Homeಮುಖಪುಟಬ್ಯಾಂಕ್‌ ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ವಿರುದ್ಧ ಮೂರು ಹೊಸ ಎಫ್‌ಐಆರ್‌ ದಾಖಲಿಸಿದ ಸಿಬಿಐ

ಬ್ಯಾಂಕ್‌ ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ವಿರುದ್ಧ ಮೂರು ಹೊಸ ಎಫ್‌ಐಆರ್‌ ದಾಖಲಿಸಿದ ಸಿಬಿಐ

ಬ್ಯಾಂಕ್‌ಗಳಲ್ಲಿ ಉಂಟಾಗಿರುವ ಹೆಚ್ಚುವರಿ 6,746 ಕೋಟಿ ರೂಪಾಯಿ ನಷ್ಟವನ್ನು ಈ ಎಫ್‌ಐಆರ್‌ಗಳು ಉಲ್ಲೇಖಿಸಿವೆ

- Advertisement -
- Advertisement -

ತಲೆಮರೆಸಿಕೊಂಡಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ವಿರುದ್ಧ ಪಂಜಾಬ್ ನ್ಯಾಷನಲ್ ಬ್ಯಾಂಕಿನ ದೂರಿನ ಆಧಾರದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮೂರು ಹೊಸ ಎಫ್‌ಐಆ‌ರ್‌‌ಗಳನ್ನು ದಾಖಲಿಸಿದೆ. ಪಂಜಾಬ್‌ ಬ್ಯಾಂಕ್‌ ಮತ್ತು ಇತರ ಒಕ್ಕೂಟದ ಬ್ಯಾಂಕ್‌ಗಳಲ್ಲಿ ಉಂಟಾಗಿರುವ ಹೆಚ್ಚುವರಿ 6,746 ಕೋಟಿ ರೂಪಾಯಿ ನಷ್ಟವನ್ನು ಈ ಎಫ್‌ಐಆರ್‌ಗಳು ಉಲ್ಲೇಖಿಸಿವೆ.

13,000 ಕೋಟಿ ರೂಪಾಯಿಗಳನ್ನು ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚೋಕ್ಸಿಯವರು ಕೇಂದ್ರೀಯ ತನಿಖಾ ಸಂಸ್ಥೆ ಮತ್ತು ಜಾರಿ ನಿರ್ದೇಶನಾಲಯಕ್ಕೆ ಬೇಕಾಗಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ನೀರವ್ ಮೋದಿ ಸದ್ಯ ಯುನೈಟೆಡ್ ಕಿಂಗ್‌ಡಂನ ಜೈಲಿನಲ್ಲಿದ್ದಾನೆ.

ಚೋಕ್ಸಿ 2017ರಲ್ಲಿ ಆಂಟಿಗುವಾ ಮತ್ತು ಬಾರ್ಬುಡಾಗೆ ಪಲಾಯನ ಮಾಡಿದರು. ಕೇಂದ್ರೀಯ ತನಿಖಾ ದಳವು 2018ರಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿದೆ.

ಮಾರ್ಚ್ 21ರಂದು ಬ್ಯಾಂಕ್ ಹೆಚ್ಚುವರಿ ಆರೋಪಗಳನ್ನು ಸಲ್ಲಿಸಿದ್ದು, ಚೋಕ್ಸಿಯ ಗೀತಾಂಜಲಿ ಜೆಮ್ಸ್ ಲಿಮಿಟೆಡ್, ನಕ್ಷತ್ರ ಬ್ರಾಂಡ್ಸ್ ಲಿಮಿಟೆಡ್ ಮತ್ತು ಗಿಲಿ ಇಂಡಿಯಾ ಲಿಮಿಟೆಡ್‌ನಿಂದ ಉಂಟಾದ ನಷ್ಟವನ್ನು ಪ್ರಸ್ತಾಪಿಸಿದೆ.

ಚೋಕ್ಸಿಯ ವಕೀಲ ವಿಜಯ್ ಅಗರ್ವಾಲ್ ಅವರು ಹೊಸ ಎಫ್‌ಐಆರ್‌ಗಳನ್ನು ಟೀಕಿಸಿದ್ದಾರೆ. “ಒಂದು ಎಫ್‌ಐಆರ್ ದಾಖಲಾದಾಗ ಮತ್ತು ಬ್ಯಾಂಕ್‌ಗಳಿಗೆ ಆದ ಒಟ್ಟು ನಷ್ಟಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್ ಸಲ್ಲಿಸಿದಾಗ, ಪ್ರತಿ ಸಣ್ಣ ವ್ಯವಹಾರಕ್ಕೂ ಈಗ ಪ್ರತ್ಯೇಕ ಎಫ್‌ಐಆರ್ ಹೇಗೆ ಸಲ್ಲಿಸಲು ಸಾಧ್ಯ? ಆ ತರ್ಕದೊಂದಿಗೆ ಹೇಳುವುದಾದರೆ- ಒಟ್ಟು 13,000 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಹೇಳಿಕೊಂಡರೆ ಅವರು ಪ್ರತಿ ರೂಪಾಯಿಗೆ ತಲಾ ಒಂದು ಎಫ್‌ಐಆರ್ ದಾಖಲಿಸಬೇಕು” ಎಂದಿದ್ದಾರೆ.

“ಒಕ್ಕೂಟವು ಕೇವಲ ಒಂದು ಪ್ರಥಮ ಮಾಹಿತಿ ವರದಿಯನ್ನು ಮಾತ್ರ ಸಲ್ಲಿಸಬಹುದು ಎಂದು ವಿಜಿಲೆನ್ಸ್ ಕೈಪಿಡಿ ಸುತ್ತೋಲೆ ಇದೆ” ಎಂದು ಅಗರ್ವಾಲ್ ವಾದಿಸಿದ್ದಾರೆ.

ಗೀತಾಂಜಲಿ ಜೆಮ್ಸ್ ಲಿಮಿಟೆಡ್ ಮತ್ತು ಅದರ ಹಿರಿಯ ಅಧಿಕಾರಿಗಳು ಐಸಿಐಸಿಐ ನೇತೃತ್ವದ 28 ಬ್ಯಾಂಕ್‌ಗಳ ಒಕ್ಕೂಟದಲ್ಲಿ 2010 ಮತ್ತು 2018 ರ ನಡುವೆ 5,564.54 ಕೋಟಿ ರೂಪಾಯಿಗಳ ವಂಚನೆ ಮಾಡಿರುವಾಗಿ ಚೋಕ್ಸಿ ವಿರುದ್ಧದ ಎಫ್‌ಐಆರ್‌ ಆರೋಪಿಸಿದೆ. ವಜ್ರದ ವ್ಯಾಪಾರಿ ಮತ್ತು ಅವರ ಸಂಸ್ಥೆಗಳು 5564.54 ಕೋಟಿ ರೂಪಾಯಿಗಳನ್ನು ಬ್ಯಾಂಕ್‌ಗಳ ಒಕ್ಕೂಟಕ್ಕೆ ವಂಚಿಸಿದ್ದಾರೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ದೂರಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇತೃತ್ವದ ಒಂಬತ್ತು ಬ್ಯಾಂಕ್‌ಗಳ ಒಕ್ಕೂಟಕ್ಕೆ ಚೋಕ್ಸಿ, ಅವರ ಸಂಸ್ಥೆ ನಕ್ಷತ್ರ ಬ್ರಾಂಡ್ಸ್ ಲಿಮಿಟೆಡ್ ಮತ್ತು ಇತರರು 807 ಕೋಟಿ ರೂ. ವಂಚಿಸಿರುವುದಾಗಿ ಎರಡನೇ ಎಫ್‌ಐಆರ್‌‌ ತಿಳಿಸಿದೆ.

ಮೂರನೇ ಎಫ್‌ಐಆರ್‌, ಇದೇ ಅವಧಿಯಲ್ಲಿ ಪಿಎನ್‌ಬಿಯಲ್ಲಿ ಚೋಕ್ಸಿ ಮತ್ತು ಗಿಲಿ ಇಂಡಿಯಾ ಲಿಮಿಟೆಡ್ ಮಾಡಿರುವ 375 ಕೋಟಿ ರೂಪಾಯಿಗಳ ವಂಚನೆಗೆ ಸಂಬಂಧಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...