Homeಅಂಕಣಗಳುಇಬ್ರಾಹಿಂ ಏನು ಅಂತ ನಮಗೆ ಚನ್ನಾಗಿ ಗೊತ್ತು; ನಮ್ಮ ತಂದೆಯವರಿಗೆ ಇನ್ನೂ ಗೊತ್ತು..

ಇಬ್ರಾಹಿಂ ಏನು ಅಂತ ನಮಗೆ ಚನ್ನಾಗಿ ಗೊತ್ತು; ನಮ್ಮ ತಂದೆಯವರಿಗೆ ಇನ್ನೂ ಗೊತ್ತು..

- Advertisement -
- Advertisement -

ಕಾಂಗೈಗಳನ್ನು ಟೀಕಿಸುವ ಸಾಮಗ್ರಿಯನ್ನು ಖಾಲಿ ಮಾಡಿಕೊಂಡ ಈ ಬಿಜೆಪಿಗಳು ನಿಮ್ಮದು ರಾವಣನ ಪಕ್ಷ ನಮ್ಮದು ರಾಮನ ಪಕ್ಷ ಎಂದುಬಿಟ್ಟಿವೆಯಲ್ಲಾ. ಇದಕ್ಕೆ ತಕ್ಕ ಉತ್ತರ ಕೊಡಲು ತಡಕಾಡುತ್ತಿರುವ ಕಾಂಗೈಗಳು ಹಾಗೇ ಸ್ವಲ್ಪ ಯೋಚಿಸಿದ್ದರೆ ರಾವಣ ಎಂತವನು ಎಂಬುದು ಅರಿವಾಗುತ್ತಿತ್ತು. ರಾವಣನ ಹತ್ತು ತಲೆ ಅವನ ಶಕ್ತಿ ಸಾಮರ್ಥ್ಯದ ಸಂಕೇತ. ಆತ ಅಪ್ಪಟ ಶಿವಭಕ್ತ, ಸಂಗೀತಗಾರ, ಮಹಾವೈಣಿಕ, ನೃತ್ಯಪಟು, ಅಜೇಯ, ಒಳ್ಳೆ ಆಡಳಿತಗಾರ, ಕುಬೇರರನ್ನು ಸೋಲಿಸಿ ಪುಷ್ಪಕ ವಿಮಾನ ಪಡೆದವನು. ಭುಜಂಗ ಸ್ತೋತ್ರ ರಚಿಸಿದ ಕರ್ತೃ. ಜ್ವಲಿಸುವ ಅಗ್ನಿಯಂತಿದ್ದ ರಾಜಲಕ್ಷಣದಿಂದ ಶೋಭಿತನಾದ ಆತ ಈ ಪ್ರಪಂಚಕ್ಕೆ ಮೊದಲು ಮೀಸಲಾತಿ ತಂದವನು. ಲಂಕೆಯನ್ನು ರಕ್ಷಿಸಲು ಲಂಕಿಣಿ, ದಂಡಕಾರಣ್ಯ ರಕ್ಷಿಸಲು ತಾಟಕಿ, ಲಂಕೆ ಹೆಬ್ಬಾಗಿಲು ಕಾಯಲು ಸಿಂಹಿಣಿ, ಅಶೋಕವನ ನೋಡಿಕೊಳ್ಳಲು ತ್ರಿಜಟಿಯನ್ನು ನೇಮಿಸಿದ್ದ. ಹೆಣ್ಣನ್ನು ಮೋಸ ಮಾಡಿ ಕೊಂದವನಲ್ಲ. ಮರದ ಮರೆಯಲ್ಲಿ ನಿಂತು ಯುದ್ಧ ಮಾಡಿದವನಲ್ಲ. ಯಾರದೋ ಮಾತಿಗೆ ಮಡದಿಯನ್ನೇ ಕಾಡಿಗಟ್ಟಿದವನಲ್ಲ. ಹೆಂಡತಿ ಬಗ್ಗೆ ಸಂಶಯಗೊಂಡು ಬೆಂಕಿ ಮುಟ್ಟಲು ಹೇಳಿದವನಲ್ಲ ರಾವಣ. ಹೀಗೆ ರಾವಣನ ಗುಣಗಳನ್ನು ಪಟ್ಟಿಮಾಡಿ ಬಿಜೆಪಿಗೆ ಕಾಂಗೈಗಳು ಸವಾಲೆಸೆಯುವ ಬದಲು ಗೊಂದಲಕ್ಕೆ ಬಿದ್ದಿವೆಯಲ್ಲಾ. ಈ ಗೊಂದಲಕ್ಕೆ ಕಾರಣ ಬಿಜೆಪಿಗಳು ನಿಮ್ಮನ್ನು ರಾವಣ ಪಕ್ಷ ಎಂದ ಕೂಡಲೇ ನಮ್ಮಲ್ಲಿ ರಾವಣ ಸಿದ್ದರಾಮಯ್ಯನೊ ಅಥವಾ ಡಿ.ಕೆ ಶಿವಕುಮಾರನೊ ಎಂದು ಯೋಚಿಸುತ್ತ ಕುಳಿತಿವೆಯಂತಲ್ಲಾ ಥೂತ್ತೇರಿ.

ಕಾಂಗೈ ಮತ್ತು ಬಿಜೆಪಿಗಳ ಕತೆ ಹೀಗಿದ್ದರೆ ಇನ್ನ ಯಾತ್ರೆ ಆರಂಭಿಸಿದ ದಿನದಿಂದಲೂ ಹಲವಾರು ಅಡ್ಡಿ ಆತಂಕಗಳನ್ನು ಎದುರಿಸುತ್ತಿರುವ ನಮ್ಮ ಕುಮಾರಣ್ಣನನ್ನು ಮಾತನಾಡಿಸಿ ಬಹಳ ದಿನಗಳಾದವು. ಪಂಚರತ್ನ ಯಾತ್ರೆ ಸ್ಥಗಿತಗೊಳಿಸಿ ಸುಧಾರಿಸಿಕೊಳ್ಳುತ್ತಿರುವ ಈ ಸಮಯದಲ್ಲಿ ಮಾತಿಗೆ ಸಿಕ್ಕಬಹುದೆಂದು ಪೋನ್ ಮಾಡಲಾಗಿ ಪೋನ್ ರಿಂಗಾಯ್ತು, ರಿಂಗ್ ಟೋನು “ಮುರುಳಿಯ ಮರೆಸಿ ನಗುತಿಹೆ ಸರಸಿ..” ಹಲೋ ಯಾರು?

“ನಾನು ಸಾರ್, ಯಾಹೂ.”

“ಏನ್ರಿ ಯಾಹೂ ಇತ್ತೀಚೆಗೆ ಪೋನ್ ಮಾಡದನ್ನು ಬಿಟ್ರಿ. ಭೇಟಿಯಾಗದನ್ನು ಬಿಟ್‌ರಲ್ರಿ.”

“ಅಂಗೇನು ಯಿಲ್ಲ ಸಾರ್, ನೀವು ಬಿಜಿಲಿದ್ರಿ. ಅದಕ್ಕಿಂತ್ಲೂ, ಎಷ್ಟೋ ದಿನ ನಾವು ಮುನಿಸಿಕೊಂಡಿದ್ರೂ ಸಹ ಪುನಹ ನಿಮ್ಮತ್ರ ಬರಬೇಕಾಗತ್ತೆ, ಜಿ.ಟಿ ದೇವೇಗೌಡರ ತರ.”

“ದೇವೇಗೌಡ್ರು ಮುನಿಸಿಕೊಂಡಿದ್ದಕ್ಕೆ ಹಲವಾರು ಕಾರಣಗಳು ಇವೆ. ಅವನ್ನೆಲ್ಲ ಮಾತನಾಡತಕ್ಕಂತ ತೀರ್ಮಾನ ತಗೊಳತಕ್ಕಂತ ಸಮಯ ಇದಲ್ಲ. ನಮ್ಮ ಮೈಸೂರು ಭಾಗದಲ್ಲಿ ಅವರು ದಳಕ್ಕೆ ಒಂದು ಶಕ್ತಿಯಾಗಿರತಕ್ಕಂತದ್ದು, ಈಗಾಗ್ಲೆ ತೀರ್ಮಾನ ಆಗಿರತಕ್ಕಂತ ವಿಚಾರ ಆದ್ದರಿಂದ ನಮ್ಮ ತಂದೆಯವರು, ಮಾಜಿ ಪ್ರಧಾನಿಗಳಾದ ಮಾನ್ಯ ದೇವೇಗೌಡ್ರು ಕರದ ಕೂಡಲೆ ಬಂದು ಅಳತೆ ಗೌರವ ತೋರಿರತಕ್ಕಂತ ವಿಷಯ ಏನಿದೆ ಅದ್ಯಲ್ಲ ಮುಗದು ಈಗ ಅವರು ದಳದ ಸಂಘಟನೆಲಿ ಸಕ್ರಿಯವಾಗಿರತಕ್ಕಂತದ್ದು ನೀವೆ ನೋಡಿದ್ದಿರಿ.”

“ಆದ್ರು ಜಿ.ಟಿ ದೇವೇಗೌಡ್ರ ನಂಬಿದ್ದೋರು ಐದು ಜನ ಕಾಂಗ್ರಸ್ಸಿಗೋದರಲ್ಲ ಸಾರ್?”

“ಅವುರ ಬಗ್ಗೆ ಹೆಚ್ಚಿಗೆ ಮಾತಾಡತಕ್ಕಂತ ವಿಷಯಕ್ಕೆ ಹೋಗಲ್ಲ. ಅಲ್ಲಿ ನಾಲ್ಕೆ ಜನ ಸಾಕು ಅನತಕ್ಕಂತ ತೀರ್ಮಾನವ ಅವರೇ ತಗಂಡು ಈಗಾಗ್ಲೆ ಒಬ್ಬ ವಾಪಸು ಪುನಹ ನಮ್ಮ ಪಾರ್ಟಿಗೆ ಬಂದವುರೆ, ನಾನು ಯಾವತ್ತು ಕೂಡ ನಮ್ಮ ಪಾರ್ಟಿ ಬಿಟ್ಟು ಹೋಗುವರ ಬಗ್ಗೆಯಾಗಲಿ ಬರತಕ್ಕಂತ ವ್ಯಕ್ತಿಗಳ ಬಗೆಯಾಗ್ಲಿ ಕಾಳಜಿ ವಹಿಸದೆ ಇರತಕ್ಕತಂದ್ದು ಮೊದಲಿನಿಂದಲೂ ನಾವು ರೂಢಿಸಿಕೊಂಡು ಬಂದಂತ ತೀರ್ಮಾನಗಳೇನಿವೆ ಅವನ್ನ ಪಾಲನೆ ಮಾಡತಕ್ಕಂತದ್ದು ನಮ್ಮ ಜವಾಬ್ದಾರಿ.”

“ಮತ್ತೆ ಜಿ.ಟಿ ದೇವೇಗೌಡ್ರನ್ನ ಕಾಡಿ ಬೇಡಿ ಕರಕೊಂಡ್ರಲ್ಲ ಸಾರ್?”

“ಅದು ನಮ್ಮ ರಾಷ್ಟ್ರೀಯ ಅಧ್ಯಕ್ಷರ ತೀರ್ಮಾನ. ಅವುರು ತೆಗೆದುಕೊಳ್ಳತಕ್ಕಂತ ತೀರ್ಮಾನ ಏನಿದೆ ಅವುನ್ನ ಗೌರವಿಸತಕ್ಕಂತದ್ದು ನಮ್ಮ ಕರ್ತವ್ಯ”

“ಇನ್ನೊಂದು ಗಂಭೀರ ವಿಷಯ ಸಾರ್, ನೀವು ಇಬ್ರಾಹಿಂ ಮುಖ್ಯಮಂತ್ರಿಯಾಗದರಲ್ಲಿ ತಪ್ಪೇನಿದೆ ಅವುರೇನು ಅಸ್ಪೃಶ್ಯರೆ ಅಂದುಬಿಟ್ಟಿದ್ದಿರಿ. ಈ ಮಾತಿಗೆ ಈಗಾಗ್ಲೆ ಕಂಪ್ಲೇಟು ಆಗಿದೆ, ಯಾಕಂಗದ್ರಿ ಸಾರ್?”

“ನಾನಂಗಂದಿರದು ಕಂಪ್ಲೇಟು ದಾಖಲಾಗಿರದನ್ನ ಗಮನಿಸಿದ್ದಿನಿ. ನಾನು ಹೇಳಿರತಕ್ಕಂತ ಮಾತೇನಿದೆ ಅದು ಕಾಂಗ್ರೆಸಿನವರಾಡೊ ಮಾತು; ಈ ದೇಶದಲ್ಲಿ ಅಸ್ಪೃಶ್ಯರು ಅವರೆ, ಅವುರು ಇನ್ನ ಇದ್ದಾರೆ ಅನ್ನದಾದ್ರೆ ಇಷ್ಟು ವರ್ಷ ದೇಶ ಆಳಿದ ಕಾಂಗ್ರೆಸಿನವರು ಅವರು ಇಲ್ದಂಗೆ ಮಾಡಬೇಕಾಗಿತ್ತು. ಅದು ಆಡಳಿತ ನ್ಯಡಸತಕ್ಕಂತ ಅವುರ ಜವಬ್ದಾರಿ ಆಗಿತ್ತು. ಅಸ್ಪೃಶ್ಯತೆ ಪದ ಹಿಡಕಂಡು ನಮ್ಮನ್ನ ಕೆಣಕತಕ್ಕಂತ ಸಾಹಸವ ಈ ಕಾಂಗ್ರೆಸ್ಸಿನವರು ಮಾಡ್ತ ಅವುರೆ. ಅವುರಿಗೆ ನಾನು ಈ ಮುಖಾಂತರ ಎಚ್ಚರಿಕೆ ಕೋಡ್ತಿನಿ.”

“ಪ್ರಶ್ನೆ ಕೇಳಿದ್ದು ಪತ್ರಿಕೆಯವರಲ್ಲವ ಸಾರ್?”

“ಇರಬಹುದು ಅವುರ್‍ಯಾರು ಎಂಬತಕ್ಕಂತ ಮಾಹಿತಿ ನಮ್ಮತ್ರ ಇದೆ. ನಾವು ಯಾವತ್ತೂ ಅಸ್ಪೃಶ್ಯರ ಬಗ್ಗೆ ಕೀಳಾಗಿ ನಡಕೊಂಡಿಲ್ಲ, ತಪ್ಪಾಗಿ ನ್ಯಡಕೊಂಡಿಲ್ಲ. ಅವರ ಭುಜದ ಮೇಲೆ ಕೈಹಾಕಿ ಮಾತನಾಡಿಸಿದ್ದೀನಿ. ರಾಮಕೃಷ್ಣ ಹೆಗಡೆ ಕಾಲದಲ್ಲಿ ಜಿಲ್ಲಾ ಪಂಚಾಯ್ತಿ ಚುನಾವಣೆ ಆದಾಗ ನಮ್ಮ ತಂದೆಯವರು ಒಬ್ಬ ದಲಿತರನ್ನು ಹಾಸನ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರನ್ನಾಗಿ ಮಾಡಿದ್ರು. ಇದೇ ಕಾಂಗ್ರೆಸ್ಸಿಗರು ಮಾಡಿದ್ರಾ? ಅವುರಿಗೆ ಪವರ್ ಬಂದಾಗ ಪರಮೇಶ್ವರನ್ನ ಮಾಡಿದ್ರ? ಅದ್ಕೂ ಹಿಂದೆ ರಂಗನಾಥ ಬಸವಲಿಂಗಪ್ಪ ಇದ್ರಲ್ಲ ಮಾಡಿದ್ರಾ, ಖರ್ಗೆಯವರನ್ನ ಮಾಡಿದ್ರಾ?”

“ಖರ್ಗೆಯವರನ್ನ ಮಾಡದಂಗೆ ದೇವೇಗೌಡ್ರು ತಡೆಹಾಕಿದ್ರಲ್ಲ ಸಾರ್?”

“ದೇವೇಗೌಡ್ರು ಅಂತ ಕ್ಯಲಸ ಯಾವಾಗ್ಲು ಮಾಡಿಲ್ಲ.”

“ನಮ್ಮ ಕಣ್ಣೆದುರೆ ಮಾಡಿದ್ರಲ್ಲ ಸಾರ್. ಆಗ ಸಮ್ಮಿಶ್ರ ಸರಕಾರ ಮಾಡುವಾಗ ಸೋನಿಯಾ ಗಾಂಧಿ ಮುಖ್ಯಮಂತ್ರಿ ಪದವಿನೆ ತಗೊಳಿ ಅಂದ್ರು. ಆಗ ಗೌಡ್ರು ಬೇಡ ಬೇಡ ನಮಗೆ ಉಪಮುಖ್ಯಮಂತ್ರಿ ಸಾಕು ಅಂದ್ರು. ಯಾಕೆ ಅಂತ ಪತ್ತೆಹಚ್ಚಿದಾಗ, ಮುಂದೆ ಧರ್ಮಸಿಂಗ್‌ಗೆ ಕೊಟ್ಟ ಬೆಂಬಲ ವಾಪಸ್ ತಗಂಡಾಗ ಯಾರೂ ಪ್ರತಿಭಟಿಸಲಿಲ್ಲ; ಅದೇ ಖರ್ಗೆ ಮುಖ್ಯಮಂತ್ರಿಯಾಗಿದ್ದು ಬೆಂಬಲ ಹಿಂತಗಂಡ್ರೆ ಇಡೀ ಕರ್ನಾಟಕದ ದಲಿತರು ಪ್ರತಿಭಟಿಸತಿದ್ರು. ಇದು ಗೊತ್ತಾಗಿ ದೇವೇಗೌಡ್ರು ಧರ್ಮಸಿಂಗ್‌ಗೆ ಸಪೋರ್ಟ್ ಮಾಡಿ ವಾಪಸ್ ತಗೊ ಅಂತ ನಿಮಗೇಳೀದ್ರಂತೆ, ಪಾಪ ಗೌಡ್ರು ಪ್ಲಾನು ನಿಮಗೂ ಗೊತ್ತಾಗಲಿಲ್ಲ ಅಲವಾ ಸಾರ್?”

“ಇದ್ಯಲ್ಲ ಕಟ್ಟುಕತೆ ಕಂಡ್ರಿ, ಇದೇ ಡಿ.ಕೆ ಶಿವಕುಮಾರ ನಮ್ಮ ಪಾರ್ಟಿ ಜನನ ಯಳಿಯಕ್ಕೆ ನೋಡಿದಾಗ, ನಾನೇ ಪಾರ್ಟಿ ಉಳಿಸಿಗಳಕ್ಕೆ ಅಂಗೆ ಮಾಡಿದ್ದೆ.”

“ಈಗ್ಲು ಉಸಾರಾಗಿರಿ ಸಾರ್. ಇಬ್ರಾಹಿಂ ನಿಮ್ಮ ಬಗುಲಲ್ಲೇ ಅವುರೆ. ಆತ ಕಾಂಗ್ರೆಸ್‌ನಲ್ಲಿದ್ದು ಯಡಿಯೂರಪ್ಪನಿಗೆ ಮುವ್ವತ್ತು ಸಾವುರ ಓಟಾಕ್ಸಿದನಂತೆ. ಅವುರೆ ಅಂಗಂದವುರೆ. ನಿಮ್ಮ ಕ್ಷೇತ್ರದ ಮುಸ್ಲಿಮರು ಯಂಗವ್ರೆ ನೋಡಿಕಳಿ.”

“ಇಬ್ರಾಹಿಂ ಏನು ಅಂತ ನಮಗೆ ಚನ್ನಾಗಿ ಗೊತ್ತು. ನಮ್ಮ ತಂದೆಯವರಿಗೆ ಇನ್ನು ಗೊತ್ತು.”

“ಥೂತ್ತೇರಿ”


ಇದನ್ನೂ ಓದಿ: ಉಗ್ರರನ್ನೇ ಬಿಡದ ಮೋದಿ ರೌಡಿಗಳನ್ನು ಬಿಟ್ಟಾರಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಪ್ರತಿಪಕ್ಷಗಳು

ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆ, ಲೋಕಸಭೆಯ ಬಜೆಟ್ ಅಧಿವೇಶನದ 10ನೇ ದಿನದ ಕಲಾಪವೂ ಸೋಮವಾರ (ಫೆ.10) ಪದೇ ಪದೇ ಮುಂದೂಡಿಕೆಯಾಯಿತು. ಎಂದಿನಂತೆ ಬೆಳಿಗ್ಗೆ 11 ಗಂಟೆಗೆ ಕಲಾಪ ಆರಂಭವಾದಾಗ ವಿರೋಧ ಪಕ್ಷಗಳ ಸದಸ್ಯರು...

ರಾಜಸ್ಥಾನ| ಅನಧಿಕೃತ ಧರ್ಮೋಪದೇಶದ ಆರೋಪ; 12 ತಬ್ಲಿಘಿ ಜಮಾತ್ ಸದಸ್ಯರ ಬಂಧನ

ಗುಜರಾತ್‌ನ ಗೋಧ್ರಾದಿಂದ ಬಂದಿದ್ದ 10 ರಿಂದ 12 ಜನರ ಗುಂಪು ಕಳೆದ ಎರಡು ದಿನಗಳಿಂದ ಬಾಗಿಡೋರಾ ಪ್ರದೇಶದಲ್ಲಿ ಓಡಾಡುತ್ತಿದೆ ಎಂದು ಸ್ಥಳೀಯ ಪೊಲೀಸರಿಗೆ ಮಾಹಿತಿ ಬಂದ ನಂತರ ಅವರನ್ನು ಬಂಧಿಸಲಾಗಿದೆ. ಅಧಿಕಾರಿಗಳಿಗೆ ಮಾಹಿತಿ...

ಕೆನಡಾದಲ್ಲಿ ನೆಲಮಂಗಲ ಮೂಲದ 37ವರ್ಷದ ಟೆಕ್ಕಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ಅಪರಿಚಿತ ಗುಂಪು 

ಬೆಂಗಳೂರು: ಕೆನಡಾದ ಟೊರೊಂಟೊದಲ್ಲಿರುವ ಜನನಿಬಿಡ ಶಾಪಿಂಗ್ ಸೆಂಟರ್‌ನ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಬೆಂಗಳೂರು ಮೂಲದ 37 ವರ್ಷದ ಟೆಕ್ಕಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೆಲಮಂಗಲ ಬಳಿಯ ತ್ಯಾಮಗೊಂಡ್ಲು ನಿವಾಸಿ...

ತೆಲಂಗಾಣ| ಪುರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಆತ್ಮಹತ್ಯೆಗೆ ಶರಣು; ಕುಟುಂಬದಿಂದ ಬೆದರಿಕೆ ಆರೋಪ

ಪುರಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಯಿಂದ ಸಾವನ್ನಪ್ಪಿರುವ ಘಟನೆ ತೆಲಂಗಾಣದಿಂದ ವರದಿಯಾಗಿದೆ. ಸೋಮವಾರ ತಡರಾತ್ರಿ ನಾರಾಯಣಪೇಟೆ ಜಿಲ್ಲೆಯ ಮಕ್ತಲ್ ಪುರಸಭೆಯಲ್ಲಿ ಈ ಘಟನೆ ನಡೆದಿದೆ. ಮಕ್ತಲ್ ಪುರಸಭೆಯ...

ದ್ವೇಷ ಭಾಷಣ : ಅಸ್ಸಾಂ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಮ್ಯುನಿಸ್ಟ್ ಪಕ್ಷಗಳು

ಮುಸ್ಲಿಮರ ವಿರುದ್ಧ ಪದೇ ಪದೇ ದ್ವೇಷ ಕಾರುತ್ತಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್ -ಸಿಪಿಐ (ಎಂ)) ಮತ್ತು ಕಮ್ಯುನಿಷ್ಟ್...