Homeಸಿನಿಮಾಕ್ರೀಡೆಎಲಿಮಿನೇಟರ್ ಪಂದ್ಯ: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದರಷ್ಟೇ ಬೆಂಗಳೂರಿಗೆ ಸೆಮಿಫೈನಲ್ ಅವಕಾಶ

ಎಲಿಮಿನೇಟರ್ ಪಂದ್ಯ: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದರಷ್ಟೇ ಬೆಂಗಳೂರಿಗೆ ಸೆಮಿಫೈನಲ್ ಅವಕಾಶ

- Advertisement -
- Advertisement -

ಪ್ರೊ.ಕಬಡ್ಡಿ 9ನೇ ಆವೃತ್ತಿಯ ಪ್ಲೇ ಆಫ್‌ನ ಎಲಿಮೇಟರ್ ಪಂದ್ಯಗಳು ಇಂದು ಮುಂಬೈನ ಸರ್ದಾರ್ ವಲ್ಲಭಭಾಯಿ ಪಟೇಲ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿವೆ. ಮೊದಲ ಪಂದ್ಯ ಬೆಂಗಳೂರು ಬುಲ್ಸ್ ಮತ್ತು ದಬಾಂಗ್ ಡೆಲ್ಲಿ ಕೆ.ಸಿ ನಡುವೆ ಸಂಜೆ 7.30ಕ್ಕೆ ನಡೆದರೆ, ಎರಡನೇ ಪಂದ್ಯ ಯು.ಪಿ ಯೋಧ ಮತ್ತು ತಮಿಳು ತಲೈವಾಸ್‌ ನಡುವೆ 8.30ಕ್ಕೆ ನಡೆಯಲಿದೆ. ಎರಡೂ ಪಂದ್ಯಗಳಲ್ಲಿ ಗೆದ್ದವರಿಗಷ್ಟೇ ಸೆಮಿಫೈನಲ್ ತಲುಪುವ ಅವಕಾಶವಿದೆ. ಸೋತ ತಂಡಗಳು ಟೂರ್ನಿಯಿಂದ ಹೊರಬೀಳಲಿವೆ.

ಅಂಕ ಪಟ್ಟಿಯಲ್ಲಿ ಮೊದಲ ಮತ್ತು ಎರಡನೇ ಸ್ಥಾನ ಪಡೆದ ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ಪುಣೇರಿ ಪಲ್ಟಾನ್ ತಂಡಗಳು ಈಗಾಗಲೇ ನೇರವಾಗಿ ಸೆಮಿಫೈನಲ್ ತಲುಪಿವೆ. ಸೆಮಿಫೈನಲ್ ಪಂದ್ಯಗಳು ಡಿಸೆಂಬರ್ 15 ರಂದು ನಡೆಯಲಿವೆ.

ಬೆಂಗಳೂರು ಬುಲ್ಸ್ ಗೆಲುವಿನ ನಿರೀಕ್ಷೆ

ಈ ಆವೃತ್ತಿಯಲ್ಲಿ ಬೆಂಗಳುರು ಬುಲ್ಸ್ ಭರ್ಜರಿ ಪ್ರದರ್ಶನದೊಂದಿಗೆ ಸುಲಭವಾಗಿ ಪ್ಲೇ ಆಫ್ ತಲುಪಿದೆ. ತಾನಾಡಿದ 22 ಪಂದ್ಯಗಳಲ್ಲಿ 13 ಗೆಲುವು, 8 ಸೋಲು ಮತ್ತು 1 ಟೈನೊಂದಿಗೆ 74 ಅಂಕ ಗಳಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಗಳಿಸಿತ್ತು. ಆದರೆ ದಬಾಂಗ್ ಡೆಲ್ಲಿ ಪ್ರಯಾಸಕರವಾಗಿ ಪ್ಲೇ ಆಫ್‌ ಪ್ರವೇಶಿಸಿದೆ. ಅದು 10 ಗೆಲುವು, 10 ಸೋಲು ಮತ್ತು 2 ಟೈನೊಂದಿಗೆ 63 ಅಂಕ ಗಳಿಸಿ ಅಂಕಪಟ್ಟಿಯಲ್ಲಿ 6ನೇ ಸ್ಥಾನ ಪಡೆದಿದೆ. ಅಲ್ಲದೆ ಡೆಲ್ಲಿ ಮತ್ತು ಬೆಂಗಳೂರು ನಡುವಿನ ಎರಡೂ ಪಂದ್ಯಗಳಲ್ಲಿ ಬೆಂಗಳೂರು ಬುಲ್ಸ್ ಗೆದ್ದು ಬೀಗಿದೆ. ಹಾಗಾಗಿ ಇಂದಿನ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಕಡೆ ಒಲವು ಹೆಚ್ಚಿದೆ.

ಮೊದಲ ಪಂದ್ಯದಲ್ಲಿ ಬೆಂಗಳೂರು ತಂಡ ಡೆಲ್ಲಿಯನ್ನು 47-43 ಅಂತರದಲ್ಲಿ ಗೆದ್ದರೆ ಎರಡನೇ ಪಂದ್ಯವನ್ನು 52-49 ಅಂತರದಲ್ಲಿ ಗೆಲುವು ಸಾಧಿಸಿತ್ತು. 2018ರ ಚಾಂಪಿಯನ್ ಬೆಂಗಳೂರು ತಂಡ, 2021ರ ಹಾಲಿ ಚಾಂಪಿಯನ್ ಡೆಲ್ಲಿ ವಿರುದ್ಧ ಇಂದು ಸೆಣಸಲಿದೆ.

ಭರತ್ ಮೇಲೆ ಭಾರ

ಬೆಂಗಳೂರು ತಂಡ ಲಿಂಗ್ ಹಂತದ ಕೊನೆಯ ಪಂದ್ಯದಲ್ಲಿ ಯು ಮುಂಬಾ ವಿರುದ್ಧ ಹೀನಾಯ ಸೋಲು ಕಂಡಿತು. ಬೆಂಗಳೂರಿನ ಭರವಸೆಯ ರೈಡರ್ ಭರತ್ ಅನುಪಸ್ಥಿತಿಯೇ ಅದಕ್ಕೆ ಪ್ರಮುಖ ಕಾರಣವಾಗಿತ್ತು. ಆ ಔಪಚಾರಿಕ ಪಂದ್ಯದಲ್ಲಿ ಭರತ್ ಸೇರಿದಂತೆ ಇತರ ಆಟಗಾರರಿಗೆ ವಿಶ್ರಾಂತಿ ನೀಡಲಾಗಿತ್ತು. ಹಾಗಾಗಿ ಬೆಂಗಳೂರು ಸೋತಿತು. ಇಂದಿನ ಪಂದ್ಯದಲ್ಲಿ ಭರತ್ ಮಿಂಚಿದರೆ, ಡಿಫೆಂಡರ್‌ಗಳು ಉತ್ತರ ಆಟ ಪ್ರದರ್ಶಿಸಿದರೆ ಬೆಂಗಳೂರಿಗೆ ಗೆಲುವು ಖಚಿತ.

ದೆಹಲಿ ವಿರುದ್ಧದ ಪಂದ್ಯಗಳಲ್ಲಿ ಬೆಂಗಳೂರಿನ ಮೇನ್ ರೈಡರ್ ವಿಕಾಸ್ ಖಂಡೋಲ, ನೀರಜ್ ನರ್ವಾಲ್ ಸಹ ಉತ್ತಮ ಸಾಧನೆ ತೋರಿದ್ದಾರೆ. ಇಂದು ಯಾವ ಪ್ರದರ್ಶನ ನೀಡುತ್ತಾರೆ ಕಾದು ನೋಡಬೇಕಿದೆ.

ಇನ್ನೊಂದೆಡೆ ದಬಾಂಗ್ ಡೆಲ್ಲಿ ತಂಡದ ಪರವಾಗಿ ನವೀನ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಅವರಿಗೆ ಆಶು ಮಲ್ಲಿಕ್ ಮತ್ತು ವಿಜಯ್ ಮಲ್ಲಿಕ್ ಉತ್ತಮ ಸಾಥ್ ನೀಡುತ್ತಿದ್ದಾರೆ. ಅವರನ್ನು ಕಟ್ಟಿಹಾಕಲು ಬೆಂಗಳೂರಿನ ಗೂಳಿಗಳು ಸಜ್ಜಾಗಿದ್ದಾರೆ. ಇಂದು ಬೆಂಗಳೂರು ಗೆದ್ದರೆ ಡಿಸೆಂಬರ್ 15 ರಂದು ಜೈಪುರ್ ಪಿಂಕ್ ಪ್ಯಾಂಥರ್ಸ್ ವಿರುದ್ಧ ಸೆಮಿಫೈನಲ್‌ ಪಂದ್ಯದಲ್ಲಿ ಸೆಣಸಲಿದೆ.

ಯುಪಿ ಯೋಧ ವರ್ಸಸ್ ತಮಿಳು ತಲೈವಾಸ್

ಎರಡನೇ ಎಲಿಮಿನೇಟರ್ ಪಂದ್ಯದಲ್ಲಿ ಯುಪಿ ಯೋಧ ತಂಡವನ್ನು ತಮಿಳು ತಲೈವಾಸ್ ಎದುರಿಸಲಿದೆ. ಎರಡೂ ತಂಡಗಳು ಸಹ ಚೊಚ್ಚಲ ಟ್ರೋಫಿ ಮೇಲೆ ಕಣ್ಣಿಟ್ಟಿವೆ. ಯುಪಿ ಯೋಧದ ಪರವಾಗಿ ಪರ್ದೀಪ್ ನರ್ವಾಲ್ ಪ್ರಮುಖ ರೈಡರ್. ಸರೇಂದರ್ ಗಿಲ್ ಅವರಿಗೆ ಸಾಥ್ ನೀಡುತ್ತಿದ್ದಾರೆ.  ಇನ್ನು ತಮಿಳು ತಲೈವಾದ್ ಪರವಾಗಿ ಅಜಿಂಕ್ಯ ಪವಾರ್ ಮತ್ತು ನರೇಂದರ್ ಉತ್ತಮ ರೈಡರ್‌ಗಳಾಗಿದ್ದಾರೆ. ಇಂದು ಗೆದ್ದ ತಂಡ ಡಿಸೆಂಬರ್ 15 ರಂದು ಪುಣೇರಿ ಪಲ್ಟನ್ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುತ್ತದೆ. ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದುವರೆಗಿನ ಪ್ರೊ ಕಬಡ್ಡಿ ಚಾಂಪಿಯನ್‌ಗಳು

ಮೊದಲ ಆವೃತ್ತಿ 2014: ಜೈಪುರ್ ಪಿಂಕ್ ಪ್ಯಾಂಥರ್ಸ್

ಎರಡನೇ ಆವೃತ್ತಿ 2014: ಯು ಮುಂಬಾ

ಮೂರನೇ ಆವೃತ್ತಿ 2015: ಪಟ್ನಾ ಪೈರೇಟ್ಸ್

ನಾಲ್ಕನೇ ಆವೃತ್ತಿ 2016: ಪಟ್ನಾ ಪೈರೇಟ್ಸ್

ಐದನೇ ಆವೃತ್ತಿ 2017: ಪಟ್ನಾ ಪೈರೇಟ್ಸ್

ಆರನೇ ಆವೃತ್ತಿ 2018: ಬೆಂಗಳೂರು ಬುಲ್ಸ್

ಏಳನೇ ಆವೃತ್ತಿ 2019: ಬೆಂಗಾಲ್ ವಾರಿಯರ್ಸ್

ಎಂಟನೇ ಆವೃತ್ತಿ 2021: ದಬಾಂಗ್ ಡೆಲ್ಲಿ

ಇದನ್ನೂ ಓದಿ; 2022ರಲ್ಲಿ ಆಸ್ಟ್ರೇಲಿಯಾಗೆ ಮೊದಲ ಟಿ20 ಸೋಲುಣಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...