Homeಕರ್ನಾಟಕಒಳಮೀಸಲಾತಿ ಹೋರಾಟದ ನಾಯಕ ಅಂಬಣ್ಣರವರ ತಂದೆ ಷಣ್ಮುಖಪ್ಪ ನಿಧನ

ಒಳಮೀಸಲಾತಿ ಹೋರಾಟದ ನಾಯಕ ಅಂಬಣ್ಣರವರ ತಂದೆ ಷಣ್ಮುಖಪ್ಪ ನಿಧನ

- Advertisement -
- Advertisement -

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಜಾರಿಯಾಗಬೇಕು ಎಂಬ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ನಾಯಕರಾದ ಅಂಬಣ್ಣ ಅರೋಲಿಕರ್‌ ಅವರ ತಂದೆ ಷಣ್ಮುಖಪ್ಪ ಅರೋಲಿ ನಿಧನರಾಗಿದ್ದಾರೆ.

ಶತಾಯುಷಿಯಾಗಿದ್ದ ಷಣ್ಮುಖಪ್ಪ ಅವರು ವಯೋಸಹಜ ಅನಾರೋಗ್ಯದಲ್ಲಿದ್ದರು. ಮಂಗಳವಾರ ರಾತ್ರಿ ಕೊನೆಯುಸಿರೆಳೆದರು. ಬುಧವಾರ 2.30ಕ್ಕೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಅರೋಲಿಯಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ.

ನಿಧನದ ಕುರಿತು ‘ಒಳಮೀಸಲಾತಿ’ ಫೇಸ್‌ಬುಕ್‌ ಪುಟದಲ್ಲಿ ತಿಳಿಸಲಾಗಿದ್ದು, “ವಯಸ್ಸಾದ, ಅನಾರೋಗ್ಯದಲ್ಲಿದ್ದ ತಂದೆಯನ್ನು ಮನೆಯಲ್ಲಿ ಬಿಟ್ಟು ಶೋಷಿತ, ಅವಕಾಶ ವಂಚಿತ ಜನರ ಹಕ್ಕುಗಳಿಗಾಗಿ ಹಲವಾರು ದಿನ, ನೂರಾರು ಊರು ಕೇರಿ ಸುತ್ತಿ ಅಂಬಣ್ಣ ಅರೋಲಿಕರ್‌‌ ಪಾದಯಾತ್ರೆ ಮಾಡಿದರು. ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಹೋರಾಟದಲ್ಲಿದ್ದ ಅಂಬಣ್ಣ ಅವರ ತಂದೆ ಈಗ ನಮ್ಮನ್ನ ಅಗಲಿದ್ದಾರೆ. ಇವರಿಗೆ ಎಲ್ಲಾ ರೀತಿಯಲ್ಲೂ ಅನೇಕ ಹೋರಾಟದ ಸಂಗಾತಿಗಳು ಜೊತೆ ನಿಂತಿದ್ದಾರೆ. ಹೋರಾಟವೂ ಮುಂದುವರೆಯುತ್ತಿದೆ. ಇಂತಹ ಹೊತ್ತಲ್ಲಿ ತಂದೆಯ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅಂಬಣ್ಣ ಮತ್ತು ಅವರ ಕುಟುಂಬಕ್ಕೆ ಬರಲಿ. ನಿಮ್ಮ ದುಃಖದಲ್ಲಿ ನಾವೆಲ್ಲ ಭಾಗಿ, ನಿಮ್ಮ ಜೊತೆಯಲ್ಲಿ ನಾವಿದ್ದೇವೆ” ಎಂದು ಸಂತಾಪ ಸೂಚಿಸಲಾಗಿದೆ.

ಚಿಂತಕರಾದ ಹುಲಿಕುಂಟೆಮೂರ್ತಿಯವರು ಪ್ರತಿಕ್ರಿಯಿಸಿ, “ಒಳಮೀಸಲಾತಿ ಕಾಲ್ನಡಿಗೆ ಜಾಥಾ ತುಮಕೂರಿಗೆ ಬಂದ ದಿನವೇ ಅಂಬಣ್ಣ ಅವರ ತಂದೆ ಆರೋಗ್ಯದಲ್ಲಿ ಹೆಚ್ಚೇ ಏರುಪೇರಾಗಿತ್ತು. ಅಂಬಣ್ಣ ಹೋಗಿ ಜಾಥಾ ನೆಲಮಂಗಲ ತಲುಪುವಷ್ಟರಲ್ಲಿ ಬಂದುಬಿಟ್ಟರು. ಅವರಿಗೆ ತಂದೆಯ ಅನಾರೋಗ್ಯ ಮತ್ತು ಹೋರಾಟದ ದಿಕ್ಕು ಎರಡೂ ತಲೆಯಲ್ಲಿ ಕೊರೆಯುತ್ತಿದ್ದವು. ಜೈಲಿಗೂ ಹೋಗಿಬಂದರು. ಒಳಗಿನ ಕಾರಣಗಳಿಗೆ‌ ಕಣ್ಣೀರು ಹಾಕಿದರು. ಅಪ್ಪ ಅಂಬಣ್ಣನನ್ನು ಬಿಟ್ಟು ಹೋಗೇಬಿಟ್ಟರು. ಅಂತ್ಯಕ್ರಿಯೆ ಮುಗಿಸಿ ಅಂಬಣ್ಣ ನಾಳೆಯೇ ಬೆಂಗಳೂರಿಗೆ ಬರ್ತಿದಾರೆ. ಹೋರಾಟ ನಿಲ್ಲುವುದಿಲ್ಲ” ಎಂದಿದ್ದಾರೆ.

ಮುಖಂಡರಾದ ಉದಯ್ ಅರೋಲಿಕರ್‌ ಅವರು ಅಂಬಣ್ಣ ಅವರ ಪ್ರತಿಕ್ರಿಯೆಯನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ನನ್ನಪ್ಪ ಡಿಸೆಂಬರ್ 11 ರ ಹೋರಾಟಕ್ಕೂ ಮುನ್ನವೇ ಕೊನೆಯುಸಿರು ಬಿಡಬಹುದೆಂಬ ಆತಂಕ ನನ್ನ ಕುಟುಂಬಕ್ಕಿತ್ತು. ಭರವಸೆಯನ್ನು ತಂದೆ ಹುಸಿಗೊಳಿಸಿ ಹೋರಾಟದ ಗಡುವಿಗೆ ಜೀವತುಂಬಿ ಇಂದು ಜೀವ ಬಿಟ್ಟಿದ್ದಾರೆ. ಅಪ್ಪನ ಅಂತಿಮ ಪಯಣಕ್ಕೆ ನಾವುಗಳು ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸೋಣ. ನನ್ನ ತಾಯಿ ನಾನು 11 ವರ್ಷದವನಿದ್ದಾಗಲೇ ಕಾಲರಾಕ್ಕೆ ಬಲಿಯಾದಾಗಿನಿಂದ ನನಗೆ ತಂದೆಯೇ ನನಗೆ ತಾಯಿಯಾಗಿದ್ದರು.  ಮಾರ್ಗದರ್ಶಕನಾಗಿರುವುದಲ್ಲದೇ ನನ್ನ ಹೋರಾಟದ ಹಾದಿಗೆ ಎಂದು ಅಡ್ಡಿಪಡಿಸದೇ ಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದ ನನ್ಪಪ್ಪನದು ಸಹ ಅವಿಶ್ರಾಂತ ಹೋರಾಟದ ದಾರಿಯೆನ್ನುವುದರಲ್ಲಿ ಸಂಶಯವಿಲ್ಲ” ಎಂದು ಅಂಬಣ್ಣ ಸ್ಮರಿಸಿದ್ದಾರೆ.

“ಸಾಲಿ ಮಾಸ್ತಾರನಾಗಬೇಕೆಂಬ ನನ್ನ ತಂದೆಯ ಆಶಯಕ್ಕೆ ತದ್ವಿರುದ್ಧವಾಗಿ ತಮಟೆ ಬಾರಿಸಿದ ನನ್ನ ಮೇಲೆ ಹಾಗೂ ನನ್ನ ಹೋರಾಟದ ಸ್ಫೂರ್ತಿಯಾದ ಪ್ರಜಾಯುದ್ದನೌಕೆ ಗದ್ದರ್ ವಿರುದ್ಧದ ಕೋಪ ಇಂದಿಗೂ ಶಮನವಾಗದಿದ್ದರೂ ನಾನು ನಡೆವ ದಾರಿ ನೂರಾರು ಜನರಿಗೆ ಉಪಯುಕ್ತ ಮಾರ್ಗವೆಂಬ ಖಾತರಿ ಇರುವುದರಿಂದ ನನಗೆ ಸಂಪೂರ್ಣ ವಿನಾಯಿತಿ ಸಿಕ್ಕಿತ್ತು” ಎಂದು ನೆನೆದಿದ್ದಾರೆ.

“ಮೂರು ದಿನಗಳ ಹಿಂದೆ ಹೋರಾಟದ ಒತ್ತಡಗಳ ಮಧ್ಯೆ ಒಮ್ಮೆ ನೋಡಿ ಕಣ್ತುಂಬಿಸಿಕೊಂಡಿದ್ದೆ. ಡಿಸೆಂಬರ್ 11ರ ಕಾರ್ಯಕ್ರಮ ಸಂಪೂರ್ಣ ಯಶಸ್ವಿಯಾಗಿ ಡಿಸೆಂಬರ್‌‌ 19ರ ಅಧಿವೇಶನದಲ್ಲಿ ಒಳಮೀಸಲಾತಿ ಪ್ರಸ್ತಾಪಕ್ಕೆ ಸರ್ಕಾರದ ಗಮನಸೆಳೆಯುವ ಬಿರುಸಿನ ಪ್ರಯತ್ನಕ್ಕಾಗಿ ಇಂದು ಒಡನಾಡಿಗಳು ಖಾಯಂ ಹೋರಾಟದ ಬಿಡಾರ ಸಜ್ಜುಗೊಳಿಸುವ ಪ್ರಯತ್ನದಲ್ಲಿದ್ದೆವು. ಈ ಸಂದರ್ಭದಲ್ಲಿ ನನ್ನ ಪತ್ನಿ ಸುಜಾತಾ ಅಘಾತಕರ ಸುದ್ದಿಯನ್ನು ತಿಳಿಸಿದರು. ರಾಜಧಾನಿಯಿಂದ ರಾಯಚೂರಿಗೆ ಪಯಣ ಬೆಳೆಸಿರುವೆ” ಎಂದು ಹೇಳಿದ್ದಾರೆ.

“ನನ್ನ ಅನುಪಸ್ಥಿತಿಯಲ್ಲಿ ನನ್ನ ಮಡದಿ ಸುಜಾತಳ ಹಾರೈಕೆಯಿಂದಾಗಿ ಅಪ್ಪ ಇಷ್ಟು ವರ್ಷ ನಮ್ಮೊಂದಿಗಿರಲು ಸಾಧ್ಯವಾಗಿದೆ. ಸರ್ಕಾರ ಪ್ರಕಟಿಸಿರುವ ಒಳಮೀಸಲಾತಿ ಕುರಿತ ಉಪಸಮಿತಿ ಹಾಗೂ ಉಪಸಮಿತಿಯ ಮೊದಲ ಸಭೆ ಘೋಷಣೆಯ ಹಿನ್ನೆಲೆಯಲ್ಲಿ ಮುಂದೆ ಹಮ್ಮಿಕೊಳ್ಳಬೇಕಾದ ಹೋರಾಟದ ಹೆಜ್ಜೆಗಳನ್ನು ಅತ್ಯಂತ ಜಾಗರೂಕತೆಯಿಂದ ಮುಂದುವರೆಸೋಣ ಎಂದು ತಮ್ಮಲ್ಲಿ ಕೋರುತ್ತಾ ಅಪ್ಪನ ಅಂತಿಮ ಪಯಣಕ್ಕೆ ಹೋಗಿಬರುವೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...