Homeಮುಖಪುಟಚೀನಾ- ಭಾರತ ಗಡಿ ಸಮಸ್ಯೆ ಚರ್ಚೆಗೆ ಸಂಸತ್‌ನಲ್ಲಿ ಅವಕಾಶ ನೀಡದ ಮೋದಿ ಸರ್ಕಾರ: ಸೋನಿಯಾ ಗಾಂಧಿ...

ಚೀನಾ- ಭಾರತ ಗಡಿ ಸಮಸ್ಯೆ ಚರ್ಚೆಗೆ ಸಂಸತ್‌ನಲ್ಲಿ ಅವಕಾಶ ನೀಡದ ಮೋದಿ ಸರ್ಕಾರ: ಸೋನಿಯಾ ಗಾಂಧಿ ವಾಗ್ದಾಳಿ

ಚೀನಾ- ಭಾರತ ಗಡಿ ವಿವಾದದ ಕುರಿತು ಸಂಸತ್‌ನಲ್ಲಿ ಚರ್ಚಿಸಲು ಅವಕಾಶ ನೀಡಬೇಕೆಂದು ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿವೆ

- Advertisement -
- Advertisement -

“ಚೀನಾ-ಭಾರತ ಗಡಿ ಸಂಘರ್ಷ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡದ ನರೇಂದ್ರ ಮೋದಿ ಸರ್ಕಾರವು ಪ್ರಜಾಪ್ರಭುತ್ವದ ಬಗೆಗೆ ಅಗೌರವವನ್ನು ತೋರಿಸುತ್ತಿದೆ ಮತ್ತು ರಾಷ್ಟ್ರವನ್ನು ಒಗ್ಗೂಡಿಸಲು ತನಗಿರುವ ಅಸಮರ್ಥತೆಯನ್ನು ಪ್ರದರ್ಶಿಸಿದೆ” ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬುಧವಾರ ಹೇಳಿದ್ದಾರೆ.

ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, “ಗಂಭೀರ ಕಾಳಜಿಯ ವಿಷಯಗಳ ಬಗ್ಗೆ ಬಿಜೆಪಿ ಮೌನವಹಿಸಿದೆ. ಇದು ಬಿಜೆಪಿ ಅಧಿಕಾರಾವಧಿಯ ನಿರ್ಣಾಯಕ ಲಕ್ಷಣವಾಗಿದೆ” ಎಂದು ಟೀಕಿಸಿದ್ದಾರೆ.

ಡಿಸೆಂಬರ್ 9ರಂದು ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಉಭಯ ದೇಶಗಳ ಸೈನಿಕರ ನಡುವೆ ಘರ್ಷಣೆ ನಡೆದಾಗಿನಿಂದ ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದದ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

ಜೂನ್ 2020ರಲ್ಲಿ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ಏರ್ಪಟ್ಟಿತ್ತು. ನಂತರದಲ್ಲಿ ಉಭಯ ದೇಶಗಳ ನಡುವೆ ನಡೆದ ಘಟನೆ ಇದಾಗಿದೆ. ಗಾಲ್ವಾನ್ ಘಟನೆಯು 20 ಭಾರತೀಯ ಸೈನಿಕರ ಸಾವಿಗೆ ಕಾರಣವಾಯಿತು ಎಂದು ಚೀನಾ ಹೇಳಿಕೊಂಡಿದೆ.

“ಸಂಸತ್ತಿನಲ್ಲಿ ಈ ವಿಷಯದ ಬಗ್ಗೆ ಚರ್ಚೆ ಮಾಡಲು ಅವಕಾಶ ನೀಡಿದರೆ ಹಲವಾರು ನಿರ್ಣಾಯಕ ಪ್ರಶ್ನೆಗಳಿಗೆ ಉತ್ತರ ಸಿಗುತ್ತದೆ” ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾದ ಸೋನಿಯಾ ಪ್ರತಿಕ್ರಿಯೆ ನೀಡಿದ್ದಾರೆ.

“ಚೀನಾ ನಮ್ಮ ಮೇಲೆ ನಿರಂತರವಾಗಿ ದಾಳಿ ಮಾಡಲು ಏಕೆ ಧೈರ್ಯ ಮಾಡುತ್ತದೆ?” ಎಂದು ಸಭೆಯಲ್ಲಿ ಅವರು ಪ್ರಶ್ನಿಸಿದ್ದಾರೆ. “ಈ ದಾಳಿಗಳನ್ನು ಹಿಮ್ಮೆಟ್ಟಿಸಲು ಯಾವ ಸಿದ್ಧತೆಗಳನ್ನು ಮಾಡಲಾಗಿದೆ? ಇನ್ನೂ ಏನು ಮಾಡಬೇಕಾಗಿದೆ? ಭವಿಷ್ಯದಲ್ಲಿ ಆಕ್ರಮಣಗಳು ಆಗದಂತೆ ಚೀನಾವನ್ನು ತಡೆಯಲು ಸರ್ಕಾರ ಯಾವ ನೀತಿ ರೂಪಿಸಿದೆ? ನಾವು ಚೀನಾದೊಂದಿಗೆ ತೀವ್ರ ವ್ಯಾಪಾರ ಕೊರತೆಯನ್ನು ಹೊಂದಿದ್ದೇವೆ. ನಾವು ರಫ್ತು ಮಾಡುವುದಕ್ಕಿಂತ ಹೆಚ್ಚಿನದನ್ನು ಆಮದು ಮಾಡಿಕೊಳ್ಳುತ್ತಿದ್ದೇವೆ. ಚೀನಾ ಸಾಧಿಸುತ್ತಿರುವ ಮಿಲಿಟರಿ ಹಗೆತನಕ್ಕೆ ನಮ್ಮ ಆರ್ಥಿಕ ಪ್ರತಿಕ್ರಿಯೆ ಏಕೆ ಇಲ್ಲ?” ಎಂದು ಸೋನಿಯಾ ಅವರು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

“ತನ್ನ ನೀತಿಗಳು ಮತ್ತು ಕಾರ್ಯಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸುವುದು ಕೇಂದ್ರ ಸರ್ಕಾರದ ಕರ್ತವ್ಯ” ಎಂದಿರುವ ಸೋನಿಯಾ ಗಾಂಧಿ, “ಸ್ಪಷ್ಟವಾದ ಚರ್ಚೆಯು ದೇಶದ ಪ್ರತಿಕ್ರಿಯೆಯನ್ನು ಬಲಪಡಿಸುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಇದಕ್ಕೆ ವಿರುದ್ಧವಾಗಿ ಸರ್ಕಾರ ಕೆಲಸ ಮಾಡುತ್ತಿದೆ. ವಿಭಜಕ ನೀತಿಗಳನ್ನು ಅನುಸರಿಸುತ್ತಿದೆ, ದ್ವೇಷವನ್ನು ಹರಡುತ್ತಿದೆ, ನಮ್ಮ ಸಮಾಜದ ಕೆಲವು ವರ್ಗಗಳನ್ನು ಟಾರ್ಗೆಟ್ ಮಾಡುತ್ತಿದೆ. ಆದರೆ ವಿದೇಶಿ ಬೆದರಿಕೆಗಳ ವಿರುದ್ಧ ದೇಶವು ಒಂದಾಗಿ ನಿಲ್ಲುವುದಕ್ಕೆ ಸರ್ಕಾರ ತಡೆಯಾಗಿದೆ” ಎಂದು ಅವರು ದೂರಿದ್ದಾರೆ.

“ಇಂತಹ ಸಮಯದಲ್ಲಿ ನಮ್ಮ ಜನರನ್ನು ಒಗ್ಗೂಡಿಸುವುದು ಸರ್ಕಾರದ ಪ್ರಯತ್ನ ಮತ್ತು ಜವಾಬ್ದಾರಿಯಾಗಿರಬೇಕು. ಕಳೆದ ಹಲವಾರು ವರ್ಷಗಳಿಂದ ಮಾಡುತ್ತಿರುವಂತೆ ಜನರನ್ನು ವಿಭಜಿಸಬಾರದು” ಎಂದು ಮನವಿ ಮಾಡಿದ್ದಾರೆ.

ಪ್ರತಿಪಕ್ಷಗಳನ್ನು ಟಾರ್ಗೆಟ್ ಮಾಡುವಲ್ಲಿ, ಭಿನ್ನಧ್ವನಿಗಳನ್ನು ಪ್ರಶ್ನಿಸುವಲ್ಲಿ, ಮಾಧ್ಯಮಗಳನ್ನು ದುರ್ಬಳಕೆ ಮಾಡಿಕೊಳ್ಳುವಲ್ಲಿ, ಸಂಸ್ಥೆಗಳನ್ನು ದುರ್ಬಲಗೊಳಿಸುವಲ್ಲಿ ಬಿಜೆಪಿ ಸರ್ಕಾರ ತೊಡಗಿದೆ ಎಂದು ಆರೋಪಿಸಿದ್ದಾರೆ. “ಇದು ಕೇಂದ್ರದಲ್ಲಿ ಮಾತ್ರವಲ್ಲ, ಬಿಜೆಪಿ ಆಡಳಿತ ನಡೆಸುವ ಪ್ರತಿಯೊಂದು ರಾಜ್ಯದಲ್ಲೂ ನಡೆಯುತ್ತಿದೆ” ಎಂದು ವಿಷಾದಿಸಿದ್ದಾರೆ.

ಪ್ರತಿಪಕ್ಷಗಳಿಂದ ಪ್ರತಿಭಟನೆ

ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯ ನಂತರ, ಸೋನಿಯಾ ಗಾಂಧಿ ಮತ್ತು ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸಂಸತ್ತಿನ ಮಹಾತ್ಮ ಗಾಂಧಿ ಪ್ರತಿಮೆ ಬಳಿ ನಡೆದ ವಿರೋಧ ಪಕ್ಷಗಳ ಪ್ರತಿಭಟನೆಗೆ ನೇತೃತ್ವ ವಹಿಸಿದ್ದರು. ಚಳಿಗಾಲದ ಅಧಿವೇಶನದಲ್ಲಿ ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದದ ಬಗ್ಗೆ ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿದರು.

ಶಿವಸೇನೆ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ದ್ರಾವಿಡ ಮುನ್ನೇತ್ರ ಕಳಗಂ, ರಾಷ್ಟ್ರೀಯ ಜನತಾದಳ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸೇರಿದಂತೆ ಸುಮಾರು 12 ಪ್ರತಿಪಕ್ಷಗಳ ಸಂಸದರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಮೋದಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

“ನಾವು ಚೀನಾದ ಬಗ್ಗೆ ಚರ್ಚೆಯನ್ನು ಬಯಸುತ್ತೇವೆ, ನಾವು ಮಿಲಿಟರಿ ರಹಸ್ಯಗಳನ್ನು ಕೇಳುತ್ತಿಲ್ಲ” ಎಂದು ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

“ಭಾರತ ಮತ್ತು ಚೀನಾ ಸೇನೆಗಳ ಕಮಾಂಡರ್‌ಗಳ ನಡುವಿನ 16 ಸುತ್ತಿನ ಮಾತುಕತೆ ಏನು ಸಾಧಿಸಿದೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಖರ್ಗೆಯವರು ಮಾತನಾಡಿ, “ಚರ್ಚೆಯನ್ನು ನಡೆಸದಿದ್ದರೆ ಮತ್ತು ಕೇವಲ ಏಕಪಕ್ಷೀಯ ಪ್ರತಿಕ್ರಿಯೆ ಇದ್ದರೆ, ಅದು ಯಾವ ಅರ್ಥವನ್ನು ಸೂಚಿಸುತ್ತದೆ?” ಖರ್ಗೆ ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...