Homeಮುಖಪುಟ'ಸಂವಿಧಾನ ಉಳಿಸಲು ಮೋದಿಯನ್ನು ಕೊಲ್ಲಿರಿ’ ಎಂದಿದ್ದ ಕಾಂಗ್ರೆಸ್ ಮುಖಂಡನ ಬಂಧನ

‘ಸಂವಿಧಾನ ಉಳಿಸಲು ಮೋದಿಯನ್ನು ಕೊಲ್ಲಿರಿ’ ಎಂದಿದ್ದ ಕಾಂಗ್ರೆಸ್ ಮುಖಂಡನ ಬಂಧನ

"ಈ ಮಾತಿನ ಅರ್ಥ ಕೊಲೆ ಮಾಡಿರಿ ಎಂದಲ್ಲ. ಆದರೆ ರಾಜಕೀಯವಾಗಿ ಸೋಲಿಸಿ ಎಂಬುದಾಗಿದೆ”ಎಂದು ರಾಜಾ ಪಟೇರಿಯಾ ಸ್ಪಷ್ಟನೆ ನೀಡಿದ್ದರು.

- Advertisement -
- Advertisement -

“ಸಂವಿಧಾನವನ್ನು ಉಳಿಸಲು ಬಯಸಿದರೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲ್ಲಬೇಕು. “ಈ ಮಾತಿನ ಅರ್ಥ ಕೊಲೆ ಮಾಡಿರಿ ಎಂದಲ್ಲ. ಆದರೆ ರಾಜಕೀಯವಾಗಿ ಸೋಲಿಸಿ ಎಂಬುದಾಗಿದೆ”  ಎಂದಿದ್ದ ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ರಾಜ್ಯ ಸಚಿವ ರಾಜಾ ಪಟೇರಿಯಾ ಅವರನ್ನು ಇಂದು ಬೆಳಿಗ್ಗೆ ಬಂಧಿಸಲಾಗಿದೆ.

ಅವರ ವಿವಾದಾತ್ಮಕ ಹೇಳಿಕೆಯ ವಿರುದ್ದ ಸೋಮವಾರ ಎಫ್‌ಐಆರ್ ದಾಖಲಾಗಿತ್ತು. ಇಂದು ಬೆಳಿಗ್ಗೆ ಪನ್ನಾದಲ್ಲಿರುವ ಅವರ ಮನೆಯಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ನಡುವೆ ಬಿಜೆಪಿ ಹೇಳಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರೆ, ಕಾಂಗ್ರೆಸ್ ಪಕ್ಷವು ಅವರಿಗೆ ಶೋಕಾಸ್ ನೋಟಿಸ್ ಹೊರಡಿಸಿದೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. “ಗೌರವಾನ್ವಿತ ಪ್ರಧಾನಿ ಮೋದಿ ಅವರು ಜನರ ಹೃದಯದಲ್ಲಿ ನೆಲೆಸಿದ್ದಾರೆ. ಅವರು ಇಡೀ ದೇಶದ ಅಭಿಮಾನ ಮತ್ತು ನಂಬಿಕೆಯ ಕೇಂದ್ರವಾಗಿದ್ದಾರೆ. ಕಾಂಗ್ರೆಸ್ ಜನರು ಚುನಾವಣಾ ಯುದ್ಧದಲ್ಲಿ ಪ್ರಧಾನಿಯನ್ನು ಎದುರಿಸಲು ಸಾಧ್ಯವಿಲ್ಲ. ಅವರ ಹತ್ಯೆಯ ಬಗ್ಗೆ ಕಾಂಗ್ರೆಸ್ ನಾಯಕರೊಬ್ಬರು ಮಾತನಾಡುತ್ತಾರೆ. ಇದು ಅಸೂಯೆಯ ಪರಮಾವಧಿ, ಇದು ಅತಿಯಾದ ದ್ವೇಷವಾಗಿದೆ. ಕಾಂಗ್ರೆಸ್‌ನ ನಿಜವಾದ ಭಾವನೆಗಳನ್ನು ಬಹಿರಂಗಪಡಿಸಲಾಗಿದೆ. ಆದರೆ ಅಂತಹ ವಿಷಯಗಳನ್ನು ಸಹಿಸುವುದಿಲ್ಲ, ಎಫ್‌ಐಆರ್ ದಾಖಲಾಗುತ್ತಿದೆ ಮತ್ತು ಕಾನೂನು ಕ್ರಮ ಜರುಗಿಸಲಾಗುತ್ತಿದೆ” ಎಂದು ಪ್ರತಿಕ್ರಿಯಿಸಿದ್ದಾರೆ. ಇದಾದ ಕೆಲವೇ ಗಂಟೆಗಳಲ್ಲಿ ಪಾವಾಯಿ ಪೊಲೀಸ್ ಠಾಣೆಯಲ್ಲಿ ಪಟೇರಿಯಾ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ರಾಜಾ ಪಟೇರಿಯಾ, “ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ನಾನು ಅವರನ್ನು ಚುನಾವಣೆಯಲ್ಲಿ ಸೋಲಿಸಬೇಕೆಂಬ ಅರ್ಥದಲ್ಲಿ ಹೇಳಿದ್ದೆ” ಎಂದಿದ್ದಾರೆ.

ವೈರಲ್ ವೀಡಿಯೊದಲ್ಲಿ ಪಟೇರಿಯಾ ಅವರು ಹೇಳಿರುವುದೇನು?

ಚುನಾವಣೆಯಲ್ಲಿ ಗೆಲ್ಲುವ ಬಗ್ಗೆ ರಾಜಾ ಪಟೇರಿಯಾ ಮಾತನಾಡುತ್ತಾ ಪ್ರಧಾನಿ ಮೋದಿಯವರನ್ನು ಉಲ್ಲೇಖಿಸುತ್ತಾರೆ. “ಮೋದಿ ಚುನಾವಣಾ ವ್ಯವಸ್ಥೆಯನ್ನು ಕೊನೆಗೊಳಿಸುತ್ತಾರೆ. ಮೋದಿಯವರು ಧರ್ಮ, ಜಾತಿ, ಭಾಷೆಯ ಆಧಾರದ ಮೇಲೆ ಒಡೆದು ಆಳುತ್ತಾರೆ. ದಲಿತರು, ಬುಡಕಟ್ಟು ಜನರು ಮತ್ತು ಅಲ್ಪಸಂಖ್ಯಾತರ ಜೀವನ ಅಪಾಯದಲ್ಲಿದೆ. ಸಂವಿಧಾನವನ್ನು ಉಳಿಸಬೇಕಾದರೆ, ಮೋದಿಯನ್ನು ಕೊಲ್ಲಲು ಸಿದ್ಧರಾಗಬೇಕು” ಎಂದು ಕಾರ್ಯಕರ್ತರಿಗೆ ತಿಳಿಸುತ್ತಾರೆ.

ನಂತರ ಮಾತನಾಡುತ್ತಾ ರಾಜಾ ಪಟೇರಿಯಾ, “ಕೊಲೆ ಎಂದರೆ ಸೋಲು ಎಂಬರ್ಥ” ಎಂದು ಸ್ಪಷ್ಟನೆ ನೀಡುತ್ತಾರೆ. “ನಾನು ಮಹಾತ್ಮ ಗಾಂಧಿಯವರ ಅಹಿಂಸೆಯ ಸಿದ್ಧಾಂತವನ್ನು ಅನುಸರಿಸುತ್ತೇನೆ. ಅಲ್ಪಸಂಖ್ಯಾತರನ್ನು ರಕ್ಷಿಸಲು ಪ್ರಧಾನಿ ಮೋದಿಯನ್ನು ಚುನಾವಣೆಯಲ್ಲಿ ಸೋಲಿಸುವುದು ಅಗತ್ಯ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮೌಲಾನಾ ಆಜಾದ್ ರಾಷ್ಟ್ರೀಯ ಫೆಲೋಶಿಪ್ ಸ್ಥಗಿತ: ಶಿಕ್ಷಣತಜ್ಞ ವಿ.ಪಿ.ನಿರಂಜನಾರಾಧ್ಯ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...