Homeಕರ್ನಾಟಕಪಂಚಮಸಾಲಿ ಸಮಾಜದ ಬಂಡಾಯಕ್ಕೆ ಸರ್ಕಾರ ಆಸ್ಪದ ನೀಡದಿರಲಿ: ಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ ಸಮಾಜದ ಬಂಡಾಯಕ್ಕೆ ಸರ್ಕಾರ ಆಸ್ಪದ ನೀಡದಿರಲಿ: ಮೃತ್ಯುಂಜಯ ಸ್ವಾಮೀಜಿ

- Advertisement -
- Advertisement -

ಲಿಂಗಾಯತ ಪಂಚಮಸಾಲಿ ಸಮಾಜದ ಬಂಡಾಯಕ್ಕೆ ಸರ್ಕಾರ ಆಸ್ಪದ ನೀಡದಿರಲಿ ಎಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದ್ದಾರೆ.

ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಡಿ.22ರಂದು ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜ ಹೋರಾಟ ಹಮ್ಮಿಕೊಂಡಿದೆ. ಇದರ ಹಿನ್ನೆಲೆಯಲ್ಲಿ ಸ್ವಾಮೀಜಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

“ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಡಿ.22ರಂದು ವಿಜಯೋತ್ಸವದ ದಿನ ಆಗಬೇಕೆ ಹೊರತು ಬಂಡಾಯದ ದಿನ ಆಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ. 2ಎ ಮೀಸಲಾತಿ ನೀಡಿ ನ್ಯಾಯ ದೊರಕಿಸಬೇಕು” ಎಂದಿದ್ದಾರೆ.

ಬೆಳಗಾವಿ ಪಟ್ಟಣದ ವೀರರಾಣಿ ಕಿತ್ತೂರು ಚನ್ನಮ್ಮನ ಸಮಾಧಿಗೆ ಬುಧವಾರ ಪುಷ್ಪ ನಮನ ಸಲ್ಲಿಸಿ ಬೆಳಗಾವಿ ಕಡೆಗೆ ಪಾದಯಾತ್ರೆ ಆರಂಭಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

“ಕೂಡಲ ಸಂಗಮದಿಂದ ಆರಂಭವಾದ ಪಂಚಮಸಾಲಿ ಹೋರಾಟಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಹಳ ದೊಡ್ಡ ಬೆಂಬಲ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಟ್ಟೇ ಕೊಡುತ್ತಾರೆಂಬ ವಿಶ್ವಾಸ ಇದೆ. ಆದರೆ ಮಾತು ಕೊಟ್ಟು ಎಲ್ಲೋ ಒಂದು ಕಡೆ ಪಂಚಮಸಾಲಿ ಸಮಾಜ ಬಾಂಧವರ ಭಾವನೆಗಳೊಂದಿಗೆ ಚೆಲ್ಲಾಟ ಆಡುತ್ತಿದ್ದಾರೆ. ಸಮಾಜ ಬಾಂಧವರು ಸಹನೆ ಕಳೆದುಕೊಳ್ಳುವುದಕ್ಕಿಂತ ಮುಂಚ್ಚೆ ‘2ಎ’ಮೀಸಲಾತಿ ಘೋಷಿಸಿ ಅಭಿನಂದನೆಗೆ ಪಾತ್ರರಾಗಬೇಕು” ಎಂದು ಆಗ್ರಹಿಸಿದ್ದಾರೆ.

“ಲಿಂಗಾಯತ ಪಂಚಮಸಾಲಿ ಸಮಾಜ ಬಾಂಧವರ ಕುಲದೇವತೆ ಆಗಿರುವ ವೀರರಾಣಿ ಕಿತ್ತೂರು ಚನ್ನಮ್ಮನ ಐಕ್ಯಸ್ಥಳದಿಂದ ಸಂಪಗಾಂವ, ಚಿಕ್ಕಬಾಗೇವಾಡಿ, ಹಿರೇಬಾಗೇವಾಡಿ ಮಾರ್ಗವಾಗಿ ಬೆಳಗಾವಿ ಸುವರ್ಣ ಸೌಧಕ್ಕೆ ತೆರಳಿ ಪಂಚಶಕ್ತಿ ವಿರಾಟ ಸಮಾವೇಶ ನಡೆಸಲಾಗುತ್ತಿದೆ. ಈ ಭಾಗದ ಸಮಸ್ತ ಪಂಚಮಸಾಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಕ್ತಿ ಪ್ರದರ್ಶನ ಮಾಡಬೇಕು” ಎಂದು ಕೋರಿದ್ದಾರೆ.

ಮುಖಂಡ ವಿಜಯಾನಂದ ಕಾಶಪ್ಪನವರ ಮಾತನಾಡಿ, “ಸಮಾವೇಶಕ್ಕೆ ಲಕ್ಷಾಂತರ ಜನ ಸೇರುವ ನಿರೀಕ್ಷೆ ಇದೆ. ಸರ್ಕಾರ ಅಂತಿಮ ನಿರ್ಣಯ ಕೈಕೊಂಡರೆ ಗೌರವ ಸಲ್ಲಿಸುತ್ತೇವೆ. ಇಲ್ಲವಾದರೆ ಮಾಡುವ ಅವಮಾನ ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

ಕಾಡಾ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ, ಪಂಚಮಸಾಲಿ ಸಮಾಜದ ತಾಲ್ಲೂಕು ಘಟಕ ಅಧ್ಯಕ್ಷ ಶ್ರೀಶೈಲ ಬೋಳಣ್ಣವರ, ಪುರಸಭೆ ಅಧ್ಯಕ್ಷ ಬಸವರಾಜ ಜನ್ಮಟ್ಟಿ, ಪ್ರಧಾನ ಕಾರ್ಯದರ್ಶಿ ಮಹೇಶ ಹರಕುಣಿ, ರಾಜಶೇಖರ ಮೂಗಿ, ಎಫ್.ಎಸ್.ಸಿದ್ದನಗೌಡರ, ಎಸ್.ಬಿ.ಸಂಗನಗೌಡರ, ಬಸವರಾಜ ತಟವಟಿ, ಉಮೇಶ ಬೋಳೆತ್ತಿನ, ಶಿವಾನಂದ ಬೆಳಗಾವಿ, ರಾಜು ಸೊಗಲ, ಸುನೀಲ ಮರಕುಂಬಿ, ರಾಜು ನರಸಣ್ಣವರ, ನಿಂಗಪ್ಪ ಚೌಡನ್ನವರ ಮೊದಲಾದವರು ಹಾಜರಿದ್ದರು.

“ಪಂಚಮಸಾಲಿ ಹೋರಾಟಕ್ಕೆ ಪರಿಹಾರವನ್ನು ಸರ್ಕಾರ ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳುವ ಸಾಧ್ಯತೆ ಇದೆ. ನಾಳೆ ಸರ್ಕಾರ ಈ ಬಗ್ಗೆ ತೀರ್ಮಾನ ಪ್ರಕಟ ಮಾಡುವ ಸಾಧ್ಯತೆ ಇದೆ” ಎಂದು ವರದಿಯಾಗಿದೆ. ಮುಂದಿನ ಚುನಾವಣೆಯಲ್ಲಿ ಕಿತ್ತೂರು ಕರ್ನಾಟಕ ಭಾಗದಲ್ಲಿ ಅಧಿಕ ಸಂಖ್ಯೆಯಲ್ಲಿ ಇರುವ ಪಂಚಮಸಾಲಿ ಸಮುದಾಯದ ಮತ ಸೆಳೆಯಲು ಬಿಜೆಪಿ ಯತ್ನಿಸುವ ಸಾಧ್ಯತೆ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...