Homeಮುಖಪುಟತೇಜಸ್ವಿ ಯಾದವ್ ಬಿಹಾರದ ಮುಂದಿನ ಮುಖ್ಯಮಂತ್ರಿ: ಸುಳಿವು ನೀಡಿದ ನಿತೀಶ್ ಕಮಾರ್

ತೇಜಸ್ವಿ ಯಾದವ್ ಬಿಹಾರದ ಮುಂದಿನ ಮುಖ್ಯಮಂತ್ರಿ: ಸುಳಿವು ನೀಡಿದ ನಿತೀಶ್ ಕಮಾರ್

- Advertisement -
- Advertisement -

2025ರ ಚುನಾವಣೆಯ ನಂತರ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಬಿಹಾರದ ಮುಖ್ಯಮಂತ್ರಿಯಾಗುತ್ತಾರೆ ಎಂಬುದಾಗಿ ಹಾಲಿ ಸಿಎಂ ನಿತೀಶ್ ಕುಮಾರ್ ಸುಳಿವು ನೀಡಿದ್ದಾರೆ.

“ನಾನು ಪ್ರಧಾನಿ ಅಭ್ಯರ್ಥಿ ಅಥವಾ ಮುಖ್ಯಮಂತ್ರಿ ಅಭ್ಯರ್ಥಿ ಅಲ್ಲ. ಬಿಜೆಪಿಯನ್ನು ಸೋಲಿಸುವುದೇ ನನ್ನ ಗುರಿ. ನಾವು ತೇಜಸ್ವಿ ಯಾದವ್ ಅವರನ್ನು ಪ್ರೋತ್ಸಾಹಿಸಬೇಕಾಗಿದೆ” ಎಂದು ಬಿಹಾರದ ಆಡಳಿತ ಒಕ್ಕೂಟದ ಶಾಸಕರ ಸಭೆಯಲ್ಲಿ ನಿತೀಶ್ ಕುಮಾರ್ ಹೇಳಿದ್ದಾರೆ.

“ನಾವು ಬಹಳಷ್ಟು ಮಾಡುತ್ತಿದ್ದೇವೆ. ಇನ್ನೂ ಏನಾದರೂ ಉಳಿದಿದ್ದರೆ ಭವಿಷ್ಯದಲ್ಲಿ ತೇಜಸ್ವಿ ಯಾದವ್ ಆ ಕೆಲಸ ಮಾಡುತ್ತಾರೆ ಮತ್ತು ಎಲ್ಲವನ್ನೂ ಪೂರ್ಣಗೊಳಿಸುತ್ತಾರೆ. ನಮ್ಮನ್ನು ವಿಭಜಿಸಲು ಕೆಲವರು ಬಯಸುತ್ತಿದ್ದಾರೆ. ಆದರೆ ಯಾರ ಮಾತಿಗೂ ಮಣಿಯಲು ಪ್ರಯತ್ನಿಸಬೇಡಿ. ನಾವು ಒಗ್ಗಟ್ಟಾಗಿರಬೇಕು ಮತ್ತು ಒಟ್ಟಾಗಿ ಕೆಲಸ ಮಾಡಬೇಕು. ಯಾವುದೇ ಘರ್ಷಣೆ ಇರಬಾರದು” ಇಂದು ಈ ಮುಂಚೆ ನಿತೀಶ್ ಕುಮಾರ್ ಹೇಳಿದ್ದರು.

“ತೇಜಸ್ವಿ ಇಲ್ಲಿದ್ದಾರೆ, ಅವರನ್ನು ಮುಂದಕ್ಕೆ ಕೊಂಡೊಯ್ಯಲು ನಾನು ಏನು ಮಾಡಬಹುದೋ ಅದನ್ನು ಮಾಡಿದ್ದೇನೆ. ನಾನು ಅವರನ್ನು ಇನ್ನೂ ಮುಂದಕ್ಕೆ ಕರೆದೊಯ್ಯುತ್ತೇನೆ. ಅದನ್ನು ನೀವು ನೋಡುತ್ತೀರಿ. ನಮ್ಮ ಎಲ್ಲಾ ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಇದು ನನ್ನ ವೈಯಕ್ತಿಕ ಅಭಿಪ್ರಾಯವಲ್ಲ. ನಾವು ಏನೇ ಮಾಡಿದರೂ ಗಾಂಧಿ ಮಾರ್ಗವನ್ನೇ ಅನುಸರಿಸುತ್ತಿದ್ದೇವೆ’’ ಎಂದು ಹೇಳುವ ಮೂಲಕ ಬಿಹಾರದ ತನ್ನ ಮುಂದಿನ ಉತ್ತರಾಧಿಕಾರಿ ತೇಜಸ್ವಿ ಯಾದವ್ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ತೇಜಸ್ವಿ ಯಾದವ್, ‘ಸದ್ಯದ ನನ್ನ ಗುರಿ 2024ರ ಚುನಾವಣೆಯಾಗಿದೆ. ಉಳಿದ ವಿಷಯಗಳ ಬಗ್ಗೆ ನಂತರ ಯೋಚಿಸುತ್ತೇವೆ’ ಎಂದಿದ್ದಾರೆ.

2017ರಿಂದ ತೇಜಸ್ವಿ ಯಾದವ್ ನಿತೀಶ್ ಕುಮಾರ್‌ರವರ ಕಟು ಟೀಕಾಕಾರರಾಗಿದ್ದರು. ಏಕೆಂದರೆ ಆ ಸಮಯದಲ್ಲಿ ಮಹಾ ಘಟಬಂಧನ್ ಮೈತ್ರಿ ತೊರೆದು ನಿತೀಶ್ ಬಿಜೆಪಿ ಜೊತೆಗೂಡಿ ಸರ್ಕಾರ ರಚಿಸಿದ್ದರು. ಅದೇ ರೀತಿಯಾಗಿ 2022ರಲ್ಲಿಯೂ ಸಹ ಬಿಜೆಪಿ ಕೈಬಿಟ್ಟು ಆರ್‌ಜೆಡಿ ಮತ್ತು ಕಾಂಗ್ರೆಸ್ ಜೊತೆಗೂಡಿ ಸರ್ಕಾರ ರಚಿಸಿದ್ದಾರೆ. ಅಂದಿನಿಂದ ತೆಜಸ್ವಿ ಯಾದವ್ ಎರಡನೇ ಬಾರಿಗೆ ಉಪಮುಖ್ಯಮಂತ್ರಿಯಾಗಿದ್ದಾರೆ.

ಕಳೆದ ತಿಂಗಳು ತೇಜಸ್ವಿ ಯಾದವ್ ನಿತೀಶ್ ಕುಮಾರ್‌ರವರನ್ನು ಹೊಗಳಿದ್ದರು. “ನನ್ನ ತಂದೆ ಮತ್ತು ತಾಯಿ ಮುಖ್ಯಮಂತ್ರಿಯಾಗಿದ್ದರು, ವಿರೋಧ ಪಕ್ಷದ ನಾಯಕರಾಗಿದ್ದರು. ನಾನು ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೇನೆ. ಒಮ್ಮೆ ವಿರೋಧ ಪಕ್ಷದ ಮುಖಂಡನಾಗಿದ್ದೆ. ಅಲ್ಲದೆ ಬಹಳ ಅನುಭವವುಳ್ಳ ಮುಖ್ಯಮಂತ್ರಿಯವರ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ನಾನು ಅದೃಷ್ಟವಂತೆ ವ್ಯಕ್ತಿ” ಅಲ್ಲವೇ? ಎಂದಿದ್ದರು.

ಇದನ್ನೂ ಓದಿ; ‘ಸಂವಿಧಾನ ಉಳಿಸಲು ಮೋದಿಯನ್ನು ಕೊಲ್ಲಿರಿ’ ಎಂದಿದ್ದ ಕಾಂಗ್ರೆಸ್ ಮುಖಂಡನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...