Homeಮುಖಪುಟಭೀಮಾ ಕೋರೆಂಗಾವ್‌ ಪ್ರಕರಣ: ಸ್ಟಾನ್ ಸ್ವಾಮಿಯವರ ಕಂಪ್ಯೂಟರ್‌ಗೆ ನಕಲಿ ದಾಖಲೆ ತುರುಕಿದ್ದ ಹ್ಯಾಕರ್‌- ಬೆಚ್ಚಿಬೀಳಿಸುವ ವರದಿ...

ಭೀಮಾ ಕೋರೆಂಗಾವ್‌ ಪ್ರಕರಣ: ಸ್ಟಾನ್ ಸ್ವಾಮಿಯವರ ಕಂಪ್ಯೂಟರ್‌ಗೆ ನಕಲಿ ದಾಖಲೆ ತುರುಕಿದ್ದ ಹ್ಯಾಕರ್‌- ಬೆಚ್ಚಿಬೀಳಿಸುವ ವರದಿ ಬಹಿರಂಗ

ಸ್ಟಾನ್‌ಸ್ವಾಮಿಯವರು ಕಸ್ಟಡಿಯಲ್ಲೇ ಸಾವಿಗೀಡಾಗಿದ್ದರು. ವರದಿ ಹೊರಬಿದ್ದ ಬಳಿಕ ರಾಜಕಾರಣಿಗಳು, ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಸ್ಟಾನ್ ಸ್ವಾಮಿಯವರ ಡಿವೈಸ್‌ನೊಳಗೆ ಹ್ಯಾಕರ್‌ ನಕಲಿ ದಾಖಲೆಗಳನ್ನು ತುರುಕಿದ್ದಾನೆ ಎಂಬ ವರದಿಯು ಬೆಳಕಿಗೆ ಬಂದ ಬಳಿಕ ಹಲವಾರು ರಾಜಕಾರಣಿಗಳು, ಶಿಕ್ಷಣ ತಜ್ಞರು, ಹೋರಾಟಗಾರರು ಮತ್ತು ಸಾಮಾಜಿಕ ಸಂಘಟನೆಗಳ ಮುಖಂಡರು ಘಟನೆಯನ್ನು ಖಂಡಿಸಿ ಹೇಳಿಕೆ ನೀಡಿದ್ದಾರೆ. “ಇದು ನ್ಯಾಯ ವ್ಯವಸ್ಥೆಗೆ ಕಳಂಕ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಪ್ರಜಾಪ್ರಭುತ್ವದ ದೇಶವು ತನ್ನದೇ ಆದ ರೀತಿಯಲ್ಲಿ ವರ್ತಿಸುತ್ತದೆಯೇ?” ಎಂದು ಕಾಂಗ್ರೆಸ್ ನಾಯಕ ಸಲ್ಮಾನ್ ಅನೀಸ್ ಸೋಜ್ ಟ್ವೀಟ್ ಮಾಡಿದ್ದಾರೆ. “ನ್ಯಾಯಾಲಯಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು. ಇದು ಅವರು ಮಾಡಬಹುದಾದ ಅತ್ಯುತ್ತಮ ಕಾರ್ಯವೇ?” ಎಂದು ಪ್ರಶ್ನಿಸಿದ್ದಾರೆ.

ಸ್ವಾಮಿಯವರ ಕುರಿತ ತನಿಖಾ ವರದಿಯನ್ನು ಮ್ಯಾಸಚೂಸೆಟ್ಸ್ ಮೂಲದ ಡಿಜಿಟಲ್ ಫೊರೆನ್ಸಿಕ್ಸ್ ಸಂಸ್ಥೆ ಆರ್ಸೆನಲ್ ಕನ್ಸಲ್ಟಿಂಗ್ ಬಿಡುಗಡೆ ಮಾಡಿದೆ. ಇತರ ಆರೋಪಿಗಳಾದ ಸುರೇಂದ್ರ ಗ್ಯಾಡ್ಲಿಂಗ್ ಮತ್ತು ರೋನಾ ವಿಲ್ಸನ್ ಅವರ ಬಗ್ಗೆ ಇದೇ ರೀತಿಯ ಸಂಗತಿಗಳನ್ನು ಈ ಹಿಂದೆ ಇದೇ ಸಂಸ್ಥೆ ಹೊರಗೆಡವಿತ್ತು.

ಜೂನ್ 2019ರಲ್ಲಿ ಅವರ ಡಿವೈಸ್‌ಅನ್ನು ಪೊಲೀಸರು ವಶಪಡಿಸಿಕೊಳ್ಳುವವರೆಗೆ ಸುಮಾರು ಐದು ವರ್ಷಗಳಿಂದ ಸ್ವಾಮಿಯವರ ಮೇಲೆ ಇಂತಹದೊಂದು ಪಿತೂರಿ ನಡೆದಿದೆ ಎಂದು ಆರ್ಸೆನಲ್ ಕನ್ಸಲ್ಟಿಂಗ್ ಹೊರಗೆಡವಿದೆ. ಆ ಅವಧಿಯಲ್ಲಿ, ಸ್ಟಾನ್‌ ಸ್ವಾಮಿಯವರ ಕಂಪ್ಯೂಟರ್‌ನ ಮೇಲೆ ಹ್ಯಾಕರ್‌ ಸಂಪೂರ್ಣ ನಿಯಂತ್ರಣವನ್ನು ಹೊಂದಿದ್ದನು. ಡಜನ್‌ಗಟ್ಟಲೆ ಫೈಲ್‌ಗಳನ್ನು ಗುಪ್ತವಾಗಿ ಇರಿಸಿದನು. ಇದು ಸ್ವಾಮಿಯವರ ಗಮನಕ್ಕೆ ಬಂದಿರಲಿಲ್ಲ ಎಂದು ವರದಿ ಬಹಿರಂಗಪಡಿಸಿದೆ.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಬಂಧಿಸಲ್ಪಟ್ಟ ಸುಮಾರು ಒಂಬತ್ತು ತಿಂಗಳ ನಂತರ, ಕಳೆದ ವರ್ಷ ಜುಲೈ 5ರಂದು ಸ್ವಾಮಿಯವರು ಮುಂಬೈ ಆಸ್ಪತ್ರೆಯಲ್ಲಿ ಕಸ್ಟಡಿಯಲ್ಲಿದ್ದಾಗಲೇ ನಿಧನರಾಗಿದ್ದರು. 84 ವರ್ಷದ ಅವರು ಪಾರ್ಕಿನ್ಸನ್ ಕಾಯಿಲೆ ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಮುಂಬೈನ ತಲೋಜಾ ಜೈಲಿನಲ್ಲಿ ಕರೋನವೈರಸ್ ಸೋಂಕಿಗೆ ಒಳಗಾಗಿದ್ದರು.

ವರದಿಯನ್ನು ಪ್ರಕಟಿಸಿದ್ದಕ್ಕಾಗಿ ಆರ್ಸೆನಲ್ ಕನ್ಸಲ್ಟಿಂಗ್‌ಗೆ ಭಾರತದ ಕ್ರಿಶ್ಚಿಯನ್ ಸಂಸ್ಥೆ ಜೆಸ್ಯೂಟ್ಸ್ ಮಂಗಳವಾರ ಧನ್ಯವಾದ ಸಲ್ಲಿಸಿದೆ.

“ನಾವು ಭಾರತದ ಜೆಸ್ಯೂಟ್‌ಗಳು. ಬಡವರ ಹಕ್ಕುಗಳ ರಕ್ಷಣೆಗಾಗಿ ಹೋರಾಡಿ ವಿವಿಧ ಜೈಲುಗಳಲ್ಲಿ ಕೊಳೆಯುತ್ತಿರುವವರೊಂದಿಗೆ, ವಿಶೇಷವಾಗಿ ಬಿಕೆ 16 [ಭೀಮಾ ಕೋರೆಗಾಂವ್] ಪ್ರಕರಣದಲ್ಲಿ ಆಧಾರವಿಲ್ಲದೆ ಬಂಧನದಲ್ಲಿ ಇರುವವರೊಂದಿಗೆ  ಇರುತ್ತೇವೆ. ಬಡವರಿಗೆ ಮತ್ತು ಅಂಚಿನಲ್ಲಿರುವವರಿಗೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ” ಎಂದು ಸಂಸ್ಥೆ ತಿಳಿಸಿದೆ.

“ಸ್ವಾಮಿಯವರು ಸಾಂಸ್ಥಿಕ ಹತ್ಯೆಗೆ ಬಲಿಯಾಗಿರುವುದನ್ನು ಮರೆಯಬಾರದು” ಎಂದು ಇಂಡಿಯನ್ ಅಮೇರಿಕನ್ ಮುಸ್ಲಿಂ ಕೌನ್ಸಿಲ್ ಟ್ವೀಟ್ ಮಾಡಿದೆ.

“ಹ್ಯಾಕಿಂಗ್ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಸ್ಪಷ್ಟ ನಿಲುವು ತಾಳುತ್ತದೆಯೇ? ನ್ಯಾಯಾಲಯಗಳು ಫೋರೆನ್ಸಿಕ್ ವಿಶ್ಲೇಷಣೆಯನ್ನು ಪರಿಗಣಿಸುತ್ತವೆಯೇ” ಎಂದು ಪತ್ರಕರ್ತ ರಾಜದೀಪ್ ಸರ್ದೇಸಾಯಿ ಪ್ರಶ್ನಿಸಿದ್ದಾರೆ.

ಇತಿಹಾಸಕಾರ ಆಡ್ರೆ ಟ್ರುಶ್ಕೆ ಟ್ವೀಟ್ ಮಾಡಿದ್ದು, “ದೀನದಲಿತರಿಗಾಗಿ ಹೋರಾಡಿದ, ಇಳಿವಯಸ್ಸಿನ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ಪಾದ್ರಿಯ ವಿರುದ್ಧ ಪುರಾವೆಗಳನ್ನು ಭಾರತೀಯ ಸರ್ಕಾರ ಸೃಷ್ಟಿಮಾಡಿದೆ. ಆ ಸುಳ್ಳು ಸಾಕ್ಷಿಗಳ ಆಧಾರದಲ್ಲಿ ಅವರನ್ನು ಜೈಲಿಗೆ ಹಾಕಲಾಯಿತು. ಅವರು ಸಾಯುವವರೆಗೂ ವೈದ್ಯಕೀಯ ಸೇವೆಯಿಂದ ವಂಚಿತರಾದರು” ಎಂದು ವಿಷಾದಿಸಿದ್ದಾರೆ.

ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿ, “ಬಹಿರಂಗಗೊಂಡಿರುವ ಸಂಗತಿಯು ಆತಂಕಾರಿಯಾಗಿದೆ ಮತ್ತು ಭಯಾನಕವಾಗಿದೆ” ಎಂದು ಬಣ್ಣಿಸಿದ್ದಾರೆ.

“ಈ ರೀತಿಯಾಗಿ ಸಾಕ್ಷಿಗಳನ್ನು ತುರುಕುವುದು ಸಾಧ್ಯವಾದರೆ, ಸರ್ಕಾರವು ಎಲ್ಲಾ ರೀತಿಯ ಆರೋಪಗಳ ಮೇಲೆ ಅನೇಕ ಜನರನ್ನು ಕಂಬಿ ಹಿಂದೆ ಹಾಕಬಹುದು” ಎಂದು ಅವರು ಟೀಕಿಸಿದ್ದಾರೆ. “ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನದಲ್ಲಿದ್ದಾಗ ಸ್ಟಾನ್ ಸ್ವಾಮಿ ಸಾವನ್ನಪ್ಪಿದ್ದಾರೆ. ಇತರರು ಇನ್ನೂ ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ನ್ಯಾಯಾಲಯಗಳು ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಸ್ವಾಮಿಯವರ ಕಂಪ್ಯೂಟರ್‌ನಿಂದ 24,000 ಫೈಲ್‌ಗಳು ಮತ್ತು ಫೋಲ್ಡರ್‌ಗಳನ್ನು ತನ್ನ ಸರ್ವರ್‌ಗೆ ನಕಲಿಸಲು ಹ್ಯಾಕರ್‌‌ WinSCP ಸಾಧನ ಬಳಿಸಿದ್ದಾನೆ” ಎಂದು ಆರ್ಸೆನಲ್ ಕನ್ಸಲ್ಟಿಂಗ್ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...