Homeಮುಖಪುಟಅರುಣಾಚಲ ಪ್ರದೇಶ ಗಡಿಯಲ್ಲಿ ಭಾರತ-ಚೀನಾ ಸೈನಿಕರ ಘರ್ಷಣೆ: ಇದುವರೆಗೂ ನಡೆದಿದ್ದೇನು?

ಅರುಣಾಚಲ ಪ್ರದೇಶ ಗಡಿಯಲ್ಲಿ ಭಾರತ-ಚೀನಾ ಸೈನಿಕರ ಘರ್ಷಣೆ: ಇದುವರೆಗೂ ನಡೆದಿದ್ದೇನು?

ಮೋದಿ ಸರ್ಕಾರದ "ಕೆಂಪು ಕಣ್ಣು" ಚೀನಾದ ಕನ್ನಡಕದಿಂದ ಮುಚ್ಚಲ್ಪಟ್ಟಿದೆ. ಭಾರತದ ಸಂಸತ್ತಿನಲ್ಲಿ ಚೀನಾದ ವಿರುದ್ಧ ಮಾತನಾಡಲು ಅವಕಾಶವಿಲ್ಲವೇ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

- Advertisement -
- Advertisement -

ಮತ್ತೊಮ್ಮೆ ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಸಂಘರ್ಷ ಏರ್ಪಟ್ಟಿದೆ. ಭಾರತದ ಗಡಿ ದಾಟಿ ಚೀನಿ ಸೈನಿಕರು ಒಳನುಗ್ಗಿದ್ದನ್ನು ಭಾರತದ ಸೈನಿಕರು ಹಿಮ್ಮೆಟ್ಟಿಸಿದ್ದಾರೆ. ಈ ಸಂದರ್ಭದಲ್ಲಿ ಸಂಘರ್ಷ ಏರ್ಪಟ್ಟು ಹಲವು ಸೈನಿಕರಿಗೆ ಗಾಯಗಳಾಗಿವೆ. ಘಟನೆ ನಡೆದ ಎರಡು ದಿನಗಳ ನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಈ ಮಾಹಿತಿ ನೀಡಿದ್ದಾರೆ. ಇದರ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿದರೆ ಆಡಳಿತ ಪಕ್ಷ ಅದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ.

ಡಿಸೆಂಬರ್ 9 ರ ಶುಕ್ರವಾರದಂದು, ಅರುಣಾಚಲ ಪ್ರದೇಶದ ತವಾಂಗ್‌ನ ಯಾಂಗ್ಟ್ಸೆಯಲ್ಲಿನ ಲೈನ್ ಆಫ್ ಕಂಟ್ರೋಲ್ (ಎಲ್‌ಎಸಿ) ಬಳಿ ಚೀನೀ ಸೈನಿಕರು ಭಾರತದ ಭೂಪ್ರದೇಶ ಆಕ್ರಮಿಸಲು ಯತ್ನಿಸಿದ್ದಾರೆ. ಅವರು ಒಳನುಗ್ಗಿದ್ದಾಗ ಭಾರತೀಯ ಸೈನಿಕರು ಹಿಮ್ಮೆಟ್ಟಿಸಿದ್ದಾರೆ.

ಈ ಕುರಿತು ಸರ್ಕಾರ ಯಾವುದೇ ಮಾಹಿತಿ ನೀಡಿರಲಿಲ್ಲ. ಆದರೆ ಪ್ರತಿಪಕ್ಷಗಳು ಈ ಬಗ್ಗೆ ಪ್ರಶ್ನೆ ಎತ್ತಿವೆ. ಮುಖ್ಯವಾಗಿ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ‘ವಿಪಕ್ಷಗಳು ದೇಶ ಮತ್ತು ಸೇನೆಯ ಬೆಂಬಲಕ್ಕಿವೆ. ಆದರೆ ನಮ್ಮ ಸೈನಿಕರ ಕಾಳಜಿಯ ಬಗ್ಗೆ ಸರ್ಕಾರ ಮಾಹಿತಿ ನೀಡಬೇಕು. ಗಡಿಯಲ್ಲಿ ತಂಟೆ ನಿಲ್ಲಿಸುವಂತೆ ಚೀನಾದ ಮೇಲೆ ಒತ್ತಡ ಹೇರಬೇಕೆಂದು” ಒತ್ತಾಯಿಸಿದ್ದರು.

ಅಲ್ಲದೆ ಗಡಿ ಚರ್ಚೆಗೆ ಸದನದಲ್ಲಿ ಅವಕಾಶ ನೀಡಬೇಕೆಂದು ವಿಪಕ್ಷಗಳ ಸಭೆ ಕರೆದಿದ್ದರು. ಈ ಸಭೆಗೆ ಆಪ್ ಮತ್ತು ತೆಲಂಗಾಣ ರಾಷ್ಟ್ರ ಸಮಿತಿ ಸೇರಿ ಹಲವು ಪಕ್ಷಗಳು ಭಾಗವಹಿಸಿದ್ದವು.

ತದನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಸಂಸತ್ತಿನಲ್ಲಿ ಮಾತನಾಡಿ, ಚೀನಿಯರು “ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸಲು ಪ್ರಯತ್ನಿಸಿದರು. ಆದರೆ ಭಾರತೀಯ ಸೇನಾ ಕಮಾಂಡರ್‌ಗಳ ಸಮಯೋಚಿತ ಹಸ್ತಕ್ಷೇಪದಿಂದಾಗಿ, ಚೀನಾದ ಸೈನಿಕರು ತಮ್ಮ ಸ್ಥಳಗಳಿಗೆ ಮರಳಿದರು. ಕಮಾಂಡರ್‌ಗಳ ಸಭೆಯಲ್ಲಿ ಇಂತಹ ಕ್ರಮಗಳಿಂದ ದೂರವಿರಿ ಮತ್ತು ಗಡಿಯಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡುವಂತೆ ಚೀನೀಯರನ್ನು ಕೇಳಲಾಯಿತು. ಘಟನೆಯನ್ನು ರಾಜತಾಂತ್ರಿಕ ಮಾರ್ಗಗಳ ಮೂಲಕವೂ ಪರಿಹರಿಸಲು ಯತ್ನಿಸಲಾಗುತ್ತಿದೆ” ಎಂದು ಹೇಳಿದ್ದರು.

ಈ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ, ಗಡಿಯಲ್ಲಿನ ಚೀನಾದ ಆಕ್ರಮಣದ ಬಗ್ಗೆ ಚರ್ಚೆ ನಡೆಸುವಂತೆ ವಿಪಕ್ಷಗಳು ಒತ್ತಾಯಿಸಿದವು. ಆದರೆ ಉಪಸಭಾಪತಿ ಹರಿವಂಶ್ ಅದಕ್ಕೆ ಆಸ್ಪದ ಕೊಡಲಿಲ್ಲ. ಹಾಗಾಗಿ ಸೋನಿಯಾ ಗಾಂಧಿಯವರ ನೇತೃತ್ವದಲ್ಲಿ ಕಾಂಗ್ರೆಸ್ ಸದ್ಯಸರು ಸಭಾತ್ಯಾಗ ಮಾಡಿದರು. ಅಲ್ಲದೆ ಎನ್‌ಸಿಪಿ, ಟಿಎಂಸಿ, ಆರ್‌ಜೆಡಿ, ಜೆಎಂಎಂ, ಶಿವಸೇನೆ, ಸಮಾಜವಾದಿ ಪಕ್ಷದ ಸಂಸದರು ಸಹ ಅಧಿವೇಶನ ಬಹಿಷ್ಕರಿದ್ದಾರೆ.

ಮೋದಿ ಸರ್ಕಾರ ಚರ್ಚೆಗೆ ಅವಕಾಶ ಮಾಡಿಕೊಡದಿರುವುದನ್ನು ಮಲ್ಲಿಕಾರ್ಜುನ ಖರ್ಗೆಯವರು ಕಟುವಾಗಿ ಟೀಕಿಸಿದ್ದಾರೆ. ಮೋದಿ ಸರ್ಕಾರದ “ಕೆಂಪು ಕಣ್ಣು” ಚೀನಾದ ಕನ್ನಡಕದಿಂದ ಮುಚ್ಚಲ್ಪಟ್ಟಿದೆ ಎಂದು ತೋರುತ್ತದೆ. ಭಾರತದ ಸಂಸತ್ತಿನಲ್ಲಿ ಚೀನಾದ ವಿರುದ್ಧ ಮಾತನಾಡಲು ಅವಕಾಶವಿಲ್ಲವೇ? ಎಂದು ಇಂದು ಬೆಳಿಗ್ಗೆ ಟ್ವೀಟ್ ಮಾಡಿದ್ದಾರೆ. ಈ ಹಿಂದೆ ಮೋದಿ ಸರ್ಕಾರ ಕೆಂಪು ಕಣ್ಣು ಬಿಟ್ಟು ಚೀನಾವನ್ನು ಎದುರಿಸುತ್ತಿದೆ ಎನ್ನುವ ಬಿಜೆಪಿ ಹೇಳಿಕೆಯನ್ನು ಖರ್ಗೆಯವರು ವ್ಯಂಗ್ಯವಾಡಿದ್ದಾರೆ.

2020ರಲ್ಲಿ ಗಲ್ವಾನ್ ಕಣಿವೆಯಲ್ಲಿ ಮತ್ತು ಲಡಾಖ್‌ನ ಪಾಂಗಾಂಗ್ ಸರೋವರದ ಬಳಿ ಭಾರತ ಮತ್ತು ಚೀನಿ ಸೈನಿಕರ ನಡುವೆ ಸಂಘರ್ಷ ಏರ್ಪಟ್ಟಿತ್ತು. ಅಲ್ಲಿ ಮತ್ತು ಅರುಣಾಚಲ ಪ್ರದೇಶದಲ್ಲಿ ಗಡಿ ಪ್ರವೇಶಿಸಿರುವ ಚೀನಾ ಸೇನೆ ಕೆಲ ಹಳ್ಳಿಗಳನ್ನು, ಸೇತುವೆಗಳನ್ನು ನಿರ್ಮಾಣ ಮಾಡಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಮತ್ತೊಂದು ಗ್ರಾಮ ನಿರ್ಮಿಸಿರುವ ಚೀನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...