Homeಮುಖಪುಟಭೀಮಾ ಕೋರೆಂಗಾವ್‌ ಪ್ರಕರಣ: ಸ್ಟಾನ್ ಸ್ವಾಮಿಯವರ ಕಂಪ್ಯೂಟರ್‌ಗೆ ನಕಲಿ ದಾಖಲೆ ತುರುಕಿದ್ದ ಹ್ಯಾಕರ್‌- ಬೆಚ್ಚಿಬೀಳಿಸುವ ವರದಿ...

ಭೀಮಾ ಕೋರೆಂಗಾವ್‌ ಪ್ರಕರಣ: ಸ್ಟಾನ್ ಸ್ವಾಮಿಯವರ ಕಂಪ್ಯೂಟರ್‌ಗೆ ನಕಲಿ ದಾಖಲೆ ತುರುಕಿದ್ದ ಹ್ಯಾಕರ್‌- ಬೆಚ್ಚಿಬೀಳಿಸುವ ವರದಿ ಬಹಿರಂಗ

ಸ್ಟಾನ್‌ಸ್ವಾಮಿಯವರು ಕಸ್ಟಡಿಯಲ್ಲೇ ಸಾವಿಗೀಡಾಗಿದ್ದರು. ವರದಿ ಹೊರಬಿದ್ದ ಬಳಿಕ ರಾಜಕಾರಣಿಗಳು, ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಸ್ಟಾನ್ ಸ್ವಾಮಿಯವರ ಡಿವೈಸ್‌ನೊಳಗೆ ಹ್ಯಾಕರ್‌ ನಕಲಿ ದಾಖಲೆಗಳನ್ನು ತುರುಕಿದ್ದಾನೆ ಎಂಬ ವರದಿಯು ಬೆಳಕಿಗೆ ಬಂದ ಬಳಿಕ ಹಲವಾರು ರಾಜಕಾರಣಿಗಳು, ಶಿಕ್ಷಣ ತಜ್ಞರು, ಹೋರಾಟಗಾರರು ಮತ್ತು ಸಾಮಾಜಿಕ ಸಂಘಟನೆಗಳ ಮುಖಂಡರು ಘಟನೆಯನ್ನು ಖಂಡಿಸಿ ಹೇಳಿಕೆ ನೀಡಿದ್ದಾರೆ. “ಇದು ನ್ಯಾಯ ವ್ಯವಸ್ಥೆಗೆ ಕಳಂಕ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಪ್ರಜಾಪ್ರಭುತ್ವದ ದೇಶವು ತನ್ನದೇ ಆದ ರೀತಿಯಲ್ಲಿ ವರ್ತಿಸುತ್ತದೆಯೇ?” ಎಂದು ಕಾಂಗ್ರೆಸ್ ನಾಯಕ ಸಲ್ಮಾನ್ ಅನೀಸ್ ಸೋಜ್ ಟ್ವೀಟ್ ಮಾಡಿದ್ದಾರೆ. “ನ್ಯಾಯಾಲಯಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು. ಇದು ಅವರು ಮಾಡಬಹುದಾದ ಅತ್ಯುತ್ತಮ ಕಾರ್ಯವೇ?” ಎಂದು ಪ್ರಶ್ನಿಸಿದ್ದಾರೆ.

ಸ್ವಾಮಿಯವರ ಕುರಿತ ತನಿಖಾ ವರದಿಯನ್ನು ಮ್ಯಾಸಚೂಸೆಟ್ಸ್ ಮೂಲದ ಡಿಜಿಟಲ್ ಫೊರೆನ್ಸಿಕ್ಸ್ ಸಂಸ್ಥೆ ಆರ್ಸೆನಲ್ ಕನ್ಸಲ್ಟಿಂಗ್ ಬಿಡುಗಡೆ ಮಾಡಿದೆ. ಇತರ ಆರೋಪಿಗಳಾದ ಸುರೇಂದ್ರ ಗ್ಯಾಡ್ಲಿಂಗ್ ಮತ್ತು ರೋನಾ ವಿಲ್ಸನ್ ಅವರ ಬಗ್ಗೆ ಇದೇ ರೀತಿಯ ಸಂಗತಿಗಳನ್ನು ಈ ಹಿಂದೆ ಇದೇ ಸಂಸ್ಥೆ ಹೊರಗೆಡವಿತ್ತು.

ಜೂನ್ 2019ರಲ್ಲಿ ಅವರ ಡಿವೈಸ್‌ಅನ್ನು ಪೊಲೀಸರು ವಶಪಡಿಸಿಕೊಳ್ಳುವವರೆಗೆ ಸುಮಾರು ಐದು ವರ್ಷಗಳಿಂದ ಸ್ವಾಮಿಯವರ ಮೇಲೆ ಇಂತಹದೊಂದು ಪಿತೂರಿ ನಡೆದಿದೆ ಎಂದು ಆರ್ಸೆನಲ್ ಕನ್ಸಲ್ಟಿಂಗ್ ಹೊರಗೆಡವಿದೆ. ಆ ಅವಧಿಯಲ್ಲಿ, ಸ್ಟಾನ್‌ ಸ್ವಾಮಿಯವರ ಕಂಪ್ಯೂಟರ್‌ನ ಮೇಲೆ ಹ್ಯಾಕರ್‌ ಸಂಪೂರ್ಣ ನಿಯಂತ್ರಣವನ್ನು ಹೊಂದಿದ್ದನು. ಡಜನ್‌ಗಟ್ಟಲೆ ಫೈಲ್‌ಗಳನ್ನು ಗುಪ್ತವಾಗಿ ಇರಿಸಿದನು. ಇದು ಸ್ವಾಮಿಯವರ ಗಮನಕ್ಕೆ ಬಂದಿರಲಿಲ್ಲ ಎಂದು ವರದಿ ಬಹಿರಂಗಪಡಿಸಿದೆ.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಬಂಧಿಸಲ್ಪಟ್ಟ ಸುಮಾರು ಒಂಬತ್ತು ತಿಂಗಳ ನಂತರ, ಕಳೆದ ವರ್ಷ ಜುಲೈ 5ರಂದು ಸ್ವಾಮಿಯವರು ಮುಂಬೈ ಆಸ್ಪತ್ರೆಯಲ್ಲಿ ಕಸ್ಟಡಿಯಲ್ಲಿದ್ದಾಗಲೇ ನಿಧನರಾಗಿದ್ದರು. 84 ವರ್ಷದ ಅವರು ಪಾರ್ಕಿನ್ಸನ್ ಕಾಯಿಲೆ ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಮುಂಬೈನ ತಲೋಜಾ ಜೈಲಿನಲ್ಲಿ ಕರೋನವೈರಸ್ ಸೋಂಕಿಗೆ ಒಳಗಾಗಿದ್ದರು.

ವರದಿಯನ್ನು ಪ್ರಕಟಿಸಿದ್ದಕ್ಕಾಗಿ ಆರ್ಸೆನಲ್ ಕನ್ಸಲ್ಟಿಂಗ್‌ಗೆ ಭಾರತದ ಕ್ರಿಶ್ಚಿಯನ್ ಸಂಸ್ಥೆ ಜೆಸ್ಯೂಟ್ಸ್ ಮಂಗಳವಾರ ಧನ್ಯವಾದ ಸಲ್ಲಿಸಿದೆ.

“ನಾವು ಭಾರತದ ಜೆಸ್ಯೂಟ್‌ಗಳು. ಬಡವರ ಹಕ್ಕುಗಳ ರಕ್ಷಣೆಗಾಗಿ ಹೋರಾಡಿ ವಿವಿಧ ಜೈಲುಗಳಲ್ಲಿ ಕೊಳೆಯುತ್ತಿರುವವರೊಂದಿಗೆ, ವಿಶೇಷವಾಗಿ ಬಿಕೆ 16 [ಭೀಮಾ ಕೋರೆಗಾಂವ್] ಪ್ರಕರಣದಲ್ಲಿ ಆಧಾರವಿಲ್ಲದೆ ಬಂಧನದಲ್ಲಿ ಇರುವವರೊಂದಿಗೆ  ಇರುತ್ತೇವೆ. ಬಡವರಿಗೆ ಮತ್ತು ಅಂಚಿನಲ್ಲಿರುವವರಿಗೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ” ಎಂದು ಸಂಸ್ಥೆ ತಿಳಿಸಿದೆ.

“ಸ್ವಾಮಿಯವರು ಸಾಂಸ್ಥಿಕ ಹತ್ಯೆಗೆ ಬಲಿಯಾಗಿರುವುದನ್ನು ಮರೆಯಬಾರದು” ಎಂದು ಇಂಡಿಯನ್ ಅಮೇರಿಕನ್ ಮುಸ್ಲಿಂ ಕೌನ್ಸಿಲ್ ಟ್ವೀಟ್ ಮಾಡಿದೆ.

“ಹ್ಯಾಕಿಂಗ್ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಸ್ಪಷ್ಟ ನಿಲುವು ತಾಳುತ್ತದೆಯೇ? ನ್ಯಾಯಾಲಯಗಳು ಫೋರೆನ್ಸಿಕ್ ವಿಶ್ಲೇಷಣೆಯನ್ನು ಪರಿಗಣಿಸುತ್ತವೆಯೇ” ಎಂದು ಪತ್ರಕರ್ತ ರಾಜದೀಪ್ ಸರ್ದೇಸಾಯಿ ಪ್ರಶ್ನಿಸಿದ್ದಾರೆ.

ಇತಿಹಾಸಕಾರ ಆಡ್ರೆ ಟ್ರುಶ್ಕೆ ಟ್ವೀಟ್ ಮಾಡಿದ್ದು, “ದೀನದಲಿತರಿಗಾಗಿ ಹೋರಾಡಿದ, ಇಳಿವಯಸ್ಸಿನ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ಪಾದ್ರಿಯ ವಿರುದ್ಧ ಪುರಾವೆಗಳನ್ನು ಭಾರತೀಯ ಸರ್ಕಾರ ಸೃಷ್ಟಿಮಾಡಿದೆ. ಆ ಸುಳ್ಳು ಸಾಕ್ಷಿಗಳ ಆಧಾರದಲ್ಲಿ ಅವರನ್ನು ಜೈಲಿಗೆ ಹಾಕಲಾಯಿತು. ಅವರು ಸಾಯುವವರೆಗೂ ವೈದ್ಯಕೀಯ ಸೇವೆಯಿಂದ ವಂಚಿತರಾದರು” ಎಂದು ವಿಷಾದಿಸಿದ್ದಾರೆ.

ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿ, “ಬಹಿರಂಗಗೊಂಡಿರುವ ಸಂಗತಿಯು ಆತಂಕಾರಿಯಾಗಿದೆ ಮತ್ತು ಭಯಾನಕವಾಗಿದೆ” ಎಂದು ಬಣ್ಣಿಸಿದ್ದಾರೆ.

“ಈ ರೀತಿಯಾಗಿ ಸಾಕ್ಷಿಗಳನ್ನು ತುರುಕುವುದು ಸಾಧ್ಯವಾದರೆ, ಸರ್ಕಾರವು ಎಲ್ಲಾ ರೀತಿಯ ಆರೋಪಗಳ ಮೇಲೆ ಅನೇಕ ಜನರನ್ನು ಕಂಬಿ ಹಿಂದೆ ಹಾಕಬಹುದು” ಎಂದು ಅವರು ಟೀಕಿಸಿದ್ದಾರೆ. “ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನದಲ್ಲಿದ್ದಾಗ ಸ್ಟಾನ್ ಸ್ವಾಮಿ ಸಾವನ್ನಪ್ಪಿದ್ದಾರೆ. ಇತರರು ಇನ್ನೂ ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ನ್ಯಾಯಾಲಯಗಳು ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಸ್ವಾಮಿಯವರ ಕಂಪ್ಯೂಟರ್‌ನಿಂದ 24,000 ಫೈಲ್‌ಗಳು ಮತ್ತು ಫೋಲ್ಡರ್‌ಗಳನ್ನು ತನ್ನ ಸರ್ವರ್‌ಗೆ ನಕಲಿಸಲು ಹ್ಯಾಕರ್‌‌ WinSCP ಸಾಧನ ಬಳಿಸಿದ್ದಾನೆ” ಎಂದು ಆರ್ಸೆನಲ್ ಕನ್ಸಲ್ಟಿಂಗ್ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...