Homeಸಿನಿಮಾಕ್ರೀಡೆ2022ರಲ್ಲಿ ಆಸ್ಟ್ರೇಲಿಯಾಗೆ ಮೊದಲ ಟಿ20 ಸೋಲುಣಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

2022ರಲ್ಲಿ ಆಸ್ಟ್ರೇಲಿಯಾಗೆ ಮೊದಲ ಟಿ20 ಸೋಲುಣಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ಸೂಪರ್ ಓವರ್‌ನಲ್ಲಿ ರೋಚಕ ಜಯ ಕಂಡು ಸರಣಿಯಲ್ಲಿ 1-1 ಸಮಬಲ ಸಾಧಿಸಿದ ಭಾರತ ತಂಡ

- Advertisement -
- Advertisement -

2022ರಲ್ಲಿ ಟಿ20 ಕ್ರಿಕೆಟ್‌ನಲ್ಲಿ ಒಂದೂ ಸೋಲು ಕಾಣದೇ ಅಜೇಯರಾಗುಳಿದ್ದ ಆಸ್ಟ್ರೇಲಿಯಾ ಮಹಿಳಾ ತಂಡವನ್ನು ಭಾರತವು ಸೂಪರ್ ಓವರ್‌ನಲ್ಲಿ ಮಣಿಸಿ ಸರಣಿಯಲ್ಲಿ ಸಮಬಲ ಸಾಧಿಸಿತು. ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಸ್ಮೃತಿ ಮಂದಾನ ಭಾರತದ ಗೆಲುವಿನ ರೂವಾರಿಯೆನೆಸಿದರು.

ಮುಂಬೈನ ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಹಿಳಾ ಕ್ರಿಕೆಟ್ ಪಂದ್ಯ ನೋಡಲು 40 ಸಾವಿರಕ್ಕೂ ಅಧಿಕ ಪ್ರೇಕ್ಷಕರು ನೆರೆದಿದ್ದರು. ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟ್ ಮಾಡಿ ಒಂದು ವಿಕೆಟ್ 187 ರನ್ ಗಳಿಸಿದರೆ ಭಾರತ ತಂಡ 5 ವಿಕೆಟ್ ನಷ್ಟಕ್ಕೆ ಅಷ್ಟೇ ರನ್ ಗಳಿಸಿತು. ಪಂದ್ಯ ಸೂಪರ್ ಓವರ್‌ವರೆಗೂ ತಲುಪಿ ರೋಚಕತೆ ಹುಟ್ಟಿಸಿತ್ತು. ಕೊನೆಗೆ ಸೂಪರ್ ಓವರ್‌ನಲ್ಲಿ ಭಾರತ 4 ರನ್‌ಗಳ ಜಯ ಸಾಧಿಸಿತು.

2022ರಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡ 12 ಟಿ20 ಪಂದ್ಯಗಳನ್ನಾಡಿ 9 ಗೆಲವು ಕಂಡರೆ ಮೂರು ಪಂದ್ಯಗಳು ಫಲಿತಾಂಶ ಕಾಣದೆ ರದ್ದುಗೊಂಡಿದ್ದವು. 13ನೇ ಪಂದ್ಯದಲ್ಲಿ ಅದು ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ 5 ಟಿ20 ಪಂದ್ಯಗಳ ಸರಣಿಯಲ್ಲಿ ಭಾರತ 1-1ರ ಸಮಬಲ ಸಾಧಿಸಿದೆ.

ರೋಚಕ ಸೂಪರ್ ಓವರ್

ಸೂಪರ್ ಓವರ್‌ನಲ್ಲಿ ಆಸ್ಟ್ರೇಲಿಯಾದ ಗ್ರಹಂ ಎಸೆದ ಮೊದಲ ಬಾಲ್ ಎದುರಿಸದ ರಿಚಾ ಘೋಷ್ ಸಿಕ್ಸರ್ ಎತ್ತಿದ್ದರು. ಎರಡನೇ ಬಾಲ್‌ನಲ್ಲಿ ಅವರಿಗೆ ಕ್ಯಾಚಿತ್ತ ನಿರ್ಗಮಿಸಿದರು. ಆಗ ಕ್ರೀಸ್‌ಗಿಳಿದ ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಒಂದು ರನ್ ಗಳಿಸಿದರು. ನಾಲ್ಕನೇ ಎಸೆತವನ್ನು ಸ್ಮೃತಿ ಮಂದಾನ ಬೌಂಡರಿಗೆ ಅಟ್ಟಿದರು. 5ನೇ ಎಸೆತವನ್ನು ಆಕರ್ಷಕ ಸಿಕ್ಸರ್ ಬಾರಿಸಿದರು. ಆರನೇ ಎಸೆತದಲ್ಲಿ ಮೂರು ರನ್ ಕಲೆ ಹಾಕಿದರು. ಭಾರತವು ಒಂದು ಓವರ್‌ನಲ್ಲಿ 20 ರನ್ ಗಳಿಸಿತು.

ಗೆಲುವಿಗೆ 21 ರನ್ ಗುರಿ ಪಡೆದು ಕ್ರೀಸ್‌ಗಿಳಿದ ಆಸ್ಟ್ರೇಲಿಯಾದ ಹ್ಯಾಲಿ ರೇಣುಕಾ ಎಸೆದ ಮೊದಲ ಎಸೆತವನ್ನು ನೇರ ಬೌಂಡರಿಗೆ ಅಟ್ಟಿದರು. ಎರಡನೇ ಎಸೆತದಲ್ಲಿ ಒಂದು ರನ್ ಗಳಿಸಿದರು. ಮೂರನೇ ಎಸೆತದಲ್ಲಿ ಸಿಕ್ಸರ್ ಬಾರಿಸಲು ಮುಂದಾದ ಗಾರ್ಡನೆರ್ ರಾಧಾಗೆ ಕ್ಯಾಚಿತ್ತು ನಿರ್ಗಮಿಸಿದರು. ಆಗ ಆಸ್ಟ್ರೇಲಿಯಾ 3 ಎಸೆತದಲ್ಲಿ 16 ರನ್ ಗಳಿಸಬೇಕಿತ್ತು. ನಾಲ್ಕನೇ ಎಸೆತ ಎದುರಿಸಿದ ಮ್ಯಾಗ್ರಥ್ ಒಂದು ರನ್ ಗಳಿಸಿದರು. ಹ್ಯಾಲಿ ಐದನೇ ಎಸೆತ ಬೌಂಡರಿ ಮತ್ತು ಆರನೇ ಎಸೆತ ಸಿಕ್ಸರ್ ಎತ್ತಿದ್ದರು ಸಹ ಆಸ್ಟ್ರೇಲಿಯಾ 4 ರನ್‌ನಿಂದ ಸೋಲು ಕಂಡಿತು.

ರನ್‌ಗಳ ಸುರಿಮಳೆ

ಸೂಪರ್ ಓವರ್‌ಗೂ ಮೊದಲು ನಡೆದ ಪಂದ್ಯದಲ್ಲಿ ರನ್‌ಗಳ ಸುರಿಮಳೆಯಾಯಿತು. ಆಸ್ಟ್ರೇಲಿಯಾದ ಮೂನಿ 54 ಎಸೆತಗಳಲ್ಲಿ 82 ರನ್ ಗಳಿಸಿದರೆ, ಮ್ಯಾಗ್ರಥ್ 51 ಎಸೆತಗಳಲ್ಲಿ 70 ರನ್ ಗಳಿಸಿದರು. ಪರಿಣಾಮ ಆಸ್ಟ್ರೇಲಿಯಾ ತಂಡ 20 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತ್ತು.

188 ರನ್‌ಗಳ ಗುರಿ ಪಡೆದ ಭಾರತ ತಂಡದ ಸ್ಮೃತಿ ಮಂದಾನ 49 ಎಸೆತಗಳಲ್ಲಿ 79 ರನ್‌ ಗಳಿಸಿದರು. ಸೆಫಾಲಿ ವರ್ಮಾ ಸಹ 26 ಎಸೆತಗಳಲ್ಲಿ 34 ರನ್ ಗಳಿಸಿದರು. ಕಡೆಯದಾಗ 13 ಎಸೆತಗಳಲ್ಲಿ 26 ರನ್ ಗಳಿಸಿದ ರಿಚಾ ಘೋಷ್ ಪಂದ್ಯ ಟೈ ಆಗುವಂತೆ ನೋಡಿಕೊಂಡರು.

ಉಚಿತ ಪ್ರವೇಶ

ಮಹಿಳಾ ಕ್ರಿಕೆಟ್ ಅನ್ನು ಪ್ರಚಾರ ಮಾಡುವ ದೃಷ್ಟಿಯಿಂದ ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಭಾನುವಾರದ ಪಂದ್ಯಕ್ಕೆ ಉಚಿತ್ರ ಪ್ರವೇಶ ಕಲ್ಪಿಸಲಾಗಿತ್ತು. ಸುಮಾರು 45,000 ಪ್ರೇಕ್ಷಕರು ಆಟ ಕಣ್ತುಂಬಿಕೊಂಡರು.

ಇದನ್ನೂ ಓದಿ: ಜಿಟಿಜಿಟಿ ಮಳೆಯ ನಡುವೆ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ: ಒಳಮೀಸಲಾತಿಗಾಗಿ ಹರಿದು ಬಂತು ಭೀಮಸಾಗರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...