Homeಕರ್ನಾಟಕಆಹಾರ ಸಂಘರ್ಷಗಳ ಹಿಂದೆ ವೈದಿಕರ ಹುನ್ನಾರವಿರುತ್ತದೆ - ಕೆ.ನೀಲಾ

ಆಹಾರ ಸಂಘರ್ಷಗಳ ಹಿಂದೆ ವೈದಿಕರ ಹುನ್ನಾರವಿರುತ್ತದೆ – ಕೆ.ನೀಲಾ

- Advertisement -
- Advertisement -

ಲಿಂಗಾಯಿತ ಧರ್ಮವು ಮಾಂಸಾಹಾರಿಗಳನ್ನೂ ಒಪ್ಪುವ ಮೂಲಕ ಆಹಾರ ಸಂಸ್ಕೃತಿಯ ವಿಚಾರದಲ್ಲಿ ಪ್ರಜಾತಾಂತ್ರಿಕವಾಗಿರುತ್ತದೆಯೇ ಎಂಬ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕರ್ನಾಟಕದ ಆಹಾರ ಸಂಸ್ಕೃತಿ ಮತ್ತು ಯಾವುದು ಮೇಲು ಯಾವುದು ಕೀಳು ಎಂಬುದರಲ್ಲೇ ಶ್ರೇಣೀಕರಣವನ್ನು ಪ್ರತಿಪಾದಿಸುವ ಈ ದೇಶದಲ್ಲಿ ಇಂತಹ ಚರ್ಚೆಗಳು ಬರುವುದು, ಬರಬೇಕಾದದ್ದು ಸಹಜ. ಆದರೆ, ಈ ಸದ್ಯ ಅದು ಎದ್ದಿರುವ ಸಂದರ್ಭ ಹಾಗೂ ಅದರ ಟಾರ್ಗೆಟ್ ಸರಿಯಿಲ್ಲ ಎಂಬ ಅನಿಸಿಕೆಗಳೂ ಇವೆ. ಈ ಹಿನ್ನೆಲೆಯಲ್ಲಿ ವಿವಿಧ ಚಿಂತಕರನ್ನು ಪತ್ರಿಕೆಯು ಮಾತಾಡಿಸಿತು.

ಆಹಾರ ಕ್ರಮದ ಬಗ್ಗೆ ಚರ್ಚೆ ಹೊಸದೂ ಅಲ್ಲ, ಅಚ್ಚರಿ ಪಡುವಂಥದ್ದೂ ಅಲ್ಲ. ಇದರ ಹಿಂದೆ ಜನರನ್ನು ವಿಂಗಡಿಸುವ, ಶ್ರಮಿಕ ವರ್ಗವನ್ನು ಟೊಳ್ಳಾಗಿಸುವ ಸಂಕೀರ್ಣ ಐತಿಹಾಸಿಕ ಜಾಲ ಇರೋದ್ರಿಂದ ಇದು ಆಗಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತೆ. ವೈದಿಕ ಆಹಾರ ಪರಂಪರೆ ಮತ್ತು ಶ್ರಮಿಕ ಆಹಾರ ಪರಂಪರೆಗಳ ನಡುವೆ ನಿರಂತರವಾಗಿ ಸಂಘರ್ಷ ನಡೆಯುತ್ತಲೇ ಬಂದಿದೆ.

ವಚನಕಾರರ ಕಾಲಘಟ್ಟದಲ್ಲೂ ಎದುರಾದ ಈ ಆಹಾರ ಸಾಂಸ್ಕೃತಿಕ ಮುಖಾಮುಖಿಯ ಸ್ಪಷ್ಟ ದೃಷ್ಟಾಂತ, ಕಣ್ಣೋಟ ನಮಗೆ ಹರಿಹರ ರಗಳೆಯ ಉಳ್ಳಿ ಪರ್ವದಲ್ಲಿ ಕಾಣಸಿಗುತ್ತದೆ. ಒಮ್ಮೆ ಮಹಾಮನೆಯಲ್ಲಿ ದಾಸೋಹದ ತಯಾರಿ ನಡೆಯುತ್ತಿದ್ದಾಗ ತಳಸಮುದಾಯದ ಆಹಾರ ಪದಾರ್ಥಗಳಾದ ಈರುಳ್ಳಿ, ಬೆಳ್ಳುಳ್ಳಿ, ಹಸೀಶುಂಠಿ ಉಪಯೋಗಿಸಿ ಆಹಾರ ಸಿದ್ದಪಡಿಸಲಾಗುತ್ತಿರುತ್ತೆ. ಅದೇ ಮಾರ್ಗವಾಗಿ ಬರುವ ಬಸವಣ್ಣ ಆ ವಾಸನೆ ಅಹಿತವೆನಿಸಿ, ಮೂಗು ಮುಚ್ಚಿಕೊಳ್ಳುತ್ತಾರೆ. ಬಿಸಿಲಿನಲ್ಲಿ ದುಡಿಯುವ ಶ್ರಮಜೀವಿಗಳಿಗೆ ಪೌಷ್ಠಿಕತೆ ತಂದುಕೊಡುವ ತಮ್ಮ ಆಹಾರದ ಬಗ್ಗೆ ಬಸವಣ್ಣ ಕೀಳಾಗಿ ಕಂಡಿದ್ದಾರೆ ಎಂದು ಕೋಪಿಸಿಕೊಳ್ಳುವ ಅಡುಗೆ ಮಾಡುತ್ತಿದ್ದ ಶರಣ, ಮಹಾಮನೆಯಿಂದ ಹೊರಟುಹೋಗುತ್ತಾರೆ. ಕೊನೆಗೆ ತನ್ನ ತಪ್ಪಿನ ಅರಿವಾದ ಬಸವಣ್ಣ, ಈರುಳ್ಳಿ ಖಾದ್ಯಗಳು, ಈರುಳ್ಳಿಯಿಂದ ಅಲಂಕರಿಸಿದ ಎತ್ತಿನಬಂಡಿಯ ಸಹಿತ ಆ ಶರಣರ ಬಳಿಹೋಗಿ ಕ್ಷಮೆ ಬೇಡುತ್ತಾರೆ. ಇದು ಆಹಾರ ಕ್ರಮದ ಬಗ್ಗೆ ಮಹಾಮನೆಯಲ್ಲಿ ತಳೆದಿದ್ದ ನಿಲುವು.

ಮಹಾಮನೆ ಎನ್ನುವುದೇ ನಿರಂತರ ಜಿಜ್ಞಾಸೆ, ಚರ್ಚೆಗಳ ಕೂಟವಾಗಿತ್ತು. ತಂತ್ರಜ್ಞಾನವೇ ಇಲ್ಲದ ಆ ಕಾಲಘಟ್ಟದಲ್ಲೂ ಶರಣರು ವೈಜ್ಞಾನಿಕ, ಜನಪರ ನಿಲುವುಗಳನ್ನು ತಳೆಯಲು ಸಾಧ್ಯವಾದದ್ದು ಅಂತಹ ಮುಕ್ತ ಸಂವಾದಗಳಿಂದ. ಅಂತಹ ಸಂವಾದ ಆಹಾರ ಕ್ರಮದಲ್ಲೂ ಏರ್ಪಟ್ಟಿತ್ತು. ಮೇಲ್ಜಾತಿಗಳಿಂದ ಬಂದ ವಚನಕಾರರು ಸಸ್ಯಾಹಾರವನ್ನು ಪ್ರತಿಪಾದಿಸಿದರೆ, ಶ್ರಮಿಕ ವರ್ಗದ ವಚನಕಾರರು ತಮ್ಮ ಮಾಂಸಾಹಾರ ಪದ್ಧತಿಯನ್ನು ಪ್ರತಿಪಾದಿಸಿಕೊಂಡಿದ್ದರು. ಅಂತಹ ಸಂವಾದದ ಅಂತಿಮ ತೀರ್ಮಾನವನ್ನು ಮೇಲೆ ಉಲ್ಲೇಖಿಸಲಾದ ದೃಷ್ಟಾಂತದಿಂದ ಅರ್ಥ ಮಾಡಿಕೊಳ್ಳಬಹುದು. ವಚನಕಾರರು ಯಾವುದೇ ಬಗೆಯ ಆಹಾರ ಪದ್ಧತಿಯ ಹೇವರಿಕೆ ಅಥವಾ ಅವೈಜ್ಞಾನಿಕ ಅಭಿಪ್ರಾಯಗಳನ್ನು ಇಟ್ಟುಕೊಂಡಿರಲಿಲ್ಲ. ಅಂತಿಮವಾಗಿ ಆಹಾರದ ಆಯ್ಕೆಯನ್ನು ಆಯಾ ಪ್ರದೇಶದ ಲಭ್ಯತೆ ಮತ್ತು ಅವಶ್ಯಕತೆಯ ಭಾಗವಾಗಿ ಅವರು ಗೌರವಿಸಿದ್ದರೇ ವಿನಾಃ ಅದನ್ನು ಮೇಲು-ಕೀಳರಿಮೆಯ ಮಾನದಂಡವಾಗಿ ಕಂಡಿರಲಿಲ್ಲ. ಬಸವಣ್ಣನವರ `ಎಡದ ಕೈಯಲ್ಲಿ……..’ ವಚನವೇ ಇದಕ್ಕೆ ಸಾಕ್ಷಿ.

ಅನುಭವ ಮಂಟಪದಲ್ಲಿ ನಡೆಯುತ್ತಿದ್ದ ಚಿಂತನಾ ಪ್ರಧಾನವಾದ ಚರ್ಚೆಗಳು ಶ್ರಮಿಕ ಲೋಕದ ಬದುಕಿಗೆ ಹತ್ತಿರ ಅನಿಸುತ್ತಿದ್ದವು, ಯಾಕೆಂದರೆ ಅವು ವೈಜ್ಞಾನಿಕ ಚಿಂತನೆಗಳಾಗಿರುತ್ತಿದ್ದವು. ಮೌಢ್ಯದಿಂದ ಹೊರಬರುವುದೇ ವಚನಸಾಹಿತ್ಯದ ಆಶಯವಾಗಿರುವುದರಿಂದ ಅಲ್ಲಿ ಆಹಾರದ ಬಗೆಗಿನ ತಾರತಮ್ಯದ ನಿಲುವನ್ನು ಹುಡುಕ ಹೊರಡುವುದೇ ಅತಾರ್ಕಿಕವಾದುದು, ಅವಾಸ್ತವಿಕವಾದುದು. ಈ ಆಹಾರ ಸಂಸ್ಕøತಿಯ ಮುಖಾಮುಖಿಯ ಹಿಂದೆ ಮತೀಯ ಅಜೆಂಡಾವಿರುತ್ತೆ. ಆಹಾರದ ಹೆಸರಿನಲ್ಲಿ ಜನರನ್ನು ಬೇರ್ಪಡಿಸುವ, ಜನರಲ್ಲಿ ಕೀಳರಿಮೆ ಮೂಡಿಸಿ ಅವರೊಳಗೇ ತಿರಸ್ಕಾರ ಭಾವನೆ ಮೂಡಿಸುವ ವೈದಿಕಾ ಚಿಂತನಾ ಕ್ರಮ ಕೆಲಸ ಮಾಡಿರುತ್ತದೆ. ವೈದಿಕ ಹುನ್ನಾರಗಳನ್ನು ಖಂಡತುಂಡವಾಗಿ ಧಿಕ್ಕರಿಸುವ ಸಲುವಾಗಿ ಹುಟ್ಟಿಕೊಂಡ ವಚನಕ್ರಾಂತಿ, ಆಹಾರದ ಕುರಿತು ತಾರತಮ್ಯ ಹೊಂದಿತ್ತೆನ್ನುವುದೇ ಬಾಲಿಶವಾದುದು.

– ಕೆ.ನೀಲಾ, ಚಿಂತಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...