Homeಮುಖಪುಟಪಡುಕೋಣೆಯವರ ‘ಪಠಾಣ್’ ಸಿನಿಮಾ ಬ್ಯಾನ್‌ ಮಾಡುವುದಾಗಿ ಮಧ್ಯಪ್ರದೇಶದ ಗೃಹ ಸಚಿವ ಬೆದರಿಕೆ

ಪಡುಕೋಣೆಯವರ ‘ಪಠಾಣ್’ ಸಿನಿಮಾ ಬ್ಯಾನ್‌ ಮಾಡುವುದಾಗಿ ಮಧ್ಯಪ್ರದೇಶದ ಗೃಹ ಸಚಿವ ಬೆದರಿಕೆ

- Advertisement -
- Advertisement -

ಬಾಲಿವುಡ್ ಚಿತ್ರ ‘ಪಠಾನ್‌’ನ ಹಾಡಿನಲ್ಲಿ ನಟಿ ದೀಪಿಕಾ ಪಡುಕೋಣೆ ಅವರಿಗೆ ಬಳಸಲಾಗಿರುವ ವೇಷಭೂಷಣದ ಬಗ್ಗೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಕೆಲವು ದೃಶ್ಯಗಳನ್ನು ‘ತಿದ್ದುಪಡಿ’ ಮಾಡದಿದ್ದರೆ, ಸಿನಿಮಾ ಪ್ರದರ್ಶನದ ಬಗ್ಗೆ ಸರ್ಕಾರ ಏನು ಮಾಡಬೇಕು ಎಂದು ಯೋಚಿಸುತ್ತದೆ” ಎಂದಿದ್ದಾರೆ.

ರಾಜ್ಯ ಸರ್ಕಾರದ ವಕ್ತಾರರಾದ ಮಿಶ್ರಾ, “ದೀಪಿಕಾ ಪಡುಕೋಣೆ ಅವರು ಜೆಎನ್‌ಯು ಪ್ರಕರಣದಲ್ಲಿ ಕಂಡುಬಂದಂತೆ ತುಕ್ಡೆ ತುಕ್ಡೆ ಗ್ಯಾಂಗ್‌ನ ಬೆಂಬಲಿಗರಾಗಿದ್ದಾರೆ” ಎಂದು ದೂರಿದ್ದಾರೆ.

ಶಾರುಖ್ ಖಾನ್- ದೀಪಿಕಾ ಪಡುಕೋಣೆ ಅಭಿನಯದ ‘ಪಠಾಣ್’ ಸಿನಿಮಾದ ‘ಬೇಷರಂ ರಂಗ್’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾದ ನಂತರ ಮಿಶ್ರಾ ಅವರ ಹೇಳಿಕೆ ಹೊರಬಿದ್ದಿದೆ. ಹಾಡಿನಲ್ಲಿ ಕಂಡುಬರುವ ವೇಷಭೂಷಣಗಳು ಮೇಲ್ನೋಟಕ್ಕೆ ಅತ್ಯಂತ ಆಕ್ಷೇಪಾರ್ಹವಾಗಿವೆ ಎಂದು ಅವರು ತಕರಾರು ತೆಗೆದಿದ್ದಾರೆ. ಈ ಹಾಡನ್ನು ಕಲುಷಿತ ಮನಸ್ಥಿತಿಯಿಂದ ಚಿತ್ರೀಕರಿಸಲಾಗಿದೆ ಎಂದು ಆರೋಪಿಸಿದ್ದಾರೆ.

“ದೃಶ್ಯಗಳನ್ನು ಮತ್ತು ಪಡುಕೋಣೆ ಅವರ ವೇಷಭೂಷಣಗಳನ್ನು (ಹಾಡಿನಲ್ಲಿ) ಸರಿಪಡಿಸಲು ನಾನು ವಿನಂತಿಸುತ್ತೇನೆ. ಇಲ್ಲದಿದ್ದರೆ ಈ ಚಿತ್ರವನ್ನು ಮಧ್ಯಪ್ರದೇಶದಲ್ಲಿ ಪ್ರದರ್ಶಿಸಲು ಅನುಮತಿಸಬೇಕೇ ಅಥವಾ ಬೇಡವೇ ಎಂಬುದು ಪರಿಗಣಿಸಬೇಕಾದ ಪ್ರಶ್ನೆಯಾಗಿದೆ” ಎಂದು ಮಿಶ್ರಾ ಎಚ್ಚರಿಕೆ ನೀಡಿದ್ದಾರೆ.

ಇಂದೋರ್ ಜಿಲ್ಲೆಯ ಮೋವ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, “ಜೆಎನ್‌ಯು ಪ್ರಕರಣದಲ್ಲಿ ಕಂಡುಬರುವಂತೆ ಪಡುಕೋಣೆ ತುಕ್ಡೆ ತುಕ್ಡೆ ಗ್ಯಾಂಗ್‌ನ ಬೆಂಬಲಿಗರಾಗಿದ್ದಾರೆ” ಎಂದು ದೂರಿದ್ದಾರೆ.

2016ರಲ್ಲಿ ಜವಾಹರಲಾಲ್‌ ನೆಹರೂ ಯೂನಿವರ್ಸಿಟಿಯಲ್ಲಿ ನಡೆದ ಪ್ರತಿಭಟನೆಯ ನಂತರ ‘ತುಕ್ಡೆ-ತುಕ್ಡೆ ಗ್ಯಾಂಗ್’ ಪದವನ್ನು ಬಿಜೆಪಿ ಬಳಸಲಾರಂಭಿಸಿದೆ.

ಹಿಂದಿ ಭಾಷೆಯ ಆಕ್ಷನ್ ಥ್ರಿಲ್ಲರ್ ಚಲನಚಿತ್ರವಾದ ಪಠಾನ್ ಅನ್ನು ಜನವರಿ 25, 2023 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

ಗಮನಾರ್ಹ ಸಂಗತಿಯೆಂದರೆ ಮಧ್ಯಪ್ರದೇಶದ ಬಿಜೆಪಿಯ ಹಿರಿಯ ನಾಯಕ ಮಿಶ್ರಾ ಅಕ್ಟೋಬರ್‌ನಲ್ಲಿ ಇದೇ ರೀತಿಯ ಆಕ್ಷೇಪಗಳ ಮೂಲಕ ಸುದ್ದಿಯಲ್ಲಿದ್ದರು. ರಾಮಾಯಣ ಮಹಾಕಾವ್ಯವನ್ನು ಆಧರಿಸಿದ ಬಾಲಿವುಡ್ ಚಲನಚಿತ್ರ ‘ಆದಿಪುರುಷ್‌’ ನಿರ್ಮಾಪಕರಿಗೆ ಎಚ್ಚರಿಕೆ ನೀಡಿದ್ದರು. ಹಿಂದೂ ಧಾರ್ಮಿಕ ವ್ಯಕ್ತಿಗಳನ್ನು ತಪ್ಪಾದ ರೀತಿಯಲ್ಲಿ ತೋರಿಸುವ ದೃಶ್ಯಗಳನ್ನು ತೆಗೆದುಹಾಕದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು.

ಈ ವರ್ಷದ ಜುಲೈನಲ್ಲಿ ಚಲನಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ಅವರ ಸಾಕ್ಷ್ಯಚಿತ್ರ ‘ಕಾಳಿ’ಯ ವಿವಾದಾತ್ಮಕ ಪೋಸ್ಟರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ಅದರ ವಿರುದ್ಧ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಲು ಸೂಚಿಸಿದ್ದರು.

ಪ್ರಕಾಶ್ ರಾಜ್ ಆಕ್ಷೇಪ

ಈಗ ಎದ್ದಿರುವ ವಿವಾದಕ್ಕೆ ಬಹುಭಾಷಾ ನಟ ಪ್ರಕಾಶ್ ರಾಜ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಕೇಸರಿ ತೊಟ್ಟವರು ಅತ್ಯಾಚಾರಿಗಳಾದಾಗ ಪರವಾಗಿಲ್ಲ, ದ್ವೇಷ ಭಾಷಣ ಮಾಡಿದರೂ ಪರವಾಗಿಲ್ಲ, ದಲ್ಲಾಳಿ ಶಾಸಕರಾದರೂ ಓಕೆ, ಕೇಸರಿ ಧರಿಸಿದ ಸ್ವಾಮೀಜಿ ಅಪ್ರಾಪ್ತರನ್ನು ರೇಪ್‌ ಮಾಡಿದರೂ ಸರಿ- ಆದರೆ ಸಿನಿಮಾದಲ್ಲಿ (ಕೇಸರಿ) ಬಟ್ಟೆ ಧರಿಸುವಂತಿಲ್ಲ” ಎಂದು ಟೀಕಿಸಿದ್ದಾರೆ.

ನರೋತ್ತಮ ಮಿಶ್ರಾ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, “ಅಸಹ್ಯಕರ, ನಾವು ಇವುಗಳನ್ನು ಎಷ್ಟು ದಿನ ಸಹಿಸಿಕೊಳ್ಳಬೇಕು. ಬಣ್ಣದ ಕುರುಡು” ಎಂದಿದ್ದಾರೆ. ‘ಅಂಧಭಕ್ತ್‌’ ಎಂಬ ಹ್ಯಾಷ್ ಟ್ಯಾಗ್ ಬಳಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...