Homeಚಳವಳಿನಮ್ಮನ್ನು ಬಂಧಿಸಿ ಬೊಮ್ಮಾಯಿ ತಮ್ಮ ಕಾಲ ಮೇಲೆ ಕಲ್ಲು ಹಾಕಿಕೊಂಡಿದ್ದಾರೆ: ಅಂಬಣ್ಣ ಅರೋಲಿಕರ್

ನಮ್ಮನ್ನು ಬಂಧಿಸಿ ಬೊಮ್ಮಾಯಿ ತಮ್ಮ ಕಾಲ ಮೇಲೆ ಕಲ್ಲು ಹಾಕಿಕೊಂಡಿದ್ದಾರೆ: ಅಂಬಣ್ಣ ಅರೋಲಿಕರ್

ಬಂಧಿತ ಹೋರಾಟಗಾರರ ಬಿಡುಗಡೆ: 2ನೇ ದಿನಕ್ಕೆ ಕಾಲಿಟ್ಟ ಒಳಮೀಸಲಾತಿ ಹೋರಾಟ

- Advertisement -
- Advertisement -

ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಹೋರಾಟ ನಡೆಸುತ್ತಿರುವ ಹೋರಾಟಗಾರರನ್ನು ಬಂಧಿಸಿದ್ದ ಪೊಲೀಸರು ರಾತ್ರಿ 8 ಗಂಟೆ ಹೊತ್ತಿಗೆ ಬಿಡುಗಡೆ ಮಾಡಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಒಳಮೀಸಲಾತಿ ಹೋರಾಟದ ಧರಣಿ ಮುಂದುವರಿದಿದ್ದು 2ನೇ ದಿನಕ್ಕೆ ಕಾಲಿಟ್ಟಿದೆ.

ಬಿಡುಗಡೆ ಬಳಿಕ ಮಾತನಾಡಿದ ಹಿರಿಯ ಹೋರಾಟಗಾರ ಅಂಬಣ್ಣ ಅರೋಲಿಕರ್, “ಕಳೆದ ನವೆಂಬರ್ 28ರಿಂದ 350 ಕಿ.ಮಿ ಪಾದಯಾತ್ರೆ ಮಾಡಿ ಬೆಂಗಳೂರಿನಲ್ಲಿ ಹೋರಾಟ ನಡೆಸುತ್ತಿದ್ದೇವೆ. ಇದು ಸಮುದಾಯ ಹಿತಾಸಕ್ತಿಯ ಸ್ವಾಭಿಮಾನದ ಹೋರಾಟವೇ ಹೊರತು ಯಾವುದೇ ಪಕ್ಷ ಪ್ರೇರಿತ ಹೋರಾಟವಲ್ಲ. ಬೊಮ್ಮಾಯಿಯವರು ನಮ್ಮನ್ನು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡು ಚರ್ಚೆ ನಡೆಸಬೇಕಿತ್ತು. ಆದರೆ ಲಾಠೀ ಚಾರ್ಜ್ ಮಾಡಿ, ಬಂಧಿಸಿ ಅವರ ತಮ್ಮ ಕಾಲ ಮೇಲೆ ಅವರೆ ಕಲ್ಲು ಹಾಕಿಕೊಂಡಿದ್ದಾರೆ” ಎಂದರು.

“ಮುಖ್ಯಮಂತ್ರಿಗಳು ರಾಯಚೂರಿಗೆ ಬಂದಾಗ ನಾವೇ ಒಳಮೀಸಲಾತಿ ಜಾರಿ ಮಾಡುತ್ತೇವೆ, ನೀವು ಗಾಬರಿ ಪಡಬೇಕಿಲ್ಲ ಎಂದು ಆಶ್ವಾಸನೆ ನೀಡಿದ್ದರು. ಆದರೆ ನಾವು ಬೆಂಗಳೂರಿಗೆ ಬಂದರೆ ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಆದರೆ ಸರ್ಕಾರದ ಲಾಠಿ ಬೂಟಿಗೆ ಹೆದರುವವರು ನಾವಲ್ಲ, ನಾವು ಅಂಬೇಡ್ಕರ್‌ರವರ ಮಕ್ಕಳು. ಅವರು ನಮಗೆ ಕಾನೂನು ಕಲಿಸಿದ್ದಾರೆ. ಅದರಂತೆಯೇ ಹೋರಾಡುತ್ತೇವೆ. ನಿಮಗೆ ಕಾನೂನು ಗೊತ್ತಿದ್ದರೆ ಒಳಮೀಸಲಾತಿ ಜಾರಿಗೊಳಿಸಿ” ಎಂದರು.

ಸಿಎಂ ಬೊಮ್ಮಾಯಿಯವರೆ, ಸಂವಿಧಾನದ ಮೇಲೆ, ಪ್ರಜಾತಂತ್ರದ ಮೇಲೆ, ನೀವು ಕೂತಿರುವ ಕುರ್ಚಿಯ ಮೇಲೆ ನಿಮಗೆ ಏನಾದರೂ ಘನತೆ, ಗೌರವವಿದ್ದರೆ, ಡಿಸೆಂಬರ್ 19 ಅಧಿವೇಶನ ಆರಂಭವಾಗುವ ಮೊದಲೇ ದಿನವೇ 101 ಜಾತಿಗಳ ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ಹಂಚಿಕೆ ಮಾಡುತ್ತೇವೆ ಎಂಬ ನಿರ್ಣಯ ತೆಗೆದುಕೊಳ್ಳಬೇಕು. ಅದು ಸಂವಿಧಾನಾತ್ಮಕವಾಗಿ ಸರ್ಕಾರದ ಜವಾಬ್ದಾರಿ. ಕೇವಲ ನಮ್ಮನ್ನು ಬಂಧಿಸಿ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ. ನಾವು ಸುನಾಮಿಯಂತೆ ಪುಟಿದೆದ್ದ ಹೋರಾಟದ ಕಣಕ್ಕಿಳಿಯುತ್ತೇವೆ. ಎಲ್ಲಾ ದಲಿತ, ಮಾದಿಗ, ಪ್ರಜಾತಂತ್ರವಾದಿಗಳು ಈ ಹೋರಾಟದ ಜೊತೆಗಿದ್ದಾರೆ ಎಂದು ಅಂಬಣ್ಣ ತಿಳಿಸಿದ್ದಾರೆ.

ಇದು ಕೇವಲ ಆಳುವ ಸರ್ಕಾರದ ಜವಾಬ್ದಾರಿಯಲ್ಲ. ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಮತ್ತು ಕುಮಾರಸ್ವಾಮಿಯವರು ತಮ್ಮ ಪಕ್ಷದ ಎಲ್ಲಾ ಶಾಸಕರ ಮನವೊಲಿಸಿ ಒಳಮೀಸಲಾತಿ ಜಾರಿಗೆ ಶ್ರಮಿಸಬೇಕು. ಇಲ್ಲದಿದ್ದಲ್ಲಿ ಮುಂಬರುವ ಚುನಾವಣೆಯಲ್ಲಿ ನಿಮಗೂ ಪಾಠ ಕಲಿಸುತ್ತೇವೆ ಎಂದರು.

ಇನ್ನೊಂದೆಡೆ ತಲೆ ಮತ್ತು ಕಾಲಿಗೆ ಪೆಟ್ಟುಬಿಟ್ಟು ಆಸ್ಪತ್ರೆ ಸೇರಿದ್ದ ಹಿರಿಯ ಹೋರಾಟಗಾರ ಕರಿಯಪ್ಪ ಗುಡಿಮನಿಯವರು ಸಹ ಚೇತರಿಸಿಕೊಂಡಿದ್ದು ಹೋರಾಟದ ಕಣ ಸೇರಿದ್ದಾರೆ.

ಇದನ್ನೂ ಓದಿ: ದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣರನ್ನು ಸಂಧಾನಕ್ಕೆ ಕಳಿಸ್ತೀರಾ? ಒಳಮೀಸಲಾತಿ ಹೋರಾಟಗಾರರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬೀದಿಗಿಳಿದು ಹೋರಾಟ ಸಾಕೆ?ಮುಖ್ಯವಾಗಿ ಸಮುದಾಯ ದವರಿಗೆ ತಮ್ಮ ತಮ್ಮ ಮತಗಳ ಮೌಲ್ಯದ ಬಗ್ಗೆ ಅರಿವುಮೂಡಿಸೋದು ಸಮುದಾಯದ ರಾಜಕೀಯ ಅಧಿಕಾರ ಹಿಡಿಯಲು ಮುಖ್ಯವಾದ ಮೆಟ್ಟಿಲು.ಇದು ಅರಿತಿರುವುದರಿಂದಲೇ ಒಕ್ಕಳಿಗರಾಗಲಿ,ಲಿಂಗಾಯತರಾಗಲಿ,ಕುರುಬರಾಗಲಿ ಬೀದಿ ಗಿಳಿಯುವುದಕ್ಕಿಂತ ತಮ್ಮ ತಮ್ಮ ಮತಗಳನ್ನ ವಿವೇಚನೆಯಿಂದ ಬಳಸಿ ರಾಜಕೀಯ ಅಧಿಕಾರ ಗಳಿಸಿದ್ದಾರೆ.
    ಭಾಬಾಸಾಹೇಬರು ನೀಡಿರುವ ಈ ಅಸ್ತ್ರ ಬಿಟ್ಟು ಮನುವಾದಿ, ಜಾತಿವಾದಿ ಅದಿಕಾರಸ್ತರ ಬಳಿ ಬೇಡುವುದೇಕೆ?

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...