Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಮೋದಿ ಹೇಳಿದ್ದು ಸುಳ್ಳು, 2002ರ ಮೊದಲೇ ಅಹಮದಾಬಾದ್‌ ಜಿಲ್ಲೆಯಲ್ಲಿ ಮೂರು ವಿವಿಗಳಿದ್ದವು!

ಫ್ಯಾಕ್ಟ್‌ಚೆಕ್‌: ಮೋದಿ ಹೇಳಿದ್ದು ಸುಳ್ಳು, 2002ರ ಮೊದಲೇ ಅಹಮದಾಬಾದ್‌ ಜಿಲ್ಲೆಯಲ್ಲಿ ಮೂರು ವಿವಿಗಳಿದ್ದವು!

ಪ್ರಧಾನಿ ಮೋದಿಯವರು ಹೇಳಿದ ಸುಳ್ಳನ್ನು ಆಧಾರ ಸಹಿತ ‘ಸ್ಕ್ರಾಲ್‌.ಇನ್‌’ ಬಯಲಿಗೆಳೆದಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 24ರಂದು ಅಹಮದಾಬಾದ್‌ನ ಬಾವ್ಲಾದಲ್ಲಿ ಬಿಜೆಪಿ ಪರವಾಗಿ ಚುನಾವಣಾ ಪ್ರಚಾರ ಮಾಡುತ್ತಾ, “20 ವರ್ಷಗಳ ಹಿಂದೆ ಅಹಮದಾಬಾದ್ ಜಿಲ್ಲೆಯಲ್ಲಿ ಒಂದೇ ಒಂದು ವಿಶ್ವವಿದ್ಯಾಲಯವಿತ್ತು. ಜಿಲ್ಲೆಯಲ್ಲಿ ಈಗ 23 ವಿಶ್ವವಿದ್ಯಾಲಯಗಳಿವೆ” ಎಂದಿದ್ದರು. ಇದನ್ನು ಬಿಜೆಪಿಯ ಅಧಿಕೃತ ಟ್ವಿಟರ್ ಖಾತೆಯಲ್ಲಿಯೂ ಉಲ್ಲೇಖಿಸಲಾಗಿದೆ.

ಆದಾಗ್ಯೂ, ಕೇಂದ್ರ ಶಿಕ್ಷಣ ಸಚಿವಾಲಯದ ದಾಖಲೆಗಳು ಮೋದಿಯವರ ಹೇಳಿಕೆಗೆ ತದ್ವಿರುದ್ಧವಾಗಿವೆ ಎಂದು ‘ಸ್ಕ್ರಾಲ್‌.ಇನ್‌’ ಜಾಲತಾಣ ‘ಫ್ಯಾಕ್ಟ್‌ಚೆಕ್’ ಮಾಡಿದೆ.

“ಅಹಮದಾಬಾದ್ ಜಿಲ್ಲೆಯಲ್ಲಿ 2002ರ ಮೊದಲು ಒಂದೇ ಒಂದು ವಿಶ್ವವಿದ್ಯಾಲಯವಿತ್ತು” ಎಂದು ಮೋದಿ ಸುಳ್ಳು ಹೇಳಿರುವುದನ್ನು ಬಯಲಿಗೆಳೆದಿರುವ ವರದಿಯು, ಕೇಂದ್ರ ಸರ್ಕಾರದ ದಾಖಲೆಗಳನ್ನು ಉಲ್ಲೇಖಿಸಿದೆ.

“ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ ದಾಖಲೆಗಳ ಪ್ರಕಾರ ಜಿಲ್ಲೆಯಲ್ಲಿ ಎರಡು ದಶಕಗಳ ಹಿಂದೆಯೇ ‘ಗುಜರಾತ್ ವಿಶ್ವವಿದ್ಯಾಲಯ, ಗುಜರಾತ್ ವಿದ್ಯಾಪೀಠ ಮತ್ತು ಡಾ ಬಾಬಾಸಾಹೇಬ್ ಅಂಬೇಡ್ಕರ್ ಮುಕ್ತ ವಿಶ್ವವಿದ್ಯಾಲಯ’ ಇದ್ದವು. ಅಂದರೆ ಮೂರು ವಿಶ್ವವಿದ್ಯಾಲಯಗಳು ಮೊದಲೇ ಸ್ಥಾಪಿತವಾಗಿದ್ದವು. ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು (ಯುಜಿಸಿ) ಶಿಕ್ಷಣ ಸಚಿವಾಲಯದ ಅಡಿಯಲ್ಲಿ 1956ರಲ್ಲಿ ಸ್ಥಾಪನೆಯಾದ ಶಾಸನಬದ್ಧ ಸಂಸ್ಥೆ ಎಂಬುದನ್ನು ಗಮನಿಸಬೇಕು. ಈ ಸಂಸ್ಥೆ ವಿಶ್ವವಿದ್ಯಾಲಯಗಳಿಗೆ ಕೇಂದ್ರ ಸರ್ಕಾರದ ಅನುದಾನ ಮತ್ತು ಹಣವನ್ನು ವಿತರಣೆ ಮಾಡುತ್ತದೆ.

ಗುಜರಾತ್ ವಿಶ್ವವಿದ್ಯಾನಿಲಯವನ್ನು 1949ರಲ್ಲಿ ಗುಜರಾತ್ ವಿಶ್ವವಿದ್ಯಾನಿಲಯ ಕಾಯಿದೆಯಡಿಯಲ್ಲಿ ಸ್ಥಾಪಿಸಲಾಯಿತು. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮುಕ್ತ ವಿಶ್ವವಿದ್ಯಾಲಯವನ್ನು 1994ರಲ್ಲಿ ಸ್ಥಾಪಿಸಲಾಯಿತು. ಇವೆರಡೂ ರಾಜ್ಯ ವಿಶ್ವವಿದ್ಯಾಲಯಗಳಾಗಿವೆ. ಅಕ್ಟೋಬರ್ 1920ರಲ್ಲಿ ಮಹಾತ್ಮ ಗಾಂಧಿಯವರು ಸ್ಥಾಪಿಸಿದ ಗುಜರಾತ್ ವಿದ್ಯಾಪೀಠವನ್ನು 1963ರಲ್ಲಿ ವಿಶ್ವವಿದ್ಯಾನಿಲಯವೆಂದು ಪರಿಗಣಿಸಲಾಯಿತು.

ಅಹಮದಾಬಾದ್ ಜಿಲ್ಲೆಯಲ್ಲಿ 2002ರ ಮೊದಲೇ ಎರಡು ರಾಷ್ಟ್ರೀಯ ಮಟ್ಟದ ಶಿಕ್ಷಣ ಸಂಸ್ಥೆಗಳು ಸ್ಥಾಪನೆಯಾಗಿದ್ದವು. ಅವುಗಳೆಂದರೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡಿಸೈನ್. ಈ ಎರಡನ್ನೂ 1961ರಲ್ಲಿ ಸ್ಥಾಪಿಸಲಾಗಿದೆ.

‘27 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದೆ’

ಭಾರತೀಯ ಚುನಾವಣಾ ಆಯೋಗದ ದಾಖಲೆಗಳ ಪ್ರಕಾರ ಕಳೆದ 27 ವರ್ಷಗಳಿಂದ (1995-2022) ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ. 2001ರ ಅಕ್ಟೋಬರ್‌ನಲ್ಲಿ ನರೇಂದ್ರ ಮೋದಿಯವರು ಮುಖ್ಯಮಂತ್ರಿಯಾಗುವ ಮೊದಲು ಕೇಶುಭಾಯಿ ಪಟೇಲ್, ಸುರೇಶ್ಚಂದ್ರ ಮೆಹ್ತಾ, ಶಂಕರಸಿನ್ಹ ವಘೇಲಾ ಮತ್ತು ದಿಲೀಪ್ ಪಾರಿಖ್ ಅವರು ಗುಜರಾತ್‌ನಲ್ಲಿ ಬಿಜೆಪಿಯಿಂದ ಮುಖ್ಯಮಂತ್ರಿಗಳಾಗಿದ್ದರು. ಇಪ್ಪತ್ತು ವರ್ಷಗಳ ಹಿಂದೆ ಮೋದಿ ಅವರು ಮುಖ್ಯಮಂತ್ರಿಯಾಗಿ ಎರಡನೇ ವರ್ಷದಲ್ಲಿ ಸೇವೆ ಸಲ್ಲಿಸುತ್ತಿದ್ದರು. 2014ರ ಮೇವರೆಗೂ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿದರು. ಬಿಜೆಪಿ ಅಧಿಕಾರಕ್ಕೆ ಬರುವ ಮೊದಲು ಗುಜರಾತ್‌ನಲ್ಲಿ 1990-94ರವರೆಗೆ ಜನತಾ ದಳ ನೇತೃತ್ವದ ಸರ್ಕಾರವಿತ್ತು. 1990ರ ಮೊದಲು, ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಸತತವಾಗಿ ಆಡಳಿತ ನಡೆಸಿತ್ತು.

ಯುಜಿಸಿ ದಾಖಲೆಗಳ ಪ್ರಕಾರ ನವೆಂಬರ್ 25ರ ಹೊತ್ತಿಗೆ (ಅಂದರೆ ಪ್ರಧಾನಿಯವರ ಭಾಷಣದ ವೇಳೆಗೆ) ಅಹಮದಾಬಾದ್ ಜಿಲ್ಲೆಯಲ್ಲಿ 22 ವಿಶ್ವವಿದ್ಯಾನಿಲಯಗಳಿವೆ.

ಫೆಬ್ರವರಿ 2 ರಂದು ರಾಜ್ಯಸಭೆಯಲ್ಲಿ ಶಿಕ್ಷಣ ಸಚಿವಾಲಯ ನೀಡಿದ ಪ್ರತಿಕ್ರಿಯೆಯ ಪ್ರಕಾರ, ಗುಜರಾತ್ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಮಂಜೂರಾದ 162 ಬೋಧಕ ಹುದ್ದೆಗಳಲ್ಲಿ 68 (41%) ಖಾಲಿ ಇವೆ. ಇದಲ್ಲದೆ, “2020ರ ಏಪ್ರಿಲ್‌ನಲ್ಲಿ ಗುಜರಾತ್‌ನ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 72 ಖಾಲಿ ಹುದ್ದೆಗಳಿದ್ದವು. ಇದು ಏಪ್ರಿಲ್ 2021ರಲ್ಲಿ 65ಕ್ಕೆ ಇಳಿದಿದೆ. ಆದರೆ ಏಪ್ರಿಲ್ 2022ರಲ್ಲಿಯೂ 64 ಹುದ್ದೆಗಳು ಖಾಲಿ ಇದ್ದವು” ಎಂದು ಫ್ಯಾಕ್ಟ್‌ಚೆಕ್ ವರದಿ ಹೇಳುತ್ತದೆ.

ಮೋದಿಯವರು ಮಾಡಿರುವ ಪ್ರತಿಪಾದನೆಯು ವಾಸ್ತವದಿಂದ ಕೂಡಿದೆಯೇ ಎಂದು ತಿಳಿಯಲು ‘ಸ್ಕ್ರಾಲ್‌.ಇನ್‌’ ಜಾಲತಾಣ ಪ್ರಧಾನ ಮಂತ್ರಿಗಳ ಕಚೇರಿಯನ್ನು ಸಂಪರ್ಕಿಸಿದೆ. “ಗುಜರಾತ್‌ನಾದ್ಯಂತ ಇರುವ ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಕುರಿತು ಅಪ್‌ಡೇಟ್‌ಗಾಗಿ ನಾವು ಗುಜರಾತ್ ಸರ್ಕಾರದ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್‌ಜೆ ಹೈದರ್ ಅವರನ್ನು ಫೋನ್ ಮತ್ತು ಇಮೇಲ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದ್ದೇವೆ. ಆದರೆ ಈವರೆಗೆ ಪ್ರತಿಕ್ರಿಯೆ ನೀಡಿಲ್ಲ” ಎಂದು ವರದಿ ತಿಳಿಸಿದೆ.

ವರದಿ ಕೃಪೆ: ಸ್ಕ್ರಾಲ್‌.ಇನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...