Homeಕರ್ನಾಟಕಎನ್‌ಪಿಎಸ್‌ ವಿರುದ್ಧ ರಾಜ್ಯ ಸರ್ಕಾರಿ ನೌಕರರ ಆಕ್ರೋಶ; ಲಕ್ಷಕ್ಕೂ ಹೆಚ್ಚು ಜನರಿಂದ ಪ್ರತಿಭಟನೆ

ಎನ್‌ಪಿಎಸ್‌ ವಿರುದ್ಧ ರಾಜ್ಯ ಸರ್ಕಾರಿ ನೌಕರರ ಆಕ್ರೋಶ; ಲಕ್ಷಕ್ಕೂ ಹೆಚ್ಚು ಜನರಿಂದ ಪ್ರತಿಭಟನೆ

ಸರ್ಕಾರಿ ನೌಕರರು 'ವೋಟ್ ಫಾರ್ ಒಪಿಎಸ್’ ಅಭಿಯಾನಕ್ಕೆ ಕರೆ ಕೊಟ್ಟಿದ್ದಾರೆ. ಎನ್‌ಪಿಎಸ್ ರದ್ದುಗೊಳಿಸದಿದ್ದರೆ ಚುನಾವಣೆಯಲ್ಲಿ ಪಾಠ ಕಲಿಸುವ ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ತಾರಮತ್ಯದಿಂದ ಕೂಡಿರುವ ‘ನೂತನ ಪಿಂಚಣಿ ಯೋಜನೆ’ (ಎನ್‌ಪಿಎಸ್) ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಸರ್ಕಾರಿ ನೌಕರರು ಸೋಮವಾರ ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ.

ಹಲವು ದಿನಗಳಿಂದ ನಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರ ಹೋರಾಟ ಬಿರುಸಾಗಿದ್ದು, ಸುಮಾರು ಲಕ್ಷ ನೌಕರರು ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ.

‘ಕರ್ನಾಟಕ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ನೇತೃತ್ವದಲ್ಲಿ ರಾಜ್ಯದ 31 ಜಿಲ್ಲೆಗಳ ಸರ್ಕಾರಿ ನೌಕರರು ಹಾಗೂ ಅನುದಾನಿತ ಶಾಲಾ-ಕಾಲೇಜುಗಳ ಶಿಕ್ಷಕರು ಪಾಲ್ಗೊಂಡಿದ್ದು, ಒಂದು ಲಕ್ಷಕ್ಕೂ ಅಧಿಕ ನೌಕರರು ಫ್ರೀಡಂ ಪಾರ್ಕ್‌ನಲ್ಲಿ ಜಮಾಯಿಸಿದ್ದಾರೆ.

ಮೆಜೆಸ್ಟಿಕ್ ರೈಲ್ವೇ ನಿಲ್ದಾಣ, ಶೇಷಾದ್ರಿ ರಸ್ತೆ, ಫ್ರೀಡಂ ಪಾರ್ಕ್ ಮುಂಭಾಗದ ಪಾರ್ಕಿಂಗ್ ಸ್ಥಳ, ಫ್ರೀಡಂ ಪಾರ್ಕ್‌ ಪ್ರತಿಭಟನಾ ಸ್ಥಳ ಹಾಗೂ ಗಾಂಧಿನಗರದ ಮಹಾಬೋಧಿ ಸೊಸೈಟಿ ಮುಖ್ಯ ರಸ್ತೆಯಲ್ಲಿ ಸರ್ಕಾರಿ ನೌಕಕರರು ಜಮಾಯಿಸಿದ್ದಾರೆ. ಪ್ರೀಡಂ ಪಾರ್ಕ್ ಮುಂಭಾಗದಲ್ಲಿದ್ದ ಮುಖ್ಯ ವೇದಿಕೆಯಲ್ಲಿ ಜಾಗ ಸಾಕಾಗುವುದಿಲ್ಲ ಎಂಬ ಕಾರಣಕ್ಕೆ ಫ್ರೀಡಂ ಪಾರ್ಕ್ ಪ್ರತಿಭಟನಾ ಸ್ಥಳದಲ್ಲಿ ಬೃಹದಾಕಾರದಲ್ಲಿ ಶಾಮಿಯಾನ ಹಾಕಲಾಗಿದೆ. ಭಾಷಣ ಕೇಳಲು ಅನುಕೂಲವಾಗುವಂತೆ ಎಲ್ಇಡಿ ಪರದೆ ಅಳವಡಿಲಾಗಿದೆ.

ಪ್ರತಿಭಟನೆಯನ್ನು ಉದ್ದೇಶಿಸಿ ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರು ಮಾತನಾಡಿ, “ಪಶ್ಚಿಮ ಬಂಗಾಳದಲ್ಲಿ ಆರಂಭದಲ್ಲೇ ಎನ್‌ಪಿಎಸ್‌ ವಿರೋಧಿಸಲಾಯಿತು. ಝಾರ್ಖಾಂಡ್‌, ಪಂಜಾಬ್‌ನಲ್ಲಿ ಹಳೆಯ ಪಂಚಣಿ ಯೋಜನೆಯೇ ಇದೆ. ಹಿಮಾಚಲ ಪ್ರದೇಶದಲ್ಲೂ ಮುಂದಿನ ದಿನಗಳಲ್ಲಿ ಹಳೆಯ ವ್ಯವಸ್ಥೆ ಬರುವ ಸಾಧ್ಯತೆ ಇದೆ. ಯಾಕೆಂದರೆ ಚುನಾವಣೆಯಲ್ಲಿ ಭರವಸೆ ನೀಡಿ ಗೆದ್ದಿರುವುದರಿಂದ ಎನ್‌ಪಿಎಸ್ ರದ್ದು ಮಾಡುತ್ತಾರೆಂದು ನಂಬೋಣ. ಹಲವು ರಾಜ್ಯಗಳು ಎನ್‌ಪಿಎಸ್ ವಿರೋಧಿಸಿ ನಿಲುವು ತಾಳುವುದಾದರೆ ಕರ್ನಾಟಕ ರಾಜ್ಯಕ್ಕೇಕೆ ಸಾಧ್ಯವಿಲ್ಲ?” ಎಂದು ಪ್ರಶ್ನಿಸಿದ್ದಾರೆ.

 

“2006ರ ಸಂದರ್ಭದಲ್ಲಿ ಅಧಿಕಾರದ ಪಾಲನ್ನು ಹಂಚಿಕೊಂಡಿದ್ದ ಪಕ್ಷದವರೇ 2018ರ ಬೆಳಗಾವಿ ಅಧಿವೇಶನದಲ್ಲಿ ಎನ್‌ಪಿಎಸ್ ಬೇಡ ಎಂಬುದರ ಪರವಾಗಿ ಮಾತನಾಡಿದ್ದಾರೆ. ಬಿಜೆಪಿ ನಾಯಕರಾದ ಗೋವಿಂದ ಕಾರಜೋಳ, ಬಿ.ಎಸ್.ಯಡಿಯೂಪ್ಪ, ವಿಶ್ವೇಶ್ವರ ಹೆಗಡೆ ಕಾಗೇರಿ, ಜಗದೀಶ್ ಶೆಟ್ಟರ್‌ ಅವರು ಹಳೆಯ ಪಿಂಚಣಿಗಾಗಿ ಆಗ್ರಹಿಸಿದ್ದಾರೆ. ಈಗ ಅವರೇ ಅಧಿಕಾರದಲ್ಲಿದ್ದಾರೆ. ಸರ್ಕಾರ ನಡೆಸುತ್ತಿರುವವರಿಗೆ ಪಾಪಪ್ರಜ್ಞೆ ಕಾಡಬೇಕು” ಎಂದರು.

“2018ರ ಬೆಳಗಾವಿ ಅಧಿವೇಶನದಲ್ಲಿ ಆಡಿದ್ದ ಮಾತುಗಳನ್ನು ಅನುಷ್ಠಾನಕ್ಕೆ ತರುವ ಸೌಭಾಗ್ಯ ತಮಗೆ ಬಂದಿದೆ ಎಂದು ಬಿಜೆಪಿ ನಾಯಕರು ಭಾವಿಸಬೇಕು. ವಿರೋಧ ಪಕ್ಷವೂ ಈ ಕುರಿತು ಮಾತನಾಡಬೇಕು. ಅವರಿಗೂ ಪಾಪಪ್ರಜ್ಞೆ ಕಾಡುತ್ತಿದ್ದರೆ ಈ ಅಧಿವೇಶನದಲ್ಲಿ ಒತ್ತಡವನ್ನು ತರಬೇಕು” ಎಂದು ಆಗ್ರಹಿಸಿದರು.

“ನಮ್ಮ ಆಗ್ರಹವನ್ನು ತಕ್ಷಣವೇ ಸರ್ಕಾರ ಒಪ್ಪದೇ ಇರಬಹುದು. ಹೀಗಾಗಿ ಹೋರಾಟ ಮುಂದುವರಿಸುತ್ತಾ ಹೋಗಬೇಕು. ನಿಶ್ಚಿತ ಪಿಂಚಣಿಯನ್ನು ಜಾರಿಗೆ ತರುವುದಾಗಿ ಕಡೆಯ ಪಕ್ಷ ಪ್ರಣಾಳಿಕೆಯಲ್ಲಾದರೂ ಹೇಳಬೇಕು. ಇದಾದರೆ ಹೋರಾಟದ ಯಶಸ್ಸೇ ಆಗಿರುತ್ತದೆ. ಮುಖ್ಯವಾಗಿ ಚುನಾವಣೆ ಮುಂಚಿತವಾಗಿಯೇ ಸರ್ಕಾರ ಹಳೆಯ ಪಿಂಚಣಿಯನ್ನು ಜಾರಿಗೆ ತರಲು ಕ್ರಮ ಜರುಗಿಸಬೇಕು. ಆಡಳಿತ ಮತ್ತು ವಿರೋಧ ಪಕ್ಷಗಳ ಮೇಲೆ ಜವಾಬ್ದಾರಿಗಳು ಹೆಚ್ಚಿವೆ” ಎಂದು ಅಭಿಪ್ರಾಯಪಟ್ಟರು.

“ರಾಜಕಾರಣಿಗಳ ಪಿಂಚಣಿಗೆ ಎನ್‌ಪಿಎಸ್ ಅನ್ವಯಿಸುವುದಿಲ್ಲ. ಬರೀ ಸರ್ಕಾರಿ ನೌಕರರಿಗೆ ಮಾತ್ರ ಅನ್ವಯಿಸುತ್ತಿದೆ. ನಿಶ್ಚಿತ ಪಿಂಚಣಿ ಯೋಜನೆಯಲ್ಲೇ ರಾಜಕಾರಣಿಗಳು, ಮೇಲಧಿಕಾರಿಗಳು ಇದ್ದಾರೆ. ಸಾಮಾನ್ಯ ಸರ್ಕಾರಿ ನೌಕರರಿಗೆ ಮಾತ್ರ ಎನ್‌ಪಿಎಸ್‌ ಅನ್ವಯಿಸಲಾಗಿದೆ. ಇದು ಮಹಾ ಅನ್ಯಾಯ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತರಾಮ್ ಮಾತನಾಡಿ, “ಕಳೆದ ಎಂಟು ವರ್ಷಗಳಿಂದ ಕರ್ನಾಟಕ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ ನಿರಂತರವಾಗಿ ಹಳೆ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗಾಗಿ ಒತ್ತಾಯಿಸಿ ಹೋರಾಟ ಮಾಡುತ್ತಾ ಬಂದಿದೆ. 2006ರಲ್ಲಿ ಜಾರಿಗೆ ಬಂದಿರುವ ನೂತನ ಪಿಂಚಣಿ ಯೋಜನೆ ರದ್ದು ಮಾಡಬೇಕು” ಎಂದು ಒತ್ತಾಯಿಸಿದರು.

“ದೇಶದ ವಿವಿಧ ರಾಜ್ಯಗಳಲ್ಲಿ ಹೋರಾಟ ನಡೆಯುತ್ತಿದೆ. ವಿವಿಧ ರಾಜ್ಯಗಳಲ್ಲಿ ಎನ್‌ಪಿಎಸ್‌ ರದ್ದು ಮಾಡಿದಂತೆ ಕರ್ನಾಟಕ ಸರ್ಕಾರವೂ ಕ್ರಮ ಜರುಗಿಸಬೇಕು. ಸರ್ಕಾರ ನಮ್ಮ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಹೀಗಾಗಿ ನಾವು ಅಂತಿಮ ಹೋರಾಟಕ್ಕೆ ಧುಮುಕಿದ್ದೇವೆ. ಅನಿರ್ಧಾಷ್ಟಾವಧಿ ಧರಣಿ ಮೂಲಕ, ಮಾಡು ಇಲ್ಲವೇ ಮಡಿ ಹೋರಾಟಕ್ಕೆ ಕರೆ ಕೊಟ್ಟಿದ್ದೇವೆ” ಎಂದು ಗುಡುಗಿದ್ದಾರೆ.

“‘ವೋಟ್ ಫಾರ್ ಒಪಿಎಸ್’ ಎಂಬ ಅಭಿಯಾನ ಆರಂಭಿಸಿದ್ದೇವೆ. ನಿವೃತ್ತ ಸರ್ಕಾರಿ ನೌಕರರು ಒಂದು ಲಕ್ಷ ಜನ ನಮಗೆ ಬೆಂಬಲ ನೀಡಿದ್ದಾರೆ. 2.60 ಲಕ್ಷ ಸರ್ಕಾರಿ ನೌಕರರು ಹಾಗೂ 5 ಲಕ್ಷ ನಿಗಮ ಮಂಡಳಿ ಹಾಗೂ ಅನುದಾನರಹಿತ ಶಾಲೆಗಳ ನೌಕರರು ಸೇರಿ ಹೋರಾಟ ನಡೆಸುತ್ತಿದ್ದೇವೆ. ನಮ್ಮ ಎಲ್ಲ ಕುಟುಂಬದ ಸದಸ್ಯರು ಈ ಅಭಿಯಾನದಲ್ಲಿ ಭಾಗವಹಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಮ್ಮ ಕುಟುಂಬದ ಸದಸ್ಯರು ಹಾಗೂ ಆತ್ಮೀಯರ ವೋಟನ್ನು ಈ ಅಭಿಯಾನಕ್ಕಾಗಿ ಮೀಸಲಿಟ್ಟಿದ್ದೇವೆ” ಎಂದು ಎಚ್ಚರಿಸಿದ್ದಾರೆ.

ಮಂಡ್ಯ ಜಿಲ್ಲಾ ಆರೋಗ್ಯ ಇಲಾಖೆ ನೌಕರರಾದ ಪ್ರೇಮಾ ಮಾತನಾಡಿ, “ಎನ್‌ಪಿಎಸ್ ಎಂಬುದು ಸರ್ಕಾರಿ ನೌಕರರ ಪಾಲಿಗೆ ಮರಣ ಶಾಸನವಾಗಿದೆ. 2006ರಿಂದ ಸರ್ಕಾರಿ ಸೇವೆಗೆ ಸೇರಿದವರಿಗೆ ಒಂದು ತರಹದ ಪಿಂಚಣಿ, ಅದಕ್ಕೂ ಮೊದಲು ಸೇವೆಗೆ ಸೇರಿದವರಿಗೆ ಬೇರೆ ಪಿಂಚಣಿ ನೀಡಲಾಗುತ್ತಿದೆ. ಸಮಾನ ಕೆಲಸಕ್ಕೆ ಸಮಾನ ವೇತನ ಕೇಳುತ್ತಿದ್ದೇವೆ. ಒಪಿಎಸ್ ಇಲ್ಲದೇ ಇರುವ ಕಾರಣಕ್ಕೆ ನಿವೃತ್ತ ನೌಕರರು ಗೌರವಯುತ ಹಾಗೂ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ” ಎಂದು ವಿಷಾದಿಸಿದ್ದಾರೆ.

ಹಾಸನ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಇಲಾಖೆ ನಿವೃತ್ತ ನೌಕರ ಎಚ್.ಪಿ.ಲಕ್ಷ್ಮಯ್ಯ ಮಾತನಾಡಿ, “ಬಿಲ್ ಕಲೆಕ್ಟರ್ ಆಗಿ ಹದಿನೈದು ವರ್ಷ ಸೇವೆ ಸಲ್ಲಿಸಿದ ನಂತರ 2014ರಲ್ಲಿ ನನ್ನ ಸೇವೆ ಖಾಯಂ ಮಾಡಿದರು. ಎಂಟು ವರ್ಷಗಳ ಸೇವೆ ಸಲ್ಲಿಸಿ 2022ರಲ್ಲಿ ನಿವೃತ್ತನಾಗಿದ್ದೇನೆ. ಎನ್‌ಪಿಎಸ್ ನಿಯಮಗಳ ಆಧಾರದಲ್ಲಿ ನನಗೆ ₹1130 ಮಾತ್ರ ಪಿಂಚಣಿ ಸಿಗುತ್ತಿದೆ. ಜೀವನ ನಿರ್ವಹಣೆಗೆ ಅಷ್ಟು ಸಾಕಾ? ಸರ್ಕಾರದ ವೃದ್ಧಾಪ್ಯ ವೇತನವೇ ಅಷ್ಟು ಬರುತ್ತದೆ. ₹300 ತಿಂಗಳ ಸಂಬಳದಿಂದ ಕೆಲಸ ಮಾಡಿಸಿಕೊಂಡಿದ್ದಾರೆ. ನಿವೃತ್ತಿಯಾಗುವ ಸಮಯದಲ್ಲಿ ಇಷ್ಟು ಕಡಿಮೆ ಪಿಂಚಣಿ ಕೊಟ್ಟು ಸರ್ಕಾರ ಅನ್ಯಾಯ ಮಾಡುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಏನಿದು ‘ವೋಟ್ ಫಾರ್ ಒಪಿಎಸ್’ ಅಭಿಯಾನ?

ಕಳೆದ ಒಂದು ತಿಂಗಳಿನಿಂದ ಒಪಿಎಸ್ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ‘ಕರ್ನಾಟಕ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’, ಇದೀಗ ‘ವೋಟ್ ಫಾರ್ ಒಪಿಎಸ್’ ಅಭಿಯಾನಕ್ಕೆ ಕರೆ ಕೊಟ್ಟಿದೆ. ಅಂದರೆ, ಸರ್ಕಾರ ಒಪಿಎಸ್ ಜಾರಿ ಮಾಡಿದರೂ, ಬಿಟ್ಟರೂ ನಾವು ಒಪಿಎಸ್ ಪರವಾಗೇ ಮತ ಚಲಾಯಿಸುತ್ತೇವೆ. ಈಗಿನ ಸರ್ಕಾರ ನಮ್ಮ ಬೇಡಿಕೆ ಈಡೇರಿಸಿದರೆ, ನಾವು ಹಾಗೂ ನಮ್ಮ ಕುಟುಂಬದ ಸದಸ್ಯರು ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತ ಚಲಾಯಿಸುತ್ತೇವೆ. ಇಲ್ಲದಿದ್ದರೆ ಬಿಜೆಪಿ ವಿರುದ್ಧವಾಗಿ ಮತ ಚಲಾಯಿಸುತ್ತೇವೆ. ಒಟ್ಟಾರೆ ನಮ್ಮ ಮತ ಒಪಿಎಸ್ ಪರವಾಗಿ ಇರುತ್ತದೆ” ಎಂದು ಈ ಅಭಿಯಾನ ಆರಂಭಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...