Homeಮುಖಪುಟಪಡುಕೋಣೆಯವರ ‘ಪಠಾಣ್’ ಸಿನಿಮಾ ಬ್ಯಾನ್‌ ಮಾಡುವುದಾಗಿ ಮಧ್ಯಪ್ರದೇಶದ ಗೃಹ ಸಚಿವ ಬೆದರಿಕೆ

ಪಡುಕೋಣೆಯವರ ‘ಪಠಾಣ್’ ಸಿನಿಮಾ ಬ್ಯಾನ್‌ ಮಾಡುವುದಾಗಿ ಮಧ್ಯಪ್ರದೇಶದ ಗೃಹ ಸಚಿವ ಬೆದರಿಕೆ

- Advertisement -
- Advertisement -

ಬಾಲಿವುಡ್ ಚಿತ್ರ ‘ಪಠಾನ್‌’ನ ಹಾಡಿನಲ್ಲಿ ನಟಿ ದೀಪಿಕಾ ಪಡುಕೋಣೆ ಅವರಿಗೆ ಬಳಸಲಾಗಿರುವ ವೇಷಭೂಷಣದ ಬಗ್ಗೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಕೆಲವು ದೃಶ್ಯಗಳನ್ನು ‘ತಿದ್ದುಪಡಿ’ ಮಾಡದಿದ್ದರೆ, ಸಿನಿಮಾ ಪ್ರದರ್ಶನದ ಬಗ್ಗೆ ಸರ್ಕಾರ ಏನು ಮಾಡಬೇಕು ಎಂದು ಯೋಚಿಸುತ್ತದೆ” ಎಂದಿದ್ದಾರೆ.

ರಾಜ್ಯ ಸರ್ಕಾರದ ವಕ್ತಾರರಾದ ಮಿಶ್ರಾ, “ದೀಪಿಕಾ ಪಡುಕೋಣೆ ಅವರು ಜೆಎನ್‌ಯು ಪ್ರಕರಣದಲ್ಲಿ ಕಂಡುಬಂದಂತೆ ತುಕ್ಡೆ ತುಕ್ಡೆ ಗ್ಯಾಂಗ್‌ನ ಬೆಂಬಲಿಗರಾಗಿದ್ದಾರೆ” ಎಂದು ದೂರಿದ್ದಾರೆ.

ಶಾರುಖ್ ಖಾನ್- ದೀಪಿಕಾ ಪಡುಕೋಣೆ ಅಭಿನಯದ ‘ಪಠಾಣ್’ ಸಿನಿಮಾದ ‘ಬೇಷರಂ ರಂಗ್’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾದ ನಂತರ ಮಿಶ್ರಾ ಅವರ ಹೇಳಿಕೆ ಹೊರಬಿದ್ದಿದೆ. ಹಾಡಿನಲ್ಲಿ ಕಂಡುಬರುವ ವೇಷಭೂಷಣಗಳು ಮೇಲ್ನೋಟಕ್ಕೆ ಅತ್ಯಂತ ಆಕ್ಷೇಪಾರ್ಹವಾಗಿವೆ ಎಂದು ಅವರು ತಕರಾರು ತೆಗೆದಿದ್ದಾರೆ. ಈ ಹಾಡನ್ನು ಕಲುಷಿತ ಮನಸ್ಥಿತಿಯಿಂದ ಚಿತ್ರೀಕರಿಸಲಾಗಿದೆ ಎಂದು ಆರೋಪಿಸಿದ್ದಾರೆ.

“ದೃಶ್ಯಗಳನ್ನು ಮತ್ತು ಪಡುಕೋಣೆ ಅವರ ವೇಷಭೂಷಣಗಳನ್ನು (ಹಾಡಿನಲ್ಲಿ) ಸರಿಪಡಿಸಲು ನಾನು ವಿನಂತಿಸುತ್ತೇನೆ. ಇಲ್ಲದಿದ್ದರೆ ಈ ಚಿತ್ರವನ್ನು ಮಧ್ಯಪ್ರದೇಶದಲ್ಲಿ ಪ್ರದರ್ಶಿಸಲು ಅನುಮತಿಸಬೇಕೇ ಅಥವಾ ಬೇಡವೇ ಎಂಬುದು ಪರಿಗಣಿಸಬೇಕಾದ ಪ್ರಶ್ನೆಯಾಗಿದೆ” ಎಂದು ಮಿಶ್ರಾ ಎಚ್ಚರಿಕೆ ನೀಡಿದ್ದಾರೆ.

ಇಂದೋರ್ ಜಿಲ್ಲೆಯ ಮೋವ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, “ಜೆಎನ್‌ಯು ಪ್ರಕರಣದಲ್ಲಿ ಕಂಡುಬರುವಂತೆ ಪಡುಕೋಣೆ ತುಕ್ಡೆ ತುಕ್ಡೆ ಗ್ಯಾಂಗ್‌ನ ಬೆಂಬಲಿಗರಾಗಿದ್ದಾರೆ” ಎಂದು ದೂರಿದ್ದಾರೆ.

2016ರಲ್ಲಿ ಜವಾಹರಲಾಲ್‌ ನೆಹರೂ ಯೂನಿವರ್ಸಿಟಿಯಲ್ಲಿ ನಡೆದ ಪ್ರತಿಭಟನೆಯ ನಂತರ ‘ತುಕ್ಡೆ-ತುಕ್ಡೆ ಗ್ಯಾಂಗ್’ ಪದವನ್ನು ಬಿಜೆಪಿ ಬಳಸಲಾರಂಭಿಸಿದೆ.

ಹಿಂದಿ ಭಾಷೆಯ ಆಕ್ಷನ್ ಥ್ರಿಲ್ಲರ್ ಚಲನಚಿತ್ರವಾದ ಪಠಾನ್ ಅನ್ನು ಜನವರಿ 25, 2023 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

ಗಮನಾರ್ಹ ಸಂಗತಿಯೆಂದರೆ ಮಧ್ಯಪ್ರದೇಶದ ಬಿಜೆಪಿಯ ಹಿರಿಯ ನಾಯಕ ಮಿಶ್ರಾ ಅಕ್ಟೋಬರ್‌ನಲ್ಲಿ ಇದೇ ರೀತಿಯ ಆಕ್ಷೇಪಗಳ ಮೂಲಕ ಸುದ್ದಿಯಲ್ಲಿದ್ದರು. ರಾಮಾಯಣ ಮಹಾಕಾವ್ಯವನ್ನು ಆಧರಿಸಿದ ಬಾಲಿವುಡ್ ಚಲನಚಿತ್ರ ‘ಆದಿಪುರುಷ್‌’ ನಿರ್ಮಾಪಕರಿಗೆ ಎಚ್ಚರಿಕೆ ನೀಡಿದ್ದರು. ಹಿಂದೂ ಧಾರ್ಮಿಕ ವ್ಯಕ್ತಿಗಳನ್ನು ತಪ್ಪಾದ ರೀತಿಯಲ್ಲಿ ತೋರಿಸುವ ದೃಶ್ಯಗಳನ್ನು ತೆಗೆದುಹಾಕದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು.

ಈ ವರ್ಷದ ಜುಲೈನಲ್ಲಿ ಚಲನಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ಅವರ ಸಾಕ್ಷ್ಯಚಿತ್ರ ‘ಕಾಳಿ’ಯ ವಿವಾದಾತ್ಮಕ ಪೋಸ್ಟರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ಅದರ ವಿರುದ್ಧ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಲು ಸೂಚಿಸಿದ್ದರು.

ಪ್ರಕಾಶ್ ರಾಜ್ ಆಕ್ಷೇಪ

ಈಗ ಎದ್ದಿರುವ ವಿವಾದಕ್ಕೆ ಬಹುಭಾಷಾ ನಟ ಪ್ರಕಾಶ್ ರಾಜ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಕೇಸರಿ ತೊಟ್ಟವರು ಅತ್ಯಾಚಾರಿಗಳಾದಾಗ ಪರವಾಗಿಲ್ಲ, ದ್ವೇಷ ಭಾಷಣ ಮಾಡಿದರೂ ಪರವಾಗಿಲ್ಲ, ದಲ್ಲಾಳಿ ಶಾಸಕರಾದರೂ ಓಕೆ, ಕೇಸರಿ ಧರಿಸಿದ ಸ್ವಾಮೀಜಿ ಅಪ್ರಾಪ್ತರನ್ನು ರೇಪ್‌ ಮಾಡಿದರೂ ಸರಿ- ಆದರೆ ಸಿನಿಮಾದಲ್ಲಿ (ಕೇಸರಿ) ಬಟ್ಟೆ ಧರಿಸುವಂತಿಲ್ಲ” ಎಂದು ಟೀಕಿಸಿದ್ದಾರೆ.

ನರೋತ್ತಮ ಮಿಶ್ರಾ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, “ಅಸಹ್ಯಕರ, ನಾವು ಇವುಗಳನ್ನು ಎಷ್ಟು ದಿನ ಸಹಿಸಿಕೊಳ್ಳಬೇಕು. ಬಣ್ಣದ ಕುರುಡು” ಎಂದಿದ್ದಾರೆ. ‘ಅಂಧಭಕ್ತ್‌’ ಎಂಬ ಹ್ಯಾಷ್ ಟ್ಯಾಗ್ ಬಳಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...