Homeಕರ್ನಾಟಕಒಳಮೀಸಲಾತಿ ಹೋರಾಟದ ನಾಯಕ ಅಂಬಣ್ಣರವರ ತಂದೆ ಷಣ್ಮುಖಪ್ಪ ನಿಧನ

ಒಳಮೀಸಲಾತಿ ಹೋರಾಟದ ನಾಯಕ ಅಂಬಣ್ಣರವರ ತಂದೆ ಷಣ್ಮುಖಪ್ಪ ನಿಧನ

- Advertisement -
- Advertisement -

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಜಾರಿಯಾಗಬೇಕು ಎಂಬ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ನಾಯಕರಾದ ಅಂಬಣ್ಣ ಅರೋಲಿಕರ್‌ ಅವರ ತಂದೆ ಷಣ್ಮುಖಪ್ಪ ಅರೋಲಿ ನಿಧನರಾಗಿದ್ದಾರೆ.

ಶತಾಯುಷಿಯಾಗಿದ್ದ ಷಣ್ಮುಖಪ್ಪ ಅವರು ವಯೋಸಹಜ ಅನಾರೋಗ್ಯದಲ್ಲಿದ್ದರು. ಮಂಗಳವಾರ ರಾತ್ರಿ ಕೊನೆಯುಸಿರೆಳೆದರು. ಬುಧವಾರ 2.30ಕ್ಕೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಅರೋಲಿಯಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ.

ನಿಧನದ ಕುರಿತು ‘ಒಳಮೀಸಲಾತಿ’ ಫೇಸ್‌ಬುಕ್‌ ಪುಟದಲ್ಲಿ ತಿಳಿಸಲಾಗಿದ್ದು, “ವಯಸ್ಸಾದ, ಅನಾರೋಗ್ಯದಲ್ಲಿದ್ದ ತಂದೆಯನ್ನು ಮನೆಯಲ್ಲಿ ಬಿಟ್ಟು ಶೋಷಿತ, ಅವಕಾಶ ವಂಚಿತ ಜನರ ಹಕ್ಕುಗಳಿಗಾಗಿ ಹಲವಾರು ದಿನ, ನೂರಾರು ಊರು ಕೇರಿ ಸುತ್ತಿ ಅಂಬಣ್ಣ ಅರೋಲಿಕರ್‌‌ ಪಾದಯಾತ್ರೆ ಮಾಡಿದರು. ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಹೋರಾಟದಲ್ಲಿದ್ದ ಅಂಬಣ್ಣ ಅವರ ತಂದೆ ಈಗ ನಮ್ಮನ್ನ ಅಗಲಿದ್ದಾರೆ. ಇವರಿಗೆ ಎಲ್ಲಾ ರೀತಿಯಲ್ಲೂ ಅನೇಕ ಹೋರಾಟದ ಸಂಗಾತಿಗಳು ಜೊತೆ ನಿಂತಿದ್ದಾರೆ. ಹೋರಾಟವೂ ಮುಂದುವರೆಯುತ್ತಿದೆ. ಇಂತಹ ಹೊತ್ತಲ್ಲಿ ತಂದೆಯ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅಂಬಣ್ಣ ಮತ್ತು ಅವರ ಕುಟುಂಬಕ್ಕೆ ಬರಲಿ. ನಿಮ್ಮ ದುಃಖದಲ್ಲಿ ನಾವೆಲ್ಲ ಭಾಗಿ, ನಿಮ್ಮ ಜೊತೆಯಲ್ಲಿ ನಾವಿದ್ದೇವೆ” ಎಂದು ಸಂತಾಪ ಸೂಚಿಸಲಾಗಿದೆ.

ಚಿಂತಕರಾದ ಹುಲಿಕುಂಟೆಮೂರ್ತಿಯವರು ಪ್ರತಿಕ್ರಿಯಿಸಿ, “ಒಳಮೀಸಲಾತಿ ಕಾಲ್ನಡಿಗೆ ಜಾಥಾ ತುಮಕೂರಿಗೆ ಬಂದ ದಿನವೇ ಅಂಬಣ್ಣ ಅವರ ತಂದೆ ಆರೋಗ್ಯದಲ್ಲಿ ಹೆಚ್ಚೇ ಏರುಪೇರಾಗಿತ್ತು. ಅಂಬಣ್ಣ ಹೋಗಿ ಜಾಥಾ ನೆಲಮಂಗಲ ತಲುಪುವಷ್ಟರಲ್ಲಿ ಬಂದುಬಿಟ್ಟರು. ಅವರಿಗೆ ತಂದೆಯ ಅನಾರೋಗ್ಯ ಮತ್ತು ಹೋರಾಟದ ದಿಕ್ಕು ಎರಡೂ ತಲೆಯಲ್ಲಿ ಕೊರೆಯುತ್ತಿದ್ದವು. ಜೈಲಿಗೂ ಹೋಗಿಬಂದರು. ಒಳಗಿನ ಕಾರಣಗಳಿಗೆ‌ ಕಣ್ಣೀರು ಹಾಕಿದರು. ಅಪ್ಪ ಅಂಬಣ್ಣನನ್ನು ಬಿಟ್ಟು ಹೋಗೇಬಿಟ್ಟರು. ಅಂತ್ಯಕ್ರಿಯೆ ಮುಗಿಸಿ ಅಂಬಣ್ಣ ನಾಳೆಯೇ ಬೆಂಗಳೂರಿಗೆ ಬರ್ತಿದಾರೆ. ಹೋರಾಟ ನಿಲ್ಲುವುದಿಲ್ಲ” ಎಂದಿದ್ದಾರೆ.

ಮುಖಂಡರಾದ ಉದಯ್ ಅರೋಲಿಕರ್‌ ಅವರು ಅಂಬಣ್ಣ ಅವರ ಪ್ರತಿಕ್ರಿಯೆಯನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ನನ್ನಪ್ಪ ಡಿಸೆಂಬರ್ 11 ರ ಹೋರಾಟಕ್ಕೂ ಮುನ್ನವೇ ಕೊನೆಯುಸಿರು ಬಿಡಬಹುದೆಂಬ ಆತಂಕ ನನ್ನ ಕುಟುಂಬಕ್ಕಿತ್ತು. ಭರವಸೆಯನ್ನು ತಂದೆ ಹುಸಿಗೊಳಿಸಿ ಹೋರಾಟದ ಗಡುವಿಗೆ ಜೀವತುಂಬಿ ಇಂದು ಜೀವ ಬಿಟ್ಟಿದ್ದಾರೆ. ಅಪ್ಪನ ಅಂತಿಮ ಪಯಣಕ್ಕೆ ನಾವುಗಳು ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸೋಣ. ನನ್ನ ತಾಯಿ ನಾನು 11 ವರ್ಷದವನಿದ್ದಾಗಲೇ ಕಾಲರಾಕ್ಕೆ ಬಲಿಯಾದಾಗಿನಿಂದ ನನಗೆ ತಂದೆಯೇ ನನಗೆ ತಾಯಿಯಾಗಿದ್ದರು.  ಮಾರ್ಗದರ್ಶಕನಾಗಿರುವುದಲ್ಲದೇ ನನ್ನ ಹೋರಾಟದ ಹಾದಿಗೆ ಎಂದು ಅಡ್ಡಿಪಡಿಸದೇ ಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದ ನನ್ಪಪ್ಪನದು ಸಹ ಅವಿಶ್ರಾಂತ ಹೋರಾಟದ ದಾರಿಯೆನ್ನುವುದರಲ್ಲಿ ಸಂಶಯವಿಲ್ಲ” ಎಂದು ಅಂಬಣ್ಣ ಸ್ಮರಿಸಿದ್ದಾರೆ.

“ಸಾಲಿ ಮಾಸ್ತಾರನಾಗಬೇಕೆಂಬ ನನ್ನ ತಂದೆಯ ಆಶಯಕ್ಕೆ ತದ್ವಿರುದ್ಧವಾಗಿ ತಮಟೆ ಬಾರಿಸಿದ ನನ್ನ ಮೇಲೆ ಹಾಗೂ ನನ್ನ ಹೋರಾಟದ ಸ್ಫೂರ್ತಿಯಾದ ಪ್ರಜಾಯುದ್ದನೌಕೆ ಗದ್ದರ್ ವಿರುದ್ಧದ ಕೋಪ ಇಂದಿಗೂ ಶಮನವಾಗದಿದ್ದರೂ ನಾನು ನಡೆವ ದಾರಿ ನೂರಾರು ಜನರಿಗೆ ಉಪಯುಕ್ತ ಮಾರ್ಗವೆಂಬ ಖಾತರಿ ಇರುವುದರಿಂದ ನನಗೆ ಸಂಪೂರ್ಣ ವಿನಾಯಿತಿ ಸಿಕ್ಕಿತ್ತು” ಎಂದು ನೆನೆದಿದ್ದಾರೆ.

“ಮೂರು ದಿನಗಳ ಹಿಂದೆ ಹೋರಾಟದ ಒತ್ತಡಗಳ ಮಧ್ಯೆ ಒಮ್ಮೆ ನೋಡಿ ಕಣ್ತುಂಬಿಸಿಕೊಂಡಿದ್ದೆ. ಡಿಸೆಂಬರ್ 11ರ ಕಾರ್ಯಕ್ರಮ ಸಂಪೂರ್ಣ ಯಶಸ್ವಿಯಾಗಿ ಡಿಸೆಂಬರ್‌‌ 19ರ ಅಧಿವೇಶನದಲ್ಲಿ ಒಳಮೀಸಲಾತಿ ಪ್ರಸ್ತಾಪಕ್ಕೆ ಸರ್ಕಾರದ ಗಮನಸೆಳೆಯುವ ಬಿರುಸಿನ ಪ್ರಯತ್ನಕ್ಕಾಗಿ ಇಂದು ಒಡನಾಡಿಗಳು ಖಾಯಂ ಹೋರಾಟದ ಬಿಡಾರ ಸಜ್ಜುಗೊಳಿಸುವ ಪ್ರಯತ್ನದಲ್ಲಿದ್ದೆವು. ಈ ಸಂದರ್ಭದಲ್ಲಿ ನನ್ನ ಪತ್ನಿ ಸುಜಾತಾ ಅಘಾತಕರ ಸುದ್ದಿಯನ್ನು ತಿಳಿಸಿದರು. ರಾಜಧಾನಿಯಿಂದ ರಾಯಚೂರಿಗೆ ಪಯಣ ಬೆಳೆಸಿರುವೆ” ಎಂದು ಹೇಳಿದ್ದಾರೆ.

“ನನ್ನ ಅನುಪಸ್ಥಿತಿಯಲ್ಲಿ ನನ್ನ ಮಡದಿ ಸುಜಾತಳ ಹಾರೈಕೆಯಿಂದಾಗಿ ಅಪ್ಪ ಇಷ್ಟು ವರ್ಷ ನಮ್ಮೊಂದಿಗಿರಲು ಸಾಧ್ಯವಾಗಿದೆ. ಸರ್ಕಾರ ಪ್ರಕಟಿಸಿರುವ ಒಳಮೀಸಲಾತಿ ಕುರಿತ ಉಪಸಮಿತಿ ಹಾಗೂ ಉಪಸಮಿತಿಯ ಮೊದಲ ಸಭೆ ಘೋಷಣೆಯ ಹಿನ್ನೆಲೆಯಲ್ಲಿ ಮುಂದೆ ಹಮ್ಮಿಕೊಳ್ಳಬೇಕಾದ ಹೋರಾಟದ ಹೆಜ್ಜೆಗಳನ್ನು ಅತ್ಯಂತ ಜಾಗರೂಕತೆಯಿಂದ ಮುಂದುವರೆಸೋಣ ಎಂದು ತಮ್ಮಲ್ಲಿ ಕೋರುತ್ತಾ ಅಪ್ಪನ ಅಂತಿಮ ಪಯಣಕ್ಕೆ ಹೋಗಿಬರುವೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...