Homeಸಿನಿಮಾಕ್ರೀಡೆಎಲಿಮಿನೇಟರ್ ಪಂದ್ಯ: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದರಷ್ಟೇ ಬೆಂಗಳೂರಿಗೆ ಸೆಮಿಫೈನಲ್ ಅವಕಾಶ

ಎಲಿಮಿನೇಟರ್ ಪಂದ್ಯ: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದರಷ್ಟೇ ಬೆಂಗಳೂರಿಗೆ ಸೆಮಿಫೈನಲ್ ಅವಕಾಶ

- Advertisement -
- Advertisement -

ಪ್ರೊ.ಕಬಡ್ಡಿ 9ನೇ ಆವೃತ್ತಿಯ ಪ್ಲೇ ಆಫ್‌ನ ಎಲಿಮೇಟರ್ ಪಂದ್ಯಗಳು ಇಂದು ಮುಂಬೈನ ಸರ್ದಾರ್ ವಲ್ಲಭಭಾಯಿ ಪಟೇಲ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿವೆ. ಮೊದಲ ಪಂದ್ಯ ಬೆಂಗಳೂರು ಬುಲ್ಸ್ ಮತ್ತು ದಬಾಂಗ್ ಡೆಲ್ಲಿ ಕೆ.ಸಿ ನಡುವೆ ಸಂಜೆ 7.30ಕ್ಕೆ ನಡೆದರೆ, ಎರಡನೇ ಪಂದ್ಯ ಯು.ಪಿ ಯೋಧ ಮತ್ತು ತಮಿಳು ತಲೈವಾಸ್‌ ನಡುವೆ 8.30ಕ್ಕೆ ನಡೆಯಲಿದೆ. ಎರಡೂ ಪಂದ್ಯಗಳಲ್ಲಿ ಗೆದ್ದವರಿಗಷ್ಟೇ ಸೆಮಿಫೈನಲ್ ತಲುಪುವ ಅವಕಾಶವಿದೆ. ಸೋತ ತಂಡಗಳು ಟೂರ್ನಿಯಿಂದ ಹೊರಬೀಳಲಿವೆ.

ಅಂಕ ಪಟ್ಟಿಯಲ್ಲಿ ಮೊದಲ ಮತ್ತು ಎರಡನೇ ಸ್ಥಾನ ಪಡೆದ ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ಪುಣೇರಿ ಪಲ್ಟಾನ್ ತಂಡಗಳು ಈಗಾಗಲೇ ನೇರವಾಗಿ ಸೆಮಿಫೈನಲ್ ತಲುಪಿವೆ. ಸೆಮಿಫೈನಲ್ ಪಂದ್ಯಗಳು ಡಿಸೆಂಬರ್ 15 ರಂದು ನಡೆಯಲಿವೆ.

ಬೆಂಗಳೂರು ಬುಲ್ಸ್ ಗೆಲುವಿನ ನಿರೀಕ್ಷೆ

ಈ ಆವೃತ್ತಿಯಲ್ಲಿ ಬೆಂಗಳುರು ಬುಲ್ಸ್ ಭರ್ಜರಿ ಪ್ರದರ್ಶನದೊಂದಿಗೆ ಸುಲಭವಾಗಿ ಪ್ಲೇ ಆಫ್ ತಲುಪಿದೆ. ತಾನಾಡಿದ 22 ಪಂದ್ಯಗಳಲ್ಲಿ 13 ಗೆಲುವು, 8 ಸೋಲು ಮತ್ತು 1 ಟೈನೊಂದಿಗೆ 74 ಅಂಕ ಗಳಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಗಳಿಸಿತ್ತು. ಆದರೆ ದಬಾಂಗ್ ಡೆಲ್ಲಿ ಪ್ರಯಾಸಕರವಾಗಿ ಪ್ಲೇ ಆಫ್‌ ಪ್ರವೇಶಿಸಿದೆ. ಅದು 10 ಗೆಲುವು, 10 ಸೋಲು ಮತ್ತು 2 ಟೈನೊಂದಿಗೆ 63 ಅಂಕ ಗಳಿಸಿ ಅಂಕಪಟ್ಟಿಯಲ್ಲಿ 6ನೇ ಸ್ಥಾನ ಪಡೆದಿದೆ. ಅಲ್ಲದೆ ಡೆಲ್ಲಿ ಮತ್ತು ಬೆಂಗಳೂರು ನಡುವಿನ ಎರಡೂ ಪಂದ್ಯಗಳಲ್ಲಿ ಬೆಂಗಳೂರು ಬುಲ್ಸ್ ಗೆದ್ದು ಬೀಗಿದೆ. ಹಾಗಾಗಿ ಇಂದಿನ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಕಡೆ ಒಲವು ಹೆಚ್ಚಿದೆ.

ಮೊದಲ ಪಂದ್ಯದಲ್ಲಿ ಬೆಂಗಳೂರು ತಂಡ ಡೆಲ್ಲಿಯನ್ನು 47-43 ಅಂತರದಲ್ಲಿ ಗೆದ್ದರೆ ಎರಡನೇ ಪಂದ್ಯವನ್ನು 52-49 ಅಂತರದಲ್ಲಿ ಗೆಲುವು ಸಾಧಿಸಿತ್ತು. 2018ರ ಚಾಂಪಿಯನ್ ಬೆಂಗಳೂರು ತಂಡ, 2021ರ ಹಾಲಿ ಚಾಂಪಿಯನ್ ಡೆಲ್ಲಿ ವಿರುದ್ಧ ಇಂದು ಸೆಣಸಲಿದೆ.

ಭರತ್ ಮೇಲೆ ಭಾರ

ಬೆಂಗಳೂರು ತಂಡ ಲಿಂಗ್ ಹಂತದ ಕೊನೆಯ ಪಂದ್ಯದಲ್ಲಿ ಯು ಮುಂಬಾ ವಿರುದ್ಧ ಹೀನಾಯ ಸೋಲು ಕಂಡಿತು. ಬೆಂಗಳೂರಿನ ಭರವಸೆಯ ರೈಡರ್ ಭರತ್ ಅನುಪಸ್ಥಿತಿಯೇ ಅದಕ್ಕೆ ಪ್ರಮುಖ ಕಾರಣವಾಗಿತ್ತು. ಆ ಔಪಚಾರಿಕ ಪಂದ್ಯದಲ್ಲಿ ಭರತ್ ಸೇರಿದಂತೆ ಇತರ ಆಟಗಾರರಿಗೆ ವಿಶ್ರಾಂತಿ ನೀಡಲಾಗಿತ್ತು. ಹಾಗಾಗಿ ಬೆಂಗಳೂರು ಸೋತಿತು. ಇಂದಿನ ಪಂದ್ಯದಲ್ಲಿ ಭರತ್ ಮಿಂಚಿದರೆ, ಡಿಫೆಂಡರ್‌ಗಳು ಉತ್ತರ ಆಟ ಪ್ರದರ್ಶಿಸಿದರೆ ಬೆಂಗಳೂರಿಗೆ ಗೆಲುವು ಖಚಿತ.

ದೆಹಲಿ ವಿರುದ್ಧದ ಪಂದ್ಯಗಳಲ್ಲಿ ಬೆಂಗಳೂರಿನ ಮೇನ್ ರೈಡರ್ ವಿಕಾಸ್ ಖಂಡೋಲ, ನೀರಜ್ ನರ್ವಾಲ್ ಸಹ ಉತ್ತಮ ಸಾಧನೆ ತೋರಿದ್ದಾರೆ. ಇಂದು ಯಾವ ಪ್ರದರ್ಶನ ನೀಡುತ್ತಾರೆ ಕಾದು ನೋಡಬೇಕಿದೆ.

ಇನ್ನೊಂದೆಡೆ ದಬಾಂಗ್ ಡೆಲ್ಲಿ ತಂಡದ ಪರವಾಗಿ ನವೀನ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಅವರಿಗೆ ಆಶು ಮಲ್ಲಿಕ್ ಮತ್ತು ವಿಜಯ್ ಮಲ್ಲಿಕ್ ಉತ್ತಮ ಸಾಥ್ ನೀಡುತ್ತಿದ್ದಾರೆ. ಅವರನ್ನು ಕಟ್ಟಿಹಾಕಲು ಬೆಂಗಳೂರಿನ ಗೂಳಿಗಳು ಸಜ್ಜಾಗಿದ್ದಾರೆ. ಇಂದು ಬೆಂಗಳೂರು ಗೆದ್ದರೆ ಡಿಸೆಂಬರ್ 15 ರಂದು ಜೈಪುರ್ ಪಿಂಕ್ ಪ್ಯಾಂಥರ್ಸ್ ವಿರುದ್ಧ ಸೆಮಿಫೈನಲ್‌ ಪಂದ್ಯದಲ್ಲಿ ಸೆಣಸಲಿದೆ.

ಯುಪಿ ಯೋಧ ವರ್ಸಸ್ ತಮಿಳು ತಲೈವಾಸ್

ಎರಡನೇ ಎಲಿಮಿನೇಟರ್ ಪಂದ್ಯದಲ್ಲಿ ಯುಪಿ ಯೋಧ ತಂಡವನ್ನು ತಮಿಳು ತಲೈವಾಸ್ ಎದುರಿಸಲಿದೆ. ಎರಡೂ ತಂಡಗಳು ಸಹ ಚೊಚ್ಚಲ ಟ್ರೋಫಿ ಮೇಲೆ ಕಣ್ಣಿಟ್ಟಿವೆ. ಯುಪಿ ಯೋಧದ ಪರವಾಗಿ ಪರ್ದೀಪ್ ನರ್ವಾಲ್ ಪ್ರಮುಖ ರೈಡರ್. ಸರೇಂದರ್ ಗಿಲ್ ಅವರಿಗೆ ಸಾಥ್ ನೀಡುತ್ತಿದ್ದಾರೆ.  ಇನ್ನು ತಮಿಳು ತಲೈವಾದ್ ಪರವಾಗಿ ಅಜಿಂಕ್ಯ ಪವಾರ್ ಮತ್ತು ನರೇಂದರ್ ಉತ್ತಮ ರೈಡರ್‌ಗಳಾಗಿದ್ದಾರೆ. ಇಂದು ಗೆದ್ದ ತಂಡ ಡಿಸೆಂಬರ್ 15 ರಂದು ಪುಣೇರಿ ಪಲ್ಟನ್ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುತ್ತದೆ. ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದುವರೆಗಿನ ಪ್ರೊ ಕಬಡ್ಡಿ ಚಾಂಪಿಯನ್‌ಗಳು

ಮೊದಲ ಆವೃತ್ತಿ 2014: ಜೈಪುರ್ ಪಿಂಕ್ ಪ್ಯಾಂಥರ್ಸ್

ಎರಡನೇ ಆವೃತ್ತಿ 2014: ಯು ಮುಂಬಾ

ಮೂರನೇ ಆವೃತ್ತಿ 2015: ಪಟ್ನಾ ಪೈರೇಟ್ಸ್

ನಾಲ್ಕನೇ ಆವೃತ್ತಿ 2016: ಪಟ್ನಾ ಪೈರೇಟ್ಸ್

ಐದನೇ ಆವೃತ್ತಿ 2017: ಪಟ್ನಾ ಪೈರೇಟ್ಸ್

ಆರನೇ ಆವೃತ್ತಿ 2018: ಬೆಂಗಳೂರು ಬುಲ್ಸ್

ಏಳನೇ ಆವೃತ್ತಿ 2019: ಬೆಂಗಾಲ್ ವಾರಿಯರ್ಸ್

ಎಂಟನೇ ಆವೃತ್ತಿ 2021: ದಬಾಂಗ್ ಡೆಲ್ಲಿ

ಇದನ್ನೂ ಓದಿ; 2022ರಲ್ಲಿ ಆಸ್ಟ್ರೇಲಿಯಾಗೆ ಮೊದಲ ಟಿ20 ಸೋಲುಣಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...