Homeಮುಖಪುಟಮೋದಿ ಸರ್ಕಾರದ ವಿರುದ್ಧ ಆರ್‌ಎಸ್‌ಎಸ್‌ ಅಂಗಸಂಸ್ಥೆ ಬಿಕೆಎಸ್‌ ಪ್ರತಿಭಟನೆ

ಮೋದಿ ಸರ್ಕಾರದ ವಿರುದ್ಧ ಆರ್‌ಎಸ್‌ಎಸ್‌ ಅಂಗಸಂಸ್ಥೆ ಬಿಕೆಎಸ್‌ ಪ್ರತಿಭಟನೆ

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಅಂಗಸಂಸ್ಥೆಯಾದ ಭಾರತೀಯ ಕಿಸಾನ್ ಸಂಘ (ಬಿಕೆಎಸ್) ಸೋಮವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ರೈತರ ರ್‍ಯಾಲಿಯನ್ನು ನಡೆಸಿದೆ.

ಭಾರತದ ರೈತರ ಪ್ರಸ್ತುತ ಸ್ಥಿತಿಗತಿಯ ವಿರುದ್ಧ ಬಿಕೆಎಸ್‌ ಬೇಸರ ವ್ಯಕ್ತಪಡಿಸಿದೆ. ಸರ್ಕಾರದ ಮುಂದೆ ಹಲವಾರು ಬೇಡಿಕೆಗಳನ್ನು ಇಟ್ಟಿದೆ. ಬಿಕೆಎಸ್ ಇದನ್ನು ‘ಕಿಸಾನ್ ಗರ್ಜನ ರ್‍ಯಾಲಿ’ ಎಂದು ಕರೆದಿದೆ.

‘‘ಸರ್ಕಾರವು ರೈತರ ಬೇಡಿಕೆಗೆ ಸಕಾಲದಲ್ಲಿ ಕಿವಿಗೊಡದಿದ್ದರೆ ತೊಂದರೆ ಎದುರಿಸಬೇಕಾಗುತ್ತದೆ” ಎಂದು ಬಿಕೆಎಸ್‌ ಹೊರಡಿಸಿದ ಕರಪತ್ರದಲ್ಲಿ ತಿಳಿಸಲಾಗಿದೆ.

ಭಾರತದ ಮೂಲೆಮೂಲೆಗಳಿಂದ ಸುಮಾರು 60,000 ರೈತರು ರಾಮಲೀಲಾ ಮೈದಾನದಲ್ಲಿ ಸೇರಿದ್ದಾಗಿ ಬಿಕೆಎಸ್ ತಿಳಿಸಿದೆ. ತಮ್ಮ ಬೆಳೆಗಳಿಗೆ ವೈಜ್ಞಾನಿಕ ಬೆಲೆಯನ್ನು ನಿಗದಿ ಮಾಡುವಂತೆ  ಒತ್ತಾಯಿಸುವುದಕ್ಕಾಗಿ ರೈತರು ಪ್ರತಿಭಟಿಸುತ್ತಿದ್ದಾರೆ ಎಂದು ಬಿಕೆಎಸ್ ತಿಳಿಸಿದೆ.

ಬಿಕೆಎಸ್‌ ಏಕೆ ಪ್ರತಿಭಟನೆ ನಡೆಸುತ್ತಿದೆ?

ಭಾರತೀಯ ಕಿಸಾನ್ ಸಂಘವು (ಬಿಕೆಸ್‌) ಆರ್‌ಎಸ್‌ಎಸ್‌ನ ಅಂಗಸಂಸ್ಥೆಯಾಗಿದೆ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಬಿಕೆಎಸ್‌ ಕೆಲವೊಮ್ಮೆ ಪ್ರತಿಭಟಿಸಿದ ಉದಾಹರಣೆಗಳಿವೆ. ಆ ಮೂಲಕ ರೈತರನ್ನು ತನ್ನ ತೆಕ್ಕೆಯಲ್ಲಿ ಹಿಡಿದುಕೊಳ್ಳುವ ತಂತ್ರವನ್ನು ಆರ್‌ಎಸ್‌ಎಸ್‌ ರೂಪಿಸುತ್ತದೆ ಎಂಬ ವಾದವಿದೆ.

ಸೋಮವಾರ ನಡೆದ ರ್‍ಯಾಲಿಯಲ್ಲಿ ‘ಕೃಷಿ ಉಪಕರಣಗಳ ಮೇಲಿನ ಜಿಎಸ್‌ಟಿ ತೆರವು, ರೈತರಿಗೆ ಆರ್ಥಿಕ ನೆರವು ಹೆಚ್ಚಳ, ಕುಲಾಂತರಿ ಸಾಸುವೆ ನಿರಾಕರಣೆ, ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ, ಸೂಕ್ತವಾದ ರಫ್ತು ನೀತಿ ಜಾರಿ’ಗಾಗಿ ಬಿಕೆಎಸ್‌ ಒತ್ತಾಯಿಸಿದೆ.

“ಕೃಷಿ ಉಪಕರಣಗಳು ಮತ್ತು ರಸಗೊಬ್ಬರಗಳ ಮೇಲಿನ ಶೇ.18ರಷ್ಟು ಜಿಎಸ್‌ಟಿಯಿಂದಾಗಿ ಕೃಷಿ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ. ಹೀಗಿದ್ದರೂ ರೈತರಿಗೆ ಅರ್ಹವಾದ ಬೆಳೆಗಳಿಗೆ ಬೆಲೆ ಸಿಗುತ್ತಿಲ್ಲ. ಹೀಗಾಗಿ ಈ ಜಿಎಸ್‌ಟಿ ತೆರವು ಮಾಡುವುದು ಅನಿವಾರ್ಯವಾಗಿದೆ” ಎಂದು ಬಿಕೆಎಸ್ ಪ್ರಧಾನ ಕಾರ್ಯದರ್ಶಿ ಮೋಹಿನಿ ಮೋಹನ್ ಮಿಶ್ರಾ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಹೇಳಿದ್ದರು.

ಕಳೆದ ವಾರ ಬಿಕೆಎಸ್‌ನ ಕಾರ್ಯಕಾರಿ ಸಮಿತಿ ಸದಸ್ಯ ನಾನಾ ಆಖ್ರೆ ಅವರು ಮಾತನಾಡಿ, “ತಮ್ಮ ಕೃಷಿ ಉತ್ಪನ್ನಗಳ ಆದಾಯದ ಕೊರತೆಯಿಂದಾಗಿ ರೈತರು ಇಂದು ಅತ್ಯಂತ ನಿರಾಶೆಗೊಂಡಿದ್ದಾರೆ. ಇದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ” ಎಂದಿದ್ದರು.

“ರೈತರ ಸಂಕಷ್ಟಗಳನ್ನು ಪರಿಹರಿಸುವ ಸಲುವಾಗಿ, ಎಲ್ಲಾ ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆಯನ್ನು ನೀಡಬೇಕೆಂದು ಬಿಕೆಎಸ್ ಒತ್ತಾಯಿಸುತ್ತದೆ. ಅಲ್ಲದೆ, ಕೃಷಿ ಉತ್ಪನ್ನಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಿಧಿಸಬಾರದು. ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಒದಗಿಸಲಾದ ಆರ್ಥಿಕ ಪರಿಹಾರವನ್ನು ಹೆಚ್ಚಿಸಬೇಕು” ಎಂದು ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...