Homeಸಿನಿಮಾಕ್ರೀಡೆ2022ರಲ್ಲಿ ಆಸ್ಟ್ರೇಲಿಯಾಗೆ ಮೊದಲ ಟಿ20 ಸೋಲುಣಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

2022ರಲ್ಲಿ ಆಸ್ಟ್ರೇಲಿಯಾಗೆ ಮೊದಲ ಟಿ20 ಸೋಲುಣಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ಸೂಪರ್ ಓವರ್‌ನಲ್ಲಿ ರೋಚಕ ಜಯ ಕಂಡು ಸರಣಿಯಲ್ಲಿ 1-1 ಸಮಬಲ ಸಾಧಿಸಿದ ಭಾರತ ತಂಡ

- Advertisement -
- Advertisement -

2022ರಲ್ಲಿ ಟಿ20 ಕ್ರಿಕೆಟ್‌ನಲ್ಲಿ ಒಂದೂ ಸೋಲು ಕಾಣದೇ ಅಜೇಯರಾಗುಳಿದ್ದ ಆಸ್ಟ್ರೇಲಿಯಾ ಮಹಿಳಾ ತಂಡವನ್ನು ಭಾರತವು ಸೂಪರ್ ಓವರ್‌ನಲ್ಲಿ ಮಣಿಸಿ ಸರಣಿಯಲ್ಲಿ ಸಮಬಲ ಸಾಧಿಸಿತು. ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಸ್ಮೃತಿ ಮಂದಾನ ಭಾರತದ ಗೆಲುವಿನ ರೂವಾರಿಯೆನೆಸಿದರು.

ಮುಂಬೈನ ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಹಿಳಾ ಕ್ರಿಕೆಟ್ ಪಂದ್ಯ ನೋಡಲು 40 ಸಾವಿರಕ್ಕೂ ಅಧಿಕ ಪ್ರೇಕ್ಷಕರು ನೆರೆದಿದ್ದರು. ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟ್ ಮಾಡಿ ಒಂದು ವಿಕೆಟ್ 187 ರನ್ ಗಳಿಸಿದರೆ ಭಾರತ ತಂಡ 5 ವಿಕೆಟ್ ನಷ್ಟಕ್ಕೆ ಅಷ್ಟೇ ರನ್ ಗಳಿಸಿತು. ಪಂದ್ಯ ಸೂಪರ್ ಓವರ್‌ವರೆಗೂ ತಲುಪಿ ರೋಚಕತೆ ಹುಟ್ಟಿಸಿತ್ತು. ಕೊನೆಗೆ ಸೂಪರ್ ಓವರ್‌ನಲ್ಲಿ ಭಾರತ 4 ರನ್‌ಗಳ ಜಯ ಸಾಧಿಸಿತು.

2022ರಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡ 12 ಟಿ20 ಪಂದ್ಯಗಳನ್ನಾಡಿ 9 ಗೆಲವು ಕಂಡರೆ ಮೂರು ಪಂದ್ಯಗಳು ಫಲಿತಾಂಶ ಕಾಣದೆ ರದ್ದುಗೊಂಡಿದ್ದವು. 13ನೇ ಪಂದ್ಯದಲ್ಲಿ ಅದು ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ 5 ಟಿ20 ಪಂದ್ಯಗಳ ಸರಣಿಯಲ್ಲಿ ಭಾರತ 1-1ರ ಸಮಬಲ ಸಾಧಿಸಿದೆ.

ರೋಚಕ ಸೂಪರ್ ಓವರ್

ಸೂಪರ್ ಓವರ್‌ನಲ್ಲಿ ಆಸ್ಟ್ರೇಲಿಯಾದ ಗ್ರಹಂ ಎಸೆದ ಮೊದಲ ಬಾಲ್ ಎದುರಿಸದ ರಿಚಾ ಘೋಷ್ ಸಿಕ್ಸರ್ ಎತ್ತಿದ್ದರು. ಎರಡನೇ ಬಾಲ್‌ನಲ್ಲಿ ಅವರಿಗೆ ಕ್ಯಾಚಿತ್ತ ನಿರ್ಗಮಿಸಿದರು. ಆಗ ಕ್ರೀಸ್‌ಗಿಳಿದ ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಒಂದು ರನ್ ಗಳಿಸಿದರು. ನಾಲ್ಕನೇ ಎಸೆತವನ್ನು ಸ್ಮೃತಿ ಮಂದಾನ ಬೌಂಡರಿಗೆ ಅಟ್ಟಿದರು. 5ನೇ ಎಸೆತವನ್ನು ಆಕರ್ಷಕ ಸಿಕ್ಸರ್ ಬಾರಿಸಿದರು. ಆರನೇ ಎಸೆತದಲ್ಲಿ ಮೂರು ರನ್ ಕಲೆ ಹಾಕಿದರು. ಭಾರತವು ಒಂದು ಓವರ್‌ನಲ್ಲಿ 20 ರನ್ ಗಳಿಸಿತು.

ಗೆಲುವಿಗೆ 21 ರನ್ ಗುರಿ ಪಡೆದು ಕ್ರೀಸ್‌ಗಿಳಿದ ಆಸ್ಟ್ರೇಲಿಯಾದ ಹ್ಯಾಲಿ ರೇಣುಕಾ ಎಸೆದ ಮೊದಲ ಎಸೆತವನ್ನು ನೇರ ಬೌಂಡರಿಗೆ ಅಟ್ಟಿದರು. ಎರಡನೇ ಎಸೆತದಲ್ಲಿ ಒಂದು ರನ್ ಗಳಿಸಿದರು. ಮೂರನೇ ಎಸೆತದಲ್ಲಿ ಸಿಕ್ಸರ್ ಬಾರಿಸಲು ಮುಂದಾದ ಗಾರ್ಡನೆರ್ ರಾಧಾಗೆ ಕ್ಯಾಚಿತ್ತು ನಿರ್ಗಮಿಸಿದರು. ಆಗ ಆಸ್ಟ್ರೇಲಿಯಾ 3 ಎಸೆತದಲ್ಲಿ 16 ರನ್ ಗಳಿಸಬೇಕಿತ್ತು. ನಾಲ್ಕನೇ ಎಸೆತ ಎದುರಿಸಿದ ಮ್ಯಾಗ್ರಥ್ ಒಂದು ರನ್ ಗಳಿಸಿದರು. ಹ್ಯಾಲಿ ಐದನೇ ಎಸೆತ ಬೌಂಡರಿ ಮತ್ತು ಆರನೇ ಎಸೆತ ಸಿಕ್ಸರ್ ಎತ್ತಿದ್ದರು ಸಹ ಆಸ್ಟ್ರೇಲಿಯಾ 4 ರನ್‌ನಿಂದ ಸೋಲು ಕಂಡಿತು.

ರನ್‌ಗಳ ಸುರಿಮಳೆ

ಸೂಪರ್ ಓವರ್‌ಗೂ ಮೊದಲು ನಡೆದ ಪಂದ್ಯದಲ್ಲಿ ರನ್‌ಗಳ ಸುರಿಮಳೆಯಾಯಿತು. ಆಸ್ಟ್ರೇಲಿಯಾದ ಮೂನಿ 54 ಎಸೆತಗಳಲ್ಲಿ 82 ರನ್ ಗಳಿಸಿದರೆ, ಮ್ಯಾಗ್ರಥ್ 51 ಎಸೆತಗಳಲ್ಲಿ 70 ರನ್ ಗಳಿಸಿದರು. ಪರಿಣಾಮ ಆಸ್ಟ್ರೇಲಿಯಾ ತಂಡ 20 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತ್ತು.

188 ರನ್‌ಗಳ ಗುರಿ ಪಡೆದ ಭಾರತ ತಂಡದ ಸ್ಮೃತಿ ಮಂದಾನ 49 ಎಸೆತಗಳಲ್ಲಿ 79 ರನ್‌ ಗಳಿಸಿದರು. ಸೆಫಾಲಿ ವರ್ಮಾ ಸಹ 26 ಎಸೆತಗಳಲ್ಲಿ 34 ರನ್ ಗಳಿಸಿದರು. ಕಡೆಯದಾಗ 13 ಎಸೆತಗಳಲ್ಲಿ 26 ರನ್ ಗಳಿಸಿದ ರಿಚಾ ಘೋಷ್ ಪಂದ್ಯ ಟೈ ಆಗುವಂತೆ ನೋಡಿಕೊಂಡರು.

ಉಚಿತ ಪ್ರವೇಶ

ಮಹಿಳಾ ಕ್ರಿಕೆಟ್ ಅನ್ನು ಪ್ರಚಾರ ಮಾಡುವ ದೃಷ್ಟಿಯಿಂದ ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಭಾನುವಾರದ ಪಂದ್ಯಕ್ಕೆ ಉಚಿತ್ರ ಪ್ರವೇಶ ಕಲ್ಪಿಸಲಾಗಿತ್ತು. ಸುಮಾರು 45,000 ಪ್ರೇಕ್ಷಕರು ಆಟ ಕಣ್ತುಂಬಿಕೊಂಡರು.

ಇದನ್ನೂ ಓದಿ: ಜಿಟಿಜಿಟಿ ಮಳೆಯ ನಡುವೆ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ: ಒಳಮೀಸಲಾತಿಗಾಗಿ ಹರಿದು ಬಂತು ಭೀಮಸಾಗರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...