Homeಮುಖಪುಟ‘ಸಂವಿಧಾನ ಉಳಿಸಲು ಮೋದಿಯನ್ನು ಕೊಲ್ಲಿರಿ’ ಎಂದ ಕಾಂಗ್ರೆಸ್ ನಾಯಕ; ಬಿಜೆಪಿ ವಾಗ್ದಾಳಿ

‘ಸಂವಿಧಾನ ಉಳಿಸಲು ಮೋದಿಯನ್ನು ಕೊಲ್ಲಿರಿ’ ಎಂದ ಕಾಂಗ್ರೆಸ್ ನಾಯಕ; ಬಿಜೆಪಿ ವಾಗ್ದಾಳಿ

- Advertisement -
- Advertisement -

ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ರಾಜ್ಯ ಸಚಿವ ರಾಜಾ ಪಟೇರಿಯಾ ಅವರು ವಿವಾದಾತ್ಮಕ ಹೇಳಿಕೆ ಮೂಲಕ ಬಿರುಗಾಳಿ ಎಬ್ಬಿಸಿದ್ದಾರೆ. “ಸಂವಿಧಾನವನ್ನು ಉಳಿಸಲು ಬಯಸಿದರೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲ್ಲಬೇಕು” ಎಂದು ಪ್ರೇಕ್ಷಕರನ್ನು ಉದ್ದೇಶಿಸಿ ಪಟೇರಿಯಾ ಮಾತನಾಡಿರುವುದು ವಿವಾದದ ಕೇಂದ್ರಬಿಂದುವಾಗಿದೆ.

ಪಟೇರಿಯಾ ತಕ್ಷಣವೇ ಸ್ಪಷ್ಟನೆ ನೀಡಿದ್ದಾರೆ. “ಈ ಮಾತಿನ ಅರ್ಥ ಕೊಲೆ ಮಾಡಿರಿ ಎಂದಲ್ಲ. ಆದರೆ ರಾಜಕೀಯವಾಗಿ ಸೋಲಿಸಿ ಎಂಬುದಾಗಿದೆ” ಎಂದಿದ್ದಾರೆ. ಈ ಹೇಳಿಕೆಗೆ ಹಲವಾರು ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದು ಪಟೇರಿಯಾ ಅವರ ಬಂಧನಕ್ಕೆ ಆಗ್ರಹಿಸಿದ್ದಾರೆ. “ಕಾಂಗ್ರೆಸ್‌ನ ನೈಜ ಮುಖ ಬಹಿರಂಗಗೊಂಡಿದೆ” ಎಂದು ಬಿಜೆಪಿ ಟೀಕಿಸಿದೆ.

ಈ ವಿಡಿಯೋ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ಗೃಹ ಸಚಿವರು, ರಾಜಾ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಆದೇಶ ನೀಡಿದ್ದಾರೆ. ಕೇಂದ್ರ ಸಚಿವರೊಬ್ಬರು ಇದನ್ನು ‘ಕ್ಷಮಿಸಲಾಗದ ಅಪರಾಧ’ ಎಂದು ಕರೆದಿದ್ದಾರೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ವಿಡಿಯೋ ಹೇಳಿಕೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, “ಭಾರತ್ ಜೋಡೋ ಯಾತ್ರೆ ಮಾಡುವವರ ನಿಜವಾದ ಮುಖ ಹೊರಬರುತ್ತಿದೆ” ಎಂದು ತಿಳಿಸಿದ್ದಾರೆ.

ವೈರಲ್ ವೀಡಿಯೊದಲ್ಲಿ ಪಟೇರಿಯಾ ಅವರು ಹೇಳಿರುವುದೇನು?

ಚುನಾವಣೆಯಲ್ಲಿ ಗೆಲ್ಲುವ ಬಗ್ಗೆ ರಾಜಾ ಪಟೇರಿಯಾ ಮಾತನಾಡುತ್ತಾ ಪ್ರಧಾನಿ ಮೋದಿಯವರನ್ನು ಉಲ್ಲೇಖಿಸುತ್ತಾರೆ. “ಮೋದಿ ಚುನಾವಣಾ ವ್ಯವಸ್ಥೆಯನ್ನು ಕೊನೆಗೊಳಿಸುತ್ತಾರೆ. ಮೋದಿಯವರು ಧರ್ಮ, ಜಾತಿ, ಭಾಷೆಯ ಆಧಾರದ ಮೇಲೆ ಒಡೆದು ಆಳುತ್ತಾರೆ. ದಲಿತರು, ಬುಡಕಟ್ಟು ಜನರು ಮತ್ತು ಅಲ್ಪಸಂಖ್ಯಾತರ ಜೀವನ ಅಪಾಯದಲ್ಲಿದೆ. ಸಂವಿಧಾನವನ್ನು ಉಳಿಸಬೇಕಾದರೆ, ಮೋದಿಯನ್ನು ಕೊಲ್ಲಲು ಸಿದ್ಧರಾಗಬೇಕು” ಎಂದು ಕಾರ್ಯಕರ್ತರಿಗೆ ತಿಳಿಸುತ್ತಾರೆ.

ನಂತರ ಮಾತನಾಡುತ್ತಾ ರಾಜಾ ಪಟೇರಿಯಾ, “ಕೊಲೆ ಎಂದರೆ ಸೋಲು ಎಂಬರ್ಥ” ಎಂದು ಸ್ಪಷ್ಟನೆ ನೀಡುತ್ತಾರೆ. “ನಾನು ಮಹಾತ್ಮ ಗಾಂಧಿಯವರ ಅಹಿಂಸೆಯ ಸಿದ್ಧಾಂತವನ್ನು ಅನುಸರಿಸುತ್ತೇನೆ. ಅಲ್ಪಸಂಖ್ಯಾತರನ್ನು ರಕ್ಷಿಸಲು ಪ್ರಧಾನಿ ಮೋದಿಯನ್ನು ಚುನಾವಣೆಯಲ್ಲಿ ಸೋಲಿಸುವುದು ಅಗತ್ಯ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ನಮ್ಮನ್ನು ಬಂಧಿಸಿ ಬೊಮ್ಮಾಯಿ ತಮ್ಮ ಕಾಲ ಮೇಲೆ ಕಲ್ಲು ಹಾಕಿಕೊಂಡಿದ್ದಾರೆ: ಅಂಬಣ್ಣ ಅರೋಲಿಕರ್

ಈ ವಿಡಿಯೋ ಪನ್ನಾ ಜಿಲ್ಲೆಯ ಪಾವಾಯಿ ಪಟ್ಟಣದಲ್ಲಿ ವರದಿಯಾಗಿದೆ. ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಿವರಾಜ್ ಸಿಂಗ್ ಚೌಹಾಣ್, “ಕಾಂಗ್ರೆಸ್‌ನ ನೈಜ ಭಾವನೆಗಳು ಬಹಿರಂಗವಾಗಿವೆ” ಎಂದು ಆರೋಪಿಸಿದ್ದಾರೆ.

“ಗೌರವಾನ್ವಿತ ಪ್ರಧಾನಿ ಮೋದಿ ಅವರು ಜನರ ಹೃದಯದಲ್ಲಿ ನೆಲೆಸಿದ್ದಾರೆ. ಅವರು ಇಡೀ ದೇಶದ ಅಭಿಮಾನ ಮತ್ತು ನಂಬಿಕೆಯ ಕೇಂದ್ರವಾಗಿದ್ದಾರೆ. ಕಾಂಗ್ರೆಸ್ ಜನರು ಚುನಾವಣಾ ಯುದ್ಧದಲ್ಲಿ ಪ್ರಧಾನಿಯನ್ನು ಎದುರಿಸಲು ಸಾಧ್ಯವಿಲ್ಲ. ಅವರ ಹತ್ಯೆಯ ಬಗ್ಗೆ ಕಾಂಗ್ರೆಸ್ ನಾಯಕರೊಬ್ಬರು ಮಾತನಾಡುತ್ತಾರೆ. ಇದು ಅಸೂಯೆಯ ಪರಮಾವಧಿ, ಇದು ಅತಿಯಾದ ದ್ವೇಷವಾಗಿದೆ. ಕಾಂಗ್ರೆಸ್‌ನ ನಿಜವಾದ ಭಾವನೆಗಳನ್ನು ಬಹಿರಂಗಪಡಿಸಲಾಗಿದೆ. ಆದರೆ ಅಂತಹ ವಿಷಯಗಳನ್ನು ಸಹಿಸುವುದಿಲ್ಲ, ಎಫ್‌ಐಆರ್ ದಾಖಲಾಗುತ್ತಿದೆ ಮತ್ತು ಕಾನೂನು ಕ್ರಮ ಜರುಗಿಸಲಾಗುತ್ತಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋದಿ ಎಂಥ ವ್ಯಕ್ತಿಯೇ ಆಗಿರಲಿ…. ಮೋದಿಯ ಆಡಳಿತ ನನಗೂ ಆಗಲ್ಲ ….. ಆದರೆ ಕೊಲ್ಲಿ ರಿ …. ಎಂಬ ಪದ ಉಪಯೋಗಿಸುವುದು ಯಾವ ನಿಗೂ ಅಧಿಕಾರ ಇಲ್ಲ…..

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...