Homeಸಿನಿಮಾಕ್ರೀಡೆಫಿಫಾ ವಿಶ್ವಕಪ್: ಕಾಲ್ಚೆಂಡಿನ ಕಾಳಗದಲ್ಲಿ ಮೂರನೇ ಕಪ್ ಗೆದ್ದ ಮೆಸ್ಸಿಯ ಅರ್ಜೆಂಟೀನಾ

ಫಿಫಾ ವಿಶ್ವಕಪ್: ಕಾಲ್ಚೆಂಡಿನ ಕಾಳಗದಲ್ಲಿ ಮೂರನೇ ಕಪ್ ಗೆದ್ದ ಮೆಸ್ಸಿಯ ಅರ್ಜೆಂಟೀನಾ

ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲು ಬಾರಿಸಿದ ಮೊದಲ ಆಟಗಾರ ಎಂಬ ವಿಶ್ವ ದಾಖಲೆಗೆ ಫ್ರಾನ್ಸ್‌ನ ಕಿಲಿಯನ್ ಎಂಬಾಪೆ ಪಾತ್ರರಾದರು.

- Advertisement -
- Advertisement -

ಜಗತ್ತಿನ ಹಲವಾರು ಜನರನ್ನು ತುದಿಗಾಲ ಮೇಲೆ ನಿಲ್ಲಿಸಿದ್ದ ಕತಾರ್ ಫಿಫಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ರೋಚಕ ಗೆಲುವು ದಾಖಲಿಸಿದ ಮೆಸ್ಸಿಯ ಅರ್ಜೆಂಟೀನಾ ಮೂರನೇ ಬಾರಿಗೆ ಕಪ್ ತನ್ನದಾಗಿಸಿಕೊಂಡಿತು. ಕೊನೆಯ ಕ್ಷಣದವರೆಗೂ ದಿಟ್ಟ ಹೋರಾಟ ನಡೆಸಿದ ಫ್ರಾನ್ಸ್ ಪೆನಾಲ್ಟಿ ಶೂಟೌಟ್‌ನಲ್ಲಿ ಎಡವಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಕತಾರ್‌ನ ಲುಸೈಲ್‌ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಅರ್ಜೆಂಟೀನಾ ತಂಡ ಆರಂಭದಿಂದಲೇ ಮೇಲುಗೈ ಸಾಧಿಸಿತ್ತು. ತಂಡದ ನಾಯಕ ಲಿಯೊನೆಲ್ ಮೆಸ್ಸಿ 23ನೇ ನಿಮಿಷದಲ್ಲಿ ಪೆನಾಲ್ಟಿ ಕಿಕ್‌ನಲ್ಲಿ ಗೋಲು ಗಳಿಸಿದರೆ, ಮತ್ತೊಬ್ಬ ಆಟಗಾರ ಡಿ ಮರಿಯಾ 36ನೇ ನಿಮಿಷದಲ್ಲಿ ಗೋಲು ಗಳಿಸುವ ಮೂಲಕ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದ್ದರು. ಚೆಂಡು ಬಹುತೇಕ ಸಮಯದಲ್ಲಿ ಅರ್ಜೆಂಟೀನಾ ಕಾಲಡಿಯಲ್ಲಿಯೇ ಇಟ್ಟುಕೊಳ್ಳುವ ಮೂಲಕ ಫ್ರಾನ್ಸ್‌ ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿದ್ದರು.

ಆದರೆ ಪಂದ್ಯದ 80ನೇ ನಿಮಿಷದಲ್ಲಿ ಫ್ರಾನ್ಸ್‌ ತಂಡದ ಯುವ ಆಟಗಾರ ಕಿಲಿಯನ್ ಎಂಬಾಪೆ ಮ್ಯಾಜಿಕ್ ಮಾಡಿದರು. ಪೆನಾಲ್ಟಿ ಕಿಕ್ ಅನ್ನು ಗೋಲ್ ಆಗಿ ಪರಿವರ್ತಿಸಿದ ಅವರು, ಮತ್ತೆ ಒಂದು ನಿಮಿಷದ ಅಂತರದಲ್ಲಿ ಅದ್ಭುತ ಗೋಲ್ ಬಾರಿಸುವ ಮೂಲಕ ಪಂದ್ಯವನ್ನು 2-2 ಕ್ಕೆ ತಂದು ಸಮಬಲ ಸಾಧಿಸುವಂತೆ ಮಾಡಿದರು. ಫ್ರಾನ್ಸ್ ಅಭಿಮಾನಿಗಳು ಸಂಭ್ರಮದಲ್ಲಿ ಮಿಂದೇಳುವಂತೆ, ಆಟಗಾರರು ಮತ್ತೆ ಕೆಚ್ಚೆದೆಯಿಂದ ಆಡುವಂತೆ ಮಾಡಿದ ಎಂಬಾಪೆ ಪಂದ್ಯವನ್ನು ಹೆಚ್ಚುವರಿ ಸಮಯಕ್ಕೆ ತೆಗೆದುಕೊಂಡು ಹೋದರು. ನಿರಾಶೆಯ ಮಡಿಲಲ್ಲಿದ್ದ ಫ್ರಾನ್ಸ್ ಆಟಗಾರರು ಮತ್ತೆ ಪುಟಿದೇಳುವಂತೆ ಮಾಡಿದರು.

ನಿಗಧಿತ 90 ನಿಮಿಷಗಳ ಅವಧಿಯಲ್ಲಿ ಎರಡೂ ತಂಡಗಳು 2-2 ಗೋಲುಗಳೊಂದಿಗೆ ಸಮಬಲ ಸಾಧಿಸಿದ್ದರಿಂದ ಮತ್ತೆ 30 ನಿಮಿಷಗಳ ಹೆಚ್ಚುವರಿ ಸಮಯ ನೀಡಲಾಯಿತು. ಆಗ 108 ನಿಮಿಷದಲ್ಲಿ ಸಿಕ್ಕ ಅವಕಾಶವನ್ನು ತಪ್ಪಿಸದ ಅರ್ಜೆಂಟೀನಾದ ಮೆಸ್ಸಿ ಸುಂದರ ಗೋಲು ಗಳಿಸುವ ಮೂಲಕ 3-2 ಅಂತರ ಸಾಧಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಆದರೆ ಛಲ ಬಿಡದಂತೆ ಆಡಿದ ಫ್ರಾನ್ಸ್‌ನ ಎಂಬಾಪೆ ಕಡೆಯ ಹಂತದಲ್ಲಿ ಪೆನಾಲ್ಟಿ ಕಿಕ್ ಅವಕಾಶವನ್ನು ನೇರ ಗೋಲ್ ಬಾರಿಸಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲು ಬಾರಿಸಿದ ಮೊದಲ ಆಟಗಾರ ಎಂಬ ವಿಶ್ವ ದಾಖಲೆಗೆ ಪಾತ್ರರಾದರು. ಅಲ್ಲದೆ ಪಂದ್ಯವನ್ನು 3-3 ಸಮಬಲಕ್ಕೆ ತಂದು ಕಪ್ ಆಸೆಯನ್ನು ಜೀವಂತವಾಗಿರಿಸಿದರು.

ಪೆನಾಲ್ಟಿ ಶೂಟೌಟ್‌

ಹೆಚ್ಚುವರಿ ಸಮಯದಲ್ಲಿಯೂ ಉಭಯ ತಂಡಗಳು ಸಮಬಲ ಸಾಧಿಸಿದ್ದರಿಂದ ಪೆನಾಲ್ಟಿ ಶೂಟೌಟ್‌ ನೀಡಲಾಯಿತು. ಮೊದಲು ಕಿಕ್ ಮಾಡುವ ಅವಕಾಶ ಪಡೆದ ಫ್ರಾನ್ಸ್ ತಮ್ಮ ಮೊದಲ ಪ್ರಯತ್ನದಲ್ಲಿಯೇ ಎಂಬಾಪೆ ಚೆಂಡನ್ನು ಗೋಲ್ ಪೋಸ್ಟ್ ತಲುಪಿಸಿದರು. ಅದೇ ರೀತಿ ಅರ್ಜೆಂಟೀನಾದ ಮೆಸ್ಸಿ ಸಹ ಗುರಿ ತಪ್ಪಲಿಲ್ಲ. ಆದರೆ ಫ್ರಾನ್ಸ್ ತನ್ನ ಎರಡನೆ ಪ್ರಯತ್ನದಲ್ಲಿ ವಿಫಲವಾಯಿತು. ಅರ್ಜೆಂಟೀನಾ ತನ್ನ ನಾಲ್ಕು ಪ್ರಯತ್ನಗಳಲ್ಲಿ ನಾಲ್ಕು ಪೆನಾಲ್ಟಿ ಗೋಲ್ ಗಳಿಸಿದರೆ, ಫ್ರಾನ್ಸ್ ಕೇವಲ ಎರಡು ಗೋಲು ಗಳಿಸಲು ಸಾಧ್ಯವಾಗಿ ಸೋಲೊಪ್ಪಿಕೊಂಡಿತು. ಎಂಬಾಪೆಯ ಶ್ರಮ ವ್ಯರ್ಥವಾಯಿತು. ಅರ್ಜೆಂಟೀನಾ ಪೆನಾಲ್ಟಿ ಶೂಟೌಟ್‌ನಲ್ಲಿ (4-2 ಅಂತರದಲ್ಲಿ) ಗೆದ್ದು ಸಂಭ್ರಮಿಸಿತು. ಮೆಸ್ಸಿ ತನ್ನ ಬಹುದಿನದ ವಿಶ್ವಕಪ್ ಗೆಲುವಿನ ಕನಸು ನನಸಾಗಿಸಿಕೊಂಡರು. ಅವರ ವಿದಾಯಕ್ಕೆ ಸೂಕ್ತ ಗೌರವ ದೊರಕಿತೆಂಬ ಭಾವ ಎಲ್ಲರಲ್ಲಿ ಮೂಡಿತು.

ಗೋಲ್ಡನ್ ಬೂಟ್ ಗೆದ್ದ ಎಂಬಾಪೆ, ಗೋಲ್ಡನ್ ಬಾಲ್ ತನ್ನದಾಗಿಸಿಕೊಂಡ ಮೆಸ್ಸಿ

ಈ ವಿಶ್ವಕಪ್‌ನಲ್ಲಿ 8 ಗೋಲು ಗಳಿಸಿದ ಕಿಲಿಯನ್ ಎಂಬಾಪೆ ಗೋಲ್ಡನ್ ಬೂಟ್ ಪ್ರಶಸ್ತಿ ಮುಡಿಗೇರಿಸಿಕೊಂಡರು. ಆದರೆ ಫ್ರಾನ್ಸ್ ಸೋತ ನಿರಾಸೆಯಲ್ಲಿ ಅವರು ಅದನ್ನು ಸಂಭ್ರಮಿಸಲೇ ಇಲ್ಲ. ಇನ್ನೊಂದೆಡೆ 7 ಗೋಲ್ ಗಳಿಸಿದ ಮೆಸ್ಸಿಗೆ ಗೋಲ್ಡನ್ ಬಾಲ್ ಪ್ರಶಸ್ತಿ ದಕ್ಕಿತು. ಗೋಲ್ಡನ್ ಗ್ಲೋವ್ ಪ್ರಶಸ್ತಿ ಅರ್ಜೆಂಟೀನಾದ ಎಮಿಲಿಯಾನೋ ಮಾರ್ಟಿನೆಜ್ ಪಾಲಾದರೆ, FIFA ಯುವ ಆಟಗಾರ ಪ್ರಶಸ್ತಿಯನ್ನು ಅದೇ ದೇಶದ ಎಂಝೋ ಫೆರ್ನಾಂಡಿಸ್ ತನ್ನದಾಗಿಸಿಕೊಂಡರು.

ಇದನ್ನೂ ಓದಿ: ವರ್ಡ್‌ಕಪ್‌ ಗೆಲುವಿನ ನಂತರ ನಿವೃತ್ತಿಯ ಯೋಚನೆಯಿಂದ ಹಿಂದೆ ಸರಿದ ಮೆಸ್ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...