Homeಕರ್ನಾಟಕಶಿವದೀಕ್ಷೆ ಸ್ವೀಕರಿಸಿದವರಲ್ಲಿ ಆಹಾರದಿಂದ ಮೇಲು, ಕೀಳು ಭಾವ ಬರುವುದಿಲ್ಲ/ಆಹಾರ ಪರಂಪರೆ ಮತ್ತು ವಚನ ಚಳವಳಿ

ಶಿವದೀಕ್ಷೆ ಸ್ವೀಕರಿಸಿದವರಲ್ಲಿ ಆಹಾರದಿಂದ ಮೇಲು, ಕೀಳು ಭಾವ ಬರುವುದಿಲ್ಲ/ಆಹಾರ ಪರಂಪರೆ ಮತ್ತು ವಚನ ಚಳವಳಿ

- Advertisement -
- Advertisement -

ಆಹಾರ ಸಂಸ್ಕೃತಿ ಎನ್ನುವುದು ಅವರವರ ವೈಯಕ್ತಿಕ ಆಯ್ಕೆಗೆ ಬಿಟ್ಟ ಸಂಗತಿ. ವಚನ ಚಳುವಳಿ ತನ್ನ ಒಟ್ಟಾರೆ ಆಶಯದಲ್ಲಿ ಇಂಥಾ ವ್ಯಕ್ತಿಗತ ಸ್ವಾತಂತ್ರ್ಯ ಮತ್ತು ಘನತೆಗಳನ್ನು ಎತ್ತಿಹಿಡಿದ ಒಂದು ಲಿಬರಲ್ ಮೂವ್‍ಮೆಂಟ್. ಹಾಗಾಗಿ ನಾವು ವಚನ ಸಾಹಿತ್ಯದ ಸಮಗ್ರ ಆಶಯದಿಂದ ಪ್ರಸ್ತುತ ಸವಾಲುಗಳಿಗೆ ಉತ್ತರಗಳನ್ನು ಅರ್ಥೈಸಿಕೊಳ್ಳಬೇಕೆ ವಿನಾಃ ಯಾವುದೋ ಒಂದು ವಚನದ ಅಥವಾ ಒಂದು ಸಾಲಿನ ಸುತ್ತ ಕೇಂದ್ರೀಕರಿಸಿ ಚರ್ಚೆ ಮಾಡುವಂತದ್ದಲ್ಲ. ಬಸವಣ್ಣ ಮತ್ತು ಆ ಕಾಲಘಟ್ಟದ ವಚನಕ್ರಾಂತಿಯ ಅಡಿಪಾಯವೇ ಎಲ್ಲಾ ವರ್ಗಗಳ ಒಳಗೊಳ್ಳುವಿಕೆ. ಅಂತದ್ದರಲ್ಲಿ ಆಹಾರ ಆಯ್ಕೆ’ಯ ಕುರಿತಾದ ಒಂದು ವಚನವನ್ನು ಇಟ್ಟುಕೊಂಡು ಆ ಒಳಗೊಳ್ಳುವಿಕೆ ಆಶಯವನ್ನೇ ಅನುಮಾನಿಸಿದರೆ, ಆ ಚಳವಳಿಯ ಸಮಗ್ರ ಆಶಯವನ್ನು ನಾವು ಅರ್ಥ ಮಾಡಿಕೊಂಡಂತೆ ಆಗುವುದಿಲ್ಲ. ವಚನಕಾರರು ಗೂಢಾರ್ಥಗಳ ಮೂಲಕ, ಉಪಮಾನ-ಉಪಮೇಯಗಳ ಮೂಲಕ ನೀತಿಬೋಧೆಗಳನ್ನು ಮಾಡಿದಂತವರು. ಹಾಗಾಗಿ ಹನ್ನೆರಡನೇ ಶತಮಾನದಷ್ಟು ಹಿಂದೆ ಅವರು ಬಳಸಿದ ಪದಗಳನ್ನು ಆಶಯಪೂರ್ವಕವಾಗಿ ಮತ್ತು ಐತಿಹಾಸಿಕ ಒಳನೋಟದಿಂದ ನೋಡಬೇಕು. ಯಥಾವತ್ ಅರ್ಥ ರೂಪದಲ್ಲಿ ಗ್ರಹಿಸುವುದು ಅಷ್ಟೊಂದು ಸಮಂಜಸವಲ್ಲ.

ಇನ್ನು ಆಹಾರ ಸಂಸ್ಕøತಿಯ ಬಗ್ಗೆ ನನ್ನ ವೈಯಕ್ತಿಕ ಅಭಿಪ್ರಾಯವೆಂದರೆ, ಅದು ಅವರವರ ವ್ಯಕ್ತಿಗತ ಆಯ್ಕೆಗೆ ಬಿಟ್ಟದ್ದು. ಅದರಿಂದ ಯಾರೂ ಮೇಲಲ್ಲ, ಯಾರೂ ಕೀಳಲ್ಲ. ನಿಮ್ಮ ತಟ್ಟೆಯಲ್ಲಿ ಏನಿದೆ ಎಂದು ಪಕ್ಕದವನು ಇಣುಕಿನೋಡಿ, ಕಮೆಂಟ್ ಮಾಡುವುದೇ ಅಸಹ್ಯದ ವಿಷಯ. ಆದರೆ ಬಸವಣ್ಣನ ಚಳುವಳಿಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದ ಈ ದಿನಮಾನಗಳ ಸಮಕಾಲೀನ ಲಿಂಗಾಯತ ಮಠಗಳೇನಿವೆಯಲ್ಲ, ಅವು ಸಸ್ಯಾಹಾರವನ್ನು ಎತ್ತಿಹಿಡಿಯುವ ಕೆಲಸ ಮಾಡುತ್ತಿವೆ. ಇದೇ ಸಮುದಾಯದೊಳಗೆ ಹುಟ್ಟಿ ಇವತ್ತು ಮಾಂಸಾಹಾರ ಸೇವಿಸುತ್ತಿರುವ ಎಷ್ಟು ಜನರಿಲ್ಲ, ದೊಡ್ಡದೊಡ್ಡ ವ್ಯಕ್ತಿಗಳೇ, ರಾಜಕಾರಣಿಗಳೇ ಅಂತವರಿದ್ದಾರೆ. ಅವರ ವಿರುದ್ಧ ಯಾವ ಕ್ರಮವನ್ನೂ ತೆಗೆದುಕೊಳ್ಳದ ಸಮಕಾಲೀನ ಮಠಗಳು ಇತರರ ಆಹಾರಕ್ರಮ ಕೀಳು ಎನ್ನುವಂತೆ ಸಸ್ಯಾಹಾರ ಶ್ರೇಷ್ಠತೆಯನ್ನು ಪ್ರತಿಪಾದಿಸುತ್ತಿರುವುದು ವಿಪರ್ಯಾಸ. ಆದರೆ ಶಿವದೀಕ್ಷೆ ಅಥವಾ ಲಿಂಗದೀಕ್ಷೆ ಸ್ವೀಕರಿಸಿದ ಯಾರಲ್ಲೂ ಕೇವಲ ಸೇವಿಸುವ ಆಹಾರದಿಂದ ಮೇಲು, ಕೀಳು ಎಂಬ ಭಾವ ಬರುವುದಿಲ್ಲ.

ಕೆ.ಮರುಳಸಿದ್ದಪ್ಪ, ಚಿಂತಕರು-ಸಾಹಿತಿಗಳು

ಲಿಂಗಾಯಿತ ಧರ್ಮವು ಮಾಂಸಾಹಾರಿಗಳನ್ನೂ ಒಪ್ಪುವ ಮೂಲಕ ಆಹಾರ ಸಂಸ್ಕೃತಿಯ ವಿಚಾರದಲ್ಲಿ ಪ್ರಜಾತಾಂತ್ರಿಕವಾಗಿರುತ್ತದೆಯೇ ಎಂಬ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕರ್ನಾಟಕದ ಆಹಾರ ಸಂಸ್ಕೃತಿ ಮತ್ತು ಯಾವುದು ಮೇಲು ಯಾವುದು ಕೀಳು ಎಂಬುದರಲ್ಲೇ ಶ್ರೇಣೀಕರಣವನ್ನು ಪ್ರತಿಪಾದಿಸುವ ಈ ದೇಶದಲ್ಲಿ ಇಂತಹ ಚರ್ಚೆಗಳು ಬರುವುದು, ಬರಬೇಕಾದದ್ದು ಸಹಜ. ಆದರೆ, ಈ ಸದ್ಯ ಅದು ಎದ್ದಿರುವ ಸಂದರ್ಭ ಹಾಗೂ ಅದರ ಟಾರ್ಗೆಟ್ ಸರಿಯಿಲ್ಲ ಎಂಬ ಅನಿಸಿಕೆಗಳೂ ಇವೆ. ಈ ಹಿನ್ನೆಲೆಯಲ್ಲಿ ವಿವಿಧ ಚಿಂತಕರನ್ನು ಪತ್ರಿಕೆಯು ಮಾತಾಡಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...