Homeಮುಖಪುಟಕೆಜಿಎಫ್‌-2 ಹಾಡಿನ ಬಳಕೆ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್‌‌ನಿಂದ ಮಧ್ಯಂತರ ತಡೆಯಾಜ್ಞೆ

ಕೆಜಿಎಫ್‌-2 ಹಾಡಿನ ಬಳಕೆ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್‌‌ನಿಂದ ಮಧ್ಯಂತರ ತಡೆಯಾಜ್ಞೆ

- Advertisement -
- Advertisement -

ಕೆಜಿಎಫ್ ಚಾಪ್ಟರ್‌ -2 ಸಿನಿಮಾದ ಹಾಡಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಸುಪ್ರಿಯಾ ಅವರ ವಿರುದ್ಧ ಎಂಆರ್‌ಟಿ ಸ್ಟುಡಿಯೋಸ್ ಸಲ್ಲಿಸಿದ ದೂರಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ಡಿಸೆಂಬರ್ 16ರಂದು ಮಧ್ಯಂತರ ತಡೆಯಾಜ್ಞೆ ನೀಡಿದೆ.

ನ್ಯಾಯಮೂರ್ತಿ ಎಸ್.ಸುನೀಲ್ ದತ್ ಯಾದವ್ ಅವರು ನ್ಯಾಯಾಲಯದ ಚಳಿಗಾಲದ ರಜೆಯ ಮುನ್ನಾದಿನದಂದು ತಡೆಯಾಜ್ಞೆ ನೀಡಿದರು. ಮುಂದಿನ ವಿಚಾರಣೆಯ ದಿನಾಂಕದವರೆಗೆ ಮಧ್ಯಂತರ ತಡೆ ಜಾರಿಯಲ್ಲಿರುತ್ತದೆ.

ಕಾಂಗ್ರೆಸ್ ನಾಯಕರ ಪರ ವಾದ ಮಂಡಿಸಿದ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ಅವರು, “ಭಾರತ್ ಜೋಡೋ ಯಾತ್ರೆಗೆ ಸಂಬಂಧಿಸಿದ ವಿಡಿಯೋಗಳಲ್ಲಿ ಸಿನಿಮಾದ ಎರಡು ಮ್ಯೂಸಿಕ್ ಕ್ಲಿಪ್ ಗಳನ್ನು ಬಳಸಲಾಗಿದೆ ಎಂದು ಆರೋಪಿಸಿದ್ದಾರೆ. ಯಾತ್ರೆ ಸಾಗದಿದ್ದರೂ ಎರಡು ದಿನ ಮೊದಲು ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ವಾಣಿಜ್ಯ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿತ್ತು” ಎಂದಿದ್ದಾರೆ.

ಆಪಾದಿತ ಆಕ್ಷೇಪಾರ್ಹ ವಿಷಯವನ್ನು ತೆಗೆದುಹಾಕುವುದಾಗಿ ಕಾಂಗ್ರೆಸ್‌ ಪಕ್ಷವು ಭರವಸೆ ನೀಡಿದ ನಂತರ ಕಾಂಗ್ರೆಸ್ ಪಕ್ಷದ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳನ್ನು ಸ್ಥಗಿತಗೊಳಿಸುವ ವಾಣಿಜ್ಯ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿತು. ವಿಷಯವನ್ನು ತೆಗೆದುಹಾಕಲಾಗಿದ್ದರೂ, ಎಂಆರ್‌ಟಿ ಸ್ಟುಡಿಯೋ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ ಎಂದು ಪೊನ್ನಣ್ಣ ನ್ಯಾಯಾಲಯಕ್ಕೆ ತಿಳಿಸಿದರು.

ಈ ಸಮಸ್ಯೆಯು ಹಕ್ಕುಸ್ವಾಮ್ಯ ಉಲ್ಲಂಘನೆಗೆ ಸಂಬಂಧಿಸಿದೆ. ಆದರೆ ಕ್ರಿಮಿನಲ್ ದೂರು ದಾಖಲಿಸಲಾಗಿದೆ ಮತ್ತು ತಕ್ಷಣವೇ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪೊನ್ನಣ್ಣ ವಾದಿಸಿದ್ದಾರೆ.

“ವೀಡಿಯೋ ಕೆಜಿಎಫ್ ಚಿತ್ರದದ್ದಲ್ಲ, ಆದರೆ ಯಾತ್ರೆಯ ದೃಶ್ಯಗಳೊಂದಿಗೆ ಜೋಡಣೆ ಮಾಡಲಾದ ಹಾಡಿನ ಒಂದು ಭಾಗ ಮಾತ್ರ ಕೆಜಿಎಫ್‌ಗೆ ಸಂಬಂಧಿಸಿದೆ” ಎಂದಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120-ಬಿ (ಕ್ರಿಮಿನಲ್ ಪಿತೂರಿ), 403 (ಆಸ್ತಿಯ ಅಪ್ರಾಮಾಣಿಕ ದುರುಪಯೋಗ), 465 (ನಕಲಿ), ಆರ್/ಡಬ್ಲ್ಯೂ ಸೆಕ್ಷನ್ 34 (ಸಾಮಾನ್ಯ ಉದ್ದೇಶದಿಂದ ಅಪರಾಧ ಕೃತ್ಯ), ಹಕ್ಕುಸ್ವಾಮ್ಯ ಕಾಯಿದೆಯ ಸೆಕ್ಷನ್ 33 ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್‌ 66ರ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಸಂಪೂರ್ಣ ದೂರನ್ನು ನಿಜವೆಂದು ಒಪ್ಪಿಕೊಂಡರೂ ಕ್ರಿಮಿನಲ್ ದೂರು ದಾಖಲಿಸುವಂತಹ ಯಾವುದೇ ಅಪರಾಧ ಇಲ್ಲಿಲ್ಲ ಎಂದು ಪೊನ್ನಣ್ಣ ವಾದಿಸಿದ್ದಾರೆ.

ಎಂಆರ್‌ಟಿ ಸ್ಟುಡಿಯೋವನ್ನು ಪ್ರತಿನಿಧಿಸುವ ಹಿರಿಯ ವಕೀಲ ಶ್ಯಾಮಸುಂದರ್ ಎಂಎಸ್ ಪ್ರತಿಕ್ರಿಯಿಸಿ, ಆಕ್ಷೇಪಾರ್ಹ ವಿಷಯವನ್ನು ಕಾಂಗ್ರೆಸ್ ಪಕ್ಷದ ಖಾತೆಗಳಲ್ಲಿ ಇನ್ನೂ ತೆಗೆದುಹಾಕಲಾಗಿಲ್ಲ ಎಂದು ದೂರಿದ್ದಾರೆ.

ನ್ಯಾಯಾಲಯ ನಿಂದನೆಯು ಜೈಲು ಶಿಕ್ಷೆಗೆ ಅರ್ಹವಾಗಿದೆ. ಆದ್ದರಿಂದ ದೂರಿನಲ್ಲಿ ಐಪಿಸಿ ನ್ಯಾಯವ್ಯಾಪ್ತಿಯನ್ನು ತರುವುದು ಮಾನ್ಯವಾಗಿದೆ. ಯಾವುದೇ ಬಲವಂತದ ಕ್ರಮ ಕೈಗೊಂಡಿಲ್ಲ. ತನಿಖೆ ಆರಂಭಿಕ ಹಂತದಲ್ಲಿದೆ ಎಂದು ಅವರು ತಿಳಿಸಿದ್ದಾರೆ. ಆರೋಪಗಳು ನಿಜವೇ ಎಂಬುದನ್ನು ಪತ್ತೆ ಹಚ್ಚುವುದು ತನಿಖಾಧಿಕಾರಿಯ ಕರ್ತವ್ಯವಾಗಿತ್ತು ಎಂದಿದ್ದಾರೆ.

ಕ್ರಿಮಿನಲ್ ದೂರಿನ ವಿಚಾರಣೆಗೆ ತಡೆಯಾಜ್ಞೆ ನೀಡಿದ ನಂತರ, ನ್ಯಾಯಾಲಯವು ಅರ್ಜಿಯ ವಿಚಾರಣೆಯನ್ನು ಮುಂದೂಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...