Homeಸಿನಿಮಾಕ್ರೀಡೆ2022ರಲ್ಲಿ ಆಸ್ಟ್ರೇಲಿಯಾಗೆ ಮೊದಲ ಟಿ20 ಸೋಲುಣಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

2022ರಲ್ಲಿ ಆಸ್ಟ್ರೇಲಿಯಾಗೆ ಮೊದಲ ಟಿ20 ಸೋಲುಣಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ಸೂಪರ್ ಓವರ್‌ನಲ್ಲಿ ರೋಚಕ ಜಯ ಕಂಡು ಸರಣಿಯಲ್ಲಿ 1-1 ಸಮಬಲ ಸಾಧಿಸಿದ ಭಾರತ ತಂಡ

- Advertisement -
- Advertisement -

2022ರಲ್ಲಿ ಟಿ20 ಕ್ರಿಕೆಟ್‌ನಲ್ಲಿ ಒಂದೂ ಸೋಲು ಕಾಣದೇ ಅಜೇಯರಾಗುಳಿದ್ದ ಆಸ್ಟ್ರೇಲಿಯಾ ಮಹಿಳಾ ತಂಡವನ್ನು ಭಾರತವು ಸೂಪರ್ ಓವರ್‌ನಲ್ಲಿ ಮಣಿಸಿ ಸರಣಿಯಲ್ಲಿ ಸಮಬಲ ಸಾಧಿಸಿತು. ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಸ್ಮೃತಿ ಮಂದಾನ ಭಾರತದ ಗೆಲುವಿನ ರೂವಾರಿಯೆನೆಸಿದರು.

ಮುಂಬೈನ ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಹಿಳಾ ಕ್ರಿಕೆಟ್ ಪಂದ್ಯ ನೋಡಲು 40 ಸಾವಿರಕ್ಕೂ ಅಧಿಕ ಪ್ರೇಕ್ಷಕರು ನೆರೆದಿದ್ದರು. ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟ್ ಮಾಡಿ ಒಂದು ವಿಕೆಟ್ 187 ರನ್ ಗಳಿಸಿದರೆ ಭಾರತ ತಂಡ 5 ವಿಕೆಟ್ ನಷ್ಟಕ್ಕೆ ಅಷ್ಟೇ ರನ್ ಗಳಿಸಿತು. ಪಂದ್ಯ ಸೂಪರ್ ಓವರ್‌ವರೆಗೂ ತಲುಪಿ ರೋಚಕತೆ ಹುಟ್ಟಿಸಿತ್ತು. ಕೊನೆಗೆ ಸೂಪರ್ ಓವರ್‌ನಲ್ಲಿ ಭಾರತ 4 ರನ್‌ಗಳ ಜಯ ಸಾಧಿಸಿತು.

2022ರಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡ 12 ಟಿ20 ಪಂದ್ಯಗಳನ್ನಾಡಿ 9 ಗೆಲವು ಕಂಡರೆ ಮೂರು ಪಂದ್ಯಗಳು ಫಲಿತಾಂಶ ಕಾಣದೆ ರದ್ದುಗೊಂಡಿದ್ದವು. 13ನೇ ಪಂದ್ಯದಲ್ಲಿ ಅದು ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ 5 ಟಿ20 ಪಂದ್ಯಗಳ ಸರಣಿಯಲ್ಲಿ ಭಾರತ 1-1ರ ಸಮಬಲ ಸಾಧಿಸಿದೆ.

ರೋಚಕ ಸೂಪರ್ ಓವರ್

ಸೂಪರ್ ಓವರ್‌ನಲ್ಲಿ ಆಸ್ಟ್ರೇಲಿಯಾದ ಗ್ರಹಂ ಎಸೆದ ಮೊದಲ ಬಾಲ್ ಎದುರಿಸದ ರಿಚಾ ಘೋಷ್ ಸಿಕ್ಸರ್ ಎತ್ತಿದ್ದರು. ಎರಡನೇ ಬಾಲ್‌ನಲ್ಲಿ ಅವರಿಗೆ ಕ್ಯಾಚಿತ್ತ ನಿರ್ಗಮಿಸಿದರು. ಆಗ ಕ್ರೀಸ್‌ಗಿಳಿದ ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಒಂದು ರನ್ ಗಳಿಸಿದರು. ನಾಲ್ಕನೇ ಎಸೆತವನ್ನು ಸ್ಮೃತಿ ಮಂದಾನ ಬೌಂಡರಿಗೆ ಅಟ್ಟಿದರು. 5ನೇ ಎಸೆತವನ್ನು ಆಕರ್ಷಕ ಸಿಕ್ಸರ್ ಬಾರಿಸಿದರು. ಆರನೇ ಎಸೆತದಲ್ಲಿ ಮೂರು ರನ್ ಕಲೆ ಹಾಕಿದರು. ಭಾರತವು ಒಂದು ಓವರ್‌ನಲ್ಲಿ 20 ರನ್ ಗಳಿಸಿತು.

ಗೆಲುವಿಗೆ 21 ರನ್ ಗುರಿ ಪಡೆದು ಕ್ರೀಸ್‌ಗಿಳಿದ ಆಸ್ಟ್ರೇಲಿಯಾದ ಹ್ಯಾಲಿ ರೇಣುಕಾ ಎಸೆದ ಮೊದಲ ಎಸೆತವನ್ನು ನೇರ ಬೌಂಡರಿಗೆ ಅಟ್ಟಿದರು. ಎರಡನೇ ಎಸೆತದಲ್ಲಿ ಒಂದು ರನ್ ಗಳಿಸಿದರು. ಮೂರನೇ ಎಸೆತದಲ್ಲಿ ಸಿಕ್ಸರ್ ಬಾರಿಸಲು ಮುಂದಾದ ಗಾರ್ಡನೆರ್ ರಾಧಾಗೆ ಕ್ಯಾಚಿತ್ತು ನಿರ್ಗಮಿಸಿದರು. ಆಗ ಆಸ್ಟ್ರೇಲಿಯಾ 3 ಎಸೆತದಲ್ಲಿ 16 ರನ್ ಗಳಿಸಬೇಕಿತ್ತು. ನಾಲ್ಕನೇ ಎಸೆತ ಎದುರಿಸಿದ ಮ್ಯಾಗ್ರಥ್ ಒಂದು ರನ್ ಗಳಿಸಿದರು. ಹ್ಯಾಲಿ ಐದನೇ ಎಸೆತ ಬೌಂಡರಿ ಮತ್ತು ಆರನೇ ಎಸೆತ ಸಿಕ್ಸರ್ ಎತ್ತಿದ್ದರು ಸಹ ಆಸ್ಟ್ರೇಲಿಯಾ 4 ರನ್‌ನಿಂದ ಸೋಲು ಕಂಡಿತು.

ರನ್‌ಗಳ ಸುರಿಮಳೆ

ಸೂಪರ್ ಓವರ್‌ಗೂ ಮೊದಲು ನಡೆದ ಪಂದ್ಯದಲ್ಲಿ ರನ್‌ಗಳ ಸುರಿಮಳೆಯಾಯಿತು. ಆಸ್ಟ್ರೇಲಿಯಾದ ಮೂನಿ 54 ಎಸೆತಗಳಲ್ಲಿ 82 ರನ್ ಗಳಿಸಿದರೆ, ಮ್ಯಾಗ್ರಥ್ 51 ಎಸೆತಗಳಲ್ಲಿ 70 ರನ್ ಗಳಿಸಿದರು. ಪರಿಣಾಮ ಆಸ್ಟ್ರೇಲಿಯಾ ತಂಡ 20 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತ್ತು.

188 ರನ್‌ಗಳ ಗುರಿ ಪಡೆದ ಭಾರತ ತಂಡದ ಸ್ಮೃತಿ ಮಂದಾನ 49 ಎಸೆತಗಳಲ್ಲಿ 79 ರನ್‌ ಗಳಿಸಿದರು. ಸೆಫಾಲಿ ವರ್ಮಾ ಸಹ 26 ಎಸೆತಗಳಲ್ಲಿ 34 ರನ್ ಗಳಿಸಿದರು. ಕಡೆಯದಾಗ 13 ಎಸೆತಗಳಲ್ಲಿ 26 ರನ್ ಗಳಿಸಿದ ರಿಚಾ ಘೋಷ್ ಪಂದ್ಯ ಟೈ ಆಗುವಂತೆ ನೋಡಿಕೊಂಡರು.

ಉಚಿತ ಪ್ರವೇಶ

ಮಹಿಳಾ ಕ್ರಿಕೆಟ್ ಅನ್ನು ಪ್ರಚಾರ ಮಾಡುವ ದೃಷ್ಟಿಯಿಂದ ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಭಾನುವಾರದ ಪಂದ್ಯಕ್ಕೆ ಉಚಿತ್ರ ಪ್ರವೇಶ ಕಲ್ಪಿಸಲಾಗಿತ್ತು. ಸುಮಾರು 45,000 ಪ್ರೇಕ್ಷಕರು ಆಟ ಕಣ್ತುಂಬಿಕೊಂಡರು.

ಇದನ್ನೂ ಓದಿ: ಜಿಟಿಜಿಟಿ ಮಳೆಯ ನಡುವೆ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ: ಒಳಮೀಸಲಾತಿಗಾಗಿ ಹರಿದು ಬಂತು ಭೀಮಸಾಗರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...