Homeಮುಖಪುಟಪಡುಕೋಣೆಯವರ ‘ಪಠಾಣ್’ ಸಿನಿಮಾ ಬ್ಯಾನ್‌ ಮಾಡುವುದಾಗಿ ಮಧ್ಯಪ್ರದೇಶದ ಗೃಹ ಸಚಿವ ಬೆದರಿಕೆ

ಪಡುಕೋಣೆಯವರ ‘ಪಠಾಣ್’ ಸಿನಿಮಾ ಬ್ಯಾನ್‌ ಮಾಡುವುದಾಗಿ ಮಧ್ಯಪ್ರದೇಶದ ಗೃಹ ಸಚಿವ ಬೆದರಿಕೆ

- Advertisement -
- Advertisement -

ಬಾಲಿವುಡ್ ಚಿತ್ರ ‘ಪಠಾನ್‌’ನ ಹಾಡಿನಲ್ಲಿ ನಟಿ ದೀಪಿಕಾ ಪಡುಕೋಣೆ ಅವರಿಗೆ ಬಳಸಲಾಗಿರುವ ವೇಷಭೂಷಣದ ಬಗ್ಗೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಕೆಲವು ದೃಶ್ಯಗಳನ್ನು ‘ತಿದ್ದುಪಡಿ’ ಮಾಡದಿದ್ದರೆ, ಸಿನಿಮಾ ಪ್ರದರ್ಶನದ ಬಗ್ಗೆ ಸರ್ಕಾರ ಏನು ಮಾಡಬೇಕು ಎಂದು ಯೋಚಿಸುತ್ತದೆ” ಎಂದಿದ್ದಾರೆ.

ರಾಜ್ಯ ಸರ್ಕಾರದ ವಕ್ತಾರರಾದ ಮಿಶ್ರಾ, “ದೀಪಿಕಾ ಪಡುಕೋಣೆ ಅವರು ಜೆಎನ್‌ಯು ಪ್ರಕರಣದಲ್ಲಿ ಕಂಡುಬಂದಂತೆ ತುಕ್ಡೆ ತುಕ್ಡೆ ಗ್ಯಾಂಗ್‌ನ ಬೆಂಬಲಿಗರಾಗಿದ್ದಾರೆ” ಎಂದು ದೂರಿದ್ದಾರೆ.

ಶಾರುಖ್ ಖಾನ್- ದೀಪಿಕಾ ಪಡುಕೋಣೆ ಅಭಿನಯದ ‘ಪಠಾಣ್’ ಸಿನಿಮಾದ ‘ಬೇಷರಂ ರಂಗ್’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾದ ನಂತರ ಮಿಶ್ರಾ ಅವರ ಹೇಳಿಕೆ ಹೊರಬಿದ್ದಿದೆ. ಹಾಡಿನಲ್ಲಿ ಕಂಡುಬರುವ ವೇಷಭೂಷಣಗಳು ಮೇಲ್ನೋಟಕ್ಕೆ ಅತ್ಯಂತ ಆಕ್ಷೇಪಾರ್ಹವಾಗಿವೆ ಎಂದು ಅವರು ತಕರಾರು ತೆಗೆದಿದ್ದಾರೆ. ಈ ಹಾಡನ್ನು ಕಲುಷಿತ ಮನಸ್ಥಿತಿಯಿಂದ ಚಿತ್ರೀಕರಿಸಲಾಗಿದೆ ಎಂದು ಆರೋಪಿಸಿದ್ದಾರೆ.

“ದೃಶ್ಯಗಳನ್ನು ಮತ್ತು ಪಡುಕೋಣೆ ಅವರ ವೇಷಭೂಷಣಗಳನ್ನು (ಹಾಡಿನಲ್ಲಿ) ಸರಿಪಡಿಸಲು ನಾನು ವಿನಂತಿಸುತ್ತೇನೆ. ಇಲ್ಲದಿದ್ದರೆ ಈ ಚಿತ್ರವನ್ನು ಮಧ್ಯಪ್ರದೇಶದಲ್ಲಿ ಪ್ರದರ್ಶಿಸಲು ಅನುಮತಿಸಬೇಕೇ ಅಥವಾ ಬೇಡವೇ ಎಂಬುದು ಪರಿಗಣಿಸಬೇಕಾದ ಪ್ರಶ್ನೆಯಾಗಿದೆ” ಎಂದು ಮಿಶ್ರಾ ಎಚ್ಚರಿಕೆ ನೀಡಿದ್ದಾರೆ.

ಇಂದೋರ್ ಜಿಲ್ಲೆಯ ಮೋವ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, “ಜೆಎನ್‌ಯು ಪ್ರಕರಣದಲ್ಲಿ ಕಂಡುಬರುವಂತೆ ಪಡುಕೋಣೆ ತುಕ್ಡೆ ತುಕ್ಡೆ ಗ್ಯಾಂಗ್‌ನ ಬೆಂಬಲಿಗರಾಗಿದ್ದಾರೆ” ಎಂದು ದೂರಿದ್ದಾರೆ.

2016ರಲ್ಲಿ ಜವಾಹರಲಾಲ್‌ ನೆಹರೂ ಯೂನಿವರ್ಸಿಟಿಯಲ್ಲಿ ನಡೆದ ಪ್ರತಿಭಟನೆಯ ನಂತರ ‘ತುಕ್ಡೆ-ತುಕ್ಡೆ ಗ್ಯಾಂಗ್’ ಪದವನ್ನು ಬಿಜೆಪಿ ಬಳಸಲಾರಂಭಿಸಿದೆ.

ಹಿಂದಿ ಭಾಷೆಯ ಆಕ್ಷನ್ ಥ್ರಿಲ್ಲರ್ ಚಲನಚಿತ್ರವಾದ ಪಠಾನ್ ಅನ್ನು ಜನವರಿ 25, 2023 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

ಗಮನಾರ್ಹ ಸಂಗತಿಯೆಂದರೆ ಮಧ್ಯಪ್ರದೇಶದ ಬಿಜೆಪಿಯ ಹಿರಿಯ ನಾಯಕ ಮಿಶ್ರಾ ಅಕ್ಟೋಬರ್‌ನಲ್ಲಿ ಇದೇ ರೀತಿಯ ಆಕ್ಷೇಪಗಳ ಮೂಲಕ ಸುದ್ದಿಯಲ್ಲಿದ್ದರು. ರಾಮಾಯಣ ಮಹಾಕಾವ್ಯವನ್ನು ಆಧರಿಸಿದ ಬಾಲಿವುಡ್ ಚಲನಚಿತ್ರ ‘ಆದಿಪುರುಷ್‌’ ನಿರ್ಮಾಪಕರಿಗೆ ಎಚ್ಚರಿಕೆ ನೀಡಿದ್ದರು. ಹಿಂದೂ ಧಾರ್ಮಿಕ ವ್ಯಕ್ತಿಗಳನ್ನು ತಪ್ಪಾದ ರೀತಿಯಲ್ಲಿ ತೋರಿಸುವ ದೃಶ್ಯಗಳನ್ನು ತೆಗೆದುಹಾಕದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು.

ಈ ವರ್ಷದ ಜುಲೈನಲ್ಲಿ ಚಲನಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ಅವರ ಸಾಕ್ಷ್ಯಚಿತ್ರ ‘ಕಾಳಿ’ಯ ವಿವಾದಾತ್ಮಕ ಪೋಸ್ಟರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ಅದರ ವಿರುದ್ಧ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಲು ಸೂಚಿಸಿದ್ದರು.

ಪ್ರಕಾಶ್ ರಾಜ್ ಆಕ್ಷೇಪ

ಈಗ ಎದ್ದಿರುವ ವಿವಾದಕ್ಕೆ ಬಹುಭಾಷಾ ನಟ ಪ್ರಕಾಶ್ ರಾಜ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಕೇಸರಿ ತೊಟ್ಟವರು ಅತ್ಯಾಚಾರಿಗಳಾದಾಗ ಪರವಾಗಿಲ್ಲ, ದ್ವೇಷ ಭಾಷಣ ಮಾಡಿದರೂ ಪರವಾಗಿಲ್ಲ, ದಲ್ಲಾಳಿ ಶಾಸಕರಾದರೂ ಓಕೆ, ಕೇಸರಿ ಧರಿಸಿದ ಸ್ವಾಮೀಜಿ ಅಪ್ರಾಪ್ತರನ್ನು ರೇಪ್‌ ಮಾಡಿದರೂ ಸರಿ- ಆದರೆ ಸಿನಿಮಾದಲ್ಲಿ (ಕೇಸರಿ) ಬಟ್ಟೆ ಧರಿಸುವಂತಿಲ್ಲ” ಎಂದು ಟೀಕಿಸಿದ್ದಾರೆ.

ನರೋತ್ತಮ ಮಿಶ್ರಾ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, “ಅಸಹ್ಯಕರ, ನಾವು ಇವುಗಳನ್ನು ಎಷ್ಟು ದಿನ ಸಹಿಸಿಕೊಳ್ಳಬೇಕು. ಬಣ್ಣದ ಕುರುಡು” ಎಂದಿದ್ದಾರೆ. ‘ಅಂಧಭಕ್ತ್‌’ ಎಂಬ ಹ್ಯಾಷ್ ಟ್ಯಾಗ್ ಬಳಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...