Homeಕರ್ನಾಟಕಸುವರ್ಣಸೌಧದಲ್ಲಿ ಸಾವರ್ಕರ್‌ ಫೋಟೋ ವಿವಾದ: ಮಹನೀಯರ ಚಿತ್ರಗಳನ್ನಿಡಿದು ಕಾಂಗ್ರೆಸ್‌ ಧರಣಿ

ಸುವರ್ಣಸೌಧದಲ್ಲಿ ಸಾವರ್ಕರ್‌ ಫೋಟೋ ವಿವಾದ: ಮಹನೀಯರ ಚಿತ್ರಗಳನ್ನಿಡಿದು ಕಾಂಗ್ರೆಸ್‌ ಧರಣಿ

- Advertisement -
- Advertisement -

ಸುವರ್ಣಸೌಧದ ಸಭಾಂಗಣದಲ್ಲಿ ಸಾವರ್ಕರ್‌ ಭಾವಚಿತ್ರ ಅಳವಡಿಕೆ ಬೆನ್ನಲ್ಲೇ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಮಹನೀಯರ ಭಾವಚಿತ್ರಗಳನ್ನು ಹಿಡಿದು ಕಾಂಗ್ರೆಸ್ ನಾಯಕರು ಸುವರ್ಣಸೌಧದ ಹೊರಗೆ ಧರಣಿ ನಡೆಸಿದ್ದಾರೆ.

ವಿಧಾನಸಭೆಯಲ್ಲಿ ಮಹರ್ಷಿ ವಾಲ್ಮೀಕಿ, ಬಸವಣ್ಣ, ಸಂತ ಶಿಶುನಾಳ ಶರೀಫ, ಕನಕದಾಸ, ನಾರಾಯಣಗುರು, ಅಂಬೇಡ್ಕರ್, ನೆಹರೂ, ಜಗಜೀವನ ರಾಮ್, ಸರದಾರ ವಲ್ಲಭಬಾಯ್ ಪಟೇಲ್, ಕುವೆಂಪು ಮತ್ತಿತರ ಮಹನೀಯರ ಭಾವಚಿತ್ರಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹನೀಯರ ಚಿತ್ರಗಳನ್ನಿಡಿದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಸತೀಶ್ ಜಾರಕಿಹೊಳಿ, ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ಕೆ.ಜೆ.ಜಾರ್ಜ್, ಆರ್.ವಿ.ದೇಶಪಾಂಡೆ, ಲಕ್ಷ್ಮೀ ಹೆಬ್ಬಾಳ್ಕರ್ ಮತ್ತಿತರ ನಾಯಕರು ಬೆಳಗಾವಿ ಸುವರ್ಣಸೌಧದ ಪ್ರವೇಶದ್ವಾರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿಕೆ.ಶಿವಕುಮಾರ್ ಮಾತನಾಡಿ, “ವಿಧಾನಸಭೆ ಕಲಾಪ ನಡೆಯಬಾರದು ಎಂಬುದು ಅವರ ಅಪೇಕ್ಷೆ. ಕಲಾಪವನ್ನು ಅಡ್ಡಿಪಡಿಸಲು ಯೋಚಿಸಿದ್ದಾರೆ. ಸರ್ಕಾರದ ವಿರುದ್ಧ ಸಾಕಷ್ಟು ಭ್ರಷ್ಟಾಚಾರ ವಿಚಾರಗಳನ್ನು ಎತ್ತಲಿದ್ದೇವೆ ಎಂಬ ಕಾರಣಕ್ಕೆ ಫೋಟೋ ವಿಚಾರವನ್ನು ತಂದಿದ್ದಾರೆ. ಸರ್ಕಾರ ಬಳಿ ಯಾವುದೇ ಅಭಿವೃದ್ಧಿ ಅಜೆಂಡಾ ಇಲ್ಲ” ಎಂದು ತಿಳಿಸಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, “ಯಾರ ಭಾವಚಿತ್ರ ಹಾಕುವುದಕ್ಕೂ ನನ್ನ ವಿರೋಧವಿಲ್ಲ. ಕಾನೂನು ಮತ್ತು ಸುವ್ಯವಸ್ಥೆಯಂತಹ ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸರ್ಕಾರ ಬಯಸಿದೆ” ಎಂದು ಆರೋಪಿಸಿದ್ದಾರೆ.

“ಏಕಾಏಕಿ ಭಾವಚಿತ್ರ ಅಳವಡಿಕೆ ಮಾಡಿದ್ದಾರೆ. ಭಾವಚಿತ್ರ ಅನಾವರಣ ಕಾರ್ಯಕ್ರಮಕ್ಕೆ ನಮಗೆ ಆಹ್ವಾನ ಇರಲಿಲ್ಲ. ಮಾಧ್ಯಮದ ಮೂಲಕ ತಿಳಿದುಕೊಂಡೆ. ಯಾರದೇ ಫೋಟೋ ಇಡಲು ವಿರೋಧ ಇಲ್ಲ. ಆದರೆ ಚರ್ಚೆ ಆಗದೆ ಇಟ್ಟಿರುವುದಕ್ಕೆ ನಮ್ಮ ವಿರೋಧವಿದೆ.‌ ನಾವು ಈ ವಿಚಾರವನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡುತ್ತೇವೆ. ಕಾನೂನು‌ ಸುವ್ಯವಸ್ಥೆ, ಭ್ರಷ್ಟಾಚಾರ ವಿಚಾರಗಳಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಫೋಟೋ ವಿವಾದ ಮುನ್ನಲೆಗೆ‌ ತಂದಿದ್ದಾರೆ” ಎಂದು ದೂರಿದ್ದಾರೆ.

ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಾವರ್ಕರ್ ಫೋಟೋವನ್ನು ಸುವರ್ಣಸೌಧದಲ್ಲಿ ಅನಾವರಣ ಮಾಡಲಾಗಿದೆ. ಸಾವರ್ಕರ್ ಜೊತೆಗೆ ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ನೇತಾಜಿ, ಸರ್ದಾರ್ ವಲ್ಲಭ್ ಬಾಯ್ ಪಟೇಲ್, ಸ್ವಾಮಿ ವಿವೇಕಾನಂದ, ಬಸವಣ್ಣರ ಫೋಟೋಗಳನ್ನೂ ಇಡಲಾಗಿದೆ.

ಇದನ್ನೂ ಓದಿರಿ: ಮಾಯಾಜಾಲದ ಪರದೆ ಸರಿದಾಗ; ಉಪಚುನಾವಣೆ ಫಲಿತಾಂಶಗಳು ಹೇಳುವ ಸುನಾಮಿ ಸತ್ಯ

ರಾಷ್ಟ್ರ ಹಾಗೂ ರಾಜ್ಯದ ಮಹಾನ್‌ ವ್ಯಕ್ತಿಗಳ ಚಿತ್ರಗಳನ್ನು ಮುಂದಿಟ್ಟುಕೊಂಡು ಪ್ರಶ್ನಿಸಲು ಕಾಂಗ್ರೆಸ್ ನಿರ್ಧರಿಸಿದೆ. ಕುವೆಂಪು, ನಾರಾಯಣಗುರು ಅಂತಹ ದಾರ್ಶನಿಕರ ಫೋಟೋ ಏಕಿಲ್ಲ ಎಂದು ಕೇಳುತ್ತಿದೆ.

ಸಾವರ್ಕರ್ ವಿಚಾರವಾಗಿ ಚರ್ಚೆ ಮಾಡಿದರೆ ಬಿಜೆಪಿ ಹಿಂದುತ್ವ ವಿಚಾರವನ್ನ ಮುನ್ನಲೆಗೆ ತರಲಿದೆ. ಇದು ಚುನಾವಣೆಗೂ ಮೊದಲು ಧ್ರುವಿಕರಣಕ್ಕೆ ಸಹಾಯವಾಗಲಿದೆ. ಹೀಗಾಗಿ ಇದರ ಬದಲಿಗೆ ಇನ್ನಿತರ ಮಹಾನ್ ನಾಯಕರ ಚಿತ್ರಗಳಿಗೆ ಬೇಡಿಕೆ ಇಟ್ಟು ಹೋರಾಟ ರೂಪಿಸಲು ನಿರ್ಧರಿಸಿದೆ. ಸಾವರ್ಕರ್​ ಫೋಟೋ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಅಸೆಂಬ್ಲಿ ಹಾಲ್​ನಲ್ಲಿ ಹಲವು ಮಹನೀಯರ ಫೋಟೋ ಅಳವಡಿಸಬೇಕಿದೆ. ಮಹರ್ಷಿ ವಾಲ್ಮೀಕಿ, ಬಸವಣ್ಣ, ಕನಕದಾಸ, ಶಿಶುನಾಳ ಶರೀಫ, ನೆಹರು. ನಾರಾಯಣಗುರು, ಡಾ.ಬಿ.ಆರ್​.ಅಂಬೇಡ್ಕರ್​​, ವಲ್ಲಭ ಬಾಯಿ ಪಟೇಲ್, ಬಾಬು ಜಗಜೀವನ ರಾಮ್​​, ಕುವೆಂಪು ಭಾವಚಿತ್ರಗಳನ್ನು ಹಾಕಬೇಕು. ದಾರ್ಶನಿಕರು, ವಿಚಾರವಂತರು, ರಾಷ್ಟ್ರ ನಾಯಕರ ಭಾವಚಿತ್ರಗಳನ್ನು ಇರಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...