Homeಚಳವಳಿನಮ್ಮನ್ನು ಬಂಧಿಸಿ ಬೊಮ್ಮಾಯಿ ತಮ್ಮ ಕಾಲ ಮೇಲೆ ಕಲ್ಲು ಹಾಕಿಕೊಂಡಿದ್ದಾರೆ: ಅಂಬಣ್ಣ ಅರೋಲಿಕರ್

ನಮ್ಮನ್ನು ಬಂಧಿಸಿ ಬೊಮ್ಮಾಯಿ ತಮ್ಮ ಕಾಲ ಮೇಲೆ ಕಲ್ಲು ಹಾಕಿಕೊಂಡಿದ್ದಾರೆ: ಅಂಬಣ್ಣ ಅರೋಲಿಕರ್

ಬಂಧಿತ ಹೋರಾಟಗಾರರ ಬಿಡುಗಡೆ: 2ನೇ ದಿನಕ್ಕೆ ಕಾಲಿಟ್ಟ ಒಳಮೀಸಲಾತಿ ಹೋರಾಟ

- Advertisement -
- Advertisement -

ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಹೋರಾಟ ನಡೆಸುತ್ತಿರುವ ಹೋರಾಟಗಾರರನ್ನು ಬಂಧಿಸಿದ್ದ ಪೊಲೀಸರು ರಾತ್ರಿ 8 ಗಂಟೆ ಹೊತ್ತಿಗೆ ಬಿಡುಗಡೆ ಮಾಡಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಒಳಮೀಸಲಾತಿ ಹೋರಾಟದ ಧರಣಿ ಮುಂದುವರಿದಿದ್ದು 2ನೇ ದಿನಕ್ಕೆ ಕಾಲಿಟ್ಟಿದೆ.

ಬಿಡುಗಡೆ ಬಳಿಕ ಮಾತನಾಡಿದ ಹಿರಿಯ ಹೋರಾಟಗಾರ ಅಂಬಣ್ಣ ಅರೋಲಿಕರ್, “ಕಳೆದ ನವೆಂಬರ್ 28ರಿಂದ 350 ಕಿ.ಮಿ ಪಾದಯಾತ್ರೆ ಮಾಡಿ ಬೆಂಗಳೂರಿನಲ್ಲಿ ಹೋರಾಟ ನಡೆಸುತ್ತಿದ್ದೇವೆ. ಇದು ಸಮುದಾಯ ಹಿತಾಸಕ್ತಿಯ ಸ್ವಾಭಿಮಾನದ ಹೋರಾಟವೇ ಹೊರತು ಯಾವುದೇ ಪಕ್ಷ ಪ್ರೇರಿತ ಹೋರಾಟವಲ್ಲ. ಬೊಮ್ಮಾಯಿಯವರು ನಮ್ಮನ್ನು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡು ಚರ್ಚೆ ನಡೆಸಬೇಕಿತ್ತು. ಆದರೆ ಲಾಠೀ ಚಾರ್ಜ್ ಮಾಡಿ, ಬಂಧಿಸಿ ಅವರ ತಮ್ಮ ಕಾಲ ಮೇಲೆ ಅವರೆ ಕಲ್ಲು ಹಾಕಿಕೊಂಡಿದ್ದಾರೆ” ಎಂದರು.

“ಮುಖ್ಯಮಂತ್ರಿಗಳು ರಾಯಚೂರಿಗೆ ಬಂದಾಗ ನಾವೇ ಒಳಮೀಸಲಾತಿ ಜಾರಿ ಮಾಡುತ್ತೇವೆ, ನೀವು ಗಾಬರಿ ಪಡಬೇಕಿಲ್ಲ ಎಂದು ಆಶ್ವಾಸನೆ ನೀಡಿದ್ದರು. ಆದರೆ ನಾವು ಬೆಂಗಳೂರಿಗೆ ಬಂದರೆ ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಆದರೆ ಸರ್ಕಾರದ ಲಾಠಿ ಬೂಟಿಗೆ ಹೆದರುವವರು ನಾವಲ್ಲ, ನಾವು ಅಂಬೇಡ್ಕರ್‌ರವರ ಮಕ್ಕಳು. ಅವರು ನಮಗೆ ಕಾನೂನು ಕಲಿಸಿದ್ದಾರೆ. ಅದರಂತೆಯೇ ಹೋರಾಡುತ್ತೇವೆ. ನಿಮಗೆ ಕಾನೂನು ಗೊತ್ತಿದ್ದರೆ ಒಳಮೀಸಲಾತಿ ಜಾರಿಗೊಳಿಸಿ” ಎಂದರು.

ಸಿಎಂ ಬೊಮ್ಮಾಯಿಯವರೆ, ಸಂವಿಧಾನದ ಮೇಲೆ, ಪ್ರಜಾತಂತ್ರದ ಮೇಲೆ, ನೀವು ಕೂತಿರುವ ಕುರ್ಚಿಯ ಮೇಲೆ ನಿಮಗೆ ಏನಾದರೂ ಘನತೆ, ಗೌರವವಿದ್ದರೆ, ಡಿಸೆಂಬರ್ 19 ಅಧಿವೇಶನ ಆರಂಭವಾಗುವ ಮೊದಲೇ ದಿನವೇ 101 ಜಾತಿಗಳ ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ಹಂಚಿಕೆ ಮಾಡುತ್ತೇವೆ ಎಂಬ ನಿರ್ಣಯ ತೆಗೆದುಕೊಳ್ಳಬೇಕು. ಅದು ಸಂವಿಧಾನಾತ್ಮಕವಾಗಿ ಸರ್ಕಾರದ ಜವಾಬ್ದಾರಿ. ಕೇವಲ ನಮ್ಮನ್ನು ಬಂಧಿಸಿ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ. ನಾವು ಸುನಾಮಿಯಂತೆ ಪುಟಿದೆದ್ದ ಹೋರಾಟದ ಕಣಕ್ಕಿಳಿಯುತ್ತೇವೆ. ಎಲ್ಲಾ ದಲಿತ, ಮಾದಿಗ, ಪ್ರಜಾತಂತ್ರವಾದಿಗಳು ಈ ಹೋರಾಟದ ಜೊತೆಗಿದ್ದಾರೆ ಎಂದು ಅಂಬಣ್ಣ ತಿಳಿಸಿದ್ದಾರೆ.

ಇದು ಕೇವಲ ಆಳುವ ಸರ್ಕಾರದ ಜವಾಬ್ದಾರಿಯಲ್ಲ. ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಮತ್ತು ಕುಮಾರಸ್ವಾಮಿಯವರು ತಮ್ಮ ಪಕ್ಷದ ಎಲ್ಲಾ ಶಾಸಕರ ಮನವೊಲಿಸಿ ಒಳಮೀಸಲಾತಿ ಜಾರಿಗೆ ಶ್ರಮಿಸಬೇಕು. ಇಲ್ಲದಿದ್ದಲ್ಲಿ ಮುಂಬರುವ ಚುನಾವಣೆಯಲ್ಲಿ ನಿಮಗೂ ಪಾಠ ಕಲಿಸುತ್ತೇವೆ ಎಂದರು.

ಇನ್ನೊಂದೆಡೆ ತಲೆ ಮತ್ತು ಕಾಲಿಗೆ ಪೆಟ್ಟುಬಿಟ್ಟು ಆಸ್ಪತ್ರೆ ಸೇರಿದ್ದ ಹಿರಿಯ ಹೋರಾಟಗಾರ ಕರಿಯಪ್ಪ ಗುಡಿಮನಿಯವರು ಸಹ ಚೇತರಿಸಿಕೊಂಡಿದ್ದು ಹೋರಾಟದ ಕಣ ಸೇರಿದ್ದಾರೆ.

ಇದನ್ನೂ ಓದಿ: ದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣರನ್ನು ಸಂಧಾನಕ್ಕೆ ಕಳಿಸ್ತೀರಾ? ಒಳಮೀಸಲಾತಿ ಹೋರಾಟಗಾರರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬೀದಿಗಿಳಿದು ಹೋರಾಟ ಸಾಕೆ?ಮುಖ್ಯವಾಗಿ ಸಮುದಾಯ ದವರಿಗೆ ತಮ್ಮ ತಮ್ಮ ಮತಗಳ ಮೌಲ್ಯದ ಬಗ್ಗೆ ಅರಿವುಮೂಡಿಸೋದು ಸಮುದಾಯದ ರಾಜಕೀಯ ಅಧಿಕಾರ ಹಿಡಿಯಲು ಮುಖ್ಯವಾದ ಮೆಟ್ಟಿಲು.ಇದು ಅರಿತಿರುವುದರಿಂದಲೇ ಒಕ್ಕಳಿಗರಾಗಲಿ,ಲಿಂಗಾಯತರಾಗಲಿ,ಕುರುಬರಾಗಲಿ ಬೀದಿ ಗಿಳಿಯುವುದಕ್ಕಿಂತ ತಮ್ಮ ತಮ್ಮ ಮತಗಳನ್ನ ವಿವೇಚನೆಯಿಂದ ಬಳಸಿ ರಾಜಕೀಯ ಅಧಿಕಾರ ಗಳಿಸಿದ್ದಾರೆ.
    ಭಾಬಾಸಾಹೇಬರು ನೀಡಿರುವ ಈ ಅಸ್ತ್ರ ಬಿಟ್ಟು ಮನುವಾದಿ, ಜಾತಿವಾದಿ ಅದಿಕಾರಸ್ತರ ಬಳಿ ಬೇಡುವುದೇಕೆ?

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...