Homeಸಿನಿಮಾಕ್ರೀಡೆಎಲಿಮಿನೇಟರ್ ಪಂದ್ಯ: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದರಷ್ಟೇ ಬೆಂಗಳೂರಿಗೆ ಸೆಮಿಫೈನಲ್ ಅವಕಾಶ

ಎಲಿಮಿನೇಟರ್ ಪಂದ್ಯ: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದರಷ್ಟೇ ಬೆಂಗಳೂರಿಗೆ ಸೆಮಿಫೈನಲ್ ಅವಕಾಶ

- Advertisement -
- Advertisement -

ಪ್ರೊ.ಕಬಡ್ಡಿ 9ನೇ ಆವೃತ್ತಿಯ ಪ್ಲೇ ಆಫ್‌ನ ಎಲಿಮೇಟರ್ ಪಂದ್ಯಗಳು ಇಂದು ಮುಂಬೈನ ಸರ್ದಾರ್ ವಲ್ಲಭಭಾಯಿ ಪಟೇಲ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿವೆ. ಮೊದಲ ಪಂದ್ಯ ಬೆಂಗಳೂರು ಬುಲ್ಸ್ ಮತ್ತು ದಬಾಂಗ್ ಡೆಲ್ಲಿ ಕೆ.ಸಿ ನಡುವೆ ಸಂಜೆ 7.30ಕ್ಕೆ ನಡೆದರೆ, ಎರಡನೇ ಪಂದ್ಯ ಯು.ಪಿ ಯೋಧ ಮತ್ತು ತಮಿಳು ತಲೈವಾಸ್‌ ನಡುವೆ 8.30ಕ್ಕೆ ನಡೆಯಲಿದೆ. ಎರಡೂ ಪಂದ್ಯಗಳಲ್ಲಿ ಗೆದ್ದವರಿಗಷ್ಟೇ ಸೆಮಿಫೈನಲ್ ತಲುಪುವ ಅವಕಾಶವಿದೆ. ಸೋತ ತಂಡಗಳು ಟೂರ್ನಿಯಿಂದ ಹೊರಬೀಳಲಿವೆ.

ಅಂಕ ಪಟ್ಟಿಯಲ್ಲಿ ಮೊದಲ ಮತ್ತು ಎರಡನೇ ಸ್ಥಾನ ಪಡೆದ ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ಪುಣೇರಿ ಪಲ್ಟಾನ್ ತಂಡಗಳು ಈಗಾಗಲೇ ನೇರವಾಗಿ ಸೆಮಿಫೈನಲ್ ತಲುಪಿವೆ. ಸೆಮಿಫೈನಲ್ ಪಂದ್ಯಗಳು ಡಿಸೆಂಬರ್ 15 ರಂದು ನಡೆಯಲಿವೆ.

ಬೆಂಗಳೂರು ಬುಲ್ಸ್ ಗೆಲುವಿನ ನಿರೀಕ್ಷೆ

ಈ ಆವೃತ್ತಿಯಲ್ಲಿ ಬೆಂಗಳುರು ಬುಲ್ಸ್ ಭರ್ಜರಿ ಪ್ರದರ್ಶನದೊಂದಿಗೆ ಸುಲಭವಾಗಿ ಪ್ಲೇ ಆಫ್ ತಲುಪಿದೆ. ತಾನಾಡಿದ 22 ಪಂದ್ಯಗಳಲ್ಲಿ 13 ಗೆಲುವು, 8 ಸೋಲು ಮತ್ತು 1 ಟೈನೊಂದಿಗೆ 74 ಅಂಕ ಗಳಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಗಳಿಸಿತ್ತು. ಆದರೆ ದಬಾಂಗ್ ಡೆಲ್ಲಿ ಪ್ರಯಾಸಕರವಾಗಿ ಪ್ಲೇ ಆಫ್‌ ಪ್ರವೇಶಿಸಿದೆ. ಅದು 10 ಗೆಲುವು, 10 ಸೋಲು ಮತ್ತು 2 ಟೈನೊಂದಿಗೆ 63 ಅಂಕ ಗಳಿಸಿ ಅಂಕಪಟ್ಟಿಯಲ್ಲಿ 6ನೇ ಸ್ಥಾನ ಪಡೆದಿದೆ. ಅಲ್ಲದೆ ಡೆಲ್ಲಿ ಮತ್ತು ಬೆಂಗಳೂರು ನಡುವಿನ ಎರಡೂ ಪಂದ್ಯಗಳಲ್ಲಿ ಬೆಂಗಳೂರು ಬುಲ್ಸ್ ಗೆದ್ದು ಬೀಗಿದೆ. ಹಾಗಾಗಿ ಇಂದಿನ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಕಡೆ ಒಲವು ಹೆಚ್ಚಿದೆ.

ಮೊದಲ ಪಂದ್ಯದಲ್ಲಿ ಬೆಂಗಳೂರು ತಂಡ ಡೆಲ್ಲಿಯನ್ನು 47-43 ಅಂತರದಲ್ಲಿ ಗೆದ್ದರೆ ಎರಡನೇ ಪಂದ್ಯವನ್ನು 52-49 ಅಂತರದಲ್ಲಿ ಗೆಲುವು ಸಾಧಿಸಿತ್ತು. 2018ರ ಚಾಂಪಿಯನ್ ಬೆಂಗಳೂರು ತಂಡ, 2021ರ ಹಾಲಿ ಚಾಂಪಿಯನ್ ಡೆಲ್ಲಿ ವಿರುದ್ಧ ಇಂದು ಸೆಣಸಲಿದೆ.

ಭರತ್ ಮೇಲೆ ಭಾರ

ಬೆಂಗಳೂರು ತಂಡ ಲಿಂಗ್ ಹಂತದ ಕೊನೆಯ ಪಂದ್ಯದಲ್ಲಿ ಯು ಮುಂಬಾ ವಿರುದ್ಧ ಹೀನಾಯ ಸೋಲು ಕಂಡಿತು. ಬೆಂಗಳೂರಿನ ಭರವಸೆಯ ರೈಡರ್ ಭರತ್ ಅನುಪಸ್ಥಿತಿಯೇ ಅದಕ್ಕೆ ಪ್ರಮುಖ ಕಾರಣವಾಗಿತ್ತು. ಆ ಔಪಚಾರಿಕ ಪಂದ್ಯದಲ್ಲಿ ಭರತ್ ಸೇರಿದಂತೆ ಇತರ ಆಟಗಾರರಿಗೆ ವಿಶ್ರಾಂತಿ ನೀಡಲಾಗಿತ್ತು. ಹಾಗಾಗಿ ಬೆಂಗಳೂರು ಸೋತಿತು. ಇಂದಿನ ಪಂದ್ಯದಲ್ಲಿ ಭರತ್ ಮಿಂಚಿದರೆ, ಡಿಫೆಂಡರ್‌ಗಳು ಉತ್ತರ ಆಟ ಪ್ರದರ್ಶಿಸಿದರೆ ಬೆಂಗಳೂರಿಗೆ ಗೆಲುವು ಖಚಿತ.

ದೆಹಲಿ ವಿರುದ್ಧದ ಪಂದ್ಯಗಳಲ್ಲಿ ಬೆಂಗಳೂರಿನ ಮೇನ್ ರೈಡರ್ ವಿಕಾಸ್ ಖಂಡೋಲ, ನೀರಜ್ ನರ್ವಾಲ್ ಸಹ ಉತ್ತಮ ಸಾಧನೆ ತೋರಿದ್ದಾರೆ. ಇಂದು ಯಾವ ಪ್ರದರ್ಶನ ನೀಡುತ್ತಾರೆ ಕಾದು ನೋಡಬೇಕಿದೆ.

ಇನ್ನೊಂದೆಡೆ ದಬಾಂಗ್ ಡೆಲ್ಲಿ ತಂಡದ ಪರವಾಗಿ ನವೀನ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಅವರಿಗೆ ಆಶು ಮಲ್ಲಿಕ್ ಮತ್ತು ವಿಜಯ್ ಮಲ್ಲಿಕ್ ಉತ್ತಮ ಸಾಥ್ ನೀಡುತ್ತಿದ್ದಾರೆ. ಅವರನ್ನು ಕಟ್ಟಿಹಾಕಲು ಬೆಂಗಳೂರಿನ ಗೂಳಿಗಳು ಸಜ್ಜಾಗಿದ್ದಾರೆ. ಇಂದು ಬೆಂಗಳೂರು ಗೆದ್ದರೆ ಡಿಸೆಂಬರ್ 15 ರಂದು ಜೈಪುರ್ ಪಿಂಕ್ ಪ್ಯಾಂಥರ್ಸ್ ವಿರುದ್ಧ ಸೆಮಿಫೈನಲ್‌ ಪಂದ್ಯದಲ್ಲಿ ಸೆಣಸಲಿದೆ.

ಯುಪಿ ಯೋಧ ವರ್ಸಸ್ ತಮಿಳು ತಲೈವಾಸ್

ಎರಡನೇ ಎಲಿಮಿನೇಟರ್ ಪಂದ್ಯದಲ್ಲಿ ಯುಪಿ ಯೋಧ ತಂಡವನ್ನು ತಮಿಳು ತಲೈವಾಸ್ ಎದುರಿಸಲಿದೆ. ಎರಡೂ ತಂಡಗಳು ಸಹ ಚೊಚ್ಚಲ ಟ್ರೋಫಿ ಮೇಲೆ ಕಣ್ಣಿಟ್ಟಿವೆ. ಯುಪಿ ಯೋಧದ ಪರವಾಗಿ ಪರ್ದೀಪ್ ನರ್ವಾಲ್ ಪ್ರಮುಖ ರೈಡರ್. ಸರೇಂದರ್ ಗಿಲ್ ಅವರಿಗೆ ಸಾಥ್ ನೀಡುತ್ತಿದ್ದಾರೆ.  ಇನ್ನು ತಮಿಳು ತಲೈವಾದ್ ಪರವಾಗಿ ಅಜಿಂಕ್ಯ ಪವಾರ್ ಮತ್ತು ನರೇಂದರ್ ಉತ್ತಮ ರೈಡರ್‌ಗಳಾಗಿದ್ದಾರೆ. ಇಂದು ಗೆದ್ದ ತಂಡ ಡಿಸೆಂಬರ್ 15 ರಂದು ಪುಣೇರಿ ಪಲ್ಟನ್ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುತ್ತದೆ. ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದುವರೆಗಿನ ಪ್ರೊ ಕಬಡ್ಡಿ ಚಾಂಪಿಯನ್‌ಗಳು

ಮೊದಲ ಆವೃತ್ತಿ 2014: ಜೈಪುರ್ ಪಿಂಕ್ ಪ್ಯಾಂಥರ್ಸ್

ಎರಡನೇ ಆವೃತ್ತಿ 2014: ಯು ಮುಂಬಾ

ಮೂರನೇ ಆವೃತ್ತಿ 2015: ಪಟ್ನಾ ಪೈರೇಟ್ಸ್

ನಾಲ್ಕನೇ ಆವೃತ್ತಿ 2016: ಪಟ್ನಾ ಪೈರೇಟ್ಸ್

ಐದನೇ ಆವೃತ್ತಿ 2017: ಪಟ್ನಾ ಪೈರೇಟ್ಸ್

ಆರನೇ ಆವೃತ್ತಿ 2018: ಬೆಂಗಳೂರು ಬುಲ್ಸ್

ಏಳನೇ ಆವೃತ್ತಿ 2019: ಬೆಂಗಾಲ್ ವಾರಿಯರ್ಸ್

ಎಂಟನೇ ಆವೃತ್ತಿ 2021: ದಬಾಂಗ್ ಡೆಲ್ಲಿ

ಇದನ್ನೂ ಓದಿ; 2022ರಲ್ಲಿ ಆಸ್ಟ್ರೇಲಿಯಾಗೆ ಮೊದಲ ಟಿ20 ಸೋಲುಣಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...