Homeಸಿನಿಮಾಕ್ರೀಡೆಫ್ರಾನ್ಸ್‌ ಸೋತರೂ ಫುಟ್‌ಬಾಲ್‌ ಪ್ರೇಮಿಗಳ ಮನಗೆದ್ದ ಎಂಬಾಪೆ; ಗೋಲ್ಡನ್ ಬೂಟ್‌ ಪಯಣದ ಯಶೋಗಾಥೆ

ಫ್ರಾನ್ಸ್‌ ಸೋತರೂ ಫುಟ್‌ಬಾಲ್‌ ಪ್ರೇಮಿಗಳ ಮನಗೆದ್ದ ಎಂಬಾಪೆ; ಗೋಲ್ಡನ್ ಬೂಟ್‌ ಪಯಣದ ಯಶೋಗಾಥೆ

- Advertisement -
- Advertisement -

23 ವರ್ಷ ವಯಸ್ಸಿನ ಕಿಲಿಯಾನ್ ಎಂಬಾಪೆ ಈ ಬಾರಿಯ ಫಿಫಾ ವರ್ಡ್‌ಕಪ್‌ನಲ್ಲಿ ಗೋಲ್ಡನ್‌ ಬೂಟ್‌ ಪಡೆದ ಫ್ರಾನ್ಸ್ ಆಟಗಾರ. ಫೈನಲ್‌ ಪಂದ್ಯದಲ್ಲಿ ಅರ್ಜೆಂಟೀನಾ ವಿರುದ್ಧ ಫ್ರಾನ್ಸ್ ಸೋತರೂ ಫುಟ್ಬಾಲ್‌ ಪ್ರೇಮಿಗಳ ಮನಗೆದ್ದವರು ಎಂಬಾಪೆ.

2018ರಲ್ಲಿ ರಷ್ಯಾದಲ್ಲಿ ನಡೆದ ಫಿಫಾ ವರ್ಡ್‌ಕಪ್‌ನಲ್ಲಿ ‘ಬೆಸ್ಟ್ ಯಂಗ್ ಪ್ಲೇಯರ್‌ ಅವಾರ್ಡ್’ ಪಡೆದಿದ್ದ ಎಂಬಾಪೆ ಈ ಸಲದ ಕತಾರ್‌ ವರ್ಡ್‌ಕಪ್‌ನಲ್ಲಿ ಅತಿ ಹೆಚ್ಚು ಗೋಲ್‌ ಭಾರಿಸುವ ಮೂಲಕ ‘ಗೋಲ್ಡನ್ ಬೂಟ್ ಅವಾರ್ಡ್’ ತಮ್ಮದಾಗಿಸಿಕೊಂಡರು.

ವರ್ಡ್‌ಕಪ್‌ ಫೈನಲ್‌ನಲ್ಲಿ ಹ್ಯಾಟ್ರಿಕ್‌ ಗೋಲ್ ಗಳಿಸಿದ ಎರಡನೇ ಆಟಗಾರರಾಗಿ ಎಂಬಾಪೆ ಹೊಮ್ಮಿದರು. 1966ರಲ್ಲಿ ಇಂಗ್ಲೆಂಡ್‌ನ ಜಿಯೋಫ್ ಹರ್ಸ್ಟ್ ಈ ಸಾಧನೆ ಮಾಡಿದ್ದರು.

2022ರ ವರ್ಡ್ ಕಪ್‌ ಫೈನಲ್ ಭಾರೀ ಪೈಪೋಟಿಯಿಂದ ಕೂಡಿತ್ತು. ಅರ್ಜೆಂಟೀನಾ ಪರವಾಗಿ ಡಿ ಮಾರಿಯ ಒಂದು ಗೋಲ್‌, ಲಿಯೋನಲ್ ಮೆಸ್ಸಿ ಎರಡು ಗೋಲ್ ಭಾರಿಸಿದರೆ, ಫ್ರಾನ್ಸ್‌ ಪರವಾಗಿ ಮೂರು ಗೋಲ್‌ಗಳನ್ನೂ ಎಂಬಾಪೆ ಒಬ್ಬರೇ ಗಳಿಸುವ ಮೂಲಕ ಪೆನಾಲ್ಟಿ ಶೂಟ್‌ಗೆ ಪಂದ್ಯ ಕಾಲಿಡಲು ಕಾರಣವಾದರು.

ತೊಂಬತ್ತು ನಿಮಿಷಗಳ ಆಟದ ಮೊದಲಾರ್ಧದಲ್ಲಿ ಅರ್ಜೆಂಟೀನಾ ಮೇಲುಗೈ ಸಾಧಿಸಿತು. ಆದರೆ ದ್ವಿತೀಯಾರ್ಧದಲ್ಲಿ ಒಂದು ಪ್ಯಾನಲ್ಟಿ ಸೇರಿದಂತೆ ಎಂಬಾಪೆ ಬಾರಿಸಿದ ಎರಡು ಗೋಲುಗಳು ಪಂದ್ಯದ ದಿಕ್ಕನ್ನೇ ಬದಲಿಸಿತು. ಮತ್ತೆ ಹೆಚ್ಚುವರಿ ಅರ್ಧ ಗಂಟೆಯಲ್ಲಿ ಮೆಸ್ಸಿ ಒಂದು ಗೋಲು ಗಳಿಸಿದರು. ಪ್ಯಾನಲ್ಟಿ ಗೋಲಿನ ಅದೃಷ್ಟ ಪಡೆದ ಎಂಬಾಪೆ ಮತ್ತೊಂದು ಗೋಲು ತಮ್ಮದಾಗಿಸಿಕೊಂಡರು. ಹೀಗೆ ಸಮಬಲ ಸಾಧಿಸಿದ ಪಂದ್ಯ ಪ್ಯಾನಲ್ಟಿ ಶೂಟೌಟ್‌ಗೆ ಕಾಲಿಟ್ಟಿದ್ದು ರೋಮಾಂಚನಕಾರಿಯಾಗಿತ್ತು. ಫೈನಲ್‌ನಲ್ಲಿ ನಾಲ್ಕು ಗೋಲು ಗಳಿಸಿದ ಖ್ಯಾತಿಗೂ ಎಂಬಾಪೆ ಪಾತ್ರರಾಗಿದ್ದಾರೆ. 2018ರ ವರ್ಡ್‌ಕಪ್‌ ಫೈನಲ್‌ನಲ್ಲಿ ಕ್ರೊಯೇಷಿಯ ವಿರುದ್ಧ ಒಂದು ಗೋಲನ್ನು ಎಂಬಾಪೆ ಗಳಿಸಿದ್ದರು.

ಫೈನಲ್ ಪಂದ್ಯದ ಆರಂಭಕ್ಕೂ ಮೊದಲು ಮೆಸ್ಸಿ ಮತ್ತು ಎಂಬಾಪೆ ನಡುವೆ ಗೋಲ್ಡನ್ ಬೂಟ್‌ ಯಾರಿಗೆ ದೊರಕುತ್ತದೆ ಎಂಬ ಕುತೂಹಲ ಉಂಟಾಗಿತ್ತು. ಪಂದ್ಯದ ಏರಿಳಿತದಲ್ಲಿ ಒಮ್ಮೆ ಮೆಸ್ಸಿ ಕಡೆಗೂ ಮತ್ತೊಂದು ಸಲ ಎಂಬಾಪೆ ಕಡೆಗೂ ಗೋಲ್ಡನ್‌ ಬೂಟ್‌ ಅವಕಾಶ ಹರಿದಾಡುತ್ತಿತ್ತು. ಅಂತಿಮವಾಗಿ ಏಳು ಗೋಲನ್ನು ಮೆಸ್ಸಿ ಗಳಿಸಿದರೆ, ಎಂಬಾಪೆ ಎಂಟು ಗೋಲು ಭಾರಿಸಿದರು.

ಗೋಲ್ಡನ್ ಬೂಟ್‌ನ ಸಮರ ಹೇಗಿತ್ತು?

ಕತಾರ್‌ ವಿಶ್ವಕಪ್‌ ಟೂರ್ನಿಯಲ್ಲಿ ಒಟ್ಟು ಎಂಟು ಗೋಲ್‌ಗಳನ್ನು ಎಂಬಾಪೆ ಗಳಿಸಿದ್ದಾರೆ. ಜೊತೆಗೆ ಎರಡು ಗೋಲ್‌ಗಳಿಗೆ ಅಸಿಸ್ಟ್‌ (ನೆರವು) ಮಾಡಿದ್ದಾರೆ. ಫ್ರಾನ್ಸ್‌ ತಂಡವು ಟೂರ್ನಿಯಲ್ಲಿ ಫೈನಲ್‌ ತಲುಪಿ, ಪ್ರಬಲ ಪೈಪೋಟಿ ನೀಡಲು ಕಾರಣವಾದ ಎಂಬಾಪೆಯ ಗೋಲ್‌ಗಳು ಹೀಗಿದ್ದವು:

(ಆವರಣದಲ್ಲಿ ನೀಡಿರುವುದು ಎಂಬಾಪೆ ಗಳಿಸಿದ ಗೋಲ್‌ಗಳ ಸಂಖ್ಯೆ)

ಡಿ ಗುಂಪು: ಫ್ರಾನ್ಸ್ 4-1 ಆಸ್ಟ್ರೇಲಿಯಾ (1 ಗೋಲು, 1 ಅಸಿಸ್ಟ್‌)

ಡಿ ಗುಂಪು: ಫ್ರಾನ್ಸ್ 2-1 ಡೆನ್ಮಾರ್ಕ್ (2 ಗೋಲು)

ಡಿ ಗುಂಪು: ಟುನೀಶಿಯಾ 1-0 ಫ್ರಾನ್ಸ್ (0 ಗೋಲುಗಳು)

16ರ ಸುತ್ತು: ಫ್ರಾನ್ಸ್ 3-1 ಪೋಲೆಂಡ್ (2 ಗೋಲುಗಳು, 1 ಅಸಿಸ್ಟ್)

ಕ್ವಾರ್ಟರ್-ಫೈನಲ್: ಇಂಗ್ಲೆಂಡ್ 1-2 ಫ್ರಾನ್ಸ್ (0 ಗೋಲು)

ಸೆಮಿಫೈನಲ್: ಫ್ರಾನ್ಸ್ 2-0 ಮೊರಾಕೊ (0 ಗೋಲು)

ಫೈನಲ್: ಅರ್ಜೆಂಟೀನಾ 3-3 ಫ್ರಾನ್ಸ್ (3 ಗೋಲುಗಳು)

ಮೆಸ್ಸಿ ಮ್ಯಾಜಿಕ್‌

ಅರ್ಜೆಂಟೀನಾದ ಸ್ಟಾರ್‌ ಆಟಗಾರ ಲಿಯೋನೆಲ್ ಮೆಸ್ಸಿ, ಅರ್ಜೇಂಟೀನಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇನ್ನೊಂದು ಗೋಲ್ ಗಳಿಸಿದ್ದರೂ ಅವರು ಎಂಬಾಪೆ ಅವರೊಂದಿಗೆ ಸಮಬಲ ಸಾಧಿಸಿ ಗೋಲ್ಡನ್‌ ಬೂಟ್‌ ಪಡೆಯುತ್ತಿದ್ದರು. ಯಾಕೆಂದರೆ ಒಂದು ಹೆಚ್ಚುವರಿ ಅಸಿಸ್ಟ್ ಮಾಡಿದ ದಾಖಲೆ ಮೆಸ್ಸಿ ಅವರ ಪಾಲಿಗಿತ್ತು. ಅಂತಿಮವಾಗಿ ಮೆಸ್ಸಿ ಈ ಟೂರ್ನಿಯಲ್ಲಿ 7 ಗೋಲು ಹಾಗೂ 3 ಅಸಿಸ್ಟ್‌ ಮಾಡಿದ್ದಾರೆ.

ಮೆಸ್ಸಿ ಗೋಲ್‌ ಭಾರಿಸಿದ ಪಂದ್ಯಗಳು ಹೀಗಿವೆ:

(ಆವರಣದಲ್ಲಿ ನೀಡಿರುವುದು ಮೆಸ್ಸಿ ಗಳಿಸಿದ ಗೋಲ್‌ಗಳ ಸಂಖ್ಯೆ)

ಗುಂಪು ಸಿ: ಅರ್ಜೆಂಟೀನಾ 1-2 ಸೌದಿ ಅರೇಬಿಯಾ (1 ಗೋಲು)

ಗುಂಪು ಸಿ: ಅರ್ಜೆಂಟೀನಾ 2-1 ಮೆಕ್ಸಿಕೋ (1 ಗೋಲು, 1 ಅಸಿಸ್ಟ್‌)

ಗುಂಪು ಸಿ: ಪೋಲೆಂಡ್ 0-2 ಅರ್ಜೆಂಟೀನಾ (0 ಗೋಲುಗಳು)

16ರ ಸುತ್ತು: ಅರ್ಜೆಂಟೀನಾ 2-1 ಆಸ್ಟ್ರೇಲಿಯಾ (1 ಗೋಲು)

ಕ್ವಾರ್ಟರ್-ಫೈನಲ್: ನೆದರ್ಲ್ಯಾಂಡ್ಸ್ 2-2 ಅರ್ಜೆಂಟೀನಾ (1 ಗೋಲು, 1 ಅಸಿಸ್ಟ್‌)

ಸೆಮಿಫೈನಲ್: ಅರ್ಜೆಂಟೀನಾ 3-0 ಕ್ರೊಯೇಷಿಯಾ (1 ಗೋಲು, 1 ನೆರವು)

ಫೈನಲ್: ಅರ್ಜೆಂಟೀನಾ 3-3 ಫ್ರಾನ್ಸ್ (2 ಗೋಲು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...