Homeಚಳವಳಿನಮ್ಮನ್ನು ಬಂಧಿಸಿ ಬೊಮ್ಮಾಯಿ ತಮ್ಮ ಕಾಲ ಮೇಲೆ ಕಲ್ಲು ಹಾಕಿಕೊಂಡಿದ್ದಾರೆ: ಅಂಬಣ್ಣ ಅರೋಲಿಕರ್

ನಮ್ಮನ್ನು ಬಂಧಿಸಿ ಬೊಮ್ಮಾಯಿ ತಮ್ಮ ಕಾಲ ಮೇಲೆ ಕಲ್ಲು ಹಾಕಿಕೊಂಡಿದ್ದಾರೆ: ಅಂಬಣ್ಣ ಅರೋಲಿಕರ್

ಬಂಧಿತ ಹೋರಾಟಗಾರರ ಬಿಡುಗಡೆ: 2ನೇ ದಿನಕ್ಕೆ ಕಾಲಿಟ್ಟ ಒಳಮೀಸಲಾತಿ ಹೋರಾಟ

- Advertisement -
- Advertisement -

ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಹೋರಾಟ ನಡೆಸುತ್ತಿರುವ ಹೋರಾಟಗಾರರನ್ನು ಬಂಧಿಸಿದ್ದ ಪೊಲೀಸರು ರಾತ್ರಿ 8 ಗಂಟೆ ಹೊತ್ತಿಗೆ ಬಿಡುಗಡೆ ಮಾಡಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಒಳಮೀಸಲಾತಿ ಹೋರಾಟದ ಧರಣಿ ಮುಂದುವರಿದಿದ್ದು 2ನೇ ದಿನಕ್ಕೆ ಕಾಲಿಟ್ಟಿದೆ.

ಬಿಡುಗಡೆ ಬಳಿಕ ಮಾತನಾಡಿದ ಹಿರಿಯ ಹೋರಾಟಗಾರ ಅಂಬಣ್ಣ ಅರೋಲಿಕರ್, “ಕಳೆದ ನವೆಂಬರ್ 28ರಿಂದ 350 ಕಿ.ಮಿ ಪಾದಯಾತ್ರೆ ಮಾಡಿ ಬೆಂಗಳೂರಿನಲ್ಲಿ ಹೋರಾಟ ನಡೆಸುತ್ತಿದ್ದೇವೆ. ಇದು ಸಮುದಾಯ ಹಿತಾಸಕ್ತಿಯ ಸ್ವಾಭಿಮಾನದ ಹೋರಾಟವೇ ಹೊರತು ಯಾವುದೇ ಪಕ್ಷ ಪ್ರೇರಿತ ಹೋರಾಟವಲ್ಲ. ಬೊಮ್ಮಾಯಿಯವರು ನಮ್ಮನ್ನು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡು ಚರ್ಚೆ ನಡೆಸಬೇಕಿತ್ತು. ಆದರೆ ಲಾಠೀ ಚಾರ್ಜ್ ಮಾಡಿ, ಬಂಧಿಸಿ ಅವರ ತಮ್ಮ ಕಾಲ ಮೇಲೆ ಅವರೆ ಕಲ್ಲು ಹಾಕಿಕೊಂಡಿದ್ದಾರೆ” ಎಂದರು.

“ಮುಖ್ಯಮಂತ್ರಿಗಳು ರಾಯಚೂರಿಗೆ ಬಂದಾಗ ನಾವೇ ಒಳಮೀಸಲಾತಿ ಜಾರಿ ಮಾಡುತ್ತೇವೆ, ನೀವು ಗಾಬರಿ ಪಡಬೇಕಿಲ್ಲ ಎಂದು ಆಶ್ವಾಸನೆ ನೀಡಿದ್ದರು. ಆದರೆ ನಾವು ಬೆಂಗಳೂರಿಗೆ ಬಂದರೆ ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಆದರೆ ಸರ್ಕಾರದ ಲಾಠಿ ಬೂಟಿಗೆ ಹೆದರುವವರು ನಾವಲ್ಲ, ನಾವು ಅಂಬೇಡ್ಕರ್‌ರವರ ಮಕ್ಕಳು. ಅವರು ನಮಗೆ ಕಾನೂನು ಕಲಿಸಿದ್ದಾರೆ. ಅದರಂತೆಯೇ ಹೋರಾಡುತ್ತೇವೆ. ನಿಮಗೆ ಕಾನೂನು ಗೊತ್ತಿದ್ದರೆ ಒಳಮೀಸಲಾತಿ ಜಾರಿಗೊಳಿಸಿ” ಎಂದರು.

ಸಿಎಂ ಬೊಮ್ಮಾಯಿಯವರೆ, ಸಂವಿಧಾನದ ಮೇಲೆ, ಪ್ರಜಾತಂತ್ರದ ಮೇಲೆ, ನೀವು ಕೂತಿರುವ ಕುರ್ಚಿಯ ಮೇಲೆ ನಿಮಗೆ ಏನಾದರೂ ಘನತೆ, ಗೌರವವಿದ್ದರೆ, ಡಿಸೆಂಬರ್ 19 ಅಧಿವೇಶನ ಆರಂಭವಾಗುವ ಮೊದಲೇ ದಿನವೇ 101 ಜಾತಿಗಳ ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ಹಂಚಿಕೆ ಮಾಡುತ್ತೇವೆ ಎಂಬ ನಿರ್ಣಯ ತೆಗೆದುಕೊಳ್ಳಬೇಕು. ಅದು ಸಂವಿಧಾನಾತ್ಮಕವಾಗಿ ಸರ್ಕಾರದ ಜವಾಬ್ದಾರಿ. ಕೇವಲ ನಮ್ಮನ್ನು ಬಂಧಿಸಿ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ. ನಾವು ಸುನಾಮಿಯಂತೆ ಪುಟಿದೆದ್ದ ಹೋರಾಟದ ಕಣಕ್ಕಿಳಿಯುತ್ತೇವೆ. ಎಲ್ಲಾ ದಲಿತ, ಮಾದಿಗ, ಪ್ರಜಾತಂತ್ರವಾದಿಗಳು ಈ ಹೋರಾಟದ ಜೊತೆಗಿದ್ದಾರೆ ಎಂದು ಅಂಬಣ್ಣ ತಿಳಿಸಿದ್ದಾರೆ.

ಇದು ಕೇವಲ ಆಳುವ ಸರ್ಕಾರದ ಜವಾಬ್ದಾರಿಯಲ್ಲ. ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಮತ್ತು ಕುಮಾರಸ್ವಾಮಿಯವರು ತಮ್ಮ ಪಕ್ಷದ ಎಲ್ಲಾ ಶಾಸಕರ ಮನವೊಲಿಸಿ ಒಳಮೀಸಲಾತಿ ಜಾರಿಗೆ ಶ್ರಮಿಸಬೇಕು. ಇಲ್ಲದಿದ್ದಲ್ಲಿ ಮುಂಬರುವ ಚುನಾವಣೆಯಲ್ಲಿ ನಿಮಗೂ ಪಾಠ ಕಲಿಸುತ್ತೇವೆ ಎಂದರು.

ಇನ್ನೊಂದೆಡೆ ತಲೆ ಮತ್ತು ಕಾಲಿಗೆ ಪೆಟ್ಟುಬಿಟ್ಟು ಆಸ್ಪತ್ರೆ ಸೇರಿದ್ದ ಹಿರಿಯ ಹೋರಾಟಗಾರ ಕರಿಯಪ್ಪ ಗುಡಿಮನಿಯವರು ಸಹ ಚೇತರಿಸಿಕೊಂಡಿದ್ದು ಹೋರಾಟದ ಕಣ ಸೇರಿದ್ದಾರೆ.

ಇದನ್ನೂ ಓದಿ: ದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣರನ್ನು ಸಂಧಾನಕ್ಕೆ ಕಳಿಸ್ತೀರಾ? ಒಳಮೀಸಲಾತಿ ಹೋರಾಟಗಾರರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬೀದಿಗಿಳಿದು ಹೋರಾಟ ಸಾಕೆ?ಮುಖ್ಯವಾಗಿ ಸಮುದಾಯ ದವರಿಗೆ ತಮ್ಮ ತಮ್ಮ ಮತಗಳ ಮೌಲ್ಯದ ಬಗ್ಗೆ ಅರಿವುಮೂಡಿಸೋದು ಸಮುದಾಯದ ರಾಜಕೀಯ ಅಧಿಕಾರ ಹಿಡಿಯಲು ಮುಖ್ಯವಾದ ಮೆಟ್ಟಿಲು.ಇದು ಅರಿತಿರುವುದರಿಂದಲೇ ಒಕ್ಕಳಿಗರಾಗಲಿ,ಲಿಂಗಾಯತರಾಗಲಿ,ಕುರುಬರಾಗಲಿ ಬೀದಿ ಗಿಳಿಯುವುದಕ್ಕಿಂತ ತಮ್ಮ ತಮ್ಮ ಮತಗಳನ್ನ ವಿವೇಚನೆಯಿಂದ ಬಳಸಿ ರಾಜಕೀಯ ಅಧಿಕಾರ ಗಳಿಸಿದ್ದಾರೆ.
    ಭಾಬಾಸಾಹೇಬರು ನೀಡಿರುವ ಈ ಅಸ್ತ್ರ ಬಿಟ್ಟು ಮನುವಾದಿ, ಜಾತಿವಾದಿ ಅದಿಕಾರಸ್ತರ ಬಳಿ ಬೇಡುವುದೇಕೆ?

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...