Homeಮುಖಪುಟಬ್ಯಾಂಕ್‌ ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ವಿರುದ್ಧ ಮೂರು ಹೊಸ ಎಫ್‌ಐಆರ್‌ ದಾಖಲಿಸಿದ ಸಿಬಿಐ

ಬ್ಯಾಂಕ್‌ ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ವಿರುದ್ಧ ಮೂರು ಹೊಸ ಎಫ್‌ಐಆರ್‌ ದಾಖಲಿಸಿದ ಸಿಬಿಐ

ಬ್ಯಾಂಕ್‌ಗಳಲ್ಲಿ ಉಂಟಾಗಿರುವ ಹೆಚ್ಚುವರಿ 6,746 ಕೋಟಿ ರೂಪಾಯಿ ನಷ್ಟವನ್ನು ಈ ಎಫ್‌ಐಆರ್‌ಗಳು ಉಲ್ಲೇಖಿಸಿವೆ

- Advertisement -
- Advertisement -

ತಲೆಮರೆಸಿಕೊಂಡಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ವಿರುದ್ಧ ಪಂಜಾಬ್ ನ್ಯಾಷನಲ್ ಬ್ಯಾಂಕಿನ ದೂರಿನ ಆಧಾರದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮೂರು ಹೊಸ ಎಫ್‌ಐಆ‌ರ್‌‌ಗಳನ್ನು ದಾಖಲಿಸಿದೆ. ಪಂಜಾಬ್‌ ಬ್ಯಾಂಕ್‌ ಮತ್ತು ಇತರ ಒಕ್ಕೂಟದ ಬ್ಯಾಂಕ್‌ಗಳಲ್ಲಿ ಉಂಟಾಗಿರುವ ಹೆಚ್ಚುವರಿ 6,746 ಕೋಟಿ ರೂಪಾಯಿ ನಷ್ಟವನ್ನು ಈ ಎಫ್‌ಐಆರ್‌ಗಳು ಉಲ್ಲೇಖಿಸಿವೆ.

13,000 ಕೋಟಿ ರೂಪಾಯಿಗಳನ್ನು ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚೋಕ್ಸಿಯವರು ಕೇಂದ್ರೀಯ ತನಿಖಾ ಸಂಸ್ಥೆ ಮತ್ತು ಜಾರಿ ನಿರ್ದೇಶನಾಲಯಕ್ಕೆ ಬೇಕಾಗಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ನೀರವ್ ಮೋದಿ ಸದ್ಯ ಯುನೈಟೆಡ್ ಕಿಂಗ್‌ಡಂನ ಜೈಲಿನಲ್ಲಿದ್ದಾನೆ.

ಚೋಕ್ಸಿ 2017ರಲ್ಲಿ ಆಂಟಿಗುವಾ ಮತ್ತು ಬಾರ್ಬುಡಾಗೆ ಪಲಾಯನ ಮಾಡಿದರು. ಕೇಂದ್ರೀಯ ತನಿಖಾ ದಳವು 2018ರಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿದೆ.

ಮಾರ್ಚ್ 21ರಂದು ಬ್ಯಾಂಕ್ ಹೆಚ್ಚುವರಿ ಆರೋಪಗಳನ್ನು ಸಲ್ಲಿಸಿದ್ದು, ಚೋಕ್ಸಿಯ ಗೀತಾಂಜಲಿ ಜೆಮ್ಸ್ ಲಿಮಿಟೆಡ್, ನಕ್ಷತ್ರ ಬ್ರಾಂಡ್ಸ್ ಲಿಮಿಟೆಡ್ ಮತ್ತು ಗಿಲಿ ಇಂಡಿಯಾ ಲಿಮಿಟೆಡ್‌ನಿಂದ ಉಂಟಾದ ನಷ್ಟವನ್ನು ಪ್ರಸ್ತಾಪಿಸಿದೆ.

ಚೋಕ್ಸಿಯ ವಕೀಲ ವಿಜಯ್ ಅಗರ್ವಾಲ್ ಅವರು ಹೊಸ ಎಫ್‌ಐಆರ್‌ಗಳನ್ನು ಟೀಕಿಸಿದ್ದಾರೆ. “ಒಂದು ಎಫ್‌ಐಆರ್ ದಾಖಲಾದಾಗ ಮತ್ತು ಬ್ಯಾಂಕ್‌ಗಳಿಗೆ ಆದ ಒಟ್ಟು ನಷ್ಟಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್ ಸಲ್ಲಿಸಿದಾಗ, ಪ್ರತಿ ಸಣ್ಣ ವ್ಯವಹಾರಕ್ಕೂ ಈಗ ಪ್ರತ್ಯೇಕ ಎಫ್‌ಐಆರ್ ಹೇಗೆ ಸಲ್ಲಿಸಲು ಸಾಧ್ಯ? ಆ ತರ್ಕದೊಂದಿಗೆ ಹೇಳುವುದಾದರೆ- ಒಟ್ಟು 13,000 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಹೇಳಿಕೊಂಡರೆ ಅವರು ಪ್ರತಿ ರೂಪಾಯಿಗೆ ತಲಾ ಒಂದು ಎಫ್‌ಐಆರ್ ದಾಖಲಿಸಬೇಕು” ಎಂದಿದ್ದಾರೆ.

“ಒಕ್ಕೂಟವು ಕೇವಲ ಒಂದು ಪ್ರಥಮ ಮಾಹಿತಿ ವರದಿಯನ್ನು ಮಾತ್ರ ಸಲ್ಲಿಸಬಹುದು ಎಂದು ವಿಜಿಲೆನ್ಸ್ ಕೈಪಿಡಿ ಸುತ್ತೋಲೆ ಇದೆ” ಎಂದು ಅಗರ್ವಾಲ್ ವಾದಿಸಿದ್ದಾರೆ.

ಗೀತಾಂಜಲಿ ಜೆಮ್ಸ್ ಲಿಮಿಟೆಡ್ ಮತ್ತು ಅದರ ಹಿರಿಯ ಅಧಿಕಾರಿಗಳು ಐಸಿಐಸಿಐ ನೇತೃತ್ವದ 28 ಬ್ಯಾಂಕ್‌ಗಳ ಒಕ್ಕೂಟದಲ್ಲಿ 2010 ಮತ್ತು 2018 ರ ನಡುವೆ 5,564.54 ಕೋಟಿ ರೂಪಾಯಿಗಳ ವಂಚನೆ ಮಾಡಿರುವಾಗಿ ಚೋಕ್ಸಿ ವಿರುದ್ಧದ ಎಫ್‌ಐಆರ್‌ ಆರೋಪಿಸಿದೆ. ವಜ್ರದ ವ್ಯಾಪಾರಿ ಮತ್ತು ಅವರ ಸಂಸ್ಥೆಗಳು 5564.54 ಕೋಟಿ ರೂಪಾಯಿಗಳನ್ನು ಬ್ಯಾಂಕ್‌ಗಳ ಒಕ್ಕೂಟಕ್ಕೆ ವಂಚಿಸಿದ್ದಾರೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ದೂರಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇತೃತ್ವದ ಒಂಬತ್ತು ಬ್ಯಾಂಕ್‌ಗಳ ಒಕ್ಕೂಟಕ್ಕೆ ಚೋಕ್ಸಿ, ಅವರ ಸಂಸ್ಥೆ ನಕ್ಷತ್ರ ಬ್ರಾಂಡ್ಸ್ ಲಿಮಿಟೆಡ್ ಮತ್ತು ಇತರರು 807 ಕೋಟಿ ರೂ. ವಂಚಿಸಿರುವುದಾಗಿ ಎರಡನೇ ಎಫ್‌ಐಆರ್‌‌ ತಿಳಿಸಿದೆ.

ಮೂರನೇ ಎಫ್‌ಐಆರ್‌, ಇದೇ ಅವಧಿಯಲ್ಲಿ ಪಿಎನ್‌ಬಿಯಲ್ಲಿ ಚೋಕ್ಸಿ ಮತ್ತು ಗಿಲಿ ಇಂಡಿಯಾ ಲಿಮಿಟೆಡ್ ಮಾಡಿರುವ 375 ಕೋಟಿ ರೂಪಾಯಿಗಳ ವಂಚನೆಗೆ ಸಂಬಂಧಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...