Homeಕರ್ನಾಟಕನಿಮಾನ್ಸ್‌‌ ನೇಮಕಾತಿ ಪ್ರಕಟಣೆ: ಮೇಲ್ಜಾತಿಗೆ ಶೇ.64ರಷ್ಟು ಹುದ್ದೆ ಸಿಗುವಂತೆ ಹಂಚಿಕೆ- ಆರೋಪ

ನಿಮಾನ್ಸ್‌‌ ನೇಮಕಾತಿ ಪ್ರಕಟಣೆ: ಮೇಲ್ಜಾತಿಗೆ ಶೇ.64ರಷ್ಟು ಹುದ್ದೆ ಸಿಗುವಂತೆ ಹಂಚಿಕೆ- ಆರೋಪ

50% ಜನಸಂಖ್ಯೆಗೆ ಕೇವಲ 9 ಹುದ್ದೆಗಳನ್ನು ನೀಡಿ, ಬೆರಳೆಣಿಯಷ್ಟಿರುವ ಜಾತಿಗೆ 16 ಹುದ್ದೆಗಳನ್ನು ನೀಡಲಾಗುತ್ತಿದೆ ಎಂಬ ಆರೋಪ ಬಂದಿದೆ.

- Advertisement -
- Advertisement -

ಬೆಂಗಳೂರಿನಲ್ಲಿರುವ ಪ್ರತಿಷ್ಟಿತ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮಾನ್ಸ್‌‌) ನೀಡಿರುವ ನೇಮಕಾತಿ ಪ್ರಕಟಣೆಯು ಅನ್ಯಾಯದಿಂದ ಕೂಡಿದೆ ಎಂಬ ಆಕ್ಷೇಪ ವ್ಯಕ್ತವಾಗಿದೆ.

ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯಗಳಿಗೆ ಅನ್ಯಾಯ ಎಸಗುವಂತೆ ಮೀಸಲಾತಿ ಹಂಚಿಕೆ ಮಾಡಲಾಗಿದ್ದು, ಸ್ಪಶ್ಯ ಮೇಲ್ಜಾತಿಗಳಿಗೆ ಮುಖ್ಯವಾಗಿ ಬ್ರಾಹ್ಮಣರಿಗೆ ಹೆಚ್ಚಿನ ಸ್ಥಾನಗಳು ಲಭಿಸಲಿವೆ. ಇದು ಸಂಘಪರಿವಾರದ ಸಾಮಾಜಿಕ ನ್ಯಾಯ ಎಂದು ಚಿಂತಕರು ಆರೋಪಿಸಿದ್ದಾರೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕಾನಾಥ್ ಅವರು ಈ ಕುರಿತು ಫೇಸ್‌ಬುಕ್‌ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದು, “ಬೆಂಗಳೂರಿನಲ್ಲಿರುವ ಪ್ರತಿಷ್ಟಿತ ನಿಮಾನ್ಸ್‌ನಲ್ಲಿ ವಿವಿಧ ವಿಭಾಗಗಳಲ್ಲಿ ಕೆಲಸಮಾಡಲು, ಪ್ರೊಫೆಸರ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಇಂದು ನೋಟಿಫಿಕೇಶನ್ ಪ್ರಕಟವಾಗಿದೆ. ಇಲ್ಲಿ ಒಟ್ಟಾರೆ 25 ಹುದ್ದೆಗಳಿವೆ. ಇದರಲ್ಲಿ 11 ಹುದ್ದೆಗಳನ್ನು ಯುಆರ್‌‌ (unreserved) ಅಡಿ ನೀಡಲಾಗಿದೆ. ಅಂದರೆ ಜನರಲ್ ಕ್ಯಾಟಗರಿಯವರು ತೆಗೆದುಕೊಳ್ಳುತ್ತಾರೆ. ಈ ‘ಜನರಲ್’ನಲ್ಲಿ ಈ ಹುದ್ದೆಗಳನ್ನು ಯಾರು ಪಡೆಯುತ್ತಾರೆಂದು ವಿವರಿಸಬೇಕಿಲ್ಲ” ಎಂದು ತಿಳಿಸಿದ್ದಾರೆ.

“ಮಿಕ್ಕಂತೆ 5 ಪೋಸ್ಟ್‌ಗಳನ್ನು ಇಡಬ್ಲ್ಯೂಎಸ್‌ (ಆರ್ಥಿಕವಾಗಿ ಹಿಂದುಳಿದ ವರ್ಗ) ಮೀಸಲು ಮಾಡಲಾಗಿದೆ. ಅಂದರೆ ಮೇಲ್ಜಾತಿ ಮತ್ತು ಮೇಲ್ಜಾತಿ ‘ಬಡವರಿಗೆ’ ಒಟ್ಟು 16 ಹುದ್ದೆಗಳು, ಮಿಕ್ಕಂತೆ ಒಬಿಸಿಗೆಗಳಿಗೆ 5, ಎಸ್‌ಸಿಗೆ 3, ಮತ್ತು ಎಸ್‌ಟಿಗೆ 1 ಪೋಸ್ಟ್ ಅನ್ನು ನೀಡಲಾಗಿದೆ. ಅಂದರೆ ಒಟ್ಟು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಸೇರಿ 50% ಜನಸಂಖ್ಯೆಗೆ ಕೇವಲ 9 ಹುದ್ದೆಗಳು. ಹೇಗಿದೆ ಸಂಘಪರಿವಾರ ಸರ್ಕಾರದ ‘ಸಾಮಾಜಿಕ ನ್ಯಾಯ!?’ ಅಲ್ಲಿ ಜೀತ ಮಾಡುತ್ತಿರುವ, ಚೆಡ್ಡಿ ಹೊರುತ್ತಿರುವ ನಮ್ಮ ಎಸ್‌ಸಿ, ಎಸ್‌ಟಿ, ಒಬಿಸಿ ಗೇಟ್ ಕೀಪರ್‌ಗಳಿಗೆ ಈ ಸೂಕ್ಷ್ಮ ಅರ್ಥವಾದಂತಿಲ್ಲ. ಅಕಸ್ಮಾತ್ ಅರ್ಥವಾದರೂ ಬಾಯಿಗೆ ಲಕ್ವ ಬಡಿದವರಂತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಚಿಂತಕರಾದ ಶ್ರೀಪಾದ್ ಭಟ್ ಅವರು ನಿಮಾನ್ಸ್‌‌ ನೇಮಕಾತಿಗೆ ಸಂಬಂಧಿಸಿದಂತೆ ಎದ್ದಿರುವ ಆಕ್ಷೇಪಗಳಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು. “ಇಡಬ್ಲ್ಯೂಎಸ್‌ ಅಡಿ ಬರುವ ಜಾತಿಗಳ ಅಧಿಕೃತ ಪಟ್ಟಿಯನ್ನೇ ಕರ್ನಾಟಕ ಸರ್ಕಾರ ಈವರೆಗೆ ಬಿಡುಗಡೆ ಮಾಡಿಲ್ಲ. ಹೀಗಿರುವಾಗ ಇಡಬ್ಲ್ಯೂಎಸ್‌‌ ಹೇಗೆ ಕೊಡುತ್ತಾರೆ?” ಎಂದು ಪ್ರಶ್ನಿಸಿದರು.

“ರಾಜ್ಯದಲ್ಲಿ ಇಡಬ್ಲ್ಯೂಎಸ್‌ ಅಡಿ ಫಲಾನುಭವಿಗಳಾಗುವುದು ಬ್ರಾಹ್ಮಣರು ಮಾತ್ರ. ಉಳಿದಂತೆ ನಾಯರ್‌ಗಳು, ಮೊದಲಿಯಾರ್‌ಗಳು, ಕೋಮ್ಟ ಶೆಟ್ಟರು, ಮಾರ್ವಾಡಿಗಳು ಅರ್ಜಿ ಸಲ್ಲಿಸುವುದು ಅನುಮಾನ. ಹೀಗಾಗಿ ಇಡಬ್ಲ್ಯೂಎಸ್‌ನ ಐದು ಪೋಸ್ಟ್‌ಗಳನ್ನೂ ಬ್ರಾಹ್ಮಣರೇ ಪಡೆದುಕೊಳ್ಳುತ್ತಾರೆ” ಎಂದು ವಿವರಿಸಿದರು.

“ಇಡಬ್ಲ್ಯೂಎಸ್‌ಗೆ ನೀಡಿರುವ ಐದು ಪೋಸ್ಟ್‌ಗಳನ್ನು ಎಲ್ಲಿಂದ ಕಿತ್ತುಕೊಂಡಿದ್ದಾರೆ? ಹಿಂದೆ ಎಸ್‌ಸಿ, ಎಸ್‌ಟಿ, ಒಬಿಸಿ, ಜನರಲ್ ಕ್ಯಾಟಗರಿಗಳಿಗೆ ಎಷ್ಟು ಸ್ಥಾನಗಳು ಮೀಸಲಾಗಿದ್ದವು? ಇಡಬ್ಲ್ಯೂಎಸ್‌ಗಾಗಿ ಹೊಸ ಪೋಸ್ಟ್‌ಗಳನ್ನು ಸೃಷ್ಟಿ ಮಾಡಿದ್ದಾರಾ? ಅಥವಾ ಎಸ್‌ಸಿ, ಎಸ್‌ಟಿ, ಒಬಿಸಿಗಳ ಪ್ರಾತಿನಿಧ್ಯವನ್ನು ಕಡಿಮೆ ಮಾಡಿ ಇಡಬ್ಲ್ಯೂಎಸ್‌ ಕೋಟಾ ನೀಡಿದ್ದಾರಾ?- ಈ ಮಾಹಿತಿಗಳು ಸಾರ್ವಜನಿಕವಾಗಿ ಲಭ್ಯವಾಗಬೇಕು” ಎಂದು ಆಗ್ರಹಿಸಿದರು.

 ಇದನ್ನೂ ಓದಿರಿ: EWS: ದಲಿತ-ಶೂದ್ರರ ಮೀಸಲಾತಿಯ ಕ್ರಾಂತಿಗೆ ಬ್ರಾಹ್ಮಣ್ಯದ ಪ್ರತಿಕ್ರಾಂತಿ

“ಬ್ರಾಹ್ಮಣೇತರ ಜಾತಿಗಳ ಅಭ್ಯರ್ಥಿಗಳು ಕೂಡ ಜನರಲ್‌ ಕ್ಯಾಟಗರಿಯಲ್ಲಿ ಸ್ಪರ್ಧಿಸುತ್ತಾರೆ. ಆದರೆ ಸಂದರ್ಶನಗಳಲ್ಲಿ ಮೇಲ್ಜಾತಿ ವ್ಯಕ್ತಿಗಳೇ ಕೂತಿರುತ್ತಾರೆ. ಹೀಗಾಗಿ ಅನೇಕ ಸಂದರ್ಭದಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಜಾತಿಗಳ ವ್ಯಕ್ತಿಗಳನ್ನು ವ್ಯವಸ್ಥಿತಿವಾಗಿ ಹೊರಗೆ ಹಾಕಲಾಗುತ್ತದೆ. ತಾಂತ್ರಿಕ ಕಾರಣವನ್ನೋ, ಮತ್ಯಾವುದೋ ತಕರಾರರನ್ನೋ ತೆಗೆದು ಈಗಿರುವ 11 ಸ್ಥಾನಗಳೂ ಬ್ರಾಹ್ಮಣರಿಗೆ ಸಿಗುವಂತೆ ನೋಡಿಕೊಳ್ಳುತ್ತಾರೆ. ಇಡಬ್ಲ್ಯೂಎಸ್‌ ಮತ್ತು ಜನರಲ್ ಕ್ಯಾಟಗರಿ ಸೇರಿ 16 ಪೋಸ್ಟ್‌ಗಳನ್ನು ಬ್ರಾಹ್ಮಣರೇ ಪಡೆದುಕೊಳ್ಳುತ್ತಾರೆ” ಎಂದು ವಿಷಾದಿಸಿದರು.

ಚಿಂತಕರು ಆರೋಪಿಸುತ್ತಿರುವಂತೆ 25 ಪೋಸ್ಟ್‌ಗಳಲ್ಲಿ 16 ಹುದ್ದೆಗಳು ಬ್ರಾಹ್ಮಣರಿಗೆ ಹೋದರೆ ಶೇ. 64ರಷ್ಟು ಸ್ಥಾನಗಳು ಒಂದು ಜಾತಿಗೆ ಸಿಕ್ಕಂತಾಗುತ್ತದೆ. ಈಗ ಸಾರ್ವಜನಿಕವಾಗಿ ಚರ್ಚೆಯಲ್ಲಿರುವ ಅಂಕಿ-ಅಂಶದ ಪ್ರಕಾರ ಶೇ. 2ರಷ್ಟಿರುವ ಬ್ರಾಹ್ಮಣರಿಗೆ 64ರಷ್ಟು ಅವಕಾಶ ನೀಡಿದಂತಾಗುತ್ತದೆ. ಒಂದು ವೇಳೆ ಇಡಬ್ಲೂಎಸ್‌ ಅಡಿ ಬರುವ ಇತರ ಸಮುದಾಯದಲ್ಲಿ ಯಾರಾದರೂ ಅರ್ಜಿ ಹಾಕಿದರೂ ಶೇ. 90ರಷ್ಟು ಫಲಾನುಭವಿಗಳು ಬ್ರಾಹ್ಮಣರೇ ಆಗಿರುತ್ತಾರೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. 50% ಜನಸಂಖ್ಯೆಗೆ ಕೇವಲ 9 ಹುದ್ದೆಗಳನ್ನು ನೀಡಿ, ಶೇ. 2ರಷ್ಟಿರುವ ಜಾತಿಗೆ 16 ಹುದ್ದೆಗಳನ್ನು ನೀಡಲಾಗುತ್ತಿದೆ ಎಂಬ ವಾದ ಮುನ್ನೆಲೆಗೆ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಅಹಿಂದ ವರ್ಗದವರು ಒಗ್ಗಟ್ಟಿನಿಂದ ಇಂತಹ ಅನ್ಯಾಯಗಳನ್ನು ಪ್ರತಿಬಟಿಸಬೇಕು.

  2. ಅಂದರೆ ದ್ವಾರಕಾನಾಥ್ ಪ್ರಕಾರ ಬ್ರಾಹ್ಮಣರನ್ನು ಬಿಟ್ಟರೆ ಬೇರೆಯವರಲ್ಲಿ ಪ್ರತಿಭೆ ಇಲ್ಲ ಹಾಗಾಗಿ ಜೆನರಲ್ ಕೆಟೊಗರಿಯ ಎಲ್ಲಾ ಹುದ್ದೆಗಳೂ ಬ್ರಾಹ್ಮಣರ ಪಾಲಾಗುತ್ತವೆ ಎನ್ನುವ ವಾದ ಎಷ್ಟು ಸಾರಿ? ಇದು ಬ್ರಾಹ್ಮಣ ಏತರರಿಗೆ ಮಾಡುವ ಅವಮಾನ ಅಲ್ಲವೇ?

LEAVE A REPLY

Please enter your comment!
Please enter your name here

- Advertisment -

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...