Homeಮುಖಪುಟಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ವಿ.ಎಸ್.ಪಾಟೀಲ್, ಉದ್ಯಮಿ ಶ್ರೀನಿವಾಸ್ ಭಟ್‌

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ವಿ.ಎಸ್.ಪಾಟೀಲ್, ಉದ್ಯಮಿ ಶ್ರೀನಿವಾಸ್ ಭಟ್‌

- Advertisement -
- Advertisement -

ಬೆಂಗಳೂರು: ಯಲ್ಲಾಪುರ ಮಾಜಿ ಶಾಸಕರಾದ ವಿ.ಎಸ್.ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ಅವರು ಬಿಜೆಪಿ ತೊರೆದು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹಾಗೂ ಹಿರಿಯ ಮುಖಂಡ ಆರ್.ವಿ. ದೇಶಪಾಂಡೆ ಅವರು ಪಕ್ಷದ ಧ್ವಜ ನೀಡುವ ಮೂಲಕ ವಿ.ಎಸ್. ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ದಾತ್ರಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಈ ಸಂಧರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, “ವಿ.ಎಸ್. ಪಾಟೀಲ್ ಅವರು ನಮ್ಮ ಜತೆ ವಿಧಾನಸಭೆಯಲ್ಲಿ ಕೆಲಸ ಮಾಡಿದ್ದಾರೆ. ಅಬ್ದುಲ್ ಕಲಾಂ ಅವರು ರಾಷ್ಟ್ರಪತಿ ಆಗಿದ್ದ ಸಂದರ್ಭದಲ್ಲಿ ಇವರಿಗೆ ಅತ್ಯುತ್ತಮ ಶಾಸಕ ಎಂಬ ಪ್ರಶಸ್ತಿ ನೀಡಿ, ಗೌರವಿಸಿದ್ದರು. ಅವರ ತಂದೆ ಕೂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಇವರು ಕೂಡ ಪಕ್ಷದ ವಿವಿಧ ಸಂಘಟನೆಗಳಲ್ಲಿ ಕೆಲಸ ಮಾಡಿದ್ದರು. ಮಧ್ಯೆ ಬಿಜೆಪಿ ಸೇರಿ, ಸ್ಪರ್ಧಿಸಿದ್ದರು. ಆಪರೇಷನ್ ಕಮಲದಲ್ಲಿ ನಮ್ಮ ಶಾಸಕರು ಹೋದ ನಂತರ ಆಯಾ ಕ್ಷೇತ್ರದ ಬಹುತೇಕ ಬಿಜೆಪಿ ನಾಯಕರು ನಮ್ಮ ಪಕ್ಷಕ್ಕೆ ಒಬ್ಬೊಬ್ಬರಾಗಿ ಬರುತ್ತಿದ್ದಾರೆ” ಎಂದು ತಿಳಿಸಿದರು.

“ಇತ್ತೀಚೆಗೆ ಹಿರೇಕೆರೂರು ನಾಯಕರು ಸೇರ್ಪಡೆಯಾಗಿದ್ದಾರೆ. ಬಿಜೆಪಿಯ ರಾಜ್ಯ ಕಾರ್ಯಕಾರಣಿ ಸಮಿತಿಯಲ್ಲಿ ಕೆಲಸ ಮಾಡಿದ್ದಾರೆ. ಸಹಕಾರ ಸಂಘಗಳಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. 2013 ಹಾಗೂ 2018 ರಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದರು. ಕಳೆದ ಚುನಾವಣೆಯಲ್ಲಿ ಕೇವಲ 1480 ಮತಗಳ ಅಂತರದಲ್ಲಿ ಸೋತಿದ್ದರು. ಕೆಎಸ್ಆರ್ ಟಿಸಿ ಚೇರ್ಮನ್ ಆಗಿದ್ದರು. ಇವರು ನಮ್ಮ ಪಕ್ಷದ ಸಿದ್ಧಾಂತ, ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವ ಒಪ್ಪಿ ಪಕ್ಷಕ್ಕೆ ಬಂದಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್, ಸ್ಥಳೀಯ ನಾಯಕರ ಜತೆ ಚರ್ಚೆ ಮಾಡಿ ಎಲ್ಲ ನಾಯಕರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ” ಎಂದು ವಿವರಿಸಿದರು.

“ಬಿಜೆಪಿಯ ಸಕ್ರಿಯ ನಾಯಕರಾದ ಜಿಲ್ಲಾ ಖಜಾಂಚಿಗಳಾದ ಉದ್ಯಮಿ ಶ್ರೀನಿವಾಸ್ ಭಟ್ ದಾತ್ರಿ ಅವರು ಕೂಡ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ಇವರು ಉತ್ತಮ ಸಂಘಟನಕಾರರಾಗಿದ್ದು, ಬಹಳ ಸೇವೆ ಮಾಡಿರುವ ಕುಟುಂಬದಿಂದ ಬಂದಿದ್ದಾರೆ. ಯಲ್ಲಾಪುರ ಕ್ಷೇತ್ರದ ಯುವಕರಲ್ಲಿ ಬಹಳ ಚಿರಪರಿಚಿತರಾಗಿದ್ದಾರೆ. ಅವರು ಕೂಡ ದೇಶಪಾಂಡೆ ಹಾಗೂ ನನ್ನನ್ನು ಭೇಟಿ ಮಾಡಿ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ್ದರು. ಇವರು ಕೂಡ ಹಲವು ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದಾರೆ. ಅವರು ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ಇವರು ಸಲ್ಲಿಸಿದ ಅರ್ಜಿ ಮೇಲೆ ನಾವೆಲ್ಲರೂ ಚರ್ಚೆ ಮಾಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳುತ್ತಿದ್ದೇವೆ” ಎಂದರು.

“ಇನ್ನು ಬಹಳ ಅರ್ಜಿಗಳು ಬಾಕಿ ಇವೆ. ಇಂದು ಇನ್ನಿಬ್ಬರು ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕಾಗಿತ್ತು, ಅವರ ಆರೋಗ್ಯ ಸರಿ ಇಲ್ಲದ ಕಾರಣ ಸೇರ್ಪಡೆ ಕಾರ್ಯಕ್ರಮ ಮುಂದೂಡಿದ್ದೇವೆ. ಕೆಲವರು ಅಧಿವೇಶನ ಮುಗಿಯಲಿ ಎಂದು ಕಾಯುತ್ತಿದ್ದಾರೆ. ನಾವು ಮುಂದಿನ ದಿನಗಳಲ್ಲಿ ಪ್ರತಿವಾರ ಸಭೆ ಮಾಡಿ ಒಬ್ಬೊಬ್ಬರನ್ನೇ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ. ಈ ಮಧ್ಯೆ ನಮ್ಮ ಪ್ರವಾಸಗಳು ನಿಗಧಿಯಾಗಿವೆ. ಈ ಪ್ರವಾಸ ಸಂದರ್ಭದಲ್ಲಿ ಕೆಲವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು” ಎಂದು ಮಾಹಿತಿ ನೀಡಿದರು.

“ಡಿ.30 ರಂದು ಬಿಜಾಪುರದಲ್ಲಿ ಕೃಷ್ಣಾ ನದಿ ವಿಚಾರವಾಗಿ ಹೋರಾಟ ಮಾಡುತ್ತಿದ್ದೇವೆ. ಜ.2 ರಂದು ಮಹದಾಯಿ ವಿಚಾರದಲ್ಲಿ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ ಮಾಡಲಿದ್ದೇವೆ. ಸರ್ಕಾರ ಕೇವಲ ಹೇಳಿಕೆಗಳಿಗೆ ಮಾತ್ರ ಸೀಮಿತವಾಗಿದೆ. ಜ.8 ರಂದು ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇನ್ನು ನಾನು ಹಾಗೂ ಸಿದ್ದರಾಮಯ್ಯ ಇಬ್ಬರೂ ಸೇರಿ ರಾಜ್ಯದ 20 ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗುವುದು” ಎಂದು ಹೇಳಿದರು.

“ಭಾರತ ಜೋಡೋ ಯಾತ್ರೆ ಸಾಗದ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗುವುದು. ಈ ಪ್ರವಾಸದ ನಂತರ 224 ಕ್ಷೇತ್ರಗಳಲ್ಲೂ ಪ್ರತ್ಯೇಕವಾಗಿ ಪ್ರವಾಸ ಮಾಡುತ್ತೇವೆ. ಉತ್ತರ ಕರ್ನಾಟಕದಲ್ಲಿ ಸಿದ್ದರಾಮಯ್ಯನವರು ಹಾಗೂ ದಕ್ಷಿಣ ಭಾಗದಲ್ಲಿ ನಾನು ಪ್ರವಾಸ ಮಾಡುತ್ತೇನೆ. ನಂತರ ಅವರು ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಮಾಡುತ್ತಾರೆ. ನಾನು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಹೋಗುತ್ತೇನೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...