Homeಮುಖಪುಟಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾ

ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾ

ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನೋ ಸಲ್ಲಿಸಿದ್ದ ಎರಡು ಅರ್ಜಿಗಳಲ್ಲಿ ಒಂದನ್ನು ವಜಾಗೊಳಿಸಲಾಗಿದೆ

- Advertisement -
- Advertisement -

2002ರ ಕೋಮು ಹಿಂಸಾಚಾರದ ಸಂದರ್ಭದಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿ ತನ್ನ ಕುಟುಂಬದ ಹಲವು ಸದಸ್ಯರನ್ನು ಕೊಂದ 11 ಮಂದಿಯ ಬಿಡುಗಡೆಯ ವಿರುದ್ಧ ಸಂತ್ರಸ್ತೆ ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಎರಡು ಅರ್ಜಿಗಳಲ್ಲಿ ಒಂದನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಈಗ ವಜಾಗೊಳಿಸಲಾಗಿರುವ ಅರ್ಜಿಯಲ್ಲಿ- ಬಿಡುಗಡೆಯ ಮನವಿಯನ್ನು ಪರಿಗಣಿಸಲು ಗುಜರಾತ್ ಸರ್ಕಾರಕ್ಕೆ ತಿಳಿಸಿದ ಮೇ 2022ರ ಆದೇಶವನ್ನು ಪರಿಶೀಲಿಸುವಂತೆ ಬಿಲ್ಕಿಸ್‌ ಬಾನೋ ಅವರು ನ್ಯಾಯಾಲಯವನ್ನು ಕೋರಿದ್ದರು. “ಬಿಡುಗಡೆಯ ಆಧಾರದ ಮೇಲೆ ಸವಾಲು ಹಾಕಿರುವ ಬಿಲ್ಕಿಸ್ ಅವರ ಇನ್ನೊಂದು ಪ್ರಕರಣ, ಈ ನಿರ್ಧಾರದಿಂದ ತಕ್ಷಣವೇ ಪರಿಣಾಮ ಬೀರುವುದಿಲ್ಲ, ವಿವರವಾದ ಆದೇಶ ಇನ್ನೂ ಲಭ್ಯವಿಲ್ಲ” ಎಂದು ‘ಎನ್‌ಡಿಟಿವಿ’ ವರದಿ ಮಾಡಿದೆ.

ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವ 11 ಅಪರಾಧಿಗಳನ್ನು ಆಗಸ್ಟ್ 15ರಂದು ಜೈಲಿನಿಂದ ಹೊರಗೆ ಬಿಡಲಾಯಿತು. ಅವರಿಗೆ ಅವಧಿಪೂರ್ವ ಬಿಡುಗಡೆಯನ್ನು ನೀಡಲಾಯಿತು. ‘ಉತ್ತಮ ನಡವಳಿಕೆ’ ಕಾರಣವನ್ನು ನೀಡಲಾಗಿತ್ತು. ಕೇಂದ್ರ ಗೃಹ ಸಚಿವಾಲಯದ ಒಪ್ಪಿಗೆಯೊಂದಿಗೆ ಗುಜರಾತ್‌ನ ಬಿಜೆಪಿ ಸರ್ಕಾರವು 1992ರ ನೀತಿಯ ಅಡಿಯಲ್ಲಿ ಬಿಡುಗಡೆಗೆ ಅನುಮತಿ ನೀಡಿತ್ತು.

ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳನ್ನು ಮುಂಚಿತವಾಗಿ ಬಿಡುಗಡೆ ಮಾಡಲಾಗುವುದಿಲ್ಲ ಎಂದು ಇತ್ತಿಚಿನ ನೀತಿಯು ಹೇಳುತ್ತದೆ. ಆದರೆ ಅಂತಹ ಯಾವುದೇ ವಿನಾಯಿತಿಯನ್ನು ಹೊಂದಿರದ 1992ರ ನೀತಿಯು ಈ ಅಪರಾಧಿಗಳಿಗೆ ಅನ್ವಯಿಸುತ್ತದೆ ಎಂಬ ವಾದವನ್ನು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. 2008ರಲ್ಲಿ ಈ ಅಪರಾಧಿಗಳಿಗೆ ಶಿಕ್ಷೆಯಾದಾಗ 1992ರ ನೀತಿಯು ಜಾರಿಯಲ್ಲಿತ್ತು.

ಇದನ್ನು ಪ್ರಶ್ನಿಸಿದ್ದ ಬಿಲ್ಕಿಸ್ ಬಾನೊ, ನೆರೆಯ ಮಹಾರಾಷ್ಟ್ರದಲ್ಲಿ ವಿಚಾರಣೆ ನಡೆದಿರುವುದರಿಂದ ನಿರ್ಧಾರ ಕೈಗೊಳ್ಳಲು ಗುಜರಾತ್ ಸೂಕ್ತ ರಾಜ್ಯವಲ್ಲ ಎಂದು ವಾದಿಸಿದ್ದರು. ಗುಜರಾತ್‌ನಲ್ಲಿ ನ್ಯಾಯಸಮ್ಮತ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಬಾನೊ ಅವರು 2004ರಲ್ಲಿ ತಿಳಿಸಿದ್ದ ಬಳಿಕ ಸುಪ್ರೀಂ ಕೋರ್ಟ್‌ನ ಸೂಚನೆ ಮೇರೆಗೆ ವಿಚಾರಣೆಯನ್ನು ಮುಂಬೈಗೆ ಸ್ಥಳಾಂತರಿಸಲಾಗಿತ್ತು.

ಅಪರಾಧಿಗಳು ಸುಮಾರು 15 ವರ್ಷಗಳ ಕಾಲ ಜೈಲಿನಲ್ಲಿದ್ದರು. ಅವರಲ್ಲಿ ಒಬ್ಬಾತ ‘ಜೀವಾವಧಿ ಕೈದಿಗಳ ನೀತಿ’ಯ ಪ್ರಕಾರ ಅವಧಿಪೂರ್ವ ಬಿಡುಗಡೆಗೆ ಪರಿಗಣಿಸಬೇಕೆಂದು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದನು. ಆ ವಿವಾದವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಅರ್ಜಿಗಳನ್ನು ಪರಿಶೀಲಿಸಿ ಕ್ರಮ ಜರುಗಿಸುವಂತೆ ಈ ವರ್ಷದ ಮೇನಲ್ಲಿ ಗುಜರಾತ್ ಸರ್ಕಾರಕ್ಕೆ ಕೋರ್ಟ್ ಸೂಚಿಸಿತ್ತು.

ಮೂರು ತಿಂಗಳ ನಂತರ ಅಪರಾಧಿಗಳನ್ನು ಬಿಡುಗಡೆ ಮಾಡಲಾಯಿತು. ಅವರಲ್ಲಿ ಒಬ್ಬರು ಇತ್ತೀಚೆಗೆ ನಡೆದ ಗುಜರಾತ್‌ ಚುನಾವಣೆಯಲ್ಲಿ ಬಿಜೆಪಿ ಶಾಸಕರಾಗಿರುವ ತಮ್ಮ ಮಗಳ ಪರವಾಗಿ ಪ್ರಚಾರ ಮಾಡಿದ್ದರು.

ನರೇಂದ್ರ ಮೋದಿಯವರು ಗುಜರಾತ್‌ನಲ್ಲಿ ಮುಖ್ಯಮಂತ್ರಿಯಾಗಿದ್ದ 2002ರ ಅವಧಿಯಲ್ಲಿ ಕೋಮು ಗಲಭೆಗಳು ನಡೆದಿದ್ದವು. ಆ ಸಮಯದಲ್ಲಿ ನಡೆದಿದ್ದ ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಿಡುಗಡೆ ಮಾಡಲಾಗಿತ್ತು. ಗುಜರಾತ್ ಸರ್ಕಾರ ಈ ಬಿಡುಗಡೆಯನ್ನು ಸಮರ್ಥಿಸಿದೆ. ಬಿಜೆಪಿಯ ನಾಯಕರು ಅಪರಾಧಿಗಳನ್ನು ಬಣ್ಣಿಸಿದ್ದು,  ‘ಸಂಸ್ಕೃತಿ (ಸಂಸ್ಕೃತಿ) ಬ್ರಾಹ್ಮಣರು’ ಎಂದಿದ್ದಾರೆ.

ಬಿಡುಗಡೆಗೆ ಶಿಫಾರಸು ಮಾಡಿದ ಸಮಿತಿಯಲ್ಲಿ ಬಿಜೆಪಿ ನಾಯಕರು ಇದ್ದರು, ಇದನ್ನು ಅಮಿತ್ ಶಾ ನೇತೃತ್ವದ ಕೇಂದ್ರ ಗೃಹ ಸಚಿವಾಲಯವು ಅನುಮೋದಿಸಿದೆ.

ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದ ಬಿಲ್ಕಿಸ್‌ ಬಾನೋ ಅವರ ಅರ್ಜಿಗೆ ಸಂಬಂಧಿಸಿದಂತೆ, ನ್ಯಾಯಾಧೀಶರಲ್ಲಿ ಒಬ್ಬರಾದ ನ್ಯಾಯಮೂರ್ತಿ ಬೇಲಾ ತ್ರಿವೇದಿ ಅವರು ಪ್ರಕರಣದಿಂದ ಹಿಂದೆ ಸರಿದಿದ್ದರು. ಹೀಗಾಗಿ ಅರ್ಜಿ ವಿಚಾರಣೆಯನ್ನು ಕಳೆದ ವಾರ ಮುಂದೂಡಲಾಗಿತ್ತು. ಹಿಂದೆ ಸರಿದಿದ್ದಕ್ಕೆ ಕಾರಣವನ್ನು ನ್ಯಾಯಾಧೀಶರು ನೀಡಿರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...