Homeಚಳವಳಿನ್ಯಾಯ ಕೇಳಿದ ಒಳಮೀಸಲಾತಿ ಹೋರಾಟಗಾರರ ಬಂಧನ

ನ್ಯಾಯ ಕೇಳಿದ ಒಳಮೀಸಲಾತಿ ಹೋರಾಟಗಾರರ ಬಂಧನ

- Advertisement -
- Advertisement -

ಒಳಮೀಸಲು ಜಾರಿಗೆ ಒತ್ತಾಯಿಸಿ ಸಿಎಂ ಮನೆಯೆಡೆಗೆ ಪಾದಯಾತ್ರೆ ಹೊರಟ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ’ಯ ಮುಖಂಡರ ಮೇಲೆ ಲಾಠಿ ಚಾರ್ಜ್ ಮಾಡಲಾಗಿದ್ದು, ಹಲವರನ್ನು ಬಂಧಿಸಲಾಗಿದೆ.

ಒಳಮೀಸಲಾತಿ ಹೋರಾಟಗಾರ ಕರಿಯಪ್ಪ ಗುಡಿಮನಿಯವರ ತಲೆಗೆ ಪೆಟ್ಟಾಗಿದ್ದು ಅವರನ್ನು ಕೆ.ಸಿ ಜನರಲ್ ಆಸ್ಪತ್ರೆಗೆ ಸೇರಿಸಲಾಗಿದೆ. 62 ವರ್ಷ ವಯಸ್ಸಿನ ಅವರು ನವೆಂಬರ್ 28 ರಿಂದಲೂ ಹರಿಹರದಿಂದ ಪಾದಯಾತ್ರೆಯಲ್ಲಿ ನಡೆದು ಬೆಂಗಳೂರು ತಲುಪಿದ್ದರು. ಅವರ ಮೇಲಿನ ಹಲ್ಲೆ ನಡೆಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಉಳಿದಂತೆ ಅಂಬಣ್ಣ ಅರೋಲಿಕರ್ ಸೇರಿದಂತೆ ನೂರಾರು ಹೋರಾಟಗಾರರನ್ನು ಆಡುಗೋಡಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ಇಂದು ಬೆಳಿಗ್ಗೆಯಿಂದಲೇ ಸಾವಿರಾರು ಜನರು ಒಳಮೀಸಲಾತಿ ಜಾರಿಗಾಗಿ ಹೋರಾಟ ಆರಂಭಿಸಿದ್ದರು. ಮಳೆ-ಚಳಿ-ಗಾಳಿ ಲೆಕ್ಕಿಸದೆ ಸದಾಶಿವ ಆಯೋಗದ ವರದಿ ಚರ್ಚೆ ಮತ್ತು ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದರು. ಸಚಿವ ವಿ.ಸೋಮಣ್ಣ ಮನವಿ ಆಲಿಸಲು ಬಂದಾಗ ಧಿಕ್ಕಾರ ಕೂಗಿ ಸಿಎಂ ಬೊಮ್ಮಾಯಿಯವರೆ ಬರಬೇಕೆಂದು ಪಟ್ಟು ಹಿಡಿದಿದ್ದರು.

ಸಂಜೆ 6 ಗಂಟೆಯಾದರೂ ಸಹ ಪ್ರತಿಭಟನಾ ಸ್ಥಳಕ್ಕೆ ಸಿಎಂ ಬರಲಿಲ್ಲ. ಪೊಲೀಸರು ಹೋರಾಟ ನಿಲ್ಲಿಸಲು ಮನವಿ ಮಾಡಿದರು. ಆದರೆ ಹೋರಾಟಗಾರರು ಸಿಎಂ ಮನೆ ಕಡೆ ಪಾದಯಾತ್ರೆಗೆ ಮುಂದಾದರು. ಆಗ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಗುಂಪು ಚದುರಿಸಲು ಲಾಠೀಚಾರ್ಜ್ ಮಾಡಿದ ಪೊಲೀಸರು ಮುಖಂಡರನ್ನು ಬಂಧಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕರಿಯಪ್ಪ ಗುಡಿಮನಿಯವರು, “ಸಮುದಾಯ 35 ವರ್ಷದಿಂದ ಒಳಮೀಸಲಾತಿಗಾಗಿ ಹೋರಾಡುತ್ತಿದೆ. 13 ದಿನದಿಂದ ಹರಿಹರದಿಂದ ನಡೆದಿದ್ದೇವೆ. ಇಂದು 50 ಸಾವಿರದಷ್ಟು ಜನ ಸೇರಿದ್ದಾರೆ. ಆದರೆ ನಮ್ಮ ಅಳಲು ಆಲಿಸುವ ಬದಲು ಸರ್ಕಾರ ನಮ್ಮ ಮೇಲೆ ಲಾಠೀ ಚಾರ್ಜ್ ಮಾಡಿದೆ. ನಮ್ಮನ್ನು ಬಂಧಿಸಿದೆ. ಈ ಹಿಂದೆ ಬೆಳಗಾವಿಯಲ್ಲಿಯೂ ಸಹ ನಮ್ಮ ಮೇಲೆ ಲಾಠೀ ಚಾರ್ಜ್ ಮಾಡಿತ್ತು ಬಿಜೆಪಿ ಸರ್ಕಾರ. ನನ್ನ ತಲೆಗೆ ಪಟ್ಟಾಗಿದೆ. ಆಸ್ಪತ್ರೆಯಲ್ಲಿದ್ದೇನೆ. ನನ್ನ ಪ್ರಾಣ ಹೋದರೂ ಚಿಂತೆ ಇಲ್ಲ. ಹೋರಾಟ ನಿಲ್ಲಬಾರದು. ಸಮುದಾಯ ಸೋಲಬಾರದು. ನಾಳೆ ಇನ್ನೂ ಬಿರುಸಿನ ಹೋರಾಟ ನಡೆಯಲಿದೆ. ಎಲ್ಲಾ ಬಂಧುಗಳು ಗೆಲ್ಲುವ ಹೋರಾಟಕ್ಕೆ ಸಿದ್ಧರಾಗೋಣ” ಎಂದರು.

ಬಂಧನಕ್ಕೆ ತೀವ್ರ ಖಂಡನೆ

ಒಳ ಮೀಸಲಾತಿ ಹೋರಾಟಗಾರರನ್ನು ಬಂಧಿಸಿದ ಹೇಡಿ ಸರ್ಕಾರ, ಪೋಲೀಸರ ಮೂಲಕ ದಲಿತರ ರಕ್ತ ಹರಿಸಿದ ಬೊಮ್ಮಾಯಿ ಸರ್ಕಾರ ಎಂದು ಹಲವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ರಕ್ತವನ್ನು ಚೆಲ್ಲುತ್ತೇವೆ, ಒಳಮೀಸಲಾತಿ ಪಡೆಯುತ್ತೇವೆ: ಬೆಂಗಳೂರಿನಲ್ಲಿ ಭೀಮಸೈನಿಕರ ಘರ್ಜನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನೀವು ಮೊದಲು ವೋಟ್ ಕೊಟ್ಟಿದ್ದೀರಲ್ಲ ಬಿಜೆಪಿಗೆ ಅದಕ್ಕೆ ಹೀಗೆ ಆಗಿದೆ ಬಿಜೆಪಿ ಹಣೆಬರ ಗೊತ್ತಿದ್ದು ನೀವು ದಲಿತರಾಗಿ ಬಿಜೆಪಿಗೆ ವೋಟು ಕೊಡ್ತೀರಲ್ಲ …..ದಲಿತ ವಿರೋಧಿ ಸರಕಾರ ಅಲ್ವಾ ನನ್ನ ಬಂಧುಗಳೇ …. ಕಾಂಗ್ರೆಸ್ ಸರಕಾರ ಇರುವಾಗ ಶಿಸ್ತು ಇತ್ತು….ಸರಕಾರದಲ್ಲಿ ಬರೀ ಕೋಮುಗಲಭೆ ಹಗರಣ ರೌಡಿಸಂ ಬಿಟ್ರೆ ಇನ್ನೇನಿದೆ ಹೇಳಿ ಅಭಿವೃದ್ಧಿಯನ್ನು ಕಂಡಿದ್ದೀರಾ …..ಮುಂದಕ್ಕೆ ಆರಿಸಬೇಡಿ ಇಂತಹ ಸರಕಾರವನ್ನು ದಲಿತರು …..ಇದು ಶ್ರೀಮಂತರ ಸರಕಾರ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...