Homeಮುಖಪುಟಮೂಡ್ನಾಕೂಡು ಚಿನ್ನಸ್ವಾಮಿ, ಪದ್ಮರಾಜ ದಂಡಾವತಿಯವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಮೂಡ್ನಾಕೂಡು ಚಿನ್ನಸ್ವಾಮಿ, ಪದ್ಮರಾಜ ದಂಡಾವತಿಯವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

- Advertisement -
- Advertisement -

ಕನ್ನಡದ ಖ್ಯಾತ ಲೇಖಕರಾದ ಮೂಡ್ನಾಕೂಡು ಚಿನ್ನಸ್ವಾಮಿ ಹಾಗೂ ಪದ್ಮರಾಜ ದಂಡಾವತಿಯವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರತಿದೆ.

ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಅವರ ‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ’ ಕೃತಿಯು ಈ ವರ್ಷದ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾದರೆ, ಅನುವಾದ ಪ್ರಶಸ್ತಿಗೆ ಪದ್ಮರಾಜ ದಂಡಾವತಿಯವರು ಅನುವಾದಿಸಿದ ‘ಸೀತಾ: ರಾಮಾಯಣದ ಸಚಿತ್ರ ಮರುಕಥನ’ ಕೃತಿ ಆಯ್ಕೆಯಾಗಿದೆ.

ಮೂಡ್ನಾಕೂಡು ಚಿನ್ನಸ್ವಾಮಿಯವರ ಪರಿಚಯ

ಚಾಮರಾಜನಗರ ಜಿಲ್ಲೆಯವರಾದ ಮೂಡ್ನಾಕೂಡು ಚಿನ್ನಸ್ವಾಮಿಯವರು ದಲಿತ-ಬಂಡಾಯ ಸಾಹಿತ್ಯದಲ್ಲಿ ವಿಶೇಷ ಛಾಪು ಮೂಡಿಸಿದವರು. “ನಾನೊಂದು ಮರವಾಗಿದ್ದರೆ”, “ನಮ್ಮ ಎಲುಬಿನ ಹಂದರದೊಳಗೊಂದು ಮಂದಿರವಿದೆ” ಎಂದು ಬರೆದು ಕನ್ನಡ ಸಾಹಿತ್ಯದಲ್ಲಿ ಹೊಸ ಸಂಚಲನ ಸೃಷ್ಟಿಸಿದರು. ಸರಳ ಹಾಗೂ ಆಪ್ತವಾಗಿ ಮೂಡಿಬಂದ ಇವರ ಕವಿತೆಗಳು ಬುದ್ಧಪ್ರಜ್ಞೆಯನ್ನು ಬಿತ್ತಿವೆ.

ಇವರ ಕವಿತೆಗಳು ಇಂಗ್ಲೀಷ್, ಸ್ಪ್ಯಾನಿಷ್, ಫ್ರೆಂಚ್ ಹಾಗೂ ಹೀಬ್ರೂ ಭಾಷೆಗಳಿಗೆ ಅನುವಾದಗೊಂಡು ಅಂತಾರಾಷ್ಟ್ರೀಯ ನಿಯತಕಾಲಿಕೆಗಳಲ್ಲೂ ಪ್ರಕಟವಾಗಿವೆ. ಔಟ್‌ಲುಕ್‌ ಪತ್ರಿಕೆ ‘ಭಾರತವನ್ನು ಪುನರ್‌ ನಿರ್ಮಾಣ ಮಾಡಿದ 50 ದಲಿತ ಸಾಧಕರ ಪಟ್ಟಿ’ ಪ್ರಕಟಿಸಿದ್ದು, ಅದರಲ್ಲಿ ಚಿನ್ನಸ್ವಾಮಿಯವರ ಹೆಸರೂ ಸೇರಿದೆ.

ನಾನೊಂದು ಮರವಾಗಿದ್ದರೆ, ಚಪ್ಪಲಿ ಮತ್ತು ನಾನು, ಬುದ್ಧ ಬೆಳದಿಂಗಳು, ಮತ್ತೆ ಮಳೆ ಬರುವ ಮುನ್ನ, ಮೋಹದ ದೀಪ, ಪಾಪಪ್ರಜ್ಞೆ, ಕೆಂಡ ಮಂಡಲ, ಬಹುರೂಪಿ, ಒಂದು ಕೊಡ ಹಾಲಿನ ಸಮರ, ಅಪರಿಮಿತದ ಕತ್ತಲೆ, ಬಹುತ್ವದ ಭಾರತ ಮತ್ತು ಬೌದ್ಧ ತಾತ್ವಿಕತೆ ಸೇರಿದಂತೆ ಇದುವರೆಗೆ 38 ಕೃತಿಗಳನ್ನು ರಚಿಸಿದ್ದಾರೆ. ‘ನೆನಪಿನ ಹಕ್ಕಿಯ ಹಾರಲು ಬಿಟ್ಟು’ ಅವರ ಆತ್ಮಕಥನವಾಗಿದೆ.

ಎಂ.ಕಾಂ. ಎಂ.ಎ(ಕನ್ನಡ), ಡಿ.ಲಿಟ್. ಪದವೀಧರರಾಗಿ, ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2012ರಲ್ಲಿ ನಿವೃತ್ತರಾಗಿದ್ದು, ಮೈಸೂರು ವಿವಿ ಡಾ.ಬಿ.ಆರ್‌.ಅಂಬೇಡ್ಕರ್‌ ಸಂಶೋಧನಾ ಮತ್ತು ವಿಸ್ತರಣ ಕೇಂದ್ರ ಸಂದರ್ಶಕ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಚಾಮರಾಜನಗರ 2ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ, ಏಪ್ರಿಲ್ 2011ರಲ್ಲಿ ಭಾಲ್ಕಿಯಲ್ಲಿ ನಡೆದ ಕಲ್ಯಾಣ ನಾಡಿನ ಶರಣ ಸಮ್ಮೇಳನದಲ್ಲಿ ಮತ್ತು ಜೂನ್ 2011ರಲ್ಲಿ ಕೊಪ್ಪಳದಲ್ಲಿ ನಡೆದ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷರಾಗಿದ್ದರು.

‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ’ ಕೃತಿಯು ವಿವಿಧ ಪ್ರಬಂಧಗಳ ಸಂಕಲನವಾಗಿದ್ದು ಇದನ್ನು ಗದಗ “ಲಡಾಯಿ ಪ್ರಕಾಶನ” ಪ್ರಕಟಿಸಿದೆ. ಅವರ ಪ್ರಶಸ್ತಿಯು ಒಂದು ಲಕ್ಷ ರುಪಾಯಿ, ಪ್ರಶಸ್ತಿ ಫಲಕ ಹಾಗೂ ಸನ್ಮಾನ ಒಳಗೊಂಡಿದ್ದೆ.

ಪದ್ಮರಾಜ ದಂಡಾವತಿ

ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕೆಲಸ ಮಾಡಿದ ಹಿರಿಯ ಪತ್ರಕರ್ತರಾದ ಪದ್ಮರಾಜ ದಂಡಾವತಿಯವರಿಗೆ ಕೇಂದ್ರ ಸಾಹಿತ್ಯ ಅನುವಾದ ಪ್ರಶಸ್ತಿ ದೊರಕಿದೆ. ಅವರ ದೇವದತ್ತ ಪಟ್ಟನಾಯಕ ಅವರ ‘ಸೀತಾ’ ಕೃತಿಯನ್ನು ಇಂಗ್ಲಿಷನಿಂದ ಕನ್ನಡಕ್ಕೆ ಅನುವಾದಿಸಿದ್ದು ಧಾರವಾಡದ “ಮನೋಹರ ಗ್ರಂಥಮಾಲೆ” ಯು ಈ ಕೃತಿಯನ್ನು ಪ್ರಕಟಿಸಿದೆ. ಅನುವಾದ ಪ್ರಶಸ್ತಿಯು ಐವತ್ತು ಸಾವಿರ ರುಪಾಯಿ, ಪ್ರಶಸ್ತಿ ಫಲಕ ಹಾಗೂ ಸನ್ಮಾನಗಳು ಒಳಗೊಂಡಿರುತ್ತವೆ.

2023ರ ಮಾರ್ಚ್‌ನಲ್ಲಿ ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದೆ.

ಇದನ್ನೂ ಓದಿ: ಮೂಡ್ನಾಕೂಡು ಚಿನ್ನಸ್ವಾಮಿಯವರ ’ಬುದ್ಧಾನುಸಾಸನಂ’: ಬೌದ್ಧ ಧಮ್ಮದ ಅರಿವಿನ ದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...