Homeಮುಖಪುಟಬ್ಯಾಂಕ್‌ ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ವಿರುದ್ಧ ಮೂರು ಹೊಸ ಎಫ್‌ಐಆರ್‌ ದಾಖಲಿಸಿದ ಸಿಬಿಐ

ಬ್ಯಾಂಕ್‌ ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ವಿರುದ್ಧ ಮೂರು ಹೊಸ ಎಫ್‌ಐಆರ್‌ ದಾಖಲಿಸಿದ ಸಿಬಿಐ

ಬ್ಯಾಂಕ್‌ಗಳಲ್ಲಿ ಉಂಟಾಗಿರುವ ಹೆಚ್ಚುವರಿ 6,746 ಕೋಟಿ ರೂಪಾಯಿ ನಷ್ಟವನ್ನು ಈ ಎಫ್‌ಐಆರ್‌ಗಳು ಉಲ್ಲೇಖಿಸಿವೆ

- Advertisement -
- Advertisement -

ತಲೆಮರೆಸಿಕೊಂಡಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ವಿರುದ್ಧ ಪಂಜಾಬ್ ನ್ಯಾಷನಲ್ ಬ್ಯಾಂಕಿನ ದೂರಿನ ಆಧಾರದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮೂರು ಹೊಸ ಎಫ್‌ಐಆ‌ರ್‌‌ಗಳನ್ನು ದಾಖಲಿಸಿದೆ. ಪಂಜಾಬ್‌ ಬ್ಯಾಂಕ್‌ ಮತ್ತು ಇತರ ಒಕ್ಕೂಟದ ಬ್ಯಾಂಕ್‌ಗಳಲ್ಲಿ ಉಂಟಾಗಿರುವ ಹೆಚ್ಚುವರಿ 6,746 ಕೋಟಿ ರೂಪಾಯಿ ನಷ್ಟವನ್ನು ಈ ಎಫ್‌ಐಆರ್‌ಗಳು ಉಲ್ಲೇಖಿಸಿವೆ.

13,000 ಕೋಟಿ ರೂಪಾಯಿಗಳನ್ನು ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚೋಕ್ಸಿಯವರು ಕೇಂದ್ರೀಯ ತನಿಖಾ ಸಂಸ್ಥೆ ಮತ್ತು ಜಾರಿ ನಿರ್ದೇಶನಾಲಯಕ್ಕೆ ಬೇಕಾಗಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ನೀರವ್ ಮೋದಿ ಸದ್ಯ ಯುನೈಟೆಡ್ ಕಿಂಗ್‌ಡಂನ ಜೈಲಿನಲ್ಲಿದ್ದಾನೆ.

ಚೋಕ್ಸಿ 2017ರಲ್ಲಿ ಆಂಟಿಗುವಾ ಮತ್ತು ಬಾರ್ಬುಡಾಗೆ ಪಲಾಯನ ಮಾಡಿದರು. ಕೇಂದ್ರೀಯ ತನಿಖಾ ದಳವು 2018ರಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿದೆ.

ಮಾರ್ಚ್ 21ರಂದು ಬ್ಯಾಂಕ್ ಹೆಚ್ಚುವರಿ ಆರೋಪಗಳನ್ನು ಸಲ್ಲಿಸಿದ್ದು, ಚೋಕ್ಸಿಯ ಗೀತಾಂಜಲಿ ಜೆಮ್ಸ್ ಲಿಮಿಟೆಡ್, ನಕ್ಷತ್ರ ಬ್ರಾಂಡ್ಸ್ ಲಿಮಿಟೆಡ್ ಮತ್ತು ಗಿಲಿ ಇಂಡಿಯಾ ಲಿಮಿಟೆಡ್‌ನಿಂದ ಉಂಟಾದ ನಷ್ಟವನ್ನು ಪ್ರಸ್ತಾಪಿಸಿದೆ.

ಚೋಕ್ಸಿಯ ವಕೀಲ ವಿಜಯ್ ಅಗರ್ವಾಲ್ ಅವರು ಹೊಸ ಎಫ್‌ಐಆರ್‌ಗಳನ್ನು ಟೀಕಿಸಿದ್ದಾರೆ. “ಒಂದು ಎಫ್‌ಐಆರ್ ದಾಖಲಾದಾಗ ಮತ್ತು ಬ್ಯಾಂಕ್‌ಗಳಿಗೆ ಆದ ಒಟ್ಟು ನಷ್ಟಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್ ಸಲ್ಲಿಸಿದಾಗ, ಪ್ರತಿ ಸಣ್ಣ ವ್ಯವಹಾರಕ್ಕೂ ಈಗ ಪ್ರತ್ಯೇಕ ಎಫ್‌ಐಆರ್ ಹೇಗೆ ಸಲ್ಲಿಸಲು ಸಾಧ್ಯ? ಆ ತರ್ಕದೊಂದಿಗೆ ಹೇಳುವುದಾದರೆ- ಒಟ್ಟು 13,000 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಹೇಳಿಕೊಂಡರೆ ಅವರು ಪ್ರತಿ ರೂಪಾಯಿಗೆ ತಲಾ ಒಂದು ಎಫ್‌ಐಆರ್ ದಾಖಲಿಸಬೇಕು” ಎಂದಿದ್ದಾರೆ.

“ಒಕ್ಕೂಟವು ಕೇವಲ ಒಂದು ಪ್ರಥಮ ಮಾಹಿತಿ ವರದಿಯನ್ನು ಮಾತ್ರ ಸಲ್ಲಿಸಬಹುದು ಎಂದು ವಿಜಿಲೆನ್ಸ್ ಕೈಪಿಡಿ ಸುತ್ತೋಲೆ ಇದೆ” ಎಂದು ಅಗರ್ವಾಲ್ ವಾದಿಸಿದ್ದಾರೆ.

ಗೀತಾಂಜಲಿ ಜೆಮ್ಸ್ ಲಿಮಿಟೆಡ್ ಮತ್ತು ಅದರ ಹಿರಿಯ ಅಧಿಕಾರಿಗಳು ಐಸಿಐಸಿಐ ನೇತೃತ್ವದ 28 ಬ್ಯಾಂಕ್‌ಗಳ ಒಕ್ಕೂಟದಲ್ಲಿ 2010 ಮತ್ತು 2018 ರ ನಡುವೆ 5,564.54 ಕೋಟಿ ರೂಪಾಯಿಗಳ ವಂಚನೆ ಮಾಡಿರುವಾಗಿ ಚೋಕ್ಸಿ ವಿರುದ್ಧದ ಎಫ್‌ಐಆರ್‌ ಆರೋಪಿಸಿದೆ. ವಜ್ರದ ವ್ಯಾಪಾರಿ ಮತ್ತು ಅವರ ಸಂಸ್ಥೆಗಳು 5564.54 ಕೋಟಿ ರೂಪಾಯಿಗಳನ್ನು ಬ್ಯಾಂಕ್‌ಗಳ ಒಕ್ಕೂಟಕ್ಕೆ ವಂಚಿಸಿದ್ದಾರೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ದೂರಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇತೃತ್ವದ ಒಂಬತ್ತು ಬ್ಯಾಂಕ್‌ಗಳ ಒಕ್ಕೂಟಕ್ಕೆ ಚೋಕ್ಸಿ, ಅವರ ಸಂಸ್ಥೆ ನಕ್ಷತ್ರ ಬ್ರಾಂಡ್ಸ್ ಲಿಮಿಟೆಡ್ ಮತ್ತು ಇತರರು 807 ಕೋಟಿ ರೂ. ವಂಚಿಸಿರುವುದಾಗಿ ಎರಡನೇ ಎಫ್‌ಐಆರ್‌‌ ತಿಳಿಸಿದೆ.

ಮೂರನೇ ಎಫ್‌ಐಆರ್‌, ಇದೇ ಅವಧಿಯಲ್ಲಿ ಪಿಎನ್‌ಬಿಯಲ್ಲಿ ಚೋಕ್ಸಿ ಮತ್ತು ಗಿಲಿ ಇಂಡಿಯಾ ಲಿಮಿಟೆಡ್ ಮಾಡಿರುವ 375 ಕೋಟಿ ರೂಪಾಯಿಗಳ ವಂಚನೆಗೆ ಸಂಬಂಧಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...