Homeಸಿನಿಮಾಕ್ರೀಡೆವರ್ಡ್‌ಕಪ್‌ ಗೆಲುವಿನ ನಂತರ ನಿವೃತ್ತಿಯ ಯೋಚನೆಯಿಂದ ಹಿಂದೆ ಸರಿದ ಮೆಸ್ಸಿ

ವರ್ಡ್‌ಕಪ್‌ ಗೆಲುವಿನ ನಂತರ ನಿವೃತ್ತಿಯ ಯೋಚನೆಯಿಂದ ಹಿಂದೆ ಸರಿದ ಮೆಸ್ಸಿ

- Advertisement -
- Advertisement -

“ಈ ಬಾರಿಯ ಫಿಫಾ ವಿಶ್ವಕಪ್ ಫೈನಲ್ ಪಂದ್ಯವೇ ನನ್ನ ಕೊನೆಯ ಅಂತರಾಷ್ಟ್ರೀಯ ಪಂದ್ಯವಾಗಬಹುದು” ಎಂದು ಹೇಳಿಕೊಂಡಿದ್ದ ಅರ್ಜೆಂಟೀನಾದ ಫುಲ್‌ಬಾಲ್‌ ಸ್ಟಾರ್‌‌ ಲಿಯೋನೆಲ್‌ ಮೆಸ್ಸಿಯವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಸುಳಿವು ನೀಡಿದ್ದಾರೆ.

ಒಂದು ತಿಂಗಳ ಹಿಂದೆ ಸೌದಿ ಅರೇಬಿಯಾ ವಿರುದ್ಧ ಆಘಾತಕಾರಿ ಸೋಲಿನ ನಂತರ ಅರ್ಜೆಂಟೀನಾ 16ರ ಸುತ್ತಿಗೆ ಪ್ರವೇಶಿಸಲು ಹೋರಾಡುತ್ತಿತ್ತು. ಲಿಯೋನೆಲ್ ಮೆಸ್ಸಿಯವರು ತಮ್ಮ ಅಭಿಮಾನಿಗಳಿಗೆ ನಂಬಿಕೆ ಇಡುವಂತೆ ಮನವಿ ಮಾಡಿದ್ದರು. ಜೊತೆಗೆ ಫೈನಲ್‌ವರೆಗೂ ಅರ್ಜೆಂಟೀನಾವನ್ನು ಮುನ್ನಡೆಸಿ, ಫ್ರಾನ್ಸ್‌ ವಿರುದ್ಧ ಗೆಲುವು ಸಾಧಿಸುವಲ್ಲಿ ಸಫಲರಾಗಿದ್ದಾರೆ. ಮೂರು ದಶಕಗಳ ನಂತರ ಅರ್ಜೆಂಟೀನಾಕ್ಕೆ ವಿಶ್ವಕಪ್ ದೊರೆತಿದೆ.

ಅರ್ಜೆಂಟೀನಾ ನಾಯಕ ಮೆಸ್ಸಿಯವರು ಲುಸೈಲ್ ಸ್ಟೇಡಿಯಂನಲ್ಲಿ ಭಾನುವಾರ ರಾತ್ರಿ ನಡೆದ ಪಂದ್ಯದಲ್ಲಿ ಫ್ರಾನ್ಸ್ ವಿರುದ್ಧ ಎರಡು ಬಾರಿ ಗೋಲು ಗಳಿಸಿದ್ದರು. ತಮ್ಮ ಅವಿಸ್ಮರಣೀಯ ಫಿಫಾ ಜರ್ನಿಯಲ್ಲಿ ವಿಶ್ವಕಪ್ ಟ್ರೋಫಿ ಗೆಲ್ಲಿಸಿಕೊಟ್ಟರು.

ವಿಶ್ವಕಪ್ ಫೈನಲ್ ಪಂದ್ಯಾವಳಿಯೇ ತನ್ನ ಕೊನೆಯ ಪ್ರದರ್ಶನ ಎಂದು ಮೆಸ್ಸಿ ಈ ಹಿಂದೆ ಎರಡು ಬಾರಿ ಸ್ಪಷ್ಟಪಡಿಸಿದ್ದರು. ಆದರೆ ಗೆಲುವಿನಿಂದ ಖುಷಿಯಾಗಿರುವ ಅರ್ಜೆಂಟೀನಾ ನಾಯಕ ತನ್ನ ನಿಲುವನ್ನು ಬದಲಿಸಿಕೊಳ್ಳುವ ಸುಳಿವು ನೀಡಿದ್ದಾರೆ.

ಕತಾರ್‌ನಲ್ಲಿ ವಿಶ್ವಕಪ್ ಪ್ರಾರಂಭವಾಗುವ ಮೊದಲು 35 ವರ್ಷದ ಮೆಸ್ಸಿಯವರು ಈ ಟೂರ್ನಿಯೇ ಅಂತಿಮ ಪ್ರದರ್ಶನ ಎಂದು ಹೇಳಿದ್ದರು. ಕಳೆದ ವಾರ ಸೆಮಿಫೈನಲ್‌ನಲ್ಲಿ ಅರ್ಜೆಂಟೀನಾ ತಂಡವು ಕ್ರೊಯೇಷಿಯಾವನ್ನು ಸೋಲಿಸಿದ ನಂತರ ಇದೇ ಮಾತನ್ನು ಮತ್ತೆ ಹೇಳಿದ್ದರು.

ಆದಾಗ್ಯೂ ವಿಶ್ವಕಪ್ ಟ್ರೋಫಿಯನ್ನು ಎತ್ತಿ ಹಿಡಿಯುವ ತಮ್ಮ ಬಹು ಕಾಲದ ಕನಸು ನನಸಾದ ನಂತರ ಮೆಸ್ಸಿ, ಅರ್ಜೆಂಟೀನಾ ಪರ ಆಡುವುದನ್ನು ಮುಂದುವರಿಸುವುದಾಗಿ ಬಹಿರಂಗಪಡಿಸಿದ್ದಾರೆ.

“ಇದು ನಿಜಕ್ಕೂ ನಂಬಲಾಗದ ಸಂಗತಿ. ದೇವರು ನನಗೆ ಕಪ್ ನೀಡಲಿದ್ದಾನೆ ಎಂದು ನನಗೆ ತಿಳಿದಿತ್ತು. ನನಗೆ ಖಚಿತವಾಗಿತ್ತು – ಇದು ನಮಗೆ ದೊಡ್ಡ ಸಂತೋಷದ ಸಂಗತಿಯಾಗಿತ್ತು. ನಾನು ಬಹಳ ದಿನಗಳಿಂದ ಈ ದೊಡ್ಡ ಕನಸನ್ನು ಹೊಂದಿದ್ದೆ. ನಾನು ವಿಶ್ವಕಪ್‌ನೊಂದಿಗೆ ನನ್ನ ವೃತ್ತಿಜೀವನವನ್ನು ಕೊನೆಗಾಣಿಸಲು ಬಯಸಿದ್ದೆ. ಇದಕ್ಕಿಂತ ಹೆಚ್ಚಿನದನ್ನು ನಾನು ಕೇಳಲಾರೆ. ಇಲ್ಲ, ನಾನು ರಾಷ್ಟ್ರೀಯ ತಂಡದಿಂದ ನಿವೃತ್ತಿ ಹೊಂದಲು ಹೋಗುವುದಿಲ್ಲ. ನಾನು ಅರ್ಜೆಂಟೀನಾ ಶರ್ಟ್‌ನೊಂದಿಗೆ ವಿಶ್ವಕಪ್ ಚಾಂಪಿಯನ್ ಆಗಿ ಆಡುವುದನ್ನು ಮುಂದುವರಿಸಲು ಬಯಸುತ್ತೇನೆ” ಎಂದಿದ್ದಾರೆ ಮೆಸ್ಸಿ. ಆ ಮೂಲಕ ಮತ್ತಷ್ಟು ಕಾಲ ಫುಟ್ಬಾಲ್‌ ಅಭಿಮಾನಿಗಳಿಗೆ ತಮ್ಮ ಕಾಲ್ಚಳಕವನ್ನು ಪ್ರದರ್ಶಿಸುವ ಸೂಚನೆ ನೀಡಿದ್ದಾರೆ.

ಪೆನಾಲ್ಟಿ ಶೂಟೌಟ್ ಮೂಲಕ ಅರ್ಜೆಂಟೀನಾ 4-2 ಗೋಲುಗಳಿಂದ ಫ್ರಾನ್ಸ್ ವಿರುದ್ಧ ಗೆದ್ದಿತು. ಫೈನಲ್‌ನ ನಂತರ ಅರ್ಜೆಂಟೀನಾದ ಫುಟ್‌ಬಾಲ್ ಕೋಚ್ ಸ್ಕಾಲೋನಿ ಮಾತನಾಡಿ, “ಮೆಸ್ಸಿ ಇನ್ನೂ 2026ರಲ್ಲಿ ಮುಂದಿನ ವಿಶ್ವಕಪ್‌ವರೆಗೆ ಆಡಬಹುದು” ಎಂದಿದ್ದಾರೆ. ಅರ್ಜೆಂಟೀನಾ ನಾಯಕನಿಗೆ ಬಾಗಿಲು ತೆರೆದಿದ್ದು, ನಿರ್ಧಾರವನ್ನು ಅವರಿಗೆಯೇ ಬಿಟ್ಟಿದ್ದಾರೆ.

“ಅವರು (ಮೆಸ್ಸಿ) ಆಡಬೇಕೆಂದು ಭಾವಿಸಿದರೆ ಮುಂದಿನ ವಿಶ್ವಕಪ್‌ಗೆ ನಾವು 10ನೇ ಸಂಖ್ಯೆಯ ಜೆರ್ಸಿಯನ್ನು ಸಿದ್ಧಪಡಿಸಬೇಕು ಎಂದು ನಾನು ಭಾವಿಸುತ್ತೇನೆ. ನಾವು ಅವರನ್ನು ಮುಂದಿನ ವಿಶ್ವಕಪ್‌ಗೆ ಉಳಿಸಬೇಕಾಗಿದೆ. ಮೆಸ್ಸಿಯವರು ಆಟವಾಡಲು ಬಯಸಿದರೆ, ಅವರು ನಮ್ಮೊಂದಿಗೆ ಇರುತ್ತಾರೆ. ಅವರು ಈಗ ತಮ್ಮ ವೃತ್ತಿಜೀವನದಲ್ಲಿ ಏನು ಮಾಡಬೇಕೆಂದು ನಿರ್ಧರಿಸಲು ಹೆಚ್ಚು ಅರ್ಹರಾಗಿದ್ದಾರೆ” ಎಂದಿದ್ದಾರೆ.

“ನಾನು ತುಂಬಾ ಹೆಮ್ಮೆಪಡುತ್ತೇನೆ. ವಿಶ್ವಕಪ್ ವಿಜೇತನಾಗಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ನಾವು 90 ನಿಮಿಷಗಳಲ್ಲಿ ಪಂದ್ಯವನ್ನು ಗೆಲ್ಲಬೇಕಾಗಿತ್ತು. ಆದರೆ ಹೆಚ್ಚಿನ ಸಮಯ ತೆಗೆದುಕೊಂಡೆವು. ಆದರೆ ಹೋರಾಡಿ ಗೆದ್ದೆವು” ಎಂದಿದ್ದಾರೆ.

“ಈ ಆಟಗಾರರು ಜನರಿಗಾಗಿ ಆಡುತ್ತಾರೆ, ಅವರು ಅರ್ಜೆಂಟೀನಾ ಅಭಿಮಾನಿಗಳಿಗಾಗಿ ಆಡುತ್ತಾರೆ, ಅವರು ಇಡೀ ದೇಶಕ್ಕಾಗಿ ಆಡುತ್ತಾರೆ” ಎಂದು ಬಣ್ಣಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...