Homeಸಿನಿಮಾಕ್ರೀಡೆಫ್ರಾನ್ಸ್‌ ಸೋತರೂ ಫುಟ್‌ಬಾಲ್‌ ಪ್ರೇಮಿಗಳ ಮನಗೆದ್ದ ಎಂಬಾಪೆ; ಗೋಲ್ಡನ್ ಬೂಟ್‌ ಪಯಣದ ಯಶೋಗಾಥೆ

ಫ್ರಾನ್ಸ್‌ ಸೋತರೂ ಫುಟ್‌ಬಾಲ್‌ ಪ್ರೇಮಿಗಳ ಮನಗೆದ್ದ ಎಂಬಾಪೆ; ಗೋಲ್ಡನ್ ಬೂಟ್‌ ಪಯಣದ ಯಶೋಗಾಥೆ

- Advertisement -
- Advertisement -

23 ವರ್ಷ ವಯಸ್ಸಿನ ಕಿಲಿಯಾನ್ ಎಂಬಾಪೆ ಈ ಬಾರಿಯ ಫಿಫಾ ವರ್ಡ್‌ಕಪ್‌ನಲ್ಲಿ ಗೋಲ್ಡನ್‌ ಬೂಟ್‌ ಪಡೆದ ಫ್ರಾನ್ಸ್ ಆಟಗಾರ. ಫೈನಲ್‌ ಪಂದ್ಯದಲ್ಲಿ ಅರ್ಜೆಂಟೀನಾ ವಿರುದ್ಧ ಫ್ರಾನ್ಸ್ ಸೋತರೂ ಫುಟ್ಬಾಲ್‌ ಪ್ರೇಮಿಗಳ ಮನಗೆದ್ದವರು ಎಂಬಾಪೆ.

2018ರಲ್ಲಿ ರಷ್ಯಾದಲ್ಲಿ ನಡೆದ ಫಿಫಾ ವರ್ಡ್‌ಕಪ್‌ನಲ್ಲಿ ‘ಬೆಸ್ಟ್ ಯಂಗ್ ಪ್ಲೇಯರ್‌ ಅವಾರ್ಡ್’ ಪಡೆದಿದ್ದ ಎಂಬಾಪೆ ಈ ಸಲದ ಕತಾರ್‌ ವರ್ಡ್‌ಕಪ್‌ನಲ್ಲಿ ಅತಿ ಹೆಚ್ಚು ಗೋಲ್‌ ಭಾರಿಸುವ ಮೂಲಕ ‘ಗೋಲ್ಡನ್ ಬೂಟ್ ಅವಾರ್ಡ್’ ತಮ್ಮದಾಗಿಸಿಕೊಂಡರು.

ವರ್ಡ್‌ಕಪ್‌ ಫೈನಲ್‌ನಲ್ಲಿ ಹ್ಯಾಟ್ರಿಕ್‌ ಗೋಲ್ ಗಳಿಸಿದ ಎರಡನೇ ಆಟಗಾರರಾಗಿ ಎಂಬಾಪೆ ಹೊಮ್ಮಿದರು. 1966ರಲ್ಲಿ ಇಂಗ್ಲೆಂಡ್‌ನ ಜಿಯೋಫ್ ಹರ್ಸ್ಟ್ ಈ ಸಾಧನೆ ಮಾಡಿದ್ದರು.

2022ರ ವರ್ಡ್ ಕಪ್‌ ಫೈನಲ್ ಭಾರೀ ಪೈಪೋಟಿಯಿಂದ ಕೂಡಿತ್ತು. ಅರ್ಜೆಂಟೀನಾ ಪರವಾಗಿ ಡಿ ಮಾರಿಯ ಒಂದು ಗೋಲ್‌, ಲಿಯೋನಲ್ ಮೆಸ್ಸಿ ಎರಡು ಗೋಲ್ ಭಾರಿಸಿದರೆ, ಫ್ರಾನ್ಸ್‌ ಪರವಾಗಿ ಮೂರು ಗೋಲ್‌ಗಳನ್ನೂ ಎಂಬಾಪೆ ಒಬ್ಬರೇ ಗಳಿಸುವ ಮೂಲಕ ಪೆನಾಲ್ಟಿ ಶೂಟ್‌ಗೆ ಪಂದ್ಯ ಕಾಲಿಡಲು ಕಾರಣವಾದರು.

ತೊಂಬತ್ತು ನಿಮಿಷಗಳ ಆಟದ ಮೊದಲಾರ್ಧದಲ್ಲಿ ಅರ್ಜೆಂಟೀನಾ ಮೇಲುಗೈ ಸಾಧಿಸಿತು. ಆದರೆ ದ್ವಿತೀಯಾರ್ಧದಲ್ಲಿ ಒಂದು ಪ್ಯಾನಲ್ಟಿ ಸೇರಿದಂತೆ ಎಂಬಾಪೆ ಬಾರಿಸಿದ ಎರಡು ಗೋಲುಗಳು ಪಂದ್ಯದ ದಿಕ್ಕನ್ನೇ ಬದಲಿಸಿತು. ಮತ್ತೆ ಹೆಚ್ಚುವರಿ ಅರ್ಧ ಗಂಟೆಯಲ್ಲಿ ಮೆಸ್ಸಿ ಒಂದು ಗೋಲು ಗಳಿಸಿದರು. ಪ್ಯಾನಲ್ಟಿ ಗೋಲಿನ ಅದೃಷ್ಟ ಪಡೆದ ಎಂಬಾಪೆ ಮತ್ತೊಂದು ಗೋಲು ತಮ್ಮದಾಗಿಸಿಕೊಂಡರು. ಹೀಗೆ ಸಮಬಲ ಸಾಧಿಸಿದ ಪಂದ್ಯ ಪ್ಯಾನಲ್ಟಿ ಶೂಟೌಟ್‌ಗೆ ಕಾಲಿಟ್ಟಿದ್ದು ರೋಮಾಂಚನಕಾರಿಯಾಗಿತ್ತು. ಫೈನಲ್‌ನಲ್ಲಿ ನಾಲ್ಕು ಗೋಲು ಗಳಿಸಿದ ಖ್ಯಾತಿಗೂ ಎಂಬಾಪೆ ಪಾತ್ರರಾಗಿದ್ದಾರೆ. 2018ರ ವರ್ಡ್‌ಕಪ್‌ ಫೈನಲ್‌ನಲ್ಲಿ ಕ್ರೊಯೇಷಿಯ ವಿರುದ್ಧ ಒಂದು ಗೋಲನ್ನು ಎಂಬಾಪೆ ಗಳಿಸಿದ್ದರು.

ಫೈನಲ್ ಪಂದ್ಯದ ಆರಂಭಕ್ಕೂ ಮೊದಲು ಮೆಸ್ಸಿ ಮತ್ತು ಎಂಬಾಪೆ ನಡುವೆ ಗೋಲ್ಡನ್ ಬೂಟ್‌ ಯಾರಿಗೆ ದೊರಕುತ್ತದೆ ಎಂಬ ಕುತೂಹಲ ಉಂಟಾಗಿತ್ತು. ಪಂದ್ಯದ ಏರಿಳಿತದಲ್ಲಿ ಒಮ್ಮೆ ಮೆಸ್ಸಿ ಕಡೆಗೂ ಮತ್ತೊಂದು ಸಲ ಎಂಬಾಪೆ ಕಡೆಗೂ ಗೋಲ್ಡನ್‌ ಬೂಟ್‌ ಅವಕಾಶ ಹರಿದಾಡುತ್ತಿತ್ತು. ಅಂತಿಮವಾಗಿ ಏಳು ಗೋಲನ್ನು ಮೆಸ್ಸಿ ಗಳಿಸಿದರೆ, ಎಂಬಾಪೆ ಎಂಟು ಗೋಲು ಭಾರಿಸಿದರು.

ಗೋಲ್ಡನ್ ಬೂಟ್‌ನ ಸಮರ ಹೇಗಿತ್ತು?

ಕತಾರ್‌ ವಿಶ್ವಕಪ್‌ ಟೂರ್ನಿಯಲ್ಲಿ ಒಟ್ಟು ಎಂಟು ಗೋಲ್‌ಗಳನ್ನು ಎಂಬಾಪೆ ಗಳಿಸಿದ್ದಾರೆ. ಜೊತೆಗೆ ಎರಡು ಗೋಲ್‌ಗಳಿಗೆ ಅಸಿಸ್ಟ್‌ (ನೆರವು) ಮಾಡಿದ್ದಾರೆ. ಫ್ರಾನ್ಸ್‌ ತಂಡವು ಟೂರ್ನಿಯಲ್ಲಿ ಫೈನಲ್‌ ತಲುಪಿ, ಪ್ರಬಲ ಪೈಪೋಟಿ ನೀಡಲು ಕಾರಣವಾದ ಎಂಬಾಪೆಯ ಗೋಲ್‌ಗಳು ಹೀಗಿದ್ದವು:

(ಆವರಣದಲ್ಲಿ ನೀಡಿರುವುದು ಎಂಬಾಪೆ ಗಳಿಸಿದ ಗೋಲ್‌ಗಳ ಸಂಖ್ಯೆ)

ಡಿ ಗುಂಪು: ಫ್ರಾನ್ಸ್ 4-1 ಆಸ್ಟ್ರೇಲಿಯಾ (1 ಗೋಲು, 1 ಅಸಿಸ್ಟ್‌)

ಡಿ ಗುಂಪು: ಫ್ರಾನ್ಸ್ 2-1 ಡೆನ್ಮಾರ್ಕ್ (2 ಗೋಲು)

ಡಿ ಗುಂಪು: ಟುನೀಶಿಯಾ 1-0 ಫ್ರಾನ್ಸ್ (0 ಗೋಲುಗಳು)

16ರ ಸುತ್ತು: ಫ್ರಾನ್ಸ್ 3-1 ಪೋಲೆಂಡ್ (2 ಗೋಲುಗಳು, 1 ಅಸಿಸ್ಟ್)

ಕ್ವಾರ್ಟರ್-ಫೈನಲ್: ಇಂಗ್ಲೆಂಡ್ 1-2 ಫ್ರಾನ್ಸ್ (0 ಗೋಲು)

ಸೆಮಿಫೈನಲ್: ಫ್ರಾನ್ಸ್ 2-0 ಮೊರಾಕೊ (0 ಗೋಲು)

ಫೈನಲ್: ಅರ್ಜೆಂಟೀನಾ 3-3 ಫ್ರಾನ್ಸ್ (3 ಗೋಲುಗಳು)

ಮೆಸ್ಸಿ ಮ್ಯಾಜಿಕ್‌

ಅರ್ಜೆಂಟೀನಾದ ಸ್ಟಾರ್‌ ಆಟಗಾರ ಲಿಯೋನೆಲ್ ಮೆಸ್ಸಿ, ಅರ್ಜೇಂಟೀನಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇನ್ನೊಂದು ಗೋಲ್ ಗಳಿಸಿದ್ದರೂ ಅವರು ಎಂಬಾಪೆ ಅವರೊಂದಿಗೆ ಸಮಬಲ ಸಾಧಿಸಿ ಗೋಲ್ಡನ್‌ ಬೂಟ್‌ ಪಡೆಯುತ್ತಿದ್ದರು. ಯಾಕೆಂದರೆ ಒಂದು ಹೆಚ್ಚುವರಿ ಅಸಿಸ್ಟ್ ಮಾಡಿದ ದಾಖಲೆ ಮೆಸ್ಸಿ ಅವರ ಪಾಲಿಗಿತ್ತು. ಅಂತಿಮವಾಗಿ ಮೆಸ್ಸಿ ಈ ಟೂರ್ನಿಯಲ್ಲಿ 7 ಗೋಲು ಹಾಗೂ 3 ಅಸಿಸ್ಟ್‌ ಮಾಡಿದ್ದಾರೆ.

ಮೆಸ್ಸಿ ಗೋಲ್‌ ಭಾರಿಸಿದ ಪಂದ್ಯಗಳು ಹೀಗಿವೆ:

(ಆವರಣದಲ್ಲಿ ನೀಡಿರುವುದು ಮೆಸ್ಸಿ ಗಳಿಸಿದ ಗೋಲ್‌ಗಳ ಸಂಖ್ಯೆ)

ಗುಂಪು ಸಿ: ಅರ್ಜೆಂಟೀನಾ 1-2 ಸೌದಿ ಅರೇಬಿಯಾ (1 ಗೋಲು)

ಗುಂಪು ಸಿ: ಅರ್ಜೆಂಟೀನಾ 2-1 ಮೆಕ್ಸಿಕೋ (1 ಗೋಲು, 1 ಅಸಿಸ್ಟ್‌)

ಗುಂಪು ಸಿ: ಪೋಲೆಂಡ್ 0-2 ಅರ್ಜೆಂಟೀನಾ (0 ಗೋಲುಗಳು)

16ರ ಸುತ್ತು: ಅರ್ಜೆಂಟೀನಾ 2-1 ಆಸ್ಟ್ರೇಲಿಯಾ (1 ಗೋಲು)

ಕ್ವಾರ್ಟರ್-ಫೈನಲ್: ನೆದರ್ಲ್ಯಾಂಡ್ಸ್ 2-2 ಅರ್ಜೆಂಟೀನಾ (1 ಗೋಲು, 1 ಅಸಿಸ್ಟ್‌)

ಸೆಮಿಫೈನಲ್: ಅರ್ಜೆಂಟೀನಾ 3-0 ಕ್ರೊಯೇಷಿಯಾ (1 ಗೋಲು, 1 ನೆರವು)

ಫೈನಲ್: ಅರ್ಜೆಂಟೀನಾ 3-3 ಫ್ರಾನ್ಸ್ (2 ಗೋಲು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...