ನಲಾಗುತ್ತಿದೆ. ಈ ವರದಿಯನ್ನು ಬಿಡುಗಡೆ ಮಾಡಿ ಸಾರ್ವಜನಿಕ ಚರ್ಚೆಗೆ ಒಳಪಡಿಸಬೇಕೆಂಬ ಕೂಗು ಮತ್ತೆ ಶುರುವಾಗಿದೆ.

ಪರಿಶಿಷ್ಟ ಜಾತಿಗಳ ಒಳಮೀಸಲಾತಿಗಾಗಿ ಜಾರಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಪಾದಯಾತ್ರೆ ಭಾನುವಾರ (ಡಿಸೆಂಬರ್‌ 11) ಬೆಂಗಳೂರಿನ ಫ್ರೀಡಂ ಪಾರ್ಕ್ ತಲುಪಿದೆ. ಹಿರಿಯೂರು ತಾಲ್ಲೂಕಿನ ಆದಿವಾಲ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ ಸ್ಥಾಪಕ, ಹೋರಾಟಗಾರ ಹರಿಹರದ ಪ್ರೊ.ಬಿ. ಕೃಷ್ಣಪ್ಪ ಸ್ಮಾರಕದಿಂದ ಆರಂಭವಾದ ಪಾದಯಾತ್ರೆ ರಾಜಧಾನಿಯನ್ನು ತಲುಪಿದ ಹಿನ್ನೆಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ದಲಿತರು ಇಂದು ಜಮಾಯಿಸಿದ್ದರು.

ಕಳೆದೆರಡು ದಿನಗಳಿಂದಲೂ ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ ಹಾಗೂ ಕಪ್ಪು ಸುರಿದ ಮೋಡ ಆವರಿಸಿದ್ದರೂ ಹೋರಾಟಗಾರರು ಯಾವುದಕ್ಕೂ ಅಂಜದೆ ಫ್ರೀಡಂ ಪಾರ್ಕ್‌ಗೆ ಬಂದು ಸೇರಿದರು. ಜೈ ಭೀಮ್‌ ಘೋಷಣೆ ಮೊಳಗಿತು. ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನರಾಮ್‌, ಪ್ರೊ.ಬಿ.ಕೃಷ್ಣಪ್ಪ ಅವರ ಭಾವಚಿತ್ರಗಳನ್ನು ಒಳಗೊಂಡ ನೀಲಿ ಭಾವುಟಗಳನ್ನು ಹಿಡಿದ ದಲಿತ ಶಕ್ತಿ ಸಾಗೋರೋಪಾದಿಯಲ್ಲಿ ಹರಿದುಬಂತು. ಸಂಚಾರಿ ವೇದಿಕೆಯನ್ನು ರಸ್ತೆಯಲ್ಲಿ ನಿಲ್ಲಿಸಲಾಗಿತ್ತು. ಮುಖ್ಯರಸ್ತೆಯ ಉದ್ದಕ್ಕೂ ಭೀಮ ಶಕ್ತಿ ಮೊಳಗಿತು.

ರಾಜ್ಯದ ಮೂಲೆಮೂಲೆಗಳಿಂದ ಬಂದ ಒಳಮೀಸಲಾತಿ ಹೋರಾಟಗಾರರು, ಸುರಿವ ಮಳೆಯಲ್ಲೇ ನಿಂತು ಹೋರಾಟಗಾರರ ಮಾತುಗಳನ್ನು ಆಲಿಸಿದರು. ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಪ್ರತಿಭಟನಾ ಸ್ಥಳದಲ್ಲಿ ಇಂಟರ್‌ನೆಟ್ ನಿರ್ಬಂಧ ಹೇರಲಾಗಿತ್ತು.

ಹೋರಾಟಗಾರರು ಕಾಂಗ್ರೆಸ್, ಜೆಡಿಎಸ್‌, ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡರು. ಮೂವತ್ತು ವರ್ಷಗಳ ನೋವು, ಮಾತುಗಳ ಮೂಲಕ ಬೆಂಕಿಯುಂಡೆಯಾಗಿ ಹೊರಬಿದ್ದವು. ಮುಂದಿನ ಚುನಾವಣೆಯಲ್ಲಿ ಈ ಮೂರು ಪಕ್ಷಗಳಿಗೆ ದಲಿತರು ಪಾಠ ಕಲಿಸುತ್ತೇವೆ ಎಂಬ ಎಚ್ಚರಿಕೆಯನ್ನು ನೀಡಿದರು.

ಪಾದಯಾತ್ರೆಯ ನೇತೃತ್ವ ವಹಿಸಿದ್ದ ದಲಿತ ಮುಖಂಡರಾದ ಅಂಬಣ್ಣ ಅರೋಲಿಕರ್‌ ಹಾಡಿನ ಮೂಲಕ ರಾಜಕೀಯ ಪಕ್ಷಗಳನ್ನು ಟೀಕಿಸಿದರು. ಮೂರು ಪಕ್ಷಗಳ ನಾಯಕರುಗಳ ವಿರುದ್ಧ ಹಾಡಿನ ಮೂಲಕವೇ ವಾಗ್ದಾಳಿ ನಡೆಸಿದರು. “ನಾವು ಯಾವ ಪಕ್ಷದ ಪರವೂ ಇಲ್ಲ. ವಿರೋಧವೂ ಇಲ್ಲ. ನೋಟಿಗೆ ವೋಟು ಹಾಕುವುದಿಲ್ಲ. ಸದಾಶಿವ ಆಯೋಗದ ವರದಿಗೆ ವೋಟು ಹಾಕುತ್ತೇವೆ” ಎಂದು ಗುಡುಗಿದರು.

ದಲಿತ ಹೋರಾಟಗಾರ ವೆಂಕಟಗಿರಿಯಯ್ಯ ಮಾತನಾಡಿ, “ಎಸ್‌.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ದಲಿತರು ಹೋರಾಟ ಮಾಡಿದರು. ಒಳಮೀಸಲಾತಿಗಾಗಿ ಆಯೋಗವನ್ನು ರಚನೆ ಮಾಡುವ ತೀರ್ಮಾನ ಮಾಡಲಾಯಿತು. ಸದಾಶಿವ ಆಯೋಗವು ನೀಡಿರುವ ವರದಿಯು ವೈಜ್ಞಾನಿಕವಾಗಿದೆ. ನಮ್ಮ ಪಾಲನ್ನು ಹಂಚಿಕೊಳ್ಳುವುದಕ್ಕೆ ಯಾರಿಂದಲೂ ಭಿಕ್ಷೆ ಬೇಡಬೇಕಿಲ್ಲ. ಸಿದ್ದರಾಮಯ್ಯ, ಎಚ್‌.ಡಿ.ಕುಮಾರಸ್ವಾಮಿ, ಯಡಿಯೂರಪ್ಪ ಈಗ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾರೆ. ಇವರಿಗೆ ಈ ಜನರ ಬಗ್ಗೆ, ಸಾಮಾಜಿಕ ನ್ಯಾಯದ ಬಗ್ಗೆ ಕಳಕಳಿ ಇದ್ದದ್ದೇ ನಿಜವಾದರೆ, ಒಳಮೀಸಲಾತಿ ಜಾರಿಗೆ ಕ್ರಮವಹಿಸಲಿ. ಆದರೆ ಈ ಮನುವಾದಿ ಪಕ್ಷಗಳು, ದಲಿತರನ್ನು ಒಡೆದು ಆಳಲು ಬಯಸುತ್ತಿವೆ” ಎಂದು ಆಕ್ರೋಶ ಹೊರಹಾಕಿದರು.

ದಲಿತ ಮುಖಂಡರಾದ ಮೋಹನ್ ರಾಜ್ ಮಾತನಾಡಿ, “ಒಳಮೀಸಲಾತಿ ಜಾರಿ ಜೊತೆಗೆ, ಪಿಟಿಸಿಎಲ್‌ ಕಾಯ್ದೆಯನ್ನು ಬಲಪಡಿಸಬೇಕು. ಲಿಂಗಾಯತ ಬೇಡ ಜಂಗಮರು ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ಪಡೆಯುತ್ತಿರುವುದನ್ನು ಸರ್ಕಾರ ಕೂಡಲೇ ತಡೆಯಬೇಕು” ಎಂದು ಆಗ್ರಹಿಸಿದರು.

ಹೋರಾಟಗಾರರ ಬಂಧನ; ಆಕ್ರೋಶ

ಸ್ಥಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆಗಮಿಸಬೇಕೆಂದು ಹೋರಾಟಗಾರರು ಪಟ್ಟು ಹಿಡಿದರು. ಇಳಿಸಂಜೆಯವರೆಗೆ ತಾಳ್ಮೆ ವಹಿಸಿದ್ದ ದಲಿತರು ಅಂತಿಮವಾಗಿ ಅರೆಬೆತ್ತಲೆ ಮೆರವಣಿಗೆ ಮೂಲಕ ಸಿಎಂ ನಿವಾಸದತ್ತ ಹೊರಟಿದ್ದರು. ಆಗ ಪೊಲೀಸರು ಒಳಮೀಸಲಾತಿ ಹೋರಾಟಗಾರರನ್ನು ಬಂಧಿಸಿದ್ದಾರೆ. ಪೊಲೀಸ್ ನೂಕಾಟದಲ್ಲಿ ಹಿರಿಯ ಹೋರಾಟಗಾರ ಕರಿಯಪ್ಪ ಗುಡಿಮನಿಯವರ ತಲೆಗೆ ಪೆಟ್ಟಾಗಿದೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿರುವ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿರಿ: ದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣರನ್ನು ಸಂಧಾನಕ್ಕೆ ಕಳಿಸ್ತೀರಾ? ಒಳಮೀಸಲಾತಿ ಹೋರಾಟಗಾರರ ಆಕ್ರೋಶ

ಕರಿಯಪ್ಪ ಗುಡಿಮನಿಯವರು ಪ್ರತಿಕ್ರಿಯಿಸಿ, “ಕೊಟ್ಟ ಮಾತು ತಪ್ಪಿದೆ ಬಿಜೆಪಿ ಸರ್ಕಾರ. ಸದಾಶಿವ ವರದಿ ಜಾರಿಗೆ ತರುತ್ತೇವೆ ಎಂದು ನಮ್ಮವರ ನಂಬಿಸಿ ಈಗ ಬೆನ್ನಿಗೆ ಚೂರಿ ಹಾಕಿದೆ. 10 ವರ್ಷದ ಹಿಂದೆ ಇದೇ ದಿನ ಬೆಳಗಾವಿಯಲ್ಲಿ ನಮ್ಮ ಮೇಲೆ ಲಾಠಿ ಛಾರ್ಜ್ ಮಾಡಲಾಗಿತ್ತು. ಇವತ್ತು ಮತ್ತೆ ನಮ್ಮ ಮೇಲೆ ದಾಳಿ ಮಾಡಿ ನಮ್ಮ ದನಿಯನ್ನು ತುಳಿಯಲು ನೋಡುತ್ತಿದೆ. ನನ್ನ ತಲೆಗೆ ಪಟ್ಟಾಗಿದೆ. ಆಸ್ಪತ್ರೆಯಲ್ಲಿದ್ದೇನೆ. ನನ್ನ ಪ್ರಾಣ ಹೋದರೂ ಚಿಂತೆ ಇಲ್ಲ. ಹೋರಾಟ ನಿಲ್ಲಬಾರದು. ಸಮುದಾಯ ಸೋಲಬಾರದು. ನಾಳೆ ಇನ್ನೂ ಬಿರುಸಿನ ಹೋರಾಟ ನಡೆಯಲಿದೆ. ಎಲ್ಲಾ ಬಂಧುಗಳು ಗೆಲ್ಲುವ ಹೋರಾಟಕ್ಕೆ ಸಿದ್ಧರಾಗೋಣ” ಎಂದು ಕರೆ ನೀಡಿದ್ದಾರೆ.

ಅಂಬಣ್ಣ ಅರೋಲಿಕರ್‌ ಮಾತನಾಡಿ, “ಸಹಜ ಆಶಯವನ್ನು ಸರ್ಕಾರ ಗಾಳಿಗೆ ತೂರಿದೆ. ಚಳಿ, ಗಾಳಿ, ಮಳೆಯನ್ನು ಲೆಕ್ಕಿಸದೆ ಭೀಮ ಸೈನಿಕರು ರಸ್ತೆಯಲ್ಲಿದ್ದರು. ಮುಖ್ಯಮಂತ್ರಿಯವರು ಕನಿಷ್ಠ ಸೌಜನ್ಯದಿಂದ ನಮ್ಮೊಂದಿಗೆ ಮಾತನಾಡಬೇಕಿತ್ತು. ನಾವೇನು ಭಯೋತ್ಪಾದಕರಾ? ಭಾರತದ ನಿವಾಸಿಗಳಲ್ಲವಾ? ಪ್ರಜಾಪ್ರಭುತ್ವದ ಹಾದಿಯಲ್ಲಿ ನಾವು ನಡೆಯುತ್ತಿಲ್ಲವಾ? ನೀವು ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡುತ್ತೀರಿ. ಮುಂದಿನ ಚುನಾವಣೆಯಲ್ಲಿ ಸೋಲುತ್ತೀರಿ, ಮೂಲೆಗುಂಪಾಗುತ್ತೀರಿ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...