Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಮೋದಿ ಹೇಳಿದ್ದು ಸುಳ್ಳು, 2002ರ ಮೊದಲೇ ಅಹಮದಾಬಾದ್‌ ಜಿಲ್ಲೆಯಲ್ಲಿ ಮೂರು ವಿವಿಗಳಿದ್ದವು!

ಫ್ಯಾಕ್ಟ್‌ಚೆಕ್‌: ಮೋದಿ ಹೇಳಿದ್ದು ಸುಳ್ಳು, 2002ರ ಮೊದಲೇ ಅಹಮದಾಬಾದ್‌ ಜಿಲ್ಲೆಯಲ್ಲಿ ಮೂರು ವಿವಿಗಳಿದ್ದವು!

ಪ್ರಧಾನಿ ಮೋದಿಯವರು ಹೇಳಿದ ಸುಳ್ಳನ್ನು ಆಧಾರ ಸಹಿತ ‘ಸ್ಕ್ರಾಲ್‌.ಇನ್‌’ ಬಯಲಿಗೆಳೆದಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 24ರಂದು ಅಹಮದಾಬಾದ್‌ನ ಬಾವ್ಲಾದಲ್ಲಿ ಬಿಜೆಪಿ ಪರವಾಗಿ ಚುನಾವಣಾ ಪ್ರಚಾರ ಮಾಡುತ್ತಾ, “20 ವರ್ಷಗಳ ಹಿಂದೆ ಅಹಮದಾಬಾದ್ ಜಿಲ್ಲೆಯಲ್ಲಿ ಒಂದೇ ಒಂದು ವಿಶ್ವವಿದ್ಯಾಲಯವಿತ್ತು. ಜಿಲ್ಲೆಯಲ್ಲಿ ಈಗ 23 ವಿಶ್ವವಿದ್ಯಾಲಯಗಳಿವೆ” ಎಂದಿದ್ದರು. ಇದನ್ನು ಬಿಜೆಪಿಯ ಅಧಿಕೃತ ಟ್ವಿಟರ್ ಖಾತೆಯಲ್ಲಿಯೂ ಉಲ್ಲೇಖಿಸಲಾಗಿದೆ.

ಆದಾಗ್ಯೂ, ಕೇಂದ್ರ ಶಿಕ್ಷಣ ಸಚಿವಾಲಯದ ದಾಖಲೆಗಳು ಮೋದಿಯವರ ಹೇಳಿಕೆಗೆ ತದ್ವಿರುದ್ಧವಾಗಿವೆ ಎಂದು ‘ಸ್ಕ್ರಾಲ್‌.ಇನ್‌’ ಜಾಲತಾಣ ‘ಫ್ಯಾಕ್ಟ್‌ಚೆಕ್’ ಮಾಡಿದೆ.

“ಅಹಮದಾಬಾದ್ ಜಿಲ್ಲೆಯಲ್ಲಿ 2002ರ ಮೊದಲು ಒಂದೇ ಒಂದು ವಿಶ್ವವಿದ್ಯಾಲಯವಿತ್ತು” ಎಂದು ಮೋದಿ ಸುಳ್ಳು ಹೇಳಿರುವುದನ್ನು ಬಯಲಿಗೆಳೆದಿರುವ ವರದಿಯು, ಕೇಂದ್ರ ಸರ್ಕಾರದ ದಾಖಲೆಗಳನ್ನು ಉಲ್ಲೇಖಿಸಿದೆ.

“ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ ದಾಖಲೆಗಳ ಪ್ರಕಾರ ಜಿಲ್ಲೆಯಲ್ಲಿ ಎರಡು ದಶಕಗಳ ಹಿಂದೆಯೇ ‘ಗುಜರಾತ್ ವಿಶ್ವವಿದ್ಯಾಲಯ, ಗುಜರಾತ್ ವಿದ್ಯಾಪೀಠ ಮತ್ತು ಡಾ ಬಾಬಾಸಾಹೇಬ್ ಅಂಬೇಡ್ಕರ್ ಮುಕ್ತ ವಿಶ್ವವಿದ್ಯಾಲಯ’ ಇದ್ದವು. ಅಂದರೆ ಮೂರು ವಿಶ್ವವಿದ್ಯಾಲಯಗಳು ಮೊದಲೇ ಸ್ಥಾಪಿತವಾಗಿದ್ದವು. ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು (ಯುಜಿಸಿ) ಶಿಕ್ಷಣ ಸಚಿವಾಲಯದ ಅಡಿಯಲ್ಲಿ 1956ರಲ್ಲಿ ಸ್ಥಾಪನೆಯಾದ ಶಾಸನಬದ್ಧ ಸಂಸ್ಥೆ ಎಂಬುದನ್ನು ಗಮನಿಸಬೇಕು. ಈ ಸಂಸ್ಥೆ ವಿಶ್ವವಿದ್ಯಾಲಯಗಳಿಗೆ ಕೇಂದ್ರ ಸರ್ಕಾರದ ಅನುದಾನ ಮತ್ತು ಹಣವನ್ನು ವಿತರಣೆ ಮಾಡುತ್ತದೆ.

ಗುಜರಾತ್ ವಿಶ್ವವಿದ್ಯಾನಿಲಯವನ್ನು 1949ರಲ್ಲಿ ಗುಜರಾತ್ ವಿಶ್ವವಿದ್ಯಾನಿಲಯ ಕಾಯಿದೆಯಡಿಯಲ್ಲಿ ಸ್ಥಾಪಿಸಲಾಯಿತು. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮುಕ್ತ ವಿಶ್ವವಿದ್ಯಾಲಯವನ್ನು 1994ರಲ್ಲಿ ಸ್ಥಾಪಿಸಲಾಯಿತು. ಇವೆರಡೂ ರಾಜ್ಯ ವಿಶ್ವವಿದ್ಯಾಲಯಗಳಾಗಿವೆ. ಅಕ್ಟೋಬರ್ 1920ರಲ್ಲಿ ಮಹಾತ್ಮ ಗಾಂಧಿಯವರು ಸ್ಥಾಪಿಸಿದ ಗುಜರಾತ್ ವಿದ್ಯಾಪೀಠವನ್ನು 1963ರಲ್ಲಿ ವಿಶ್ವವಿದ್ಯಾನಿಲಯವೆಂದು ಪರಿಗಣಿಸಲಾಯಿತು.

ಅಹಮದಾಬಾದ್ ಜಿಲ್ಲೆಯಲ್ಲಿ 2002ರ ಮೊದಲೇ ಎರಡು ರಾಷ್ಟ್ರೀಯ ಮಟ್ಟದ ಶಿಕ್ಷಣ ಸಂಸ್ಥೆಗಳು ಸ್ಥಾಪನೆಯಾಗಿದ್ದವು. ಅವುಗಳೆಂದರೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡಿಸೈನ್. ಈ ಎರಡನ್ನೂ 1961ರಲ್ಲಿ ಸ್ಥಾಪಿಸಲಾಗಿದೆ.

‘27 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದೆ’

ಭಾರತೀಯ ಚುನಾವಣಾ ಆಯೋಗದ ದಾಖಲೆಗಳ ಪ್ರಕಾರ ಕಳೆದ 27 ವರ್ಷಗಳಿಂದ (1995-2022) ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ. 2001ರ ಅಕ್ಟೋಬರ್‌ನಲ್ಲಿ ನರೇಂದ್ರ ಮೋದಿಯವರು ಮುಖ್ಯಮಂತ್ರಿಯಾಗುವ ಮೊದಲು ಕೇಶುಭಾಯಿ ಪಟೇಲ್, ಸುರೇಶ್ಚಂದ್ರ ಮೆಹ್ತಾ, ಶಂಕರಸಿನ್ಹ ವಘೇಲಾ ಮತ್ತು ದಿಲೀಪ್ ಪಾರಿಖ್ ಅವರು ಗುಜರಾತ್‌ನಲ್ಲಿ ಬಿಜೆಪಿಯಿಂದ ಮುಖ್ಯಮಂತ್ರಿಗಳಾಗಿದ್ದರು. ಇಪ್ಪತ್ತು ವರ್ಷಗಳ ಹಿಂದೆ ಮೋದಿ ಅವರು ಮುಖ್ಯಮಂತ್ರಿಯಾಗಿ ಎರಡನೇ ವರ್ಷದಲ್ಲಿ ಸೇವೆ ಸಲ್ಲಿಸುತ್ತಿದ್ದರು. 2014ರ ಮೇವರೆಗೂ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿದರು. ಬಿಜೆಪಿ ಅಧಿಕಾರಕ್ಕೆ ಬರುವ ಮೊದಲು ಗುಜರಾತ್‌ನಲ್ಲಿ 1990-94ರವರೆಗೆ ಜನತಾ ದಳ ನೇತೃತ್ವದ ಸರ್ಕಾರವಿತ್ತು. 1990ರ ಮೊದಲು, ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಸತತವಾಗಿ ಆಡಳಿತ ನಡೆಸಿತ್ತು.

ಯುಜಿಸಿ ದಾಖಲೆಗಳ ಪ್ರಕಾರ ನವೆಂಬರ್ 25ರ ಹೊತ್ತಿಗೆ (ಅಂದರೆ ಪ್ರಧಾನಿಯವರ ಭಾಷಣದ ವೇಳೆಗೆ) ಅಹಮದಾಬಾದ್ ಜಿಲ್ಲೆಯಲ್ಲಿ 22 ವಿಶ್ವವಿದ್ಯಾನಿಲಯಗಳಿವೆ.

ಫೆಬ್ರವರಿ 2 ರಂದು ರಾಜ್ಯಸಭೆಯಲ್ಲಿ ಶಿಕ್ಷಣ ಸಚಿವಾಲಯ ನೀಡಿದ ಪ್ರತಿಕ್ರಿಯೆಯ ಪ್ರಕಾರ, ಗುಜರಾತ್ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಮಂಜೂರಾದ 162 ಬೋಧಕ ಹುದ್ದೆಗಳಲ್ಲಿ 68 (41%) ಖಾಲಿ ಇವೆ. ಇದಲ್ಲದೆ, “2020ರ ಏಪ್ರಿಲ್‌ನಲ್ಲಿ ಗುಜರಾತ್‌ನ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 72 ಖಾಲಿ ಹುದ್ದೆಗಳಿದ್ದವು. ಇದು ಏಪ್ರಿಲ್ 2021ರಲ್ಲಿ 65ಕ್ಕೆ ಇಳಿದಿದೆ. ಆದರೆ ಏಪ್ರಿಲ್ 2022ರಲ್ಲಿಯೂ 64 ಹುದ್ದೆಗಳು ಖಾಲಿ ಇದ್ದವು” ಎಂದು ಫ್ಯಾಕ್ಟ್‌ಚೆಕ್ ವರದಿ ಹೇಳುತ್ತದೆ.

ಮೋದಿಯವರು ಮಾಡಿರುವ ಪ್ರತಿಪಾದನೆಯು ವಾಸ್ತವದಿಂದ ಕೂಡಿದೆಯೇ ಎಂದು ತಿಳಿಯಲು ‘ಸ್ಕ್ರಾಲ್‌.ಇನ್‌’ ಜಾಲತಾಣ ಪ್ರಧಾನ ಮಂತ್ರಿಗಳ ಕಚೇರಿಯನ್ನು ಸಂಪರ್ಕಿಸಿದೆ. “ಗುಜರಾತ್‌ನಾದ್ಯಂತ ಇರುವ ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಕುರಿತು ಅಪ್‌ಡೇಟ್‌ಗಾಗಿ ನಾವು ಗುಜರಾತ್ ಸರ್ಕಾರದ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್‌ಜೆ ಹೈದರ್ ಅವರನ್ನು ಫೋನ್ ಮತ್ತು ಇಮೇಲ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದ್ದೇವೆ. ಆದರೆ ಈವರೆಗೆ ಪ್ರತಿಕ್ರಿಯೆ ನೀಡಿಲ್ಲ” ಎಂದು ವರದಿ ತಿಳಿಸಿದೆ.

ವರದಿ ಕೃಪೆ: ಸ್ಕ್ರಾಲ್‌.ಇನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...