Homeಸಿನಿಮಾಕ್ರೀಡೆಫ್ರಾನ್ಸ್‌ ಸೋತರೂ ಫುಟ್‌ಬಾಲ್‌ ಪ್ರೇಮಿಗಳ ಮನಗೆದ್ದ ಎಂಬಾಪೆ; ಗೋಲ್ಡನ್ ಬೂಟ್‌ ಪಯಣದ ಯಶೋಗಾಥೆ

ಫ್ರಾನ್ಸ್‌ ಸೋತರೂ ಫುಟ್‌ಬಾಲ್‌ ಪ್ರೇಮಿಗಳ ಮನಗೆದ್ದ ಎಂಬಾಪೆ; ಗೋಲ್ಡನ್ ಬೂಟ್‌ ಪಯಣದ ಯಶೋಗಾಥೆ

- Advertisement -
- Advertisement -

23 ವರ್ಷ ವಯಸ್ಸಿನ ಕಿಲಿಯಾನ್ ಎಂಬಾಪೆ ಈ ಬಾರಿಯ ಫಿಫಾ ವರ್ಡ್‌ಕಪ್‌ನಲ್ಲಿ ಗೋಲ್ಡನ್‌ ಬೂಟ್‌ ಪಡೆದ ಫ್ರಾನ್ಸ್ ಆಟಗಾರ. ಫೈನಲ್‌ ಪಂದ್ಯದಲ್ಲಿ ಅರ್ಜೆಂಟೀನಾ ವಿರುದ್ಧ ಫ್ರಾನ್ಸ್ ಸೋತರೂ ಫುಟ್ಬಾಲ್‌ ಪ್ರೇಮಿಗಳ ಮನಗೆದ್ದವರು ಎಂಬಾಪೆ.

2018ರಲ್ಲಿ ರಷ್ಯಾದಲ್ಲಿ ನಡೆದ ಫಿಫಾ ವರ್ಡ್‌ಕಪ್‌ನಲ್ಲಿ ‘ಬೆಸ್ಟ್ ಯಂಗ್ ಪ್ಲೇಯರ್‌ ಅವಾರ್ಡ್’ ಪಡೆದಿದ್ದ ಎಂಬಾಪೆ ಈ ಸಲದ ಕತಾರ್‌ ವರ್ಡ್‌ಕಪ್‌ನಲ್ಲಿ ಅತಿ ಹೆಚ್ಚು ಗೋಲ್‌ ಭಾರಿಸುವ ಮೂಲಕ ‘ಗೋಲ್ಡನ್ ಬೂಟ್ ಅವಾರ್ಡ್’ ತಮ್ಮದಾಗಿಸಿಕೊಂಡರು.

ವರ್ಡ್‌ಕಪ್‌ ಫೈನಲ್‌ನಲ್ಲಿ ಹ್ಯಾಟ್ರಿಕ್‌ ಗೋಲ್ ಗಳಿಸಿದ ಎರಡನೇ ಆಟಗಾರರಾಗಿ ಎಂಬಾಪೆ ಹೊಮ್ಮಿದರು. 1966ರಲ್ಲಿ ಇಂಗ್ಲೆಂಡ್‌ನ ಜಿಯೋಫ್ ಹರ್ಸ್ಟ್ ಈ ಸಾಧನೆ ಮಾಡಿದ್ದರು.

2022ರ ವರ್ಡ್ ಕಪ್‌ ಫೈನಲ್ ಭಾರೀ ಪೈಪೋಟಿಯಿಂದ ಕೂಡಿತ್ತು. ಅರ್ಜೆಂಟೀನಾ ಪರವಾಗಿ ಡಿ ಮಾರಿಯ ಒಂದು ಗೋಲ್‌, ಲಿಯೋನಲ್ ಮೆಸ್ಸಿ ಎರಡು ಗೋಲ್ ಭಾರಿಸಿದರೆ, ಫ್ರಾನ್ಸ್‌ ಪರವಾಗಿ ಮೂರು ಗೋಲ್‌ಗಳನ್ನೂ ಎಂಬಾಪೆ ಒಬ್ಬರೇ ಗಳಿಸುವ ಮೂಲಕ ಪೆನಾಲ್ಟಿ ಶೂಟ್‌ಗೆ ಪಂದ್ಯ ಕಾಲಿಡಲು ಕಾರಣವಾದರು.

ತೊಂಬತ್ತು ನಿಮಿಷಗಳ ಆಟದ ಮೊದಲಾರ್ಧದಲ್ಲಿ ಅರ್ಜೆಂಟೀನಾ ಮೇಲುಗೈ ಸಾಧಿಸಿತು. ಆದರೆ ದ್ವಿತೀಯಾರ್ಧದಲ್ಲಿ ಒಂದು ಪ್ಯಾನಲ್ಟಿ ಸೇರಿದಂತೆ ಎಂಬಾಪೆ ಬಾರಿಸಿದ ಎರಡು ಗೋಲುಗಳು ಪಂದ್ಯದ ದಿಕ್ಕನ್ನೇ ಬದಲಿಸಿತು. ಮತ್ತೆ ಹೆಚ್ಚುವರಿ ಅರ್ಧ ಗಂಟೆಯಲ್ಲಿ ಮೆಸ್ಸಿ ಒಂದು ಗೋಲು ಗಳಿಸಿದರು. ಪ್ಯಾನಲ್ಟಿ ಗೋಲಿನ ಅದೃಷ್ಟ ಪಡೆದ ಎಂಬಾಪೆ ಮತ್ತೊಂದು ಗೋಲು ತಮ್ಮದಾಗಿಸಿಕೊಂಡರು. ಹೀಗೆ ಸಮಬಲ ಸಾಧಿಸಿದ ಪಂದ್ಯ ಪ್ಯಾನಲ್ಟಿ ಶೂಟೌಟ್‌ಗೆ ಕಾಲಿಟ್ಟಿದ್ದು ರೋಮಾಂಚನಕಾರಿಯಾಗಿತ್ತು. ಫೈನಲ್‌ನಲ್ಲಿ ನಾಲ್ಕು ಗೋಲು ಗಳಿಸಿದ ಖ್ಯಾತಿಗೂ ಎಂಬಾಪೆ ಪಾತ್ರರಾಗಿದ್ದಾರೆ. 2018ರ ವರ್ಡ್‌ಕಪ್‌ ಫೈನಲ್‌ನಲ್ಲಿ ಕ್ರೊಯೇಷಿಯ ವಿರುದ್ಧ ಒಂದು ಗೋಲನ್ನು ಎಂಬಾಪೆ ಗಳಿಸಿದ್ದರು.

ಫೈನಲ್ ಪಂದ್ಯದ ಆರಂಭಕ್ಕೂ ಮೊದಲು ಮೆಸ್ಸಿ ಮತ್ತು ಎಂಬಾಪೆ ನಡುವೆ ಗೋಲ್ಡನ್ ಬೂಟ್‌ ಯಾರಿಗೆ ದೊರಕುತ್ತದೆ ಎಂಬ ಕುತೂಹಲ ಉಂಟಾಗಿತ್ತು. ಪಂದ್ಯದ ಏರಿಳಿತದಲ್ಲಿ ಒಮ್ಮೆ ಮೆಸ್ಸಿ ಕಡೆಗೂ ಮತ್ತೊಂದು ಸಲ ಎಂಬಾಪೆ ಕಡೆಗೂ ಗೋಲ್ಡನ್‌ ಬೂಟ್‌ ಅವಕಾಶ ಹರಿದಾಡುತ್ತಿತ್ತು. ಅಂತಿಮವಾಗಿ ಏಳು ಗೋಲನ್ನು ಮೆಸ್ಸಿ ಗಳಿಸಿದರೆ, ಎಂಬಾಪೆ ಎಂಟು ಗೋಲು ಭಾರಿಸಿದರು.

ಗೋಲ್ಡನ್ ಬೂಟ್‌ನ ಸಮರ ಹೇಗಿತ್ತು?

ಕತಾರ್‌ ವಿಶ್ವಕಪ್‌ ಟೂರ್ನಿಯಲ್ಲಿ ಒಟ್ಟು ಎಂಟು ಗೋಲ್‌ಗಳನ್ನು ಎಂಬಾಪೆ ಗಳಿಸಿದ್ದಾರೆ. ಜೊತೆಗೆ ಎರಡು ಗೋಲ್‌ಗಳಿಗೆ ಅಸಿಸ್ಟ್‌ (ನೆರವು) ಮಾಡಿದ್ದಾರೆ. ಫ್ರಾನ್ಸ್‌ ತಂಡವು ಟೂರ್ನಿಯಲ್ಲಿ ಫೈನಲ್‌ ತಲುಪಿ, ಪ್ರಬಲ ಪೈಪೋಟಿ ನೀಡಲು ಕಾರಣವಾದ ಎಂಬಾಪೆಯ ಗೋಲ್‌ಗಳು ಹೀಗಿದ್ದವು:

(ಆವರಣದಲ್ಲಿ ನೀಡಿರುವುದು ಎಂಬಾಪೆ ಗಳಿಸಿದ ಗೋಲ್‌ಗಳ ಸಂಖ್ಯೆ)

ಡಿ ಗುಂಪು: ಫ್ರಾನ್ಸ್ 4-1 ಆಸ್ಟ್ರೇಲಿಯಾ (1 ಗೋಲು, 1 ಅಸಿಸ್ಟ್‌)

ಡಿ ಗುಂಪು: ಫ್ರಾನ್ಸ್ 2-1 ಡೆನ್ಮಾರ್ಕ್ (2 ಗೋಲು)

ಡಿ ಗುಂಪು: ಟುನೀಶಿಯಾ 1-0 ಫ್ರಾನ್ಸ್ (0 ಗೋಲುಗಳು)

16ರ ಸುತ್ತು: ಫ್ರಾನ್ಸ್ 3-1 ಪೋಲೆಂಡ್ (2 ಗೋಲುಗಳು, 1 ಅಸಿಸ್ಟ್)

ಕ್ವಾರ್ಟರ್-ಫೈನಲ್: ಇಂಗ್ಲೆಂಡ್ 1-2 ಫ್ರಾನ್ಸ್ (0 ಗೋಲು)

ಸೆಮಿಫೈನಲ್: ಫ್ರಾನ್ಸ್ 2-0 ಮೊರಾಕೊ (0 ಗೋಲು)

ಫೈನಲ್: ಅರ್ಜೆಂಟೀನಾ 3-3 ಫ್ರಾನ್ಸ್ (3 ಗೋಲುಗಳು)

ಮೆಸ್ಸಿ ಮ್ಯಾಜಿಕ್‌

ಅರ್ಜೆಂಟೀನಾದ ಸ್ಟಾರ್‌ ಆಟಗಾರ ಲಿಯೋನೆಲ್ ಮೆಸ್ಸಿ, ಅರ್ಜೇಂಟೀನಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇನ್ನೊಂದು ಗೋಲ್ ಗಳಿಸಿದ್ದರೂ ಅವರು ಎಂಬಾಪೆ ಅವರೊಂದಿಗೆ ಸಮಬಲ ಸಾಧಿಸಿ ಗೋಲ್ಡನ್‌ ಬೂಟ್‌ ಪಡೆಯುತ್ತಿದ್ದರು. ಯಾಕೆಂದರೆ ಒಂದು ಹೆಚ್ಚುವರಿ ಅಸಿಸ್ಟ್ ಮಾಡಿದ ದಾಖಲೆ ಮೆಸ್ಸಿ ಅವರ ಪಾಲಿಗಿತ್ತು. ಅಂತಿಮವಾಗಿ ಮೆಸ್ಸಿ ಈ ಟೂರ್ನಿಯಲ್ಲಿ 7 ಗೋಲು ಹಾಗೂ 3 ಅಸಿಸ್ಟ್‌ ಮಾಡಿದ್ದಾರೆ.

ಮೆಸ್ಸಿ ಗೋಲ್‌ ಭಾರಿಸಿದ ಪಂದ್ಯಗಳು ಹೀಗಿವೆ:

(ಆವರಣದಲ್ಲಿ ನೀಡಿರುವುದು ಮೆಸ್ಸಿ ಗಳಿಸಿದ ಗೋಲ್‌ಗಳ ಸಂಖ್ಯೆ)

ಗುಂಪು ಸಿ: ಅರ್ಜೆಂಟೀನಾ 1-2 ಸೌದಿ ಅರೇಬಿಯಾ (1 ಗೋಲು)

ಗುಂಪು ಸಿ: ಅರ್ಜೆಂಟೀನಾ 2-1 ಮೆಕ್ಸಿಕೋ (1 ಗೋಲು, 1 ಅಸಿಸ್ಟ್‌)

ಗುಂಪು ಸಿ: ಪೋಲೆಂಡ್ 0-2 ಅರ್ಜೆಂಟೀನಾ (0 ಗೋಲುಗಳು)

16ರ ಸುತ್ತು: ಅರ್ಜೆಂಟೀನಾ 2-1 ಆಸ್ಟ್ರೇಲಿಯಾ (1 ಗೋಲು)

ಕ್ವಾರ್ಟರ್-ಫೈನಲ್: ನೆದರ್ಲ್ಯಾಂಡ್ಸ್ 2-2 ಅರ್ಜೆಂಟೀನಾ (1 ಗೋಲು, 1 ಅಸಿಸ್ಟ್‌)

ಸೆಮಿಫೈನಲ್: ಅರ್ಜೆಂಟೀನಾ 3-0 ಕ್ರೊಯೇಷಿಯಾ (1 ಗೋಲು, 1 ನೆರವು)

ಫೈನಲ್: ಅರ್ಜೆಂಟೀನಾ 3-3 ಫ್ರಾನ್ಸ್ (2 ಗೋಲು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...